ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಆದ್ಯತೆಯಿಲ್ಲ: ಜಿಲ್ಲೆಯ ಶಾಸಕರಲ್ಲಿ ಇಚ್ಚಾಶಕ್ತಿ ಕೊರತೆ- ಮಾಲಿಪಾಟೀಲ . ಜಯ ಧ್ವಜ ನ್ಯೂಸ್, ರಾಯಚೂರು, ಮಾ. 13- ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಆದ್ಯತೆ ನೀಡಲಾಗಿಲ್ಲವೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕೃಷಿಗೆ ಪ್ರಾಧಾನ್ಯತೆ ನೀಡಲಾಗಿಲ್ಲವೆಂದರು. ಜಿಲ್ಲೆಯಲ್ಲಿ ರೈತರ ಸಂಕಷ್ಟಕ್ಕೆ ಯಾರು ಸ್ಪಂದಿಸುತ್ತಿಲ್ಲವೆಂದ ಅವರು ಫೇಕ್ ಜಿಪಿಎಸ್ ಸರ್ವೆಯಿಂದ ರೈತರು ಬೆಳೆದ ಬೆಳೆ ಹಾಗೂ ನೊಂದಣಿಯಾದ ಬೆಳೆ ತದ್ವಿರುದ್ಧವಾಗಿದೆ ಎಂದು ದೂರಿದರು. ಖರೀದಿ ಕೇಂದ್ರಗಳು ತೆರೆದಿಲ್ಲ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅನೇಕ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ರೈತರ ಸಂಕಷ್ಟ ಆಲಿಸುವವರು ಯಾರು ಎಂದರು.ತುಂಗಭದ್ರಾ ಗೇಟ್ ಅಳವಡಿಕೆ ಕಾರ್ಯ ಒಂದೆಡೆಯಾದರೆ ಮತ್ತೊಂದೆಡೆ ಕಾಲು...