Posts

Image
  ಪಾದಯಾತ್ರೆ ಪ್ರಶ್ನಿಸಿದ್ದ ಮುಖ್ಯಮಂತ್ರಿಗೆ ಸವಾಲೆಸೆದ ಬಿಜೆಪಿ ರಾಜ್ಯಾಧ್ಯಕ್ಷ: ದಲಿತರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು -ಬಿ.ವೈ. ವಿಜಯೇಂದ್ರ . ಜಯ ಧ್ವಜ ನ್ಯೂಸ್ ,ರಾಯಚೂರು , ಸೆ.1-   ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟರಿಂದ, ಭ್ರಷ್ಟರಿಗಾಗಿ ಮತ್ತು ಭ್ರಷ್ಟರಿಗೋಸ್ಕರ ನಡೆಯುತ್ತಿರುವ ಸರ್ಕಾರ ಈ ಸರ್ಕಾರ ತೊಲಗುವವರೆಗೆ ಬಿಜೆಪಿ ಹೋರಾಟ ನಿಲ್ಲದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದರು . ಅವರಿಂದು ಲಿಂಗಸ್ಗೂರಿನಲ್ಲಿ  ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ನೀಡಿದರೆ ಬಿಜೆಪಿ ಹೋರಾಟ ನಿಲ್ಲಿಸುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿಸಿತ್ತು. ಆದರೆ ಬಿಜೆಪಿ ಹೋರಾಟ ನಿಲ್ಲದು. ಈ ಸರ್ಕಾರ ಮನೆಗೆ ಹೋದ ಮೇಲೆಯೇ ಬಿಜೆಪಿ ವಿಶ್ರಮಿಸಲಿದೆ ಎಂದು ಹೇಳಿದರು. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪೂರ್ತಿ ಹಣ ವಾಪಸ್ ನಿಗಮಕ್ಕೆ ಬಂದ ನಂತರ, ಎಸ್‍ಸಿಟಿ/ಟಿಎಸ್‍ಪಿ ಹಣ ವಾಪಸ್ ದಲಿತರ ಕಲ್ಯಾಣಕ್ಕೆ ವಾಪಸ್ ಬಂದ ನಂತರ, ರಾಜ್ಯದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯಕ್ಕೆ ನ್ಯಾಯ ಸಿಗುವವರೆಗೆ, ಅನ್ನದಾತರಿಗೆ ನ್ಯಾಯ ಸಿಗುವವರೆಗೆ ಬಿಜೆಪಿ ನಿರಂತರವಾಗಿ ಹೋರಾಟ ...
Image
  ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸಾಂದೀಪನಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.1- ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯ ವೇತನ ಯೋಜನೆಯಡಿ 2026-27ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಡಳಿಯು ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ರಾಜ್ಯ ಇ-ಆಡಳಿತ ಇಲಾಖೆಯ ರಾಜ್ಯ ಶಿಷ್ಯವೇತನ ತಂತ್ರಾಂಶದ ಮೂಲಕ ಜಾರಿಗೊಳಿಸಲಾಗಿದೆ. ಸಾಂದೀಪನಿ ಶಿಷ್ಯವೇತನದಲ್ಲಿ ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.15,000/- ದಂತೆ ಶಿಷ್ಯವೇತನ ಹಾಗೂ ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು. ಶಿಷ್ಯವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದೆ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ವಾಗಿ ಹಿಂದ...
Image
  ಲಿಂಗಸ್ಗೂರಿನಲ್ಲಿ ಬಳ್ಳಾರಿ ಚಲೋ ಪಾದಯಾತ್ರೆ ಉದ್ಘಾಟನೆ   ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಹೋರಾಟ- ಯಡಿಯೂರಪ್ಪ   ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.1- ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು  ಅವರಿಂದು ಲಿಂಗಸ್ಗೂರಿನಲ್ಲಿ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನೆಯನ್ನು ಕಹಳೆ ಊದುವ ಮೂಲಕ   ನೆರವೇರಿಸಿದರು . ನಂತರ  ಮಾತನಾಡಿದ ಯಡಿಯೂರಪ್ಪ ಅವರು, ಅಧಿಕಾರದ ಮದದಲ್ಲಿ ಮೆರೆಯುವ ರೈತ ವಿರೋಧಿ, ಜನವಿರೋಧಿ, ಪ್ರಗತಿವಿರೋಧಿ, ಮಹಿಳಾ ವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಿದ ಈ ಸರಕಾರವನ್ನು ಕಿತ್ತೊಗೆಯುವ ವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ಸಂಕಲ್ಪದೊಂದಿಗೆ ಹೋರಾಟ ಪ್ರಾರಂಭವಾಗಿದೆ ಎಂದರು. ಮುಖ್ಯಮಂತ್ರಿಗಳಿಗೆ ಸ್ವಾತಂತ್ರ್ಯ ಇದೆಯೇ? ಪ್ರತಿಯೊಂದಕ್ಕೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಕಾಲು ಹಿಡಿಯುವ ನೀವು ಮುಖ್ಯಮಂತ್ರಿಯೇ ಎಂದು ಪ್ರಶ್ನಿಸಿದರು. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುತ್ತದೆಯೇ ಎಂದು ಕೇಳಿದರು. ಪಾದಯಾತ್ರೆಗೆ ಜನರು ಬೆಂಬಲಿಸಲು  ಮನವಿ ಮಾಡಿದರು. ಇದು ಹೋರಾಟದ ಮೊದಲ ಹೆಜ್ಜೆ. ಭ್ರಷ್ಟ ಸರಕಾರಕ್ಕೆ ಲೂಟಿ ವಿರುದ್ಧ ಮನವರಿಕೆ ಮಾಡೋಣ ಎಂದು ತಿಳಿಸಿದರು.  ಬರ ಪ್ರದೇಶ ಘೋ...
Image
  ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೋರಾಟಗಾರರ ಪ್ರಶ್ನೆ ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.1- ಜಿಲ್ಲೆಗೆ ಮಂತ್ರಿ ಮತ್ತು ಉಸ್ತುವಾರಿ ವಂಚಿತರಾಗಿರುವುದನ್ನು ಖಂಡಿಸಿ, ಸ್ವಾತಂತ್ರೋತ್ಸವದ ದಿನದಂದು   ಖಂಡಿಸಿ, ಗೋ - ಬ್ಯಾಕ್ ಘೋಷಣೆ ಯೊಂದಿಗೆ ಪ್ರತಿಭಟಿಸಿದಾಗ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹೋರಾಟಗಾರರನ್ನು ಬಂಧಿಸಿ  ಹೋರಾಟವನ್ನು ಹತ್ತಿಕ್ಕಿರುವುದನ್ನು ಖಂಡಿಸಿ  ಮನವಿ ಪತ್ರ ಸಲ್ಲಿಸಲಾಯಿತು. ಡಾ.ಅಜಯ್ ಸಿಂಗ್ ರವರ ಸಚಿವ ಸ್ಥಾನಕ್ಕೆ ಯಾವುದೇ ವಿರೋಧ ಇಲ್ಲ.  ಆದರೆ ಡಿಕೆ ಶಿವಕುಮಾರ್ ಅವರ ಘನ ಸರಕಾರದಲ್ಲಿ ಜಿಲ್ಲೆಯ ತಮ್ಮ ಕಾಂಗ್ರೆಸ್ ಪಕ್ಷದ ನಾಲ್ಕು ಚುನಾಯಿತ ಜನಪ್ರತಿನಿಧಿಗಳು, ನಾಲ್ಕು ವಿಧಾನ ಪರಿಷತ್ ಸದಸ್ಯರು ಹೊಂದಿದ್ದರು, ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವದು ಅತ್ಯಂತ ಖೇದಕರ ಸಂಗತಿಯಾಗಿದೆ. ಡಿ ಕೆ ಶಿವಕುಮಾರವರ  ಮುಖ್ಯಮಂತ್ರಿಗಳಾದ ನಂತರ ಕೇವಲ ಎರಡು ತಿಂಗಳ ಒಳಗಾಗಿ ಜಿಲ್ಲೆಯ ಮಾನವಿ, ದೇವದುರ್ಗ ಮತ್ತು ಲಿಂಗಸೂಗರ ಈ ಮೂರು ತಾಲೂಕಿನ ಹಳ್ಳಿಗಳಲಿ, ದಲಿತರ ಬಿಬಿತ್ಸ, ಅಮಾನುಷ ಕೊಲೆಗೀಡಾದ, ನಾಡಿನ ಮುಖ್ಯ ಮಂತ್ರಿಗಳು, ಗ್ರಹ ಮಂತ್ರಿಗಳು ಹಾಗೂ ತಾವು (ಉಸ್ತುವಾರಿ) ಜಿಲ್ಲೆಗೆ ಭೇಟಿ ನೀಡಲಿಲ್ಲ. ಕೆಲ ಅಧಿಕಾರಿಗಳಿಂದ ತಿಳಿದು ಬಂದದು ಏನೆಂದರೆ, ವಿಧಾನ ಸಭೆಯು ಸದನ ಇರುವದರಿಂದ ಸದ್ಯ ಬರಲ್ಲ ಎಂಬ ವಿಚಾರ ವ್ಯಕ್ತವಾಯಿತು. ಆದರೆ ಹೋರಾಟಗಾರರ ಪ್ರಶ್ನೆ ನೇರವಾಗಿ ತಮ್ಮ ಸರ್ಕಾರಕ್ಕೆ?? ತ...
Image
  ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ: ಕೊನೆಯ ‌ಭಾಗದ ರೈತರಿಗೆ ಸಮರ್ಪಕವಾಗಿ ನೀರು ಹರಿಸಿ- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಆ. 31- ತುಂಗಭದ್ರಾ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಕೊನೆಯ ‌ಭಾಗದ ರೈತರಿಗೆ ಸಮರ್ಪಕವಾಗಿ ನೀರು ನಿರ್ವಹಣೆ ಮಾಡಬೇಕು. ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಹೇಳಿದರು. ಅವರಿಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಕೃಷಿ ಚಟುವಟಿಕೆಗಳು, ನೀರಾವರಿ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಐದು‌ ತಾಲೂಕುಗಳನ್ನು ಬರ ಪೀಡಿತ ‌ತಾಲೂಕು ಎಂದು ಘೋಷಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಲು ಕ್ರಮ ವಹಿಸಲಾಗುತ್ತದೆ ಎಂದರು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತಾ ವಹಿಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಹೆ ತಲುಪಿಸಲು ಶ್ರಮಿಸಬೇಕು. ಮುಖ್ಯಮಂತ್ರಿಯವರು ರಾಯಚೂರು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿದ್ದು, ಸರ್ಕಾರದ...
Image
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ, ಸರ್ಕಾರ ಸದಾ ನಿಮ್ಮೊಂದಿಗಿದೆ- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಆ. 31- ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ  ಭೂಮಾನಂದ ಹದ್ದಿನಾಳ ಅವರನ್ನು ಇತ್ತೀಚೆಗೆ ಸುಂಕೇಶ್ವರಹಾಳ ಗ್ರಾಮದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ಆಗಸ್ಟ್ 31ರ ಸೋಮವಾರ ದಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಹದ್ದಿನಾಳ ಗ್ರಾಮಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಸಚಿವರು ಮಾತನಾಡಿ, ಜಿಲ್ಲೆಯಲ್ಲಿ ನಡೆದಿರುವ ಈ ಅಹಿತಕರ ಕೃತ್ಯ ಮತ್ತು ಘಟನೆಯನ್ನು ಸರ್ಕಾರ ತೀವ್ರವಾಗಿ ಪರಿಗಣಿಸಿದ್ದು, ಈ ಪ್ರಕರಣದಲ್ಲಿ ಭಾಗಿಯಾದ  ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಈ ವಿಷಯವನ್ನು ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು‌ ಸುದೀರ್ಘ ಚರ್ಚೆ ನಡೆಸಿದ್ದೇವೆ. ಈ ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಕೂಡ ಉಪಸ್ಥಿತರಿದ್ದು, ಘಟನೆಯ ವಿವರಗಳನ್ನು ಕಲೆಹಾಕಲಾಗಿದೆ ಎಂದರು. ಎಂಟು ಜನರ ಬಂಧನ: ಘಟನೆ ನಡೆದ ತಕ್ಷಣವೇ ಸಕ್ರಿಯವಾಗಿರುವ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ...
Image
  ಎಸ್ಸಿ ಎಸ್ಟಿ  ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಂದ   ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ಮತ್ತು ಪರಿಶೀಲನೆ: ಪ್ರಕರಣವನ್ನು ನ್ಯಾಯಯುತವಾಗಿ ನಡೆಸಲು ಸೂಚನೆ- ಡಾ.ಮೂರ್ತಿ ಎಲ್. ಜಯ ಧ್ವಜ ನ್ಯೂಸ್ ,ರಾಯಚೂರು ಆ. 30- ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಮತ್ತು ಸದಸ್ಯರಾದ  ಸುನೀಲ್ ಎಂ.ಉಕ್ಕಲಿ, ಎನ್.ದಿವಾಕರ್, ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ.ಹೆಚ್.ಎಸ್.ಶಿವರಾಮು ಅವರು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸದಲ್ಲಿದ್ದು, ರವಿವಾರ ಮೊದಲ ದಿ‌ನ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಡೆದ ಕೊಲೆ ಪ್ರಕರಣ ವಿಚಾರದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ  ವಸತಿ ಗೃಹದಿಂದ ನೇರವಾಗಿ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿ, ಮೃತ ಕು.ಅಶ್ವಿನಿ ಎಂಬುವವರ ಅತ್ಯಾಚಾರ ಹಾಗೂ ಕೊಲೆ ವಿಚಾರದ ಬಗ್ಗೆ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿಂದ ಸ್ಥಳ ಪರಿಶೀಲನೆ ನಡೆಸಿದರು. ಅವರು ಮನೆಗೆ ಭೇಟಿ ನೀಡಿ ಮೃತ ಕು.ಅಶ್ವಿನಿ ಅವರ ಭಾವಚಿತ್ರಕ್ಕೆ ವಿವಿಧ ಗಣ್ಯರಿಂದ ಪುಷ್ಪ ನಮನ ಸಲ್ಲಿಸಿದ  ನಂತರ ಆಯೋಗದ ಅಧ್ಯಕ್ಷರಿಂದ ಕುಟುಂಬದ ಮಾಹಿತಿ ಪಡೆದರು. ಈ ವೇಳೆ ಆಯೋಗದ ಅಧ್ಯಕ್ಷರು ಮಾತನಾಡಿ, ಪ್ರಕರಣದಡಿ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣವಾದ ಶಿಕ್ಷೆಯಾಗಲಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ...