Posts

Image
  ಜುಬಿನ್ ಮಹೋಪಾತ್ರ ವರ್ಗಾವಣೆ.                                                                 ಜಯ ಧ್ವಜ ನ್ಯೂಸ್, ರಾಯಚೂರು,ಆ.29-                    ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮಹೋಪಾತ್ರ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಜುಬಿನ್ ಮಹೋಪಾತ್ರರವರನ್ನು ಯಾದಗಿರಿ ಜಿ.ಪಂ ಸಿಇಓ ಆಗಿ ನಿಯುಕ್ತಿಗೊಳಿಸಲಾಗಿದೆ. ಜುಬಿನ್ ಮಹೋಪಾತ್ರ ಮಹಾನಗರ ಪಾಲಿಕೆ ಆಯುಕ್ತರಾಗಿ ಅನೇಕ ಬದಲಾವಣೆ ತಂದಿದ್ದರು.
Image
  ನವೋದಯ 88.4 ಎಫ್.ಎಮ್. ಬಾನುಲಿ ಕೇಂದ್ರ ಉಧ್ಘಾಟನೆ: ಎಸ್.ಆರ್.ರೆಡ್ಡಿ ಕನಸು ಕಂಡದ್ದನ್ನು ನನಸು ಮಾಡುವ ಛಲಗಾರ-ಬೋಸರಾಜು.                                                      ಜಯ ಧ್ವಜ ನ್ಯೂಸ್, ರಾಯಚೂರು,ಆ.29- ಎಸ್.ಆರ್.ರೆಡ್ಡಿ ಕನ‌ಸು ಕಂಡದ್ದನ್ನು ನನಸು ಮಾಡುವ ಛಲಗಾರ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅವರಿಂದು ನವೋದಯ ಸಂಸ್ಥೆಯಲ್ಲಿ ನವೋದಯ 88.4 ಬಾನುಲಿ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಎಸ್ ಆರ್ ರೆಡ್ಡಿ ನವೋದಯ ಸಂಸ್ಥೆ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ನಗರಕ್ಕೆ ವಿದ್ಯಾರ್ಜನೆಗೆ ಆಗಮಿಸಿದ ಅವರು ತಮ್ಮದೇ ಬೃಹತ್ ಶಿಕ್ಷಣ ಸಂಸ್ಥೆ ರೂಪಿಸಿದ್ದು ಅತ್ಯಂತ ಶ್ಲಾಘನೀಯ ಎಂದರು. ಬಾನುಲಿ ಕೇಂದ್ರ ಸ್ಥಾಪಿಸುವ ಮೂಲಕ ಶಿಕ್ಷಣ, ಮನೋರಂಜನೆಗೆ ಹೊಸ ಹೆಜ್ಜೆಯಿರಿಸಿದ್ದು ಬಾನುಲಿ ಕೇಂದ್ರ ಜನರಿಗೆ ಉಪಯುಕ್ತ ಮಾಹಿತಿ ಒದಗಿಸಲಿ ಎಂದರು. ನಗರದಲ್ಲಿ ಮದುವೆ ಸಮಾರಂಭಗಳಿಗೆ ಅನೂಕೂಲವಾಗಲು ನಗರದ ಹೊರ ವಲಯದಲ್ಲಿ ಸುಸಜ್ಜಿತ ಕಲ್ಯಾಣ ಮಂಟಪ ಕಟ್ಟಿಸುವ ಮೂಲಕ ಶುಭ ಕಾರ್ಯಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು. ಅವರ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ಭಾರಿ ಪೈಪೋಟಿಯಿರು...
Image
  ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು:                                                              ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ . ಜಯ ಧ್ವಜ ನ್ಯೂಸ್ ,ರಾಯಚೂರು ಆಗಸ್ಟ್ 28 - ರಾಜ್ಯ ಸರ್ಕಾರವು ಅಲೆಮಾರಿ ನಿಗಮಕ್ಕೆ ಎಸ್‌ಸಿಪಿ ಅಡಿಯಲ್ಲಿ 100 ಕೋಟಿ ಹಾಗೂ ಟಿಎಸ್ಪಿ ಅಡಿಯಲ್ಲಿ 48 ಕೋಟಿ ವಿಶೇಷ ಅನುದಾನವನ್ನು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಕಾಯ್ದಿರಿಸುವ ಮೂಲಕ ಆ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಹೇಳಿದರು. ಅವರಿಂದು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದರು.  ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೊದಲು ಅಲೆಮಾರಿ ಕೋಶವನ್ನು ಸ್ಥಾಪಿಸಲಾಯಿತು. ನಂತರ 2022ರಲ್ಲಿ ನಿಗಮವಾಗಿ, 2024ರಲ್ಲಿ ಪ್ರಥಮ ಬಾರಿಗೆ ಅಲೆಮಾರಿ ಸಮುದಾಯದ ಹೆಣ್ಣುಮಗಳಿಗೆ ನಿಗಮದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ ಎಂದರು. ಕಂದಾಯ ಇಲಾಖೆಯ ಸಹಯೋಗದೊಂದಿಗೆ ಅಲೆಮಾರಿಗಳು...
Image
  ದೇವದುರ್ಗ ಚಿನ್ನ–ತಾಮ್ರದ ಗಣಿಗಾರಿಕೆ ಬ್ಲಾಕ್‌ಗೆ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಭೇಟಿ ಜಯ‌ ಧ್ವಜ ನ್ಯೂಸ್ ,ರಾಯಚೂರು,ಆ.27- ಕೇಂದ್ರ ಗಣಿ ಸಚಿವಾಲಯದ ಹರಾಜು ಪ್ರಕ್ರಿಯೆ ಮೂಲಕ ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಾಲರೀಸ್ ಕಂಪನಿ ಲಿಮಿಟೆಡ್‌ ನವರು  ಜಿಲ್ಲೆಯ ದೇವದುರ್ಗದಲ್ಲಿ ಚಿನ್ನ ಮತ್ತು ತಾಮ್ರದ ಬ್ಲಾಕ್‌ಗಳ ಪರಿಶೋಧನಾ ಪರವಾನಗಿ ಪಡೆದಿರುವ ಹಿನ್ನೆಲೆಯಲ್ಲಿ, ತೆಲಂಗಾಣದ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಗುರುವಾರ ದೇವದುರ್ಗಕ್ಕೆ ಭೇಟಿ ನೀಡಿ ಸಿಂಗರೇಣಿ ಬ್ಲಾಕ್‌ನ ಪರಿಶೋಧನಾ ಪ್ರದೇಶವನ್ನು ಪರಿಶೀಲಿಸಿದರು. ಚಿನ್ನ ಮತ್ತು ತಾಮ್ರದ ನಿಕ್ಷೇಪಗಳಿರುವ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಪರಿಶೋಧನಾ ಕಾರ್ಯದ ಪ್ರಗತಿ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರೊಂದಿಗೆ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಗಣಿಗಾರಿಕೆ ಪ್ರದೇಶವನ್ನು ಪರಿಶೀಲಿಸಿದರು. ನಿರ್ಣಾಯಕ ಖನಿಜಗಳ ಪರಿಶೋಧನಾ ಕ್ಷೇತ್ರಕ್ಕೆ ಸಿಂಗರೇಣಿ ಕಾಲರೀಸ್ ಕಂಪನಿ ಪ್ರವೇಶಿಸುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ನಂತರ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಮಾತನಾಡಿ, ಚಿನ್ನ ಹಾಗೂ ತಾಮ್ರ ಗಣಿಗಾರಿಕೆ  ಯೋಜನೆಯು ಸಿಂಗರೇಣಿ ಸಂಸ್ಥೆಯನ್ನು ಕಲ್ಲಿದ್ದಲು ಗಣಿಗಾರಿಕೆಯಾಚೆಗೆ ಹೊಸ...
Image
  ಜಿಲ್ಲೆಯಲ್ಲಿ ದಲಿತರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸದಿದ್ದರೆ ಹೋರಾಟ ತೀರ್ವ:                                                                      ಡಿಸಿ ,ಎಸ್ಪಿಯವರನ್ನು ಕೂಡಲೆ ವರ್ಗಾವಣೆಗೊಳಿಸಿ-  ಎಸ್. ಮಾರೆಪ್ಪ                                                                                            ಜಯಧ್ವಜ ನ್ಯೂಸ್, ರಾಯಚೂರು,ಆ.27- ಜಿಲ್ಲೆಯಲ್ಲಿ ನಡೆದಿರುವ ಮೂವರು ದಲಿತರ ಕಗ್ಗೊಲೆ ಪ್ರಕರಣವನ್ನು ಸಿಐಡಿಗೆ ಸರ್ಕಾರ ವಹಿಸದಿದ್ದರೆ ಹೋರಾಟ ತೀರ್ವ ಗೊಳಿಸಬೇಕಾಗುತ್ತದೆ ಎಂದು ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಎಸ್.ಮಾರೆಪ್ಪ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಒಂದೆ ತಿಂಗಳಲ್ಲಿ ಭೂಮಾನಂದ ಕೊಲೆ ಹಾಗೂ ಅಶ್ವಿನಿ, ರಾಣಿಮ್ಮ ಅತ್ಯಾಚಾರ ಕೊಲೆ...
Image
  ಸಾಧನೆಗೆ ಕಠಿಣ ಪರಿಶ್ರಮವೇ ಮೂಲಮಂತ್ರ- ವೆಂಕಟೇಶ ಬೇವಿನಬೆಂಚಿ ಜಯ ಧ್ವಜ ನ್ಯೂಸ್ ರಾಯಚೂರು, ಆ.26- ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲಿ ಯಶಸ್ಸು  ಕಾಣಬೇಕಾದರೆ ಮತ್ತು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮವೇ ಮೂಲ ಮಂತ್ರವಾಗಿದೆ. ಸಾಧನೆಗೆ ಕಠಿಣ ಪರಿಶ್ರಮ ಸ್ಪಷ್ಟವಾದ ಗುರಿ,  ಪ್ರಾಮಾಣಿಕ ಪ್ರಯತ್ನ ಇದ್ದರೆ  ಯಶಸ್ಸು ಕಾಣಲು ಸಾಧ್ಯ ಎಂದು ಆಕಾಶವಾಣಿಯ ಕಾರ್ಯಕ್ರಮ ನಿರ್ದೇಶಕರಾದ ವೆಂಕಟೇಶ್ ಬೇವಿನಬೆಂಚಿ ಹೇಳಿದರು.   ಅವರು ನಗರದ ಸರಕಾರಿ ಅಲ್ಪಸಂಖ್ಯಾತರ  ಮುರಾರ್ಜಿ ದೇಸಾಯಿ ಬಾಲಕಿಯತ ವಸತಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದರು. ಎಷ್ಟೇ ಕಷ್ಟ ಬಂದರೂ ನಿರಂತರವಾಗಿ ಕೆಲಸ ಮಾಡುವುದರಿಂದ ಗುರಿ ಮುಟ್ಟಬಹುದು, ಸರಿಯಾದ ವೇಳಾಪಟ್ಟಿ ಮತ್ತು ಸಮಯದ ಸದುಪಯೋಗ ಸಾಧನೆಯನ್ನು ಸುಲಭಗೊಳಿಸುತ್ತದೆ‌  ಮಾಡುವ ಕೆಲಸದಲ್ಲಿ ಸಂಪೂರ್ಣ ಗಮನಹರಿಸಿದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ‌ ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ಹನುಮೇಶ ರವರ ವಹಿಸಿದ್ದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ  ಶ್ರೀ ಸುರೇಶ ಜಿ ಗುರುಗುಂಟ* ರವರು ಮಾತನಾಡಿ ತಾಳ್ಮೆ, ಕಷ್ಟಪಟ್ಟು ಕೆಲಸಮಾಡುವುದು ಗುರಿಸಾಧಿಸುವ  ಛಲ, ಸ್ವಯಂ ಪ್ರೇರಣೆ , ಸಮಯ ಪರಿಪ...
Image
  ಆ.29 ರಂದು ನಗರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಹಾಕಿ ಟೂರ್ನಮೆಂಟ್:                                                                              16 ಜಿಲ್ಲೆಗಳ ತಂಡಗಳು ಭಾಗಿ-ರವೀಂದ್ರ ಜಲ್ದಾರ್ .                                          ಜಯ ಧ್ವಜ ನ್ಯೂಸ್, ರಾಯಚೂರು,ಆ.26- ನಗರದಲ್ಲಿ ಆ.29 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಹಾಕಿ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷರಾದ ರವೀಂದ್ರ ಜಲ್ದಾರ್ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾ ಹಾಕಿ ಅಸೋಸಿಯೇಷನ್ 25ನೇ ವಾರ್ಷಿಕೋತ್ಸವ ಅಂಗವಾಗಿ  ಆ.29ರಂದು ನಗರದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದ ಬಾಸ್ಕೇಟ್ ಬಾಲ್ ಕೋರ್ಟ್ ನಲ್ಲಿ ಬೆಳಿಗ್ಗೆ 10ಕ್ಕೆ ಟೂರ್ನಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಧ್ಯಕ್ಷರಾದ ಕುಮಾರ್ ಬಂಗಾರಪ್ಪ ನೆರವೇರಿಸಲಿದ್ದು , ನಗರ ಶಾಸಕ ಡಾ.ಶಿವರಾಜ ಪ...