ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿ ಜನ್ಮದಿನ ಆಚರಣೆ: ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ: ಡಾ.ಚನ್ನಬಸವಯ್ಯ ಹಿರೇಮಠ ಜಯ ಧ್ವಜ ನ್ಯೂಸ್ ,ರಾಯಚೂರು, ಜು.2 - ಶರಣರ ಜೀವನ ಮೌಲ್ಯಗಳನ್ನು ಕಾಲಾತೀತವಾದ ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ವಚನ ಸಾಹಿತ್ಯವೆಂಬ ಅನರ್ಘ್ಯ ರತ್ನವನ್ನು ಶೋಧಿಸಿ, ಅನ್ವೇಷಿಸಿ ಸಂಗ್ರಹಿಸಿ, ಸಂಪಾದಿಸಿ ಪ್ರಕಟಿಸಿ ಸಂಶೋಧನಾ ಕ್ಷೇತ್ರಕ್ಕೆ ಡಾ.ಫ.ಗು.ಹಳಕಟ್ಟಿ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕಾರರಾಗಿ ಆಗಮಿಸಿದ ರಾಯಚೂರಿನ ವಿಶ್ರಾಂತ ಪ್ರಾಂಶುಪಾಲರು ಹಾಗೂ ಸಂಶೋಧಕರಾದ ಡಾ.ಚನ್ನಬಸವಯ್ಯ ಹಿರೇಮಠ ಅವರು ಹೇಳಿದರು. ಅವರಿಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಹಮ್ಮಿಕೊಳ್ಳಲಾಗಿದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಅವರು ಮಾತನಾಡಿದರು. ಒಂದು ವೇಳೆ ಶರಣ ಸಾಹಿತ್ಯದ ಕಡೆಗೆ ಲಕ್ಷ್ಯ ಹರಿಸದೇ ಇದ್ದರೆ ಇಂದು ನಮಗೆ ಶಿವಶರಣರ ವಚನಗಳು ದೊರಕುತ್ತಿರಲಿಲ್ಲ. ಕತ್ತಲ ಕಾಲ ಗರ್ಭದಲ್ಲಿದ್ದ ವಚನಗಳನ್ನು ಒಬ್ಬ ಸಾಮಾನ್ಯ ವಕೀಲರಾಗಿದ್ದುಕೊಂಡು ಶರಣರ ತತ್ವಾದರ್ಶಗಳು ಅವರೊಳಗಿದ್ದ ವೈಚಾರಿಕ ಮಾನವ ಪ್ರಜ್ಞೆಯನ್ನು ಎತ್ತಿ ತೋರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ ಎಂದರು. ಡಾ.ಫ...