Posts

Image
ಅಧಿಕ ಉಷ್ಣಾಂಶ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಪ್ರಭಾರ ಜಿಲ್ಲಾಧಿಕಾರಿ ಈಶ್ವರ ಕುಮಾರ ಕಾಂದೂ ಸಲಹೆ ಜಯ‌ ಧ್ವಜ ನ್ಯೂಸ್ ,ರಾಯಚೂರು ಏ. 17 -  ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ ಕಾಂದೂ ಅವರು ಕೋರಿದ್ದಾರೆ. ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕು ಎಂಬುದರ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಸಾರ್ವಜನಿಕರು ರೇಡಿಯೋ,ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪಮಾನದ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಬಿಸಿಲಿ...
Image
ಸಿರವಾರ ಪ.ಪಂ ಸದಸ್ಯ ಕೃಷ್ಣ ನಾಯಕ್ ಹಾಗೂ ಕುಟುಂಬಸ್ಥರ ದುರ್ಮರಣಕ್ಕೆ ಸಚಿವ ಎನ್.ಎಸ್. ಬೋಸರಾಜು ತೀವ್ರ ಸಂತಾಪ ಜಯಧ್ವಜ ನ್ಯೂಸ್  ರಾಯಚೂರು ಏಪ್ರಿಲ್ 17- ಯಾದಗಿರಿ ಜಿಲ್ಲೆಯ ಸುರಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿರವಾರ ಪಟ್ಟಣ ಪಂಚಾಯಿತಿಯ ಸದಸ್ಯರಾದ ಶ್ರೀ ಕೃಷ್ಣ ನಾಯಕ್ ಹಾಗೂ ಅವರ ಕುಟುಂಬದ ಆರು ಮಂದಿ ದುರ್ಮರಣವನ್ನಪ್ಪಿದ ಘಟನೆ ತೀವ್ರ ಆಘಾತ ಹಾಗೂ ಅತೀವ ನೋವು ತಂದಿದೆ *ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಬೋಸರಾಜು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಕೃಷ್ಣ ನಾಯಕ್ ಅವರು ಸುದೀರ್ಘ ಕಾಲದಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡು, ಜನಸೇವೆಯನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತಿದ್ದವರು. ಪಟ್ಟಣ ಪಂಚಾಯಿತಿ ಸದಸ್ಯರಾಗಿ ತಮ್ಮ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುತ್ತಿದ್ದರು. ಇಂತಹ ಕ್ರಿಯಾಶೀಲ ಜನನಾಯಕ ಇಂದು ಭೀಕರ ಅಪಘಾತದಲ್ಲಿ ತಮ್ಮ ಪತ್ನಿ, ಪುತ್ರಿ, ಅಳಿಯ ಹಾಗೂ ಮುದ್ದು ಮೊಮ್ಮಕ್ಕಳೊಂದಿಗೆ ಅಕಾಲಿಕವಾಗಿ ಸಾವನ್ನಪ್ಪಿರುವುದು ಅತ್ಯಂತ ಹೃದಯವಿದ್ರಾವಕ ಸಂಗತಿಯಾಗಿದೆ. ವಿಧಿಯ ಈ ಆಟ ನಿಜಕ್ಕೂ ಕ್ರೂರವಾದದ್ದು," ಎಂದು ಸಚಿವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಒಂದೇ ಕುಟುಂಬದ ಆರು ಮಂದಿಯನ್ನು ಬಲಿಪಡೆದ ಈ ಘೋರ ದುರಂತವು ಭರಿಸಲಾಗದ ನಷ್ಟವನ್ನು ಉಂಟುಮಾಡಿದೆ. ಮೃತರ ಆತ್ಮಗಳಿಗೆ ಚಿರಶಾಂತಿ ದೊರೆಯಲಿ. ಈ ಅತೀವ ದುಃಖವನ್ನು ...
Image
  ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯರಿಂದ ವಿವಿಧ ಕಡೆ ಭೇಟಿ ಪರಿಶೀಲನೆ ಜಯ‌ ಧ್ವಜ ನ್ಯೂಸ್ ,ರಾಯಚೂರು ಏ. 16 . ರಾಯಚೂರು ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯರಾದ ಜಟೋತು ಹುಸೇನ್ ಅವರು ಏಪ್ರಿಲ್ 16ರ ಗುರುವಾರ ದಂದು ರಾಯಚೂರಿನ ವಿವಿಧ ‌ಕಡೆ ಭೇಟಿ ನೀಡಿ ಪರಿಶೀಲನೆ ‌ನಡೆಸಿದರು.ಮೊದಲಿಗೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಖುದ್ದು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದದಿಂದ ಚಿಕಿತ್ಸೆ ನೀಡಬೇಕು. ಸರ್ಕಾರದ ಸೌಲಭ್ಯಗಳ ಬಗ್ಗೆ‌ ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು‌ ನೀಡಬೇಕು. ಹಾಗೂ ಚಿಕಿತ್ಸೆಗಳ ಮಾಹಿತಿಯನ್ನು ನಾಮಫಲಕದಲ್ಲಿ ಪ್ರದರ್ಶನ ಮಾಡಬೇಕು. ಅಲ್ಲದೆ ಆಸ್ಪತ್ರೆಗೆ ಒಳಗೆ ಹಾಗೂ ಹೊರಗಡೆ ಸ್ವಚ್ಛತೆಯನ್ನು ಕಾಪಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ‌ನೀಡಿದರು. ನಂತರ ಆಸ್ಪತ್ರೆಯ ವಿವಿಧ ವಿಭಾಗದ ವಾಡ್೯ ಗಳಿಗೆ ಭೇಟಿ‌ ನೀಡಿ, ರೋಗಿಗಳ ಅಹವಾಲು ಆಲಿಸಿ, ತಾಯಿ ಮತ್ತು ‌ಮಕ್ಕಳ ವಿಭಾಗದಲ್ಲಿ ಎಸಿ ಅಳವಡಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಕುಳಿತ ಊಟ ಮಾಡಲು ಛತ್ರದ ವ್ಯವಸ್ಥೆ ಮಾಡಲು ಆಯೋಗದಿಂದ ಆರ್ಥಿಕ ನೆರವು ನೀಡಲಾಗುವುದು. 15ದಿನಗ ಒಳಗಾಗಿ ವರದಿ‌ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ‌ನೀಡಿದರು. *ವಿವಿಧ ವಸತಿ‌ ನಿಲಯಗಳಿಗೆ ಭೇಟಿ:*...
Image
  ಶ್ರೀ ಭಾಗವತ ಪ್ರವಚನ ಮಂಗಳ ಮಹೋತ್ಸವ: ರಾಯಚೂರು ಜಿಲ್ಲೆ ಧಾರ್ಮಿಕ ಪ್ರಜ್ಞೆಯುಳ್ಳ ಜಿಲ್ಲೆ- ವೆಂಕಟ್ ನರಸಿಂಹಾಚಾರ್ಯ ಗುಡೆಬಲ್ಲೂರು.                                                     ಜಯ ಧ್ವಜ ನ್ಯೂಸ್, ರಾಯಚೂರು,ಏ.16- ರಾಯಚೂರು ಜಿಲ್ಲೆಯಲ್ಲಿ ಮೇಲಿಂದ ಮೇಲೆ ಧಾರ್ಮಿಕ , ಆಧ್ಯಾತ್ಮಿಕ ಕಾರ್ಯಕ್ರಮಗಳು ಆಯೋಜಿತವಾಗುತ್ತಿರುತ್ತವೆ ಇದಕ್ಕೆ ಕಾರಣ ಈ ಜಿಲ್ಲೆ ಧಾರ್ಮಿಕ ಪ್ರಜ್ಞೆಯುಳ್ಳ  ಜಿಲ್ಲೆಯಾಗಿದೆ ಎಂದು ಖ್ಯಾತ ಪ್ರವಚನಕಾರರಾದ ಶ್ರೀ ವೆಂಕಟನರಸಿಂಹ ಆಚಾರ್ಯ ಗುಡೆಬಲ್ಲೂರು ಹೇಳಿದರು. ಅವರಿಂದು ನಗರದ ಗಾಜಗಾರಪೇಟೆ ಉತ್ತರಾಧಿ ಮಠದಲ್ಲಿ ಅಂಬುಜಾಬಾಯಿ ಹಾಗೂ ದಿ.ರಾಘವೇಂದ್ರಾಚಾರ್ ಕುರ್ಡಿ ಕುಟುಂಬದಿಂದ ಒಂದು ಸಪ್ತಾಹ ಪರ್ಯಂತರ ಆಯೋಜಿತಗೊಂಡ ಶ್ರೀ ಮದ್ಭಾಗವತ ಮಂಗಳ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರವಚನ   ನೀಡಿದರು. ಭಾಗವತ ಶ್ರವಣದಿಂದ ದೇವರ ಅನುಗ್ರಹ ಲಭಿಸುತ್ತದೆ ಒಂದು ವಾರಗಳ ಕಾಲ ಭಾಗವತ ಸಪ್ತಾಹ ಆಯೋಜಿಸಿದವರಿಗೆ ಭಗವಂತ ಅನುಗ್ರಹ ಮಾಡಲಿ ಎಂದರು. ರಾಯಚೂರು ಜಿಲ್ಲೆ ದಾಸರ ತವರೂರು ಅನೇಕ ದಾಸವರೇಣ್ಯರು ಜನ್ಮವೆತ್ತಿದ ಸ್ಥಳವಾಗಿದೆ ಉತ್ತರಾಧಿಮಠದ ಶ್ರೀ ಸತ್ಯ ಪ್ರಮೋದತೀರ್ಥ ಸಭಾಂಗಣದಲ್ಲಿ ಅನೇಕ ಜನರು ದಿನ ನಿತ್ಯ ಆಗಮಿಸಿ ಭಾಗವ...
Image
ಅಂಬೇಡ್ಕರ್ ಪ್ರಪಂಚ ಕಂಡ ಶ್ರೇಷ್ಠ ಜ್ಞಾನಿ- ವೆಂಕಟೇಶ್ ಬೇವಿನಬೆಂಚಿ                                                                                                ಜಯ ಧ್ವಜ ನ್ಯೂಸ್ , ರಾಯಚೂರು, ಏ.16- ಅಂಬೇಡ್ಕರ್ ಅವರು ಜಗತ್ತಿನ ಎಲ್ಲಾ ರಾಷ್ಟ್ರಗಳು ಆರಾಧಿಸುವ ಶ್ರೇಷ್ಠ ಜ್ಞಾನಿಗಳಲ್ಲಿ  ಒಬ್ಬರಾಗಿದ್ದಾರೆ. ಅಂಬೇಡ್ಕರ್ ಅವರನ್ನು ಜ್ಞಾನಿಯಾಗಿ, ಬುದ್ಧನ ಅನುಯಾಯಿಯಾಗಿ ನೋಡಬೇಕು, ಸಮಸಮಾಜ ಕಟ್ಟಲು ಶ್ರಮಿಸಿದ ದೇಶಭಕ್ತನಾಗಿ ನೋಡಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ನಿರ್ದೇಶಕ ವೆಂಕಟೇಶ  ಬೇವಿನಬೆಂಚಿ ಹೇಳಿದರು.        ಅವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ರಾಯಚೂರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರ ಸಂಘಗಳ ಒಕ್ಕೂಟ ರಾಯಚೂರು  ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ  ಡಾ. ಬಿ.ಆರ್ ಅಂಬೇಡ್ಕರ್ ಅವರ ೧೩೫ ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.  ಅವರು ಜಾತಿ ನಿರ್ಮೂಲನೆ ಮಾಡಲು ಶ್ರಮಿಸಿದ್ದಾರೆ,...
Image
  ಮಂತ್ರಾಲಯ ಬಳಿ ಭೀಕರ ಅಪಘಾತ 8 ಜನ ದುರ್ಮರಣ ಜಯ ಧ್ವಜ ನ್ಯೂಸ್, ರಾಯಚೂರು, ಏ.16-  ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣಿ ಹತ್ತಿರ  ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಬರುತ್ತಿದ್ದ ಭಕ್ತರು ಸಾವನ್ನಪ್ಪಿದ್ದಾರೆ .ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ  ಐವರು ಮಹಿಳೆಯರು , ಇಬ್ಬರು ಪುರುಷರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ. ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಫ್ಲೈಯಾಶ್ ಟ್ಯಾಂಕರ್ ಹಾಸನ, ಚಿಕ್ಕಮಗಳೂರು ಮೂಲದ 18 ಜನರು ಮಂತ್ರಾಲಯಕ್ಕೆ ಬರುತ್ತಿದ್ದ ಬುಲೆರೋ ವಾಹನಕ್ಕೆ ಡಿಕ್ಕಿ  ಹೊಡೆದ ಪರಿಣಾಮ ಬುಲೆರೋ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಮೃತ, ತೇಜಸ್ವಿನಿ, ಧನ್ಯ, ದೀಪಿಕ, ದಿಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತ ದುರ್ದೈವಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ . 9 ಜನ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Image
  ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳಲ್ಲದವರದೇ ದರ್ಬಾರ್ ಆರೋಪ; ನಿಯಾಮಾವಳಿ ತಿದ್ದುಪಡಿಗೆ ಪಲುಗುಲ ನಾಗರಾಜರಿಂದ  ಸಚಿವರಿಗೆ ಪತ್ರ ಜಯ ಧ್ವಜ ನ್ಯೂಸ್ ರಾಯಚೂರು, ಏ.15 - ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಮೂಲ ಆಶಯಗಳಿಗೆ ತಿಲಾಂಜಲಿ ಇಟ್ಟು ಸಾಹಿತಿಗಳಲ್ಲದವರದೇ ದರ್ಬಾರ್ ನಡೆಯುತ್ತಿದೆ ಎಂದು ಆರೋಪಿಸಿರುವ ಸಾಹಿತಿ ಪಲುಗುಲ ನಾಗರಾಜರವರು ಈ ಬಗ್ಗೆ  ಸಾಹಿತ್ಯ ಪರಿಷತ್ತಿನ ನಿಯಮಾವಳಿ  ತಿದ್ದುಪಡಿಗೈಯುವಂತೆ   ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರಿಗೆ ಪತ್ರ ಬರೆದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮೊದಲನೆಯದಾಗಿ ಚುನಾವಣೆ ನೀತಿ ಬದಲಾಗಬೇಕಿದೆ ತಾಲ್ಲೂಕು ಕಸಾಪ ಸದಸ್ಯರಿಂದಲೇ ಅಧ್ಯಕ್ಷರ ನೇಮಕ ಆಗಬೇಕು ಜಿಲ್ಲೆಯ ಎಲ್ಲಾ ತಾಲ್ಲೂಕು ಅಧ್ಯಕ್ಷರುಗಳು ಸೇರಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಆಗಬೇಕು ನಂತರ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಸೇರಿ ರಾಜ್ಯ ಕಸಾಪ ಅಧ್ಯಕ್ಷರ ಆಯ್ಕೆ ಆಗಬೇಕು ಆಗಲೇ ಪ್ರಜಾಪ್ರಭುತ್ವ ವ್ಯವಸ್ಥೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸುವವರು ಕನಿಷ್ಠ 8-10 ಕೃತಿಗಳನ್ನು ಹೊರ ತಂದಿರಬೇಕು ಹಾಗೂ ತಾಲ್ಲೂಕು ಸಮಿತಿ , ಜಿಲ್ಲಾ ಸಮಿತಿ ರಚನೆಯಲ್ಲಿ ಶೇಕಡಾ 80% ಪದಾಧಿಕಾರಿಗಳು ಸಾಹಿತಿಗಳೇ ಆಗಿರಬೇಕು ಮತ್ತು ಪದಾಧಿಕಾರಿಗಳು ಕನಿಷ್ಠ ಒಂದು ಕೃತಿಯನ್ನು ಆದರೂ ರಚ...