ದಾಸ ಪರಂಪರೆಯನ್ನು ಬೆಳೆಸಿದ ಮಹನೀಯರು ಶ್ರೀ ಶಾಮ ಸುಂದರ ದಾಸರು- ಮುರಳೀಧರ ಕುಲಕರ್ಣಿ ಜಯ ಧ್ವಜ ನ್ಯೂಸ್ ,ರಾಯಚೂರು,ಏ.26- ನಗರದ ಜವಾಹರ ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ನಿನ್ನೆ ಸಂಜೆ ವರಕವಿಗಳು ದಾಸ ಶ್ರೇಷ್ಠರಾದ ಶ್ರೀ ಶಾಮಸುಂದರ ದಾಸರ ಆರಾಧನೆಯನ್ನು ದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜ್ರಂಭಣೆಯಿಂದ ಆಚರಿಸಲಾಯಿತು. ಆರಾಧನೆಯ ಕಾರ್ಯಕ್ರಮದಲ್ಲಿ ಉಪನ್ಯಾಸಗಳು ದಾಸವಾಣಿ ಕಾರ್ಯಕ್ರಮಗಳು ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮಗಳು ಜರಗಿದವು. ಶೃತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಅವರು ಉಪನ್ಯಾಸವನ್ನು ನೀಡಿ ಶ್ರೀ ಶಾಮ ಸುಂದರ ದಾಸರು ಮಾನವಿಯ ಗುಂಡಾಚಾರ್ಯರೆಂದು ಪ್ರಸಿದ್ಧಿಯಾಗಿದ್ದರು ಇವರು ಜಗನ್ನಾಥದಾಸರಿಂದ ಸ್ವಪ್ನಾಂಕಿತವನ್ನು ಪಡೆದು ಶಾಮ ಸುಂದರ ವಿಠಲ ಎಂಬ ಅಂಕಿತದಿಂದ ನೂರಾರು ಸಂಕೀರ್ತನೆಗಳನ್ನು, ಸುಳಾದಿಗಳನ್ನು, ಬಯಲಾಟಗಳನ್ನು,ಲಾವಣಿ ಪದಗಳನ್ನು, ಗೀಗಿ ಪದಗಳನ್ನು, ಶೋಬಾನಗೀತೆಗಳನ್ನು, ಜೋಗುಳ ಗೀತೆಗಳನ್ನು, ಕೋಲಾಟ ಪದಗಳನ್ನು ರಚಿಸಿ ಹರಿದಾಸ ಶ್ರೇಷ್ಠ ...