ಕುಲಶಾಸ್ತ್ರೀಯ ಅಧ್ಯಯನದಂತೆ ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಸಿಎಂಗೆ ಮನವಿ ಜಯ ಧ್ವಜ ನ್ಯೂಸ್ ,ರಾಯಚೂರು, ಫೆ.14 - 'ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡು 2018ರಿಂದ ಬಾಕಿಯಿರುವ ಕಡತಕ್ಕೆ ರಾಜ್ಯ ಸರ್ಕಾರದ ಅನುಮೋದನೆ ನೀಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಅಖಿಲ ಕರ್ನಾಟಕ ಹೆಳವ ಸಮಾಜದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಜ ರಾಜ್ಯಾದ್ಯಕ್ಷ ನಾಗರಾಜ ಗುರೂಜಿ ಅವರು ಮನವಿ ಸಲ್ಲಿಸಿದರು. ಹೆಳವ ಸಮಾಜವು ಶತಮಾನಗಳಿಂದಲೂ ಸಾಮಾಜಿಕ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಹಿಂದುಳಿತವನ್ನು ಅನುಭವಿಸುತ್ತ ಬಂದಿದೆ.ಈ ವಾಸ್ತವ ಸ್ಥಿತಿಯನ್ನು ಗುರುತಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿರುವ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ವತಿಯಿಂದ ಕನ್ನಡ ವಿಶ್ವವಿದ್ಯಾಲಯ ಹಂಪಿಯ ಮಾನವಶಾಸ್ತ್ರ ವಿಭಾಗದ ಡಾ.ಎಲ್.ಶ್ರೀನಿವಾಸರವರು ಕರ್ನಾಟಕದ ಪಿಚ್ಚಿಗುಂಟ್ಲ, ಹೆಳವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಳಿಸಿ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಗೆ 2018 ರಲ್ಲಿ ವರದಿ ಸಲ್ಲಿಸಿದ್ದಾರೆ. 2018 ರಿಂದಲೂ ಈ ಮಹತ್ವದ ಕಡತವು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ಕಚೇರಿಯಲ್ಲಿ ಅನುಮೋದನೆಗಾಗಿ ಕಾಯುತ್ತಿದೆ ಎಂಬುದು ಅತ್ಯಂ...