Posts

Image
  ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ:  ರಾಷ್ಟ್ರೀಯ  ವಿಜ್ಞಾನ ದಿನ ಆಚರಣೆ ಮತ್ತು ಉಪನ್ಯಾಸಮಾಲೆ: ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಕೊಡುಗೆ ಅಪಾರ - ಪ್ರೊ.ಎಂ.ವೆಂಕಟೇಶ್ವರಲು ಜಯ ಧ್ವಜ ನ