ಮುಖ್ಯಮಂತ್ರಿಗಳ ಸಚಿವಾಲಯದ ಮಾಧ್ಯಮ ಕಾರ್ಯದರ್ಶಿಗಳಾಗಿ ಪಿ.ತ್ಯಾಗರಾಜ್ ನೇಮಕ. ಜಯ ಧ್ವಜ ನ್ಯೂಸ್, ರಾಯಚೂರು ,ಜು.8- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಸಚಿವಾಲಯದ ಮಾಧ್ಯಮ ಕಾರ್ಯದರ್ಶಿಗಳಾಗಿ ಪಿ.ತ್ಯಾಗರಾಜರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಪಿ.ತ್ಯಾಗರಾಜ್ ರವರು ನಾಡಿನ ಖ್ಯಾತ ಪತ್ರಿಕೆಗಳಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಪತ್ರಿಕೆಗಳಲ್ಲಿ ಅಂಕಣಗಳನ್ನು ಸಹ ಬರೆಯುತ್ತಿದ್ದರು. ಸದ್ಯ ಅವರನ್ನು ಮುಖ್ಯಮಂತ್ರಿಗಳ ಸಚಿವಾಲಯದ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ ಇವರೊಂದಿಗೆ ಆರ್. ಜಯಪ್ರಕಾಶ್ ಮತ್ತು ರಾಘವೇಂದ್ರ ಭಟ್ ರವರನ್ನು ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ .