Posts

Image
  ಕೃಷಿ ವಿ.ವಿ ಆಡಳಿತ ಭವನಕ್ಕೆ ವಾಲ್ಮೀಕಿ ಆಡಳಿತ ಭವನ ಎಂದು ನಾಮಕರಣ ಮಾಡಲು ಮನವಿ ಜಯ ಧ್ವಜ ನ್ಯೂಸ್ ,ರಾಯಚೂರು, ಮಾ.28 - ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಭವನಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಭವನ ಎಂದು ನಾಮಕರಣ ಮಾಡಬೇಕೆಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘವು ಮನವಿ ಮಾಡಿದೆ. ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಿ, ರಾಯಚೂರು ಕೃಷಿ ವಿಶ್ವವಿದ್ಯಾನಿಲಯದ ಕೇಂದ್ರ ಗ್ರಂಥಾಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರ ಗ್ರಂಥಾಲಯ ಎಂದೂ ಮತ್ತು ಪ್ರೇಕ್ಷಾಗೃಹ ಭವನಕ್ಕೆ ಜಗಜ್ಯೋತಿ ಶ್ರೀ ಬಸವಣ್ಣನವರ ಹೆಸರು ನಾಮಕರಣ ಮಾಡುವ ಮೂಲಕ ಮಹಾನ್ ದಾರ್ಶನಿಕರನ್ನು ನೆನೆಯುವ ಕಾರ್ಯ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಷಯ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜವು ತಮಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.  ಈ ಜಗತ್ತಿಗೆ ಮಹಾನ್ ಗ್ರಂಥವಾದ  ರಾಮಾಯಣವನ್ನು ನೀಡುವ ಮೂಲಕ ಒಬ್ಬ ರಾಜನಾದವನು ಯಾವ ರೀತಿ ರಾಜ್ಯಭಾರ ಮಾಡಬೇಕು ಮತ್ತು ತನ್ನ ರಾಜ್ಯದ ಪ್ರಜೆಗಳನ್ನು ಯಾವ ರೀತಿ ಸುರಕ್ಷಿತವಾಗಿ ಇಡಬೇಕು ಮತ್ತು ಅಣ್ಣ-ತಮ್ಮಂದಿರ ಸಂಬಂಧ, ತಂದೆ-ತಾಯಿಯ ಸಂಬಂಧ ಹೆಂಡತಿ-ಮಕ್ಕಳ ಸಂಬಂಧ ಮಹಿಳೆಯರಿಗೆ ಗೌರವ ಮತ್ತು ರಕ್ಷಣೆ ಯಾವ ರ...
Image
  ಕಾಡ್ಲೂರಲ್ಲಿ ಶ್ರೀ ರಾಮೋತ್ಸವ ಆಚರಣೆ:                                            ಶ್ರೀ ರಾಮದೇವರ  ಆದರ್ಶ ನಾವೆಲ್ಲರೂ ಪಾಲಿಸೋಣ-  ಶ್ರೀ ವಿದ್ಯಾಕಣ್ವ ವಿರಾಜತೀರ್ಥ  ಶ್ರೀಪಾದಂಗಳವರು .                                                                         ಜಯ ಧ್ವಜ ನ್ಯೂಸ್ ,ರಾಯಚೂರು,ಮಾ.28-           ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ದೇವರ ಆದರ್ಶವನ್ನು ನಾವೆಲ್ಲರೂ ಪಾಲಿಸೋಣವೆಂದು ಕಣ್ವಮಠಾಧೀಶರಾದ ಶ್ರೀ ವಿದ್ಯಾಕಣ್ವ ವಿರಾಜ ತೀರ್ಥ ಶ್ರೀಪಾದಂಗಳವರು ನುಡಿದರು. ಅವರು ಶುಕ್ರವಾರ ರಾಮನವಮಿ ಅಂಗವಾಗಿ ತಾಲೂಕಿನ ಕಾಡ್ಲೂರು ಗ್ರಾಮದ ಶ್ರೀ ಕೃಷ್ಣಾ ನದಿ ತೀರದ ಶ್ರೀವನವಾಸಿ ರಾಮದೇವರ ಹಾಗೂ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಶ್ರೀ ಮುಖ್ಯಪ್ರಾಣದೇವರ ಸನ್ನಿಧಾನದಲ್ಲಿ ಶ್ರೀ ರಾಮೋತ್ಸವದಲ್ಲಿ ಸಾನಿಧ್ಯ ವಹಿಸಿದ್ದರು. ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ್ದ ಅವರನ್ನು ಕಾಡ್ಲೂ...
Image
  ಮಾದಿಗ ಸಮಾಜಕ್ಕೆ ಕಾಂಗ್ರೆಸ್ ಸರ್ಕಾರದಿಂದ ಎಂದಿಗೂ ನ್ಯಾಯ ಸಿಗುವುದಿಲ್ಲ- ರವೀಂದ್ರ ಜಲ್ದಾರ್ ಆಕ್ರೋಶ  ಜಯ ಧ್ವಜ ನ್ಯೂಸ್ , ರಾಯಚೂರು, ಮಾ.27- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಒಳ ಮೀಸಲಾತಿ ಅನುಷ್ಠಾನ ಜಾರಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇಂದು ಮಾದಿಗರಿಗೆ ಮತ್ತೊಮ್ಮೆ ಮಹಾ ದ್ರೋಹ ಮಾಡಿದ್ದಾರೆ ಮಾದಿಗರ ಸಹನೆಯನ್ನು ಪರೀಕ್ಷೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಮಾದಿಗರ ಅಕ್ರೋಶದ ಶಾಪ ತಟ್ಟೆ ತಟ್ಟುತ್ತದೆ ಎಂದ ಮಾದಿಗ ಸಮಾಜದ ರಾಜ್ಯ ಹಿರಿಯ ಮುಖಂಡ  ರವೀಂದ್ರ ಜಲ್ದಾರ್ ಅವರು ನಾಳೆ ನಡೆಯಬೇಕಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಮುಂದೋಡಿದ್ದು ಹಾಗೂ ಒಳ ಮೀಸಲಾತಿ ಜಾರಿಗಾಗಿ  ಷಡಕ್ಷರಮುನಿ ಸ್ವಾಮೀಜಿಗಳು ಹರಿಹರದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಅವರನ್ನು ಬಂಧಿಸಿ ಹೋರಾಟವನ್ನು ದಿಕ್ಕು ತಪ್ಪಿಸಿರುವ ಕಾಂಗ್ರೆಸ್ ಸರ್ಕಾರದ ನಡೆ ಮಾದಿಗ ವಿರೋಧ ನೀತಿಯನ್ನು ಉಗ್ರವಾಗಿ ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮಾದಿಗರಿಂದ ತಕ್ಕ ಪಾಠ ಕಲಿಸುವುದರ ಜೊತೆಗೆ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಮಾದಿಗರ ಶಕ್ತಿ ಪ್ರದರ್ಶನ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ನಾವೆಲ್ಲರೂ ಕಂಕಣಬದ್ಧರಾಗಿ ಹೋರಾಡಬೇಕು ಎಂದು ಪತ್ರಿಕಾ ಹೇಳಿಕೆ...
Image
ತೈಲ ಸರಬರಾಜಿನಲ್ಲಿ ಅಭಾವ ವದಂತಿ :   ಪೆಟ್ರೋಲ್ ಪಂಪ್ ಗಳಲ್ಲಿ ಸಾಲುಗಟ್ಟಿದ ವಾಹನಗಳು                                                                                                                                                                                                           ಜಯ ಧ್ವಜ ನ್ಯೂಸ್, ರಾಯಚೂರು,ಮಾ.26-                       ಪಶ್ಚಿಮ‌ ಏಷ್ಯಾದಲ್ಲಿ ಯುದ್ಧ ಹಿನ್ನಲೆಯಲ್ಲಿ  ದೇಶದಲ್ಲಿ ತೈಲ ಅಭಾವ ಆತಂಕ ಶುರುವಾದಂತಾಗಿದೆ.      ...
Image
  ವಿಶ್ವಕರ್ಮರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪಂಜಿನ ಮೆರವಣಿಗೆ   ಜಯ ಧ್ವಜ ನ್ಯೂಸ್ ,ರಾಯಚೂರು, ಮಾ. 26 - ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ ರಾಯಚೂರು ಇವರಿಂದ ಬುಧವಾರ ಸಂಜೆ ರಾಯಚೂರು ನಗರದಲ್ಲಿ ವಿಶ್ವಕರ್ಮ ಸಮಾಜದ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.  ನಗರದ ನೇತಾಜಿ ನಗರ ವೃತ್ತದಿಂದ ತೀನ್ ತೀನ್ ಕಂದೀಲ್ ಜಾಕಿರ್ ಹುಸೇನ್ ಸರ್ಕಲ್ ಬಸ್ ನಿಲ್ದಾಣ,ಅಂಬೇಡ್ಕರ್ ವೃತ್ತದ ವರೆಗೆ ರಾತ್ರಿ 9ಗಂಟೆ ವರೆಗೆ ಪಂಜಿನ ಮೆರವಣಿಗೆಯು ನಡೆಯಿತು .ಸಮಾಜದ ಮುಖಂಡರು ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆಗಮಿಸಿದ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.. ಸಮಾಜದ ಪರವಾಗಿ ಸರ್ಕಾರಕ್ಕೆ ಒತ್ತಾಯಿಸಲು ವಿವಿಧ ಘೋಷಣೆಗಳನ್ನು ಹಾಕಿ ಶಾಂತಿಯುತ ಪ್ರತಿಭಟನೆಯನ್ನು ಮಾಡಲಾಯಿತು.   ವಿಶ್ವಕರ್ಮ ಸಮಾಜವನ್ನು ಎಸ್ಟಿಗೆ ಸೇರಿಸಬೇಕು ಕುಲಶಾಸ್ತ್ರ ಅಧ್ಯಯನ ಪುನರ್ ರಚನೆ ಆಗಬೇಕು. ತಿಂಥಣಿ ಶ್ರೀ ಜಗದ್ಗುರು ಮೌನೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಆಗಬೇಕು. ಈ ಮೂರು ಸಮಾಜದ ಬೇಡಿಕೆಗಳನ್ನು ಸರಕಾರಕ್ಕೆ ಈಡೇರಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜದವರು ಪಂಜನ ಮೆರವಣಿಗೆಯನ್ನು ಮೊದಲ ಬಾರಿಗೆ ಮಾಡಿದರು.  ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾಧ್ಯಕ್ಷರಾದ ಮಾರುತಿ ಬಡಿಗೇರ್ ಈ ಹೋರಾಟದ ನೇತೃತ್ವವನ್ನು...
Image
  ಒಪೆಕ್ ಆಸ್ಪತ್ರೆಗೆ ಮಾನವ ಹಕ್ಕುಗಳ ಆಯೋಗ ಭೇಟಿ; ಪರಿಶೀಲನೆ ಜಯ ಧ್ವಜ ನ್ಯೂಸ್, ರಾಯಚೂರು ಮಾ.25- ರಾಯಚೂರು ಪ್ರವಾಸದಲ್ಲಿ ಮಾರ್ಚ 25ರಂದು ವಿವಿಧೆಡೆ ಭೇಟಿ ಕೈಗೊಂಡ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ  ಸದಸ್ಯರು ಸಂಜೆ 6 ಗಂಟೆ ವೇಳೆಗೆ ನಗರದ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತೆರಳಿ ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಖುದ್ದು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಆಸ್ಪತ್ರೆ ಪ್ರವೇಶದ ವೇಳೆ, ಒಬ್ಬ ರೋಗಿಯು ಟ್ರಾಲಿ ಮೇಲೆ ಮತ್ತೊಬ್ಬರು ನೆಲದ ಮೇಲೆ ಮಲಗಿರುವುದನ್ನು  ಅಧ್ಯಕ್ಷರು ಹಾಗೂ ಸದಸ್ಯರು ನೋಡಿ, ರೋಗಿಗಳ ಅಹವಾಲು ಆಲಿಸಿದರು. ನಾವು ನೆನ್ನೆಯೇ ಬಂದಿದ್ದೇವೆ. ಇದುವರೆಗೆ ಬೆಡ್ ನೀಡಿಲ್ಲ.  ಮರುದಿನ ಬೆಳಗ್ಗೆ ರಕ್ತ ಪರೀಕ್ಷೆ ಮಾಡಿದ್ದಾರೆ ಎಂದು ರೋಗಿಯೊಬ್ಬರು ತಿಳಿಸಿದರು. ಇದುವರೆಗೆ ಯಾಕೆ ಬೆಡ್ ನೀಡಿಲ್ಲ? ಈ ರೀತಿ ನಿರ್ಲಕ್ಷ್ಯ ಮಾಡಬೇಡಿ ಎಂದು ವೈದ್ಯರ ಕಾರ್ಯವೈಖರಿಗೆ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ರಿಮ್ಸ್ ನಿರ್ದೇಶಕರಾದ ಡಾ.ರಮೇಶ, ಒಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ  ಸಾಗರ್ ಅವರು ಆಗಮಿಸಿಆಯೋಗಕ್ಕೆ ಮಾಹಿತಿ ನೀಡಿದರು. ಈ ವೇಳೆ ಡಾ.ಮುರಳೀರಾವ್, ಡಾ.ಗೋಪಿನಾಥ, ಡಾ.ಮಂಜುನಾಥ ಹಟ್ಟಿ, ಡಾ.ವೀರೇಶ ಇದ್ದರು.
Image
  ರಾಯಚೂರು ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಆಯೋಗದ ಪ್ರವಾಸ: ಹಾಸ್ಟೆಲ್, ಬಸ್ ನಿಲ್ದಾಣ, ಜಿಲ್ಲಾ ಕಾರಾಗೃಹ, ಪೊಲೀಸ್ ಠಾಣೆಗಳಿಗೆ ಭೇಟಿ; ಪರಿಶೀಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಮಾ.25 -  ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು  ಇಂದು  ರಾಯಚೂರು ನಗರಕ್ಕೆ ಆಗಮಿಸಿ ವಿವಿಧೆಡೆ ಮಿಂಚಿನ ಸಂಚಾರ ನಡೆಸಿದರು.  ಬೆಳಗ್ಗೆ ಬೆಂಗಳೂರಿನಿಂದ ಹೊರಟು ಹೈದ್ರಾಬಾದ್ ಮೂಲಕ ಮಧ್ಯಾಹ್ನ ವೇಳೆಗೆ ರಾಯಚೂರ ನಗರಕ್ಕೆ ಆಮಿಸಿದ ಆಯೋಗವು, ಮಧ್ಯಾಹ್ನ ಊಟದ ವಿರಾಮದ ಬಳಿಕ ವಿವಿಧೆಡೆ ಭೇಟಿ ಆರಂಭಿಸಿತು. ಮೊದಲಿಗೆ ರಂಗಮಂದಿರ ಹತ್ತಿರದ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಅಧ್ಯಕ್ಷರು ಹಾಗೂ ಸದಸ್ಯರು, ವಸತಿ ನಿಲಯಗಳ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅವರ ಅಹವಾಲು ಆಲಿಸಿದರು. ಸ್ನಾನಕ್ಕೆ ಬಿಸಿನೀರು ಸಿಗುತ್ತಾ? ಸೋಪುಕಿಟ್ ಕೊಡುತ್ತಾರಾ? ವೈದ್ಯರು ನಿಯಮಿತ ಭೇಟಿ ಕೊಡುತ್ತಾರಾ? ಸ್ಕೂಲ್ ಬಸ್ ಬರುತ್ತಾ? ಊಟ ಸರಿಯಾಗಿ ಕೊಡುತ್ತಾರಾ? ಸಿಸಿ ಟಿವಿ ಇದೆನಾ? ಎಂದು ಕೇಳಿ  ಮಾಹಿತಿ ಪಡೆದುಕೊಂಡರು. ಸದ್ಯ ಒಂದು ಕೋಣೆಯಲ್ಲಿ ಐದಾರು, ಆರೇಳು ಜನ ವಿದ್ಯಾರ್ಥಿನಿಯರಿದ್ದು, ಇಕ್ಕಟ್ಟಾಗಿವೆ. ವಿದ್ಯಾರ್ಥಿಗಳ ಸಂಖ್ಯೆಗ‌ನುಸಾರ ರೂಮಿನ ವ್ಯವಸ್ಥೆಯಾಗಬೇಕಿದೆ ಎಂದು ಹಾಸ್ಟೆಲ್ ವಾರ್ಡನ್ ಅವರು  ತಿ...