Posts

Image
  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ  ಜಯ ಧ್ವಜ ನ್ಯೂಸ್ ,ರಾಯಚೂರು,ಫೆ .27- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬-೨೭ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ರಾಯಚೂರು ಜಿಲ್ಲಾ ಸಮಿತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಜಿಲ್ಲಾಧ್ಯಕ್ಷ ಆರ್.ಗುರುನಾಥ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.೧ರಿಂದ ಆಯಾ ತಾಲೂಕಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ರಾಯಚೂರು ನಗರ ವ್ಯಾಪ್ತಿಯ ಪತ್ರಕರ್ತರು ನಗರದ ಪತ್ರಿಕಾ ಭವನದಲ್ಲಿ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಮತ್ತು ೫೧೦ ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಮಾ.೮ ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆಯಾ ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು ಪರಾಮರ್ಶೆ ನಡೆಸಿ ಮಾ.೧೦ರೊಳಗೆ ಅರ್ಜಿ ಮತ್ತು ಶುಲ್ಕದ ಮೊತ್ತವನ್ನು ಜಿಲ್ಲಾ ಸಮಿತಿಗೆ ರವಾನಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸುವವರು ...
Image
  ವಾಲ್ಮೀಕಿ ವಿವಿಯಲ್ಲಿ ಸೂಕ್ಷ್ಮ  ಜೀವಶಾಸ್ತ್ರ, ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳ ವತಿಯಿಂದ ವಿಶೇಷ ಉಪನ್ಯಾಸ:                                                      ಸುಸ್ಥಿರ ಭವಿಷ್ಯಕ್ಕಾಗಿ ಜೀವವೈವಿಧ್ಯತೆ ಸಂರಕ್ಷಣೆ ಅತ್ಯಗತ್ಯ : ಮಂಜುನಾಥ ಎಸ್ ನಾಯಕ ಜಯಧ್ವಜ ನ್ಯೂಸ್ ,ರಾಯಚೂರು,ಫೆ.೨೬- ಸುಸ್ಥಿರ ಭವಿಷ್ಯಕ್ಕಾಗಿ ಅರಣ್ಯ ಜೀವವೈವಿಧ್ಯತೆ ಸಂಶೋಧನೆ ಮತ್ತು ಸಂರಕ್ಷಣೆಯು ಪರಿಸರ ಸಮತೋಲನ, ಮತ್ತು ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸ್ಥಳೀಯ ಸಮುದಾಯಗಳ ಸೂಕ್ಷö್ಮಜೀವಿಗಳು, ಕೀಟಗಳು, ಔಷಧೀಯ ಸಸ್ಯಗಳು ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜೀವವೈವಿಧ್ಯತೆಯ ಸಂಶೋಧನೆಕಾರರಾದ ಮಂಜುನಾಥ ಎಸ್ ನಾಯಕ ಅವರು ಹೇಳಿದರು.  ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸೂಕ್ಷö್ಮಜೀವಶಾಸ್ತç, ಸಸ್ಯಶಾಸ್ತç ಹಾಗೂ ಪ್ರಾಣಿಶಾಸ್ತç ವಿಭಾಗಗಳು ಇಂದು ಆಯೋಜಿಸಿದ್ದ “ಫಾರೆಸ್ಟ್ ಬಯೋಡೈವರ್‌ಸಿಟಿ : ರಿಸರ್ಚ್ ಆ್ಯಂಡ್ ಕನಜರ್‌ವೇಷನ್  ಫಾರ್ ಎ ಸಸ್ಟೆನೇಬಲ್ ಫ್ಯುಚರ್” ವಿಷಯ ಕುರಿತು ಮಾತನಾಡಿದ ಅವರು, ಅವರ ಸಂಶೋಧನೆಯ ಪ್ರಮುಖ ಸಾಧನೆ ಮತ್ತು ಸಂಶೋಧನೆಯಲ್ಲಿ ಅನುಭವಿಸಿದ ವಿಚಾರವನ್ನು ವ್ಯಕ್...
Image
  ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಸಂಪನ್ನ:                          ಕಾಂತಾರ  ಖ್ಯಾತಿಯ  ನಟ ರಿಷಬ್ ಶೆಟ್ಟಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವರಿಗೆ ಸನ್ಮಾನ.                                                                                                                                         ಜಯ ಧ್ವಜ ನ್ಯೂಸ್, ರಾಯಚೂರು, ಫೆ.24 - ಮಂತ್ರಾಲಯದಲ್ಲಿ ಒಂದು ವಾರದಿಂದ ನಡೆದ ಶ್ರೀ ಗುರುವೈಭವೋತ್ಸವ ಸಂಪನ್ನಗೊಂಡಿದೆ. ಇಂದು ಸಂಜೆ ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ, ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಸೇರಿದಂತೆ ಅನೇಕ ಗಣ್ಯರಿಗೆ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಅನುಗ್ರಹ ಸನ್ಮಾನ ಗೈ...
