ದಲಿತರ ಕಗ್ಗೊಲೆ ಅತ್ಯಾಚಾರ ಖಂಡಿಸಿ ಬೃಹತ್ ಪ್ರತಿಭಟನೆ: ಸಿಐಡಿ ತನಿಖೆಗೆ ಆಗ್ರಹ . ಜಯ ಧ್ವಜ ನ್ಯೂಸ್, ರಾಯಚೂರು, ಆ.24- ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಮೂವರು ದಲಿತರ ಕಗ್ಗೊಲೆ ಘಟನೆ ಖಂಡಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಸಹಸ್ರಾರು ದಲಿತ ಸಂಘಟನೆಗಳ ಮುಖಂಡರು, ಹದ್ದಿನಾಳ ಭೂಮಾನಂದ ಕೊಲೆ, ಸಿರವಾರದ ಹೊಕ್ರಾಣಿಯಲ್ಲಿ ಅಶ್ವಿನಿ ಅತ್ಯಾಚಾರ ಕೊಲೆ, ರಾಣಿಮ್ಮ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ದಲಿತರ ಮೇಲಿನ ದಬ್ಬಾಳಿಕೆ ಕೊನೆಯಾಗಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒಕ್ಕೂರಲಿನಿಂದ ಒತ್ತಾಯಿಸಲಾಯಿತು. ಈ ಪ್ರತಿಭಟನೆಯಲ್ಲಿ ಮುಖಂಡರಾದ ನರಸಪ್ಪ ವಕೀಲರು, ರವೀಂದ್ರ ನಾಥ್ ಪಟ್ಟಿ, ಎಂ.ಆರ್.ಭೇರಿ, ಅಂಬಣ್ಣ ಅರೋಲಿಕರ್, ಹೇಮರಾಜ್ ಅಸ್ಕಿಹಾಳ,ಪಿ.ಯಲ್ಲಪ್ಪ, ವಿಶ್ವನಾಥ್ ಪಟ್ಟಿ ಸೇರಿದಂತೆ ದಲಿತ ಪರ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಸಮಾಜ ಬಾಂಧವರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಕ್ರಾಂತಿ ಗೀತೆ ಮೊಳಗಿದವು.
Posts
- Get link
- X
- Other Apps
ಆ.27 ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಸಪ್ತರಾತ್ರೋತ್ಸವ: ತಿರುಮಲ ಮಾದರಿಯಲ್ಲಿ ಶ್ರೀ ಮಠದಿಂದ ಮಂತ್ರಾಲಯದಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಪ್ರಾಯೋಗಿಕ ಹೆಜ್ಜೆ- ಶ್ರೀ ಸುಬುಧೇಂದ್ರತೀರ್ಥರು. ಜಯ ಧ್ವಜ ನ್ಯೂಸ್, ರಾಯಚೂರು,ಆ.24- ಕಲಿಯುಗದ ಕಾಮಧೇನು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಸಪ್ತ ರಾತ್ರೋತ್ಸವ ಕಾರ್ಯಕ್ರಮ ಆ.27 ರಿಂದ ಸೆ.2ರವರೆಗೆ ನಡೆಯಲಿದೆ ಎಂದು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂ...
- Get link
- X
- Other Apps
ಆ.26 ರಂದು ನಗರದಲ್ಲಿ ಭಕ್ತಿಭಾವದಿಂದ ಭಗವಾನ್ ಶ್ರೀ ಜಿಹ್ವೇಶ್ವರ ಜಯಂತೋತ್ಸವ ಆಚರಣೆ ಜಯ ಧ್ವಜ ನ್ಯೂಸ್ ,ರಾಯಚೂರು, ಆ. 24- ನಗರದ ತಿಮ್ಮಾಪೂರು ಪೇಟೆಯಲ್ಲಿರುವ ಶ್ರೀ ದತ್ತಾತ್ರೇಯ ಮಂದಿರದ ಆವರಣದಲ್ಲಿ ಭಗವಾನ್ ಆ. 26 ರಂದು ಶ್ರೀ ಜಿಹ್ವೇಶ್ವರ ಜಯಂತೋತ್ಸವವನ್ನು ಭಕ್ತಿಭಾವ ಹಾಗೂ ಸಡಗರದಿಂದ ಆಚರಿಸಲಾಗುವುದು ಎಂದು ಸ್ವಕುಳ ಸಾಳಿ ನೇಕಾರ ಸಮಾಜ (ರಿ) ಪ್ರಕಟಣೆಯಲ್ಲಿ ತಿಳಿಸಿದೆ. ಜಯಂತೋತ್ಸವದ ಅಂಗವಾಗಿ ಅಂದು ಬೆಳಗ್ಗೆ 7 ಗಂಟೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಗವಾನ್ ಶ್ರೀ ಜಿಹ್ವೇಶ್ವರ ಮೂರ್ತಿಗೆ ವಿಶೇಷ ರುದ್ರಾಭಿಷೇಕ ಹಾಗೂ ಪೂಜಾ ವಿಧಿವಿಧಾನಗಳು ನೆರವೇರಲಿದ್ದು, ನಂತರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗುವುದು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಸಮಾಜದ ಮಹಿಳಾ ಮಂಡಳಿಯ ವತಿಯಿಂದ ತೊಟ್ಟಿಲೋತ್ಸವವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಜಯಂತೋತ್ಸವದಲ್ಲಿ ಸಮಾಜದ ಬಾಂಧವರು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಗವಾನ್ ಶ್ರೀ ಜಿಹ್ವೇಶ್ವರರ ದರ್ಶನ ಪಡೆದು ಪುನೀತರಾಗುವಂತೆ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತರು ತನು, ಮನ, ಧನದಿಂದ ಸೇವೆ ಸಲ್ಲಿಸಿ, ಭಗವಂತನ ಕೃಪೆಗೆ ಪಾತ್ರರಾಗಬೇಕು. ಕಾರ್ಯಕ್ರಮದ ನಂತರ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ಪ್ರಸಾದ ...
- Get link
- X
- Other Apps
ವೈಟಿಪಿಎಸ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಸಡಿಲಿಕೆ: ೨೭೦ ಕೋಟಿ ರೂ. ಅವ್ಯವಹಾರ ತನಿಖೆ ಕೈಗೊಳ್ಳದಿದ್ದರೆ ರಾಜ್ಯದಂತ ಹೋರಾಟ- ವಿನೋದ್ ರೆಡ್ಡಿ ಜಯ ಧ್ವಜ ನ್ಯೂಸ್ ,ರಾಯಚೂರು,ಆ.24- ವೈಟಿಪಿಎಸ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಸಡಿಲಿಕೆ ಮಾಡಿ 270 ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲಾ ಘಟಕದ ಜಿಲ್ಲಾಧ್ಯರಾದ ಎಂ. ವಿನೋದರೆಡ್ಡಿಯವರು ತನಿಖೆ ಕೈಗೊಳ್ಳದಿದ್ದರೆ ರಾಜ್ಯಾದಂತ ಹೋರಾಟ ಮಾಡಲಾಗುವುದು ಎಂದು ಕೆಪಿಸಿಎಲ್ ಎಂಡಿ ಗೆ ಮನವಿ ಮಾಡಿದ್ದಾರೆ. ರಾಯಚೂರು ತಾಲೂಕಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ನಿರ್ವಹಣೆ ಹಾಗೂ ಕಾರ್ಯಾಚರಣೆ ಪ್ರಕ್ರಿಯೆಯಲ್ಲಿ ಭಾರಿ ಅಪರಾತಪರಾವಾಗಿದ್ದು, ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತ ಮಟ್ಟದ ತಂಡ ರಚನೆ ಮಾಡಿ ಸೂಕ್ತ ಕ್ರಮ ಜರುಗಿಸಬೇಕು. ಜಿಲ್ಲೆಯ ಆರ್ಟಿಪಿಎಸ್ ಮತ್ತು ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಈ ಎರಡು ಕೇಂದ್ರಗಳು ರಾಜ್ಯಕ್ಕೆ ಶೇ.40 ಕ್ಕಿಂತ ಅಧಿಕ ವಿದ್ಯುತ್ ಪೂರೈಸಲಾಗುತ್ತಿದೆ. ಯಾವ ಉದ್ದೇಶದ ಅನ್ವಯ ಜಿಲ್ಲೆಯ ಜನರು ವಿದ್ಯುತ್ ಘಟಕಗಳ ಸ್ಥಾಪನೆಗೆ ಜಮೀನು ನೀಡಿದರು? ಸರಕಾರ ಯಾವ ಕಾರಣಕ್ಕೆ ಇಲ್ಲಿ ಘಟಕ ಸ್ಥಾಪನೆ ಮಾಡಿದೆ? ಇದರ ಉದ್ದೇಶವೇ ಸಂಪೂರ್ಣ ಬುಡಮೇಲಾಗಿದೆ. ವೈಟಿಪಿಎಸ್ ಕಂಪನಿ ಕೇರಳ ಮೂಲದ ಭವಾನಿ...
- Get link
- X
- Other Apps
ರಾಯಚೂರು ಜಿಲ್ಲೆಯಲ್ಲಿ ಒಟ್ಟು 13,93,163 ಮತದಾರರ ಕರಡು ಪಟ್ಟಿ ಪ್ರಕಟ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್ ,ರಾಯಚೂರು, ಅ. 24 - ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ 2026ನೇ ಸಾಲಿನ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13,93,163 ಮತದಾರರು ಕರಡು ಪಟ್ಟಿಯಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಅವರಿಂದು ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಯಚೂರು ಜಿಲ್ಲೆಯಲ್ಲಿ ಒಟ್ಟು 13,93,163 (ಪುರುಷ, ಮಹಿಳೆ ಮತ್ತು ಇತರೆ ಮತದಾರರು ಒಳಗೊಂಡಂತೆ) ಮತದಾರರು ಇದ್ದಾರೆ. ಹಿಂದಿನ ಮತದಾರರ ಪಟ್ಟಿಯಿಂದ ಒಟ್ಟು 3,21,396 ಮತದಾರರನ್ನು ತೆಗೆದುಹಾಕಲಾಗಿದೆ. ಅದರಲ್ಲಿ ಮರಣ ಹೊಂದಿದವರು 61,385, ಫರ್ಮನೆಂಟ್ ಆಗಿ ಶಿಫ್ಟ್ ಆದವರು 1,87,941, ಆಬ್ಸೆಂಟಿ ಮತದಾರರು 30,733 ಹಾಗೂ ಇತರರು: 365 ಒಳಗೊಂಡಿದೆ ಎಂದರು. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಬಾರಿಯ ಕರಡು ಪಟ್ಟಿಯಲ್ಲಿ 3,21,396 (ಶೇಕಡಾ 18.75%) ಮತದಾರರ ವ್ಯತ್ಯಾಸವಿದೆ. ಯುವ ಮತದಾರರು (18-19 ವಯಸ್ಸು): 11,56,627 ಜನರು ಕರಡು ಪಟ್ಟಿಯಲ್ಲಿದ್ದಾರೆ. ಅಲ್ಲದೆ 17,048 ಮತದಾರರು ವಿವಿಧ ರೀತಿಯಲ್ಲಿ ...
- Get link
- X
- Other Apps
ದಲಿತರ ವಿಮೋಚನೆಗೆ ಶಿಕ್ಷಣವೇ ಅಸ್ತ್ರ- ವೆಂಕಟೇಶ ಬೇವಿನಬೆಂಚಿ ಜಯ ಧ್ವಜ ನ್ಯೂಸ್ ,ರಾಯಚೂರು, ಆ.23- ದೇಶದಲ್ಲಿ ಸಾವಿರಾರು ವರ್ಷಗಳ ಕಾಲ ದಲಿತರು ಜಾತಿ ದೌರ್ಜನ್ಯ, ಅತ್ಯಾಚಾರ, ಕೊಲೆ - ಸುಲಿಗೆಗೆ ಬಲಿಯಾಗುತ್ತಾ ಬಂದಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದಂತೆ ಶಿಕ್ಷಣವು ಹುಲಿಯ ಹಾಲುದ್ದಿಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು ಎನ್ನುವಂತೆ ದಲಿತರ ಸರ್ವ ವಿಮೋಚನೆಗೆ ಶಿಕ್ಷಣವೇ ಅಸ್ತ್ರ ಎಂದು ಸಾಮಾಜಿಕ ಚಿಂತಕರು ಹಾಗೂ ರಾಯಚೂರು ಆಕಾಶವಾಣಿ ಕೇಂದ್ರ ಕಾರ್ಯಕ್ರಮ ಪ್ರಸಾರ ನಿರ್ವಾಹಕರಾದ ವೆಂಕಟೇಶ ಬೇವಿನಬೆಂಚಿ ಅಭಿಮತ ವ್ಯಕ್ತಪಡಿಸಿದರು. ರಾಯಚೂರು ತಾಲೂಕಿನ ಮರ್ಚೆಡ್ ಗ್ರಾಮದ ಹನುಮಂತಿ ದಿ. ಕೋಳಿ ಹುಸೇನಪ್ಪ ಮ್ಯಾತ್ರಿ ಇವರ ಮನೆಯಲ್ಲಿ ಬಹುಜನ ಸಂಘರ್ಷ ಸಮಿತಿ ಹಾಗೂ ಜನತಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್(ರಿ) ಬಲ್ಲಟಗಿ ವತಿಯಿಂದ ಶನಿವಾರ ಆಯೋಜಿಸಿದ್ದ 127 ನೇ ಮನೆ ಮನೆಗೆ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಮಾತನಾಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹೋರಾಟಗಾರ ರಾಘವೇಂದ್ರ ಭೋರೆಡ್ಡಿ ಮನ್ಸಾಲಪೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್ ವಿಚಾರಗಳನ್ನು ಮತ್ತು ಅವರ ಮಾರ್ಗ ಹಾಗೂ ಆಶಯಗಳನ್ನು ಮನೆ ಮನೆಗೆ ತಲುಪಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು. ಖ್ಯಾತ ಬಹುಜನ ಚಿಂತಕರಾದ ಶ್ರೀನಿವಾಸ ಮರೆಡ್ಡಿ, ಉಪನ್ಯಾಸಕ ಎಸ್.ಪ್ಯಾಟೆಪ್ಪ, ರಾಯಚೂರಿನ ಕ...
- Get link
- X
- Other Apps
ಜಿಲ್ಲೆಯಲ್ಲಿ ಕೊಲೆ ಪ್ರಕರಣ ಹೆಚ್ಚಳ; ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ವಿಫಲ-ಬಸವರಾಜ ಭಂಡಾರಿ. ಜಯ ಧ್ವಜ ನ್ಯೂಸ್, ರಾಯಚೂರು,ಆ.22- ಜಿಲ್ಲೆಯಲ್ಲಿ ಕೊಲೆ ಪ್ರಕರಣ ಹೆಚ್ಚಳವಾಗಿದ್ದು ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಬಹುಜನ ಸಮಾಜ ಪಕ್ಷ ರಾಜ್ಯ ಕಾರ್ಯದರ್ಶಿ ಬಸವರಾಜ ಭಂಡಾರಿ ಆರೋಪಿಸಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ ಮೂವರು ದಲಿತರ ಕಗ್ಗೊಲೆಗಳಾಗಿವೆ ಅಪರಾಧಿಗಳಿಗೆ ಕಾನೂನು ಭಯವಿಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಾತಾವರಣವಿದೆ ಎಂದು ದೂರಿದರು. ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ದೊರೆಯುತ್ತಿದೆ ಅಲ್ಲದೆ ಗಾಂಜಾ ಹಾವಳಿಯಿಂದ ಯುವಕರು ನಶೆಯಲ್ಲಿ ಉನ್ಮತ್ತ ರಾಗಿ ಕೊಲೆ ,ಅತ್ಯಾಚಾರದಂತ ಪ್ರಕರಣ ಹೆಚ್ಚಾಗಲು ಪ್ರೇರೇಪಣೆ ನೀಡುತ್ತಿವೆ ಎಂದರು. ಕಾನೂನು ಬಾಹಿರವಾಗಿ ಮದ್ಯದಂಗಡಿಗಳು ತಲೆಯತ್ತುತ್ತಿದ್ದು ಸರ್ಕಾರ ಅ...