Posts

Image
  ಸನ್ನಿ ರೋನಾಲ್ಡ್ ಗಡಿಪಾರು ಪ್ರಕರಣದಲ್ಲಿ ರವಿ ಬೋಸರಾಜು ಕೈವಾಡವೆಂದು ಜೆ ಬಿ ರಾಜು ಮಾಡಿರುವ ಆರೋಪದಲ್ಲಿ ಹುರುಳಿಲ್ಲ -ನರಸಿಂಹಲು ಮಾಡಗಿರಿ.                                                                                   ಜಯ ಧ್ವಜ ನ್ಯೂಸ್, ರಾಯಚೂರು, ಜು.30- ಸನ್ನಿ ರೋನಾಲ್ಡ್ ಗಡಿಪಾರು ಪ್ರಕರಣದಲ್ಲಿ ರವಿ ಬೋಸರಾಜು ಕೈವಾಡವಿದೆ ಎಂದು ದಲಿತ ಮುಖಂಡರಾದ ಜೆಬಿ ರಾಜು ಮಾಡಿರುವ ಆರೋಪದಲ್ಲಿ ಹುರುಳಿಲ್ಲವೆಂದು ಕಾಂಗ್ರೆಸ್ ಮುಖಂಡ ಹಾಗೂ ಆರ್ ಡಿ ಎ ಸದಸ್ಯ  ನರಸಿಂಹಲು ಮಾಡಗಿರಿ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸನ್ನಿ ರೋನಾಲ್ಡ್ ಸಮಾಜದಲ್ಲಿ ಭಯ ಭೀತಿ ಮತ್ತು ಪೊಲೀಸರ ಮೇಲೆ ಹಲ್ಲೆಯತ್ನ ಪ್ರಕರಣ ಮುಂತಾದವುಗಳಿಂದ ಕಾನೂನು ಕೈಗೆತ್ತಿಕೊಂಡಿದ್ದರಿಂದ ಅವರನ್ನು ಗಡಿಪಾರು ಮಾಡಲಾಗಿದೆ ಪೊಲೀಸರು ಸೂಕ್ತ ಸಾಕ್ಷ್ಯಾಧಾರ ನೀಡಿದ್ದರಿಂದಲೆ ಸಹಾಯಕ ಆಯುಕ್ತರು ಗಡಿಪಾರು ಆದೇಶ ಹೊರಡಿಸಿದ್ದಾರೆ ಇದರಲ್ಲಿ‌ ರವಿ ಬೋಸರಾಜು ಒತ್ತಡ ಹೇಗೆ ಮಾಡಲು ಸಾಧ್ಯವೆಂದು ಪ್ರಶ್ನಿಸಿದರು. ಬಹಿರಂಗವಾಗಿ ತಲ್ವಾರ್ ಹಿಡಿದು ಹೂಂಕರಿಸಿದ ಸನ್ನಿ ರೋನಾಲ್ಡ್ ಕಾನೂನು...
Image
  ಸಿಂಧನೂರು: ಮನೋಹರ ರಾವ್ ಕುಲಕರ್ಣಿರವರಿಗೆ ವಿಪ್ರ ಶ್ರೀ ಪ್ರಶಸ್ತಿ ಪ್ರದಾನ                                                                                 ಜಯ ಧ್ವಜ ನ್ಯೂಸ್, ರಾಯಚೂರು,ಜು.29-                                                                                           ಕಲ್ಯಾಣ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ             ಜು.26 ರಂದು ರಾಯಚೂರು  ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ವಿಪ್ರೋತ್ಸವ ಹಾಗೂ ವಿಪ್ರ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನಾರೋಗ್ಯದ ನಿಮಿತ್ತ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದ ಮನೋಹರ ರಾವ್ ಕುಲಕರ್ಣಿ "ವಿಪ್ರ ಶ್ರೀ" ಪ್ರಶಸ್ತಿ ಪ...
Image
  ಕೆಪಿಸಿಸಿ ಪ್ರಚಾರ ಸಮಿತಿಗೆ  ಸಂಯೋಜಕರ ನೇಮಕ.                        ಜಯ ಧ್ವಜ ನ್ಯೂಸ್, ರಾಯಚೂರು,ಜು.29-           ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ‌ ಸಮಿತಿ ಸಂಯೋಜಕರನ್ನಾಗಿ ಜಿಲ್ಲೆಯ ಅನೇಕ ಮುಖಂಡರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶಿಸಿದ್ದಾರೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರಾದ ಸುಧೀಂದ್ರ ಜಾಗೀರದಾರ್, ಯಂಕಣ್ಣ ಯಾದವ್, ಬಾಲಸ್ವಾಮಿ ಕೊಡ್ಲಿ ಹಾಗೂ ಜಿಲ್ಲಾ ಪ್ರಾಚಾರ ಸಮಿತಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿಯವರನ್ನು ನೇಮಕ ಮಾಡಲಾಗಿದೆ.
Image
  ಹಟ್ಟಿ ಚಿನ್ನದ ಗಣಿಯಲ್ಲಿ  998 ಕೋಟಿ ರೂ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಆ.6 ರಂದು ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ-  ಜೆ.ಟಿ.ಪಾಟೀಲ ಜಯ ಧ್ವಜ ನ್ಯೂಸ್,  ರಾಯಚೂರು, ಜು. 29-   ಅಂದಾಜು 998 ಕೋಟಿ .ರೂ ವೆಚ್ಚದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಛಯ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ. 6 ರಂದು ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ ಶಂಕುಸ್ಥಾಪನೆಯನ್ನು  ನೆರವೇರಿಸಲಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಹಾಗೂ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಟಿ. ಪಾಟೀಲ ಅವರು ಹೇಳಿದರು. ಲಿಂಗಸೂರ ತಾಲೂಕಿನ ಹಟ್ಟಿಯ ಚಿನ್ನದ ಗಣಿ ಕಂಪನಿಯ ಸಭಾಂಗಣದಲ್ಲಿ ಇಂದು  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹಟ್ಟಿಯಲ್ಲಿ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಛಯ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಅಂದಾಜು 998 ಕೋಟಿ ರೂ ವೆಚ್ಚದಲ್ಲಿ ವಸತಿ ಗೃಹಗಳು, ಶಾಲೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಆಗಲಿವೆ. 2 ಬಿಎಚ್ ಕೆಯ 16 ಕ್ವಾರ್ಟರ್ಸ ಗಳ 1 ಬ್ಲಾಕ್ ನಿರ್ಮಾಣವಾಗಲಿದೆ. ಇದರಲ್ಲಿ ಲಿಫ್ಟ್  ಎಲಿವೇಟರನಂತಹ ಬೇರೆ ಬೇರೆ ಆಧುನಿಕ ಸೌಲಭ್ಯಗಳು ಇರಲಿವೆ.  ಅದೇ ರೀ...
Image
  ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಆ‌.1 ರಂದು ಪ್ರತಿಭಟನೆ:                                                  ಪಕ್ಷಾತೀತವಾಗಿ ಒಳಮೀಸಲಾತಿ ಹೋರಾಟಕ್ಕೆ ಕರೆ-ಎ.ನಾರಾಯಣಸ್ವಾಮಿ .                                                                                                                               ಜಯ ಧ್ವಜ ನ್ಯೂಸ್, ರಾಯಚೂರು, ಜು.28- ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಕುರಿತು ತೀರ್ಪು ನೀಡಿ ಒಂದು ವರ್ಷ ಗತಿಸುತ್ತಿದ್ದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಮೇನಾಮೇಷ ಎಣೆಸುತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಆ.1 ರಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಅವರಿ...
Image
  ಲಿಂಗಸ್ಗೂರಿನಲ್ಲಿ ಕೆಯುಡ್ಬ್ಬುಜೆ ಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ: ಪತ್ರಿಕೋದ್ಯಮವು ಜನರ ಹಾಗೂ ಸರ್ಕಾರದ ನಡುವಿನ ಸಂಪರ್ಕ ಸೇತುವೆ- ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ ಜಯ ಧ್ವಜ ನ್ಯೂಸ್  ರಾಯಚೂರು, ಜು.27- ಪತ್ರಿಕಾ ರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟಿದೆ. ಜನರು ಹಾಗೂ ಸರ್ಕಾರಗಳ ನಡುವೆ ಸಂಪರ್ಕ ಸೇತುವೆಯಾಗಿ  ಪತ್ರಿಕೋದ್ಯಮವು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಹೇಳಿದರು. ಜುಲೈ 27ರ ಭಾನುವಾರ ದಂದು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಶ್ರೀವಿಜಯ ಮಹಾಂತೇಶ್ವರ ಶಾಖಾಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ರಾಯಚೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಈ ಡಿಜಿಟಲ್‌ ಜಗತ್ತಿನಲ್ಲಿ ಪತ್ರಿಕೋದ್ಯಮವು ಸಹ ಡಿಜಿಟಲೀಕರಣಗೊಂಡಿದೆ. ಮೊಬೈಲ್‌ನಲ್ಲಿಯೇ ಎಲ್ಲಾ ಕ್ಷಣ ಕ್ಷಣದ ಸುದ್ದಿಗಳನ್ನು ನಾವು ನೋಡಬಹುದಾಗಿದೆ. ಪತ್ರಿಕೆ ಓದುಗರ ಸಂಖ್ಯೆ ಈಗ ಕಡಿಮೆಯಾಗುತ್ತಿದೆ. ಜನರ ಮನಸ್ಥಿತಿ ಅರಿತು ಪತ...
 ರಾಯಚೂರು, ಪತ್ರಿಕೆ ಮಾಧ್ಯಮಕ್ಕೆ ಬಹುದೊಡ್ಡ ಜವಾಬ್ದಾರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರ ಕಾಶ ಪಾಟೀಲ್   ಹೇಳಿದರು. ಲಿಂಗಸೂಗೂರಿನ ವಿಜಯ ಮಹಾಂತೇಶ್ವರ ಶಾಖ ಮಠದಲ್ಲಿ ನಡೆದ ಜಿಲ್ಲಾ ಕಾರ್ಯಕರ್ತ ಪತ್ರಕರ್ತ ಸಂಘ, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. "ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ನಮ್ಮ ದೇಶ ಪ್ರಜಾಪ್ರಭುತ್ವವನ್ನು ಪಡೆಯಿತು. ಸಂವಿಧಾನವು ಸಮಾಜದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಜಾಗೃತಿಯನ್ನು ಮೂಡಿಸುವ ಕೆಲಸ ಪತ್ರಕರ್ತರು ಮಾಡುತ್ತಿದ್ದಾರೆ. ಅವರು ಸರಿ-ತಪ್ಪುಗಳನ್ನು ಎತ್ತಿ ತೋರಿಸುತ್ತಿದ್ದಾರೆ" ಎಂದು ಅವರು ಹೇಳಿದರು. ಅವರು ಪ್ರಸ್ತುತ ಪತ್ರಿಕೋದ್ಯಮದ ಬದಲಾದ ಧೋರಣೆಗಳ ಬಗ್ಗೆ ಮಾತನಾಡುತ್ತಾ, "ಹಿಂದಿನಂತೆ ಇಂದು ಪ್ರಿಂಟ್ ಮಾಧ್ಯಮದ ಪ್ರಭಾವ ಕಡಿಮೆಯಾಗಿದ್ದು, ಡಿಜಿಟಲ್ ಮಾಧ್ಯಮ ಹೆಚ್ಚಾಗಿದೆ. 24x7 ಸುದ್ದಿ ನೀಡುವ ಡಿಜಿಟಲ್ ಮಾಧ್ಯಮಗಳು ಎಲ್ಲವನ್ನೂ ತಕ್ಷಣ ನೀಡುತ್ತವೆ. ಆದರೆ ಇದರ ಹಿಂದಿನ ಪೂರಕ ಮಾಹಿತಿ ಇಲ್ಲದಿದ್ದರೆ ಅಪಾಯಕಾರಿಯಾಗುತ್ತದೆ. ಈಗ ಪತ್ರಿಕೋದ್ಯಮವು ಸಾಮಾಜಿಕ ಕಳಕಳಿಯ ಹಾದಿಯಿಂದ ಹೊರ ಹೋಗಿ, ಬಹುತೇಕ ಕರ್ಪೋರೇಟ್ ಮಾಲೀಕತ್ವದಲ್ಲಿ ನಡೆಯುತ್ತಿದೆ ಎಂಬುದು ಆತಂಕಕಾ...