ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿಮಹೋತ್ಸವ : ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆಗೆ ಬಸವರಾಜ್ ನಾಗಡದಿನ್ನಿ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.12 - ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತನ್ನ ಇಂದಿನ ಯುವ ಪೀಳಿಗೆ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ ಹೇಳಿದರು. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ "ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?" ವಿಷಯ ಕುರಿತು ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೆನ್ ಜಿ ಎಂಬುದು ಇತ್ತೀಚೆಗೆ ಬಹಳ ಪ್ರಭಾವಿತ ಪದವಾಗಿದೆ. ಶಿಕ್ಷಣವನ್ನು ಸಾರ್ವತ್ರಿಕವಾಗಿ ಮಾಡಿ ಯುವ ಸಮಾಜ ಕಟ್ಟವುದು ಜೆನ್ ಜಿ ಕಲ್ಪನೆಯಾಗಿದ್ದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ನೋಡಬೇಕಿದೆ ಎಂದರು.ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತಮ್ಮ ಬೆಳ್ಳಿ ಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಈ ರೀತಿ ಸ್ಪರ್ಧೆಗಳ ಆಯೋಜನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಅಂತ ಹೇಳಿದರು. ಮಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ವೆಂಕಟೇಶ್ವರ ಶಿಕ್ಷ...