Posts

Image
  ಕಾಡ್ಲೂರಿಗೆ ಶ್ರೀ ಪೇಜಾವರ ಶ್ರೀಗಳ ದಿಗ್ವಿಜಯ .                                                              ಜಯ ಧ್ವಜ ನ್ಯೂಸ್, ರಾಯಚೂರು,ಮೇ.21- ತಾಲೂಕಿನ ಕಾಡ್ಲೂರು ಗ್ರಾಮಕ್ಕೆ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ 1008 ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರು ಬುಧುವಾರ ದಿಗ್ವಿಜಯಗೈದರು. ಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು, ವಿಪ್ರ ಬಾಂಧವರು ವಾದ್ಯ ವೈಭವ ಬಾಣ ಬಿರುಸುಗಳಿಂದ ಪೂರ್ಣಕುಂಭದಿಂದ ಸ್ವಾಗತಿಸಿದರು. ಅನೇಕ ಭಕ್ತಾದಿಗಳು ತಮ್ಮ ಮನೆಗಳಲ್ಲಿ ಶ್ರೀಗಳ ಪಾದಪೂಜೆ ನೆರವೇರಿಸಿದರು. ನಂತರ ಗ್ರಾಮದ ಪುರಾತನ ಹಾಗೂ ವಿಶಿಷ್ಟ ವಾಸ್ತುಶಿಲ್ಪವುಳ್ಳ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಸ್ಥಾನ ಪೂಜೆ ನೆರವೇರಿಸಿದರು. ಬಂದ ಭಕ್ತಾದಿಗಳಿಗೆ ಫಲ ಮಂತ್ರಾಕ್ಷತೆ ವಿತರಿಸಿದರು. ಕಲ್ಯಾಣಿ ವಾಸುದೇವಾಚಾರ್ಯ ಕುಟುಂಬಸ್ಥರು ಭಕ್ತಾದಿಗಳಿಗೆ  ಸಕಲ ವ್ಯವಸ್ಥೆ ಹಾಗೂ ತೀರ್ಥ ಪ್ರಸಾದ ವ್ಯವಸ್ಥೆ ಮಾಡಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.                    ಕೃಷ್ಣಾನದಿ ತೀರಕ್ಕೆ ಭೇಟಿ : ಸಾಯಿಂಕಾಲ ಗ್ರಾಮದ ಕೃಷ್ಣಾ...
Image
  ಪತ್ರಕರ್ತ ಸೋಮಣ್ಣ ಗುರಿಕಾರ ನಿಧನಕ್ಕೆ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಜಯ ಧ್ವಜ ನ್ಯೂಸ್ ,ರಾಯಚೂರು, ಮೇ.19 - ಹಿರಿಯ ಪತ್ರಕರ್ತ ಸೋಮಣ್ಣ ಗುರಿಕಾರ ನಿಧನ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಇಂದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಮೊದಲಿಗೆ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು. ಬಳಿಕ ಸೋಮಣ್ಣ ಗುರಿಕಾರ ಅವರ ಭಾವಚಿತ್ರಕ್ಕೆ ಪತ್ರಕರ್ತರು ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಮಾತನಾಡಿ, ಸೋಮಣ್ಣ ಅವರು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಒಂದೇ ಸಂಸ್ಥೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಅನೇಕ ಜನಪರ ವರದಿಗಳನ್ನು ಮಾಡಿ ಗಮನ ಸೆಳೆದಿದ್ದರು. ಅವರು ಕಾರ್ಮಿಕರ ಕುಟುಂಬದಿಂದ ಬಂದವರಾಗಿದ್ದು, ಪತ್ರಿಕಾ ವೃತ್ತಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು. ಕಳೆದ ಐದು–ಆರು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವೇಳೆ ಸ್ನೇಹಿತರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ನೆರವಾಗಿದ್ದರು. ಸಿಎಂ ನಿಧಿ ಸೇರಿದಂತೆ ಹಲವರ ಸಹಾಯದಿಂದ ಚಿಕಿತ್ಸೆಗಾಗಿ ಆರ್ಥಿಕ ನೆರವು ಒದಗಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ದುಃಖಕರ ಸಂಗತಿ ಎಂದರು. ಪತ್ರಕರ್ತರ ವೃತ್ತಿಯಲ್ಲಿ ಭದ್ರತೆಯ ಕೊರತೆ ಇದೆ. ಆರೋಗ್ಯ ಸಮಸ್ಯೆಗಳಿದ್ದರೂ ಅನೇಕ...
Image
  ರಾಯಚೂರು ಮತ್ತು ಕೊಪ್ಪಳ ಆರ್ ಡಿ ಸಿ ಸಿ ಬ್ಯಾಂಕ್ ನೇಮಕಾತಿ ಹೊಸ ರೋಸ್ಟರ್ ಬಿಂದು ಅನ್ವಯ ಮಾಡಿ- ರವೀಂದ್ರನಾಥ ಪಟ್ಟಿ.                                                                                                                                            ಜಯ ಧ್ವಜ ನ್ಯೂಸ್, ರಾಯಚೂರು,ಮೇ.17-  ರಾಯಚೂರು ಮತ್ತು ಕೊಪ್ಪಳ ಆರ್ ಡಿ ಸಿ ಸಿ ಬ್ಯಾಂಕ್ (371ಜೆ)  ನೇಮಕಾತಿ ಹೊಸ ರೋಸ್ಟರ್  ಬಿಂದು ಅನ್ವಯ ನೇಮಕಾತಿ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಕೋರ್ ಕಮೀಟಿ ಸದಸ್ಯರಾದ ರವೀಂದ್ರನಾಥ ಪಟ್ಟಿ ಹೇಳಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರ ತರಾತುರಿಯಲ್ಲಿ ನೇಮಕಾತಿ ಮಾಡುತ್ತಿದೆ ಈಗಾಗಲೆ ಮೌಖಿಕ ಸಂದರ್ಶನ ನಡೆಯುತ್ತಿದೆ ಹೊಸ ರೋಸ್ಟರ್ ಅಡಿ ಮೀಸಲಾತಿ ನೀಡದೆ ಅನ್ಯಾಯ ನಡೆ...
Image
ಪೊಲೀಸರ ವಿರುದ್ಧ ಪತ್ರಕರ್ತರ ತಂಡಕ್ಕೆ  ಒಂಭತ್ತು ವಿಕೆಟ್‌ಗಳ ಭರ್ಜರಿ ಗೆಲುವು: ಪೊಲೀಸ್ ಪರೇಡ್ ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯ ಜಯ ಧ್ವಜ ನ್ಯೂಸ್, ರಾಯಚೂರು,ಮೇ.17- ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸರು ಮತ್ತು ಪತ್ರಕರ್ತರ ನಡುವೆ ಇಂದು ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಪತ್ರಕರ್ತರ ತಂಡ ಒಂಭತ್ತು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷುಗಿರಿ ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪಂದ್ಯಕ್ಕೆ ಚಾಲನೆ ನೀಡಿದರು. ಟಾಸ್ ಗೆದ್ದ ಪತ್ರಕರ್ತರ ತಂಡದ ನಾಯಕ ಸಿದ್ಧಯ್ಯ ಸ್ವಾಮಿ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. . ಮೊದಲು ಬ್ಯಾಟಿಂಗ್ ಮಾಡಿದ ಪೊಲೀಸರ ತಂಡ 10 ಓವರ್‌ಗಳಲ್ಲಿ 69 ರನ್ ಗಳಿಸಿತು. ಪತ್ರಕರ್ತರ ತಂಡದ ಆಕ್ರಮಣಕಾರಿ ಬೌಲಿಂಗ್ ದಾಳಿಗೆ ಪೊಲೀಸ್ ತಂಡದ ಆಟಗಾರರು ಹೆಚ್ಚು ಕಾಲ ಕ್ರೀಸ್‌ನಲ್ಲಿ ಉಳಿಯಲಿಲ್ಲಿ. ಅಣ್ಣಪ್ಪ ಮೇಟಿಗೌಡ, ಲಕ್ಷ್ಮಣ, ಶ್ರೀಕಾಂತ, ಭೀಮೇಶ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿದರು. ಉತ್ತಮ ಕ್ಷೇತ್ರ ರಕ್ಷಣೆ ಕಾಪಾಡಿಕೊಂಡ ಪತ್ರಕರ್ತರ ತಂಡ ಪೊಲೀಸ್ ತಂಡ ಹೆಚ್ಚು ರನ್ ಸೇರಿಸದಂತೆ ಕಡಿವಾಣ ಹಾಕಿತು. ಎಸ್‌ಪಿ ಅರುಣಾಂಕ್ಷುಗಿರಿರವರು ಮಾತ್ರ 19 ರನ್ ಗಳಿಸಿ ನಾಟ್ ಔಟ್ ಆಗಿ ಉಳಿಯುವ ಮೂಲಕ ತಂಡ ಹೆಚ್ಚಿನ ಮೊತ್ತ ಸೇರಿಸಲು ನೆರವಾದರು.   ನಂತರ ಬ್ಯಾಟಿಂಗ್ ಆರಂಭಿಸಿದ ಪತ್ರಕರ್ತರ ತಂಡ ಕೇವಲ 6 ಓವರ್‌ಗಳಲ್ಲಿ ನಿಗದಿತ...
Image
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಉಷ್ಣಾಂಶ ದಾಖಲು ಸಾಧ್ಯತೆ:                                                      ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಎಸ್.ಪೂವಿತಾ ಸಲಹೆ ಜಯ ಧ್ವಜ ನ್ಯೂಸ್ ,ರಾಯಚೂರು ಮೇ.15- ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಸ್.ಪೂವಿತಾ ಅವರು ಸಲಹೆ ನೀಡಿದ್ದಾರೆ.  ರಾಯಚೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ. *ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕು:* ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪ...
Image
  ನೇತಾಜಿ ನಗರ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ- ಚಿನ್ನ , ಬೆಳ್ಳಿ ಆಭರಣ ಜಪ್ತಿ.                                         ಜಯಧ್ವಜ ನ್ಯೂಸ್, ರಾಯಚೂರು, ಮೇ.14-   ನೇತಾಜಿ ನಗರ ಪೊಲೀಸ್ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿ 1.26ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಹನುಮಾನ್ ಟಾಕೀಸ್ ಬಳಿಯ  ಕೊತ್ತಪೇಟೆ ನಿವಾಸಿ ರಹೀಮ ತಂದೆ ಶೇಕ್ ನಜೀರ್ ಮನೆಯ ಬೀಗ ಮುರಿದು 1.49 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿದ್ದ ಆರೋಪಿ  ರಹೀಮ್  ನನ್ನು ಬಂಧಿಸಿದ ಪೊಲೀಸರು ಚಿನ್ನ ಬೆಳ್ಳಿ ಆಭರಣ ವಶ ಪಡಿಸಿಕೊಂಡಿದ್ದಾರೆ. ಪಶ್ಚಿಮ ವಲಯ ಸಿಪಿಐ, ನೇತಾಜಿ ನಗರ ಠಾಣೆ ಪಿಐಸ್ ಐ, ಸಿಬ್ಬಂದಿಗಳ ಕಾರ್ಯಕ್ಕೆ ಎಸ್ಪಿ , ಎಎಸ್ಪಿ, ಡಿಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Image
  ಮಾವಿನ ಕೆರೆಗೆ ಜಿಲ್ಲಾಧಿಕಾರಿ ಎಸ್.ಪೂವಿತಾ ಭೇಟಿ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಜಯ ಧ್ವಜ ನ್ಯೂಸ್ ,ರಾಯಚೂರು ಮೇ.14 -  ರಾಯಚೂರು ನಗರದ ಐತಿಹಾಸಿಕ ಮಾವಿನಕೆರೆ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳಾದ ಎಸ್.ಪೂವಿತಾ ಅವರು ಮೇ.13ರ ಬುಧುವಾರ ದಂದು ಭೇಟಿ ನೀಡಿ ಪರಿಶೀಲಿಸಿದರು. ಕೆರೆ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ ನಡೆಸಿ, ಜಿಲ್ಲಾಧಿಕಾರಿ ಎಸ್.ಪೂವಿತಾ ಅವರು ಮಾತನಾಡಿ, ಕೆರೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗೆ ಯಾವುದೇ ಅಡೆತಡೆ ಬಂದರೆ ಕೂಡಲೇ ಜಿಲ್ಲಾಡಳಿತವನ್ನು ಸಂಪರ್ಕ ಮಾಡಬೇಕು ಹಾಗೂ ಕಾಮಗಾರಿಯನ್ನು ಗುಣಮಟ್ಟದಿಂದ ಮಾಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ನಂತರ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಕೆರೆಯ ವಿಸ್ತರಣೆ ಮಾಹಿತಿಯನ್ನು ಪಡೆದರು. ಮಾವಿನಕೆರೆಗೆ ಬೇರೆ ಬೇರೆ ಕಡೆಗಳಿಂದ ಗಟಾರು ನೀರು ಕೆರೆಗೆ ಹರಿದು ಬರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಕೆರೆಗೆ ಕಸ ಮತ್ತು ಪ್ಲಾಸ್ಟಿಕ್ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣಾಧಿಕಾರಿ ಆನಂದ ರೆಡ್ಡಿ, ಕೆರೆ ಇಂಜಿನಿಯರ್ ಬಸವರಾಜ ಸೇರಿದಂತೆ ಗುತ್ತೇದಾರರು,...