ಬ್ರಾಹ್ಮಣ ಸಮಾಜದಿಂದ ಸನ್ಮಾನ. ಜಯ ಧ್ವಜ ನ್ಯೂಸ್ , ರಾಯಚೂರು, ಜೂ.22- ಇತ್ತೀಚೆಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿಯ ನಿರ್ದೇಶಕರಾಗಿ ನಾಮನಿರ್ದೇಶನಗೊಂಡ ವಿಪ್ರ ಸಮಾಜದ ಡಾ. ಬಿ,ಕೆ ದೇಸಾಯಿ ರವರನ್ನು ಬ್ರಾಹ್ಮಣ ಸಮಾಜದ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಕೆಬಿಎಂಎಸ್ ಜಿಲ್ಲಾ ಜನಪ್ರತಿನಿಧಿ ರಮೇಶ್ ಕುಲಕರ್ಣಿ, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಹಿರಿಯ ಉಪಾಧ್ಯಕ್ಷರಾದ ಪ್ರಾಣೇಶ್ ಮುತಾಲಿಕ್ ,ಜಿಲ್ಲಾ ಯುವ ಸಂಚಾಲಕರಾದ ಶ್ರೀನಿವಾಸ್ ದೇಸಾಯಿ ಮಲದಕಲ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.