Image
  ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ :                                        ಮಹಾಭಿಷೇಕ, ನವರತ್ನ ರಥೋತ್ಸವ, ನಾದಹಾರ ಸಮರ್ಪಣೆ.                                                                                                                                                           ಜಯ ಧ್ವಜ ನ್ಯೂಸ್, ರಾಯಚೂರು,ಫೆ.24-             ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ ಅಂಗವಾಗಿ ಬೆಳಿಗ್ಗೆ  ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ರಾಯರ...
Image
  ಒಳ ಮೀಸಲಾತಿ ಜಾರಿಯಾಗುವವರೆಗೂ ಹುದ್ದೆಗಳ ನೇಮಕಾತಿ ಮಾಡದಂತೆ ಮಾದಿಗ ದಂಡೋರಾ ಮನವಿ.                                               ಜಯ ಧ್ವಜ ನ್ಯೂಸ್, ರಾಯಚೂರು,ಫೆ.24-                                                                                                                  ಒಳ ಮೀಸಲಾತಿ ಜಾರಿಯಾಗುವವರೆಗೂ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳ ನೇಮಕಾತಿ ಮಾಡದಂತೆ ಮಾದಿಗ ದಂಡೋರಾ ಮನವಿ ಮಾಡಿದೆ. ರಾಜ್ಯ ಸರ್ಕಾರ ಒಳ ಮೀಸಲಾತಿ ಅನ್ವಯ ಈಗಾಗಲೆ ಮೀಸಲಾತಿ ಪ್ರಕಟಿಸಿದೆ ಆದರೆ ಅಲೆಮಾರಿ ಮತ್ತು ಆದಿ ದ್ರಾವಿಡ, ಆದಿ ಕರ್ನಾಟಕ ಮುಂತಾದ ಜಾತಿಗಳ ಮತ್ತು 101 ಜಾತಿಗಳಿಗೆ ಬಹುದೊಡ್ಡ ಆನ್ಯಾಯವಾಗಿದ್ದು ಈ ಬಗ್ಗೆ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು ಆದ್ದರಿಂದ ಒಳ ಮೀಸಲಾತಿ ಗೊಂದಲ ...
Image
  ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಲಿ- ಡಾ.ಬಾಬುರಾವ್ ಜಯ ಧ್ವಜ ನ್ಯೂಸ್ , ರಾಯಚೂರು,ಫೆ.24- ಪ್ರಸಕ್ತ  2026-27ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಮಾಜ ಸೇವಕ ಡಾ‌.ಬಾಬುರಾವ್ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಕೆಕೆಆರ್ ಡಿಬಿಗೆ 5000 ಕೋಟಿ ರೂ.ಅನುದಾನ ಕೊಡುವುದರ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ವಿನಂತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದುಳಿದಿರುವ ರಾಯಚೂರು ಜಿಲ್ಲೆಯ ರಾಯಚೂರು ನಗರಕ್ಕೆ ತೀರಾ ಅಗತ್ಯವಾಗಿ ಬೇಕಾಗಿರುವ ರಿಂಗ್ ರೋಡ್ ಗೆ ಅನುದಾನ ಒದಗಿಸಬೇಕು. ವಿಮಾನ ನಿಲ್ದಾಣ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸಬೇಕು. ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಕೊಡಬೇಕು ಎಂದು ಅವರು ಕೋರಿದ್ದಾರೆ.
Image
  ಫ್ಲೋರಿಡಾ ಯೋಗ ಸಂಸ್ಕೃತ ವಿವಿಯಿಂದ ಶ್ರೀ ಸುಬುಧೇಂದ್ರತೀರ್ಥರಿಗೆ ಪ್ರಶಸ್ತಿ:                          ರಾಜಾ.ಎಸ್  ಗಿರಿಯಾಚಾರ್ , ರಾಘವೇಂದ್ರ ರಾಜಕುಮಾರ್, ಶ್ರೀ ಷಾನಂದರವರಿಗೆ ಡಾಕ್ಟರೇಟ್ ಪದವಿ ಪ್ರದಾನ.                                                                                                                      ಜಯ ಧ್ವಜ ನ್ಯೂಸ್, ರಾಯಚೂರು, ಫೆ.24- ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ಅಮೇರಿಕಾದ ಫ್ಲೋರಿಡಾ ಯೋಗ ಸಂಸ್ಕೃತ ವಿಶ್ವವಿದ್ಯಾಲಯದಿಂದ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ನೆರವೇರಿತು. ಸಾಯಿಂಕಾಲ ಯೋಗೀಂದ್ರ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಗೆ ವ್ಯಾಸ ದಾಸ ಯೋಗಿ ಪ್ರಶಸ್ತಿ ಪ್ರದಾನ ಹಾಗೂ ರಾಜಾ.ಎಸ್.ಗಿರಿಯ...