Posts

Image
  ಯರಗೇರ ಶಾದಿ ಮಹಲ್ ಗಾಗಿ ಒಂದು ಕೋಟಿ ರೂ. ಮಂಜೂರು: ಅಲ್ಪಸಂಖ್ಯಾತರ ಮುಖಂಡರಿಂದ ಶಾಸಕರಿಗೆ ಸನ್ಮಾನ ಜಯ ಧ್ವಜ ನ್ಯೂಸ್ ,ರಾಯಚೂರು,ಫೆ.21- ಜಿಲ್ಲೆಯ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಅಲ್ಪಸಂಖ್ಯಾತರ ಇಲಾಖೆಯಿಂದ ಸುಮಾರು ಒಂದು ಕೋಟಿ ರೂಪಾಯಿ ಹಣವನ್ನು ಶಾದಿ ಮಹಲ್ ಸಲುವಾಗಿ ಮಂಜೂರು ಮಾಡಲು ಗ್ರಾಮೀಣ ಜನಪ್ರಿಯ ಶಾಸಕರು ಮತ್ತು ಅಧ್ಯಕ್ಷರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಬಸನಗೌಡ ದದಲ್  ಯಶಸ್ವಿಯಾಗಿರುತ್ತಾರೆ  . ಈ ವಿಷಯವನ್ನು ತಿಳಿದು ಯರಗೇರಾ ಮತ್ತು ಸುತ್ತಮುತ್ತಲಿನ ಭಾಗದ ಅಲ್ಪಸಂಖ್ಯಾತರ ಮುಖಂಡರಿಗೆ ಸಂತಸದ ವಿಷಯವಾಗಿದೆ ಮತ್ತು ಮುಂದಿನ ದಿನಗಳಲ್ಲಿ ಭೂಮಿ ಪೂಜೆ ಮಾಡುವ ಬಗ್ಗೆ ಈಗಾಗಲೇ ಆಶ್ವಾಸನೆ ನೀಡಿರುತ್ತಾರೆ. ಡಿಸೆಂಬರ್ ತಿಂಗಳಲ್ಲಿ ಯರಗೇರ ಗ್ರಾಮಕ್ಕೆ ಹಜರತ್ ಬಡೇಸಾಹೇಬ್ ಉರುಸಿಗೆ ಆಗಮಿಸಿದ ವೇಳೆ  ಕೊಟ್ಟ ಮಾತಿಗೆ ತಕ್ಕಂತೆ ಕೇವಲ ಒಂದು ತಿಂಗಳಲ್ಲಿ ಹಣ ಮಂಜೂರು ಮಾಡಿಸಿದ  ಶಾಸಕರು ಎಂದು ಮುಖಂಡರು ಶ್ಲಾಘಿಸಿದರು . ಈ ಹಿನ್ನೆಲೆಯಲ್ಲಿ ಯರಗೇರಾ ಗ್ರಾಮದ ಅಲ್ಪಸಂಖ್ಯಾತ ಮುಖಂಡರು ಗ್ರಾಮೀಣ ಶಾಸಕರ ಕಚೇರಿಯಲ್ಲಿ ಶಾಸಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸುವ ಮೂಲಕ ಅಭಿನಂದಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರು ಗ್ರಾಮಸ್ಥರು ಯುವ ನಾಯಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Image
  ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಿಂದ  ನಗರ ಸಂಚಾರ:          ಕಾಮಗಾರಿಗಳ ಪರಿಶೀಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಫೆ. 21 - ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮಹೋಪಾತ್ರ ಅವರು ಇಂದು  ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಪ್ರಗತಿಯಲ್ಲಿರುವ ಮತ್ತು ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗೊಳಿಸುವುದು ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು. ಆಯುಕ್ತರು ಮೊದಲು ಮಾವಿನಕೆರೆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸಾರ್ವಜನಿಕ ಸ್ಥಳಗಳಲ್ಲಿನ ಅತಿಕ್ರಮಣಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದರ ಜೊತೆಗೆ ಮಾವಿನಕೆರೆಯ ಉದ್ಯಾನವನ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಳಿಕ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಹೈಟೆಕ್ ಸಾರ್ವಜನಿಕ ಶೌಚಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಈ ಸೌಲಭ್ಯವನ್ನು ತ್ವರಿತವಾಗಿ ಪ್ರಾರಂಭಿಸುವ ಮೂಲಕ ಸ್ಥಳೀಯ ನಿವಾಸಿಗಳಿಗ...
Image
  ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ:                                                                    ರೈಲ್ವೇ , ರಿಂಗ್ ರೋಡ್, ಜೆಜೆಮ್, ಶೌಚಾಲಯ ನಿರ್ಮಾಣ ಮುಂತಾದವುಗಳ ಅನುಷ್ಟಾನ ವಿಳಂಬ ಸಭೆಯಲ್ಲಿ ಅಸಮಾಧಾನ.                                                                     ಜಯ ಧ್ವಜ ನ್ಯೂಸ್ , ರಾಯಚೂರು , ಫೆ.21- ಜಿಲ್ಲೆಯಲ್ಲಿ ರೈಲ್ವೆ, ರಿಂಗ್ ರೋಡ್ , ಜೆಜೆಎಂ , ಶೌಚಾಲಯ ನಿರ್ಮಾಣ ಮುಂತಾದ ಕಾಮಗಾರಿಗಳ ಭೌತಿಕ ಪ್ರಗತಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳ ಬಗ್ಗೆ ಸಭೆಯಲ್ಲಿ ಸಚಿವರು, ಸಂಸದರು, ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.    ಬೆಳಿಗ್ಗೆ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಕೇಂದ್ರ ಸರ್ಕಾರ ಪು...
Image
  ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ:                                                ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ: ಜಯ ಧ್ವಜ ನ್ಯೂಸ್ , ರಾಯಚೂರು, ಫೆ.21- ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಗರದ ಶಾಸಕರಾದ ಡಾ. ಶಿವರಾಜ ಪಾಟೀಲ ಮತ್ತು  ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ  ವಿನಾಯಕ ರಾವ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ನಡೆಯಿತು. ವಿಶ್ವ  ಎಐ ಸಮಿಟ್ ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಧಾoಧಲೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯ ಮುತ್ತಿಗೆ ನಡೆಸುವುದರ ಮೂಲಕ   ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು.   ವಿಶ್ವ  ಎಐ ಸಮಿಟ್ ನಲ್ಲಿ ನಡೆಸಿದ ಧಾoಧಲೇ ವಿರುದ್ಧ ಘೋಷಣೆ ಕೂಗಿ ಜಗತ್ತಿನ ಮುಂದೆ ಭಾರತದ ಮಾನ ಕಳೆದ ಹೀನ ಕೃತ್ಯವನ್ನು ಖಂಡಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಸಂತೋಷ ರಾಜಗುರು, ರವೀಂದ್ರ ಜಲ್ದಾರ , ಜಿಲ್ಲಾ ವಕ್ತಾರರಾದ ಸಿದ್ದನಗೌಡ ನೆಲಹಾಳ ರಾಘವೇಂದ್ರ ಉಟ್ಕೂರು, ಬಿಜೆಪಿ ನಗರ ಅಧ್ಯಕ್ಷರು ಎಸ್.ಸಿ ಮೊರ್ಚಾ ಜಿಲ...
Image
  ಸಾರ್ವಜನಿಕ ಸ್ಥಳಗಳಲ್ಲಿ ಬಂದೂಕು ಪ್ರದರ್ಶನ ಪ್ರಕರಣಗಳು ವೈರಲ್   :      ಜಿಲ್ಲೆಯಲ್ಲಿ ಅಧಿಕೃತ ಬಂದೂಕು ಲೈಸೆನ್ಸ್ ದಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ ಪೊಲೀಸ್ ಇಲಾಖೆ.                                                                                                   ಜಯ ಧ್ವಜ ನ್ಯೂಸ್, ರಾಯಚೂರು, ಫೆ.20- ಸಾರ್ವಜನಿಕ ಸ್ಥಳಗಳಲ್ಲಿ ಬಂದೂಕು ಪ್ರದರ್ಶನ ಪ್ರಕರಣಗಳು ವೈರಲ್ ಆಗುತ್ತಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತು ಕೊಂಡಿದ್ದು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಬಂದೂಕು ಲೈಸೆನ್ಸ್ ದಾರರ ಸಭೆ ನಡೆಸಿ ಕಟ್ಟು ನಿಟ್ಟಿನ ಸೂಚನೆ ನೀಡಿದೆ.       ಆಯಾ ಠಾಣಾ ವ್ಯಾಪ್ತಿಯಲ್ಲಿರುವ   ಗನ್  ಲೈಸೆನ್ಸ್ ದಾರರ ಸಭೆ ನಡೆಸಿ ತಿಳಿವಳಿಕೆ ನೀಡಿ ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಗನ್ ನೀಡುವುದು, ಪ್ರದರ್ಶನ ಮಾಡುವುದು ,ಉಪಯೋಗಿಸುವುದು ಶಸ್ತ್ರಾಸ್ತ್ರ ಕಾಯ್ದೆ  ಉಲ್ಲಂಘನೆಯಾಗಿದ್ದು ಗನ್ ಲೈಸೆನ್ಸ್ ದಾರರ...
Image
  ಎಲ್.ಬಿ.ಎಸ್. ನಗರದಲ್ಲಿ  399ನೇ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅದ್ದೂರಿ ಆಚರಣೆ ಜಯ ಧ್ವಜ ನ್ಯೂಸ್ , ರಾಯಚೂರು, ಫೆ.20- ನಗರದ ಎಲ್.ಬಿ.ಎಸ್. ನಗರದಲ್ಲಿ ಗುರುವಾರದಂದು 399ನೇ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅತ್ಯಂತ ವಿಜೃಂಭಣೆಯಿಂದ, ಭಕ್ತಿ ಮತ್ತು ದೇಶಭಕ್ತಿಯ ಉತ್ಸಾಹದೊಂದಿಗೆ ಆಚರಿಸಲಾಯಿತು. ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿ, ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಭವ್ಯ ಶೋಭಾಯಾತ್ರೆ ಆಯೋಜಿಸಲಾಗಿತ್ತು ಜಯಘೋಷಗಳ ಮಧ್ಯೆ ಹಾಗೂ “ಛತ್ರಪತಿ ಶಿವಾಜಿ ಮಹಾರಾಜ್ ಕೀ ಜೈ” ಎಂಬ ಘೋಷಣೆಗಳೊಂದಿಗೆ ಖಾಸ್ ಬಾವಿ ಹತ್ತಿರ ಇರುವ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದವರೆಗೆ ಸಾಗಿತು. ಅಲ್ಲಿ ಮಹಾರಾಜರ ಪ್ರತಿಮೆಗೆ ಗೌರವಪೂರ್ವಕವಾಗಿ ಮಾಲಾರ್ಪಣೆ ಮಾಡಲಾಗಿತು. ಕಾರ್ಯಕ್ರಮದಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿವಾಜಿ ಮಹಾರಾಜರ ಆದರ್ಶಗಳು, ಧೈರ್ಯ, ಸ್ವಾಭಿಮಾನ ಮತ್ತು ರಾಷ್ಟ್ರಪ್ರೇಮವನ್ನು ಸ್ಮರಿಸಿದರು. ಮಹಾರಾಜರ ಆಡಳಿತ ತತ್ವಗಳು, ಶೌರ್ಯ ಮತ್ತು ಸಮಾನತೆ ಸಂದೇಶಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ವಕ್ತಾರರು ಅಭಿಪ್ರಾಯಪಟ್ಟರು. ಒಟ್ಟಾರೆ, ಈ ಜಯಂತಿ ಆಚರಣೆ ಸಮಾಜದ ಒಗ್ಗಟ್ಟಿನ ಸಂಕೇತವಾಗಿ, ದೇಶಭಕ್ತಿ ಮತ್ತು ಸಂಸ್ಕೃತಿ ಪ್ರೇಮದ ಪ್ರೇರಣೆಯಾಗಿ ಎಲ್ಲರ ಮನಗಳಲ್ಲಿ ಸ್ಪಂದನೆ ಮೂಡಿಸಿತು. ಶಿವಾಜಿ ...
Image
  ಮಂತ್ರಾಲಯದಲ್ಲಿ ಬೇಸಿಗೆಯಲ್ಲಿ ಭಕ್ತರಿಗೆ ನೀರಿನ ಅಭಾವ ತಡೆಗೆ ಬೋರವೆಲ್ ಮೊರೆ:                                                                                         ವಿವಿ ಸ್ಥಾಪನೆ, ಏರ್ ಪೋರ್ಟ್ ನಿರ್ಮಾಣ ಗುರಿ - ಶ್ರೀ ಸುಬುಧೇಂದ್ರತೀರ್ಥರು.                                                                                                                      ಜಯ ಧ್ವಜ ನ್ಯೂಸ್, ರಾಯಚೂರು, ಫೆ.19- ಬೇಸಿಗೆಯಲ್ಲಿ ಮಂತ್ರಾಲಯಕ್ಕೆ ಬರುವ ಭಕ್ತರಿಗೆ ನೀರಿನ ಅಭಾವ ಕಾಡದಂತೆ ಬೋರವೆಲ್ ಮುಖಾಂತರ ನೀರನ್ನು ಒದಗಿಸುವ ಪ್ರಯತ್ನ ಮಾಡಲಾಗು...