Posts

Image
ಸಂಸದ ಗೋವಿಂದ ಕಾರಜೋಳ ಬಗ್ಗೆ ಅವಹೇಳನಕಾರಿ ಪೋಸ್ಟರ್ ಕ್ರಮಕ್ಕೆ ರವೀಂದ್ರ ಜಲ್ದಾರ್ ಪೊಲೀಸರಿಗೆ ಒತ್ತಾಯ   ಜಯ ಧ್ವಜ ನ್ಯೂಸ್, ರಾಯಚೂರು,ಜು.25- ಸಾಮಾಜಿಕ ಜಾಲತಾಣಗಳಲ್ಲಿ  ಚಿತ್ರದುರ್ಗ ಸಂಸದರ  ವಿರುದ್ಧ ಹಾಗೂ ಬಿಜೆಪಿ ಪಕ್ಷದ ಬಗ್ಗೆ ಅವಹೇಳನಕಾರಿ , ಮಾನಹಾನಿಕರ ಹಾಗೂ ಸಾರ್ವಜನಿಕ ಶಾಂತಿ ಕದಡುವ ಉದ್ದೇಶದ ಪೋಸ್ಟ್ ಗಳನ್ನು ಪ್ರಕಟಿಸಿರುವ ಪಾವಗಡ ಮೂಲದ ಶ್ರೀನಿವಾಸ್ ಬಾಬು ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ರವೀಂದ್ರ ಜಲ್ದಾರ್  ಮನವಿ ಪತ್ರಿ ಸಲ್ಲಿಸಿದರು.   ಪಾವಗಡ ತಾಲ್ಲೂಕಿನ ಶ್ರೀನಿವಾಸ್ ಬಾಬು ಎಂಬ ವ್ಯಕ್ತಿಯು , ಚಿತ್ರದುರ್ಗ ಲೊಕಸಭಾ ಸಂಸದರಾದ ಶ್ರೀ ಗೋವಿಂದ್ ಕಾರಜೋಳ ಅವರ ವಿರುದ್ಧ ನಿರಂತರವಾಗಿ ಅವಹೇಳನಕಾರಿ , ಮಾನಹಾನಿಕರ ಹಾಗೂ ಗೌರವಕ್ಕೆ ದಕ್ಕೆ ತರುವ ರೀತಿಯ ಪೋಸ್ಟ್ ಗಳನ್ನು ಪ್ರಕಟಿಸುತ್ತಿದ್ದಾರೆಂದು ದೂರಿದ ಅವರು ದೇಶದ ಪ್ರಮುಖ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷವನ್ನು ಉದ್ದೇಶಪೂರ್ವಕವಾಗಿ "ಬ್ಲೂ ಜೆಪಿ" ಎಂಬ ಅವಹೇಳನಕಾರಿ ಪದ ಮತ್ತು ನಮ್ಮ ಪಕ್ಷದ ಕಾರ್ಯಕರ್ತರನ್ನು "ದಲ್ಲಾಳಿಗಳು" ಎಂಬ ಪದಗಳನ್ನು ಬಳಸಿ ನಿಂದಿಸುತಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರ ಭಾವನೆಗಳಿಗೆ ದಕ್ಕೆ  ಉಂಟಾಗುತ್ತಿದೆ ಇಂತಹ ಪೋಸ್ಟ್ಗಳು ಸಾರ್ವಜನಿಕರಲ್ಲಿ ದ್ವೇಷ, ವೈಮನಸ್ಸು ಮತ್ತು ಉದಿಗ್ನತೆ ಉಂಟು ಮಾಡುವ ಸಾಧ್ಯತೆ ಇದ್ದು , ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರುವಂತಿ...
Image
  ಜು.28ರಂದು ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು  ಜೀವಮಾನ ಸಾಧನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ - ಗುರುನಾಥ ಜಯ‌ ಧ್ವಜ ನ್ಯೂಸ್ ,ರಾಯಚೂರು,ಜು.25- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಯಚೂರು ರಿಪೋಟರ‍್ಸ್ ಗಿಲ್ಡ್ ಮತ್ತು ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜು.28 ರಂದು ಬೆಳಗ್ಗೆ 10.30  ಗಂಟೆಗೆ ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ತಿಳಿಸಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸುವರು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡುವರು. ಸಂಸದ ಜಿ.ಕುಮಾರ ನಾಯಕ, ಶಾಸಕರಾದ ಹಂಪನಗೌಡ ಬಾದರ್ಲಿ, ಡಾ.ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಮಾನಪ್ಪ ವಜ್ಜಲ್, ಕರೆಮ್ಮ ನಾಯಕ, ಹಂಪಯ್ಯ ನಾಯಕ, ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ್, ಬಸನಗೌಡ ಬಾದರ್ಲಿ, ಶರಣಗೌಡ ಬಯ್ಯಾಪುರ, ಜಿಲ್ಲಾಧಿಕಾರಿ ಪೂವಿತಾ ಎಸ್, ಎಸ್‌ಪಿ ಅರುಣಾಂಗ್ಷು ಗಿರಿ, ಜಿಪಂ ಸಿಇಒ ಈಶ್ವರ...
Image
  ಕೆಪಿಎಮ್‌ಇ ಕಾಯ್ದೆ ಅನುಷ್ಠಾನ ಸಮಿತಿ ಸಭೆ: ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಿ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್  ,ರಾಯಚೂರು ಜು. 24- ಜಿಲ್ಲೆಯಲ್ಲಿ ಕೆಪಿಎಮ್‌ಇ ಕಾಯ್ದೆಯಡಿ ನೋಂದಾಯಿಸದ ಅಥವಾ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ನಕಲಿ ವೈದ್ಯರು, ಆಸ್ಪತ್ರೆಗಳು ಮತ್ತು ವ್ಯಸನ ಮುಕ್ತಿ ಕೇಂದ್ರಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರಿಂದು  ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಕೆಪಿಎಮ್‌ಇ ಕಾಯ್ದೆ ಅನುಷ್ಠಾನ ಹಾಗೂ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಯಚೂರು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪರವಾನಗಿ ಇಲ್ಲದ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ, ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ವೈದ್ಯರಲ್ಲದವರು ಅನಧಿಕೃತವಾಗಿ ವೈದ್ಯ ವೃತ್ತಿಯನ್ನು ಮಾಡುತ್ತಿರುವ ನಕಲಿ ವೈದ್ಯರ ಮಾಹಿತಿ ಪಡೆಯಬೇಕು. ವೈದ್ಯ ಪದವಿ ಪಡೆಯದೆ ಜನರ ಜೀವಕ್ಕೆ ತೊಂದರೆಯುಂಟು ಮಾಡುವುದನ್ನು ತಡೆಯಲು ಎಲ್ಲ ನಕಲಿ ವೈದ್ಯರನ್ನು ಗುರ್ತಿಸಿ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕವಾಗಿ ಹಾಗೂ ಕೆಪಿಎಮ್‌ಇ ಕಾಯ್ದೆ-2007ರ ಅಡಿ ಕ್ರಮ ಜರುಗಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು....
Image
  ಓಪೆಕ್ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ ವಿವಿಧ ವಿಭಾಗಗಳ ಪರಿಶೀಲನೆ ಜಯ ಧ್ವಜ ನ್ಯೂಸ್ , ರಾಯಚೂರು ,ಜು.23- ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಇಂದು  ನಗರದಲ್ಲಿರುವ ಓಪೆ ಕ್ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿವಿಧ ವಿಭಾಗಗಳಾದ ಕಾರ್ಡಿಯಾಲಜಿ. ಕಿಮೋ ಥೆರಫಿ. ಡಯಾಲಿಸಸ್ ಕ್ಯಾಥಲ್ಯಾಬ್ ಸ್ಕ್ಯಾನಿಂಗ್ ಸೆಂಟರ್, ಟ್ರಾಮಾ ಕೇರ್ ಸೇರಿದಂತೆ ಇತರೆ ವಿ‌ಭಾಗಗಳ ಪರಿಶೀಲನೆ ನಡೆಸಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಮತ್ತು ಆಸ್ಪತ್ರೆಗೆ ಅವಶ್ಯಕತೆ ಇರುವ ಉಪಕರಣಗಳ ಪಟ್ಟಿ ನೀಡುವಂತೆ ಆಸ್ಪತ್ರೆಯ ನಿರ್ದೇಶಕರಿಗೆ  ಸೂಚಿಸಿದರು.  ಓಫೆಕ್ ಆಸ್ಪತ್ರೆಗೆ ಬಂದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು ಚಿಕಿತ್ಸೆ ಹೇಗೆ ನೀಡುತ್ತಿದ್ದಾರೆ ಎಂದು ಅವರಿಂದ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡುವಂತೆಯು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಓಫೆಕ್ ಆಸ್ಪತ್ರೆಯ ನಿರ್ದೇಶಕರಾದ ರಮೇಶ್ ಸೇರಿದಂತೆ ಆಸ್ಪತ್ರೆಯ ಇತರೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Image
  ಹಿರಿಯ ಸಾಹಿತಿ ಬಿ.ಜಿ ಹುಲಿ ಜನ್ಮ ದಿನಾಚರಣೆ,  1 ಲಕ್ಷ 6೦ ಸಾವಿರ ರೂ ದೇಣಿಗೆ ಅರ್ಪಣೆ: ಮಟಮಾರಿಯ ಶಿವಾನಂದ ಮಠದ ಸಾಮಾಜಿಕ ಕಳಕಳಿ ಶ್ಲಾಘನೀಯ -ಡಾ.ಹಂಪಣ್ಣ ಸಜ್ಜನ ಜಯ ಧ್ವಜ ನ್ಯೂಸ್ ,ರಾಯಚೂರು,ಜು.22- ಸಮಾಜದಲ್ಲಿನ ದುರ್ಬಲ ವರ್ಗದ ಮಕ್ಕಳಿಗೆ ಜ್ಞಾನ ಹಾಗೂ ಅನ್ನ ದಾಸೋಹದ ಮೂಲಕ ಮಠ ಮಾನ್ಯಗಳು ವಿಶಿಷ್ಠ ಕೊಡುಗೆ ನೀಡುತ್ತಿವೆ ಎಂದು ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ ಹೇಳಿದರು. ರಾಯಚೂರಿನ ದಿ.ಸಾವಿತ್ರಿದೇವಿ.ಬಿ.ಹುಲಿ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡ ಆಪ್ತ ನಿವೃತ್ತ ಸ್ನೇಹಿತರಿಗೆ ಸನ್ಮಾನ ಹಾಗೂ ನಿವೃತ್ತ ಉಪನ್ಯಾಸಕ ಬಿ.ಜಿ.ಹುಲಿ ಅವರ 8೦ನೇ ವರ್ಷದ ಜನ್ಮ ದಿನದ ಹಿನ್ನೆಲೆಯಲ್ಲಿ ತಾಲೂಕಿನ ಮಟಮಾರಿಯ ಶ್ರೀ ಶಿವಾನಂದ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಯಚೂರು ನಗರದ ಬಸವ ಸೇವಾ ಪ್ರತಿಷ್ಠಾನದ ಬಸವ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶ್ರೀ ಶಿವಾನಂದ ಮಠಕ್ಕೆ ತಲಾ 80 ಸಾವಿರ ರೂ. ದೇಣಿಗೆ ಅರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಟಮಾರಿಯ ಶ್ರೀ ಶಿವಾನಂದ ಮಠವು 80 ಕ್ಕೂ ಹೆಚ್ಚು ಅನಾಥ ಹಾಗೂ ಬಡ ಮಕ್ಕಳಿಗೆ ಉಚಿತ ವಸತಿ, ಊಟ, ಮತ್ತು ಶಿಕ್ಷಣ ನೀಡುತ್ತಿದೆ. ಇಂತಹ ಮಕ್ಕಳ ಉನ್ನತಿಗಾಗಿ ಶ್ರಮಿಸುತ್ತಿರುವ ಮಠದ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡುವುದಾಗಿ ತಿಳಿಸಿದ ಅವರು, ಹಿರಿಯ ಸಾಹಿತಿಗಳಾದ ಬಿ.ಜಿ.ಹುಲಿ ಅವರ ಜನ್ಮದಿನವನ್ನು ಸಮಾಜಕ್ಕೆ ಮಾದರಿಯಾಗಿ ಆಚರಿಸಿಕೊಂಡು ಶಿಕ್ಷಣ, ದಾಸೋಹ ಪರ...
Image
ಗಣೇಶ ಚತುರ್ಥಿ ಹಬ್ಬದ ಪೂರ್ವಭಾವಿ ಸಭೆ: ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಿ- ಜಿಲ್ಲಾಧಿಕಾರಿ ಪೂವಿತಾ ಎಸ್ . ಜಯ ಧ್ವಜ ನ್ಯೂಸ್ ,ರಾಯಚೂರು ಜು 22 - ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ರಾಯಚೂರು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಜುಲೈ 22ರ ಬುಧವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗಣೇಶ ಹಬ್ಬದ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಒ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದರು. ಪಿ.ಒ.ಪಿ ಗಣಪತಿ ವಿಗ್ರಹಗಳ ಸಾಗಣೆ, ದಾಸ್ತಾನು ಹಾಗೂ ಮಾರಾಟವನ್ನು ತಡೆಗಟ್ಟಬೇಕು. ವಿಗ್ರಹಗಳ ತಯಾರಿಕಾ ಘಟಕ, ಮಾರಾಟ ಸ್ಥಳಗಳಿಗೆ ಅನಿರೀಕ್ಷಿತ ಭೇಟಿಗಳನ್ನು ನೀಡಿ, ತಪಾಸಣೆ ಮಾಡಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಆದೇಶದ ಪ್ರಕಾರ ನಮ್ಮ ನೀರಿನ ಮೂಲಗಳನ್ನು ನಾವು ರಕ್ಷಿಸಿಕೊಳ್ಳಬೇಕು...
Image
ರಕ್ತದಾನದಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ- ಡಾ.ನಂದಿತಾ                                                            ಜಯ‌ ಧ್ವಜ ನ್ಯೂಸ್ , ರಾಯಚೂರು, ಜು.22 - ಆರೋಗ್ಯವಂತರಾಗಿರುವ ಪ್ರತಿಯೊಬ್ಬರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ಬಹಳಷ್ಟು ಒಳ್ಳೆಯದು ಇದರಿಂದ ನಮ್ಮ ಆರೋಗ್ಯವು ಸರಿಯಾಗಿರುವಂತೆ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ರಕ್ತದಾನದಿಂದ ಆರೋಗ್ಯಕ್ಕೆ ಯಾವುದೇ ಹಾನಿಯಲ್ಲವೆಂದು   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ನಂದಿತಾ ಹೇಳಿದರು. ಅವರು ನಗರದ ಜಹಿರಾಬಾದ್ ಬಡಾವಣೆಯಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಹಾದಾನವಾಗಿದ್ದು ತುರ್ತು ಸಂದರ್ಭದಲ್ಲಿ ಮತ್ತೊಬ್ಬರಿಗೆ ಜೀವದಾನ ನೀಡುತ್ತದೆ ಎಂದರು.  ರಿಮ್ಸ್  ವೈದ್ಯಾಧಿಕಾರಿಗಳಾದ  ಅಹಮದ್  ಹುಸೇನ್ ಮಾತನಾಡಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವದರಿಂದ ಕ್ಯಾನ್ಸರ್ ರೋಗವನ್ನು ಸಹ ನಾವು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರ ದೇಹದಲ್ಲಿ ರಕ್ತವು ಯಾವುದೇ ರೀತಿಯಿಂದ ಕೃತಕವಾಗಿ ತಯಾರಾಗುವುದಿಲ್ಲ ಅದನ್ನು ಒಬ್ಬ ವ್ಯಕ್ತಿಯಿಂದ ಒಬ್ಬ ವ್ಯಕ್ತಿಗೆ ಮಾತ್ರ ಪಡೆದು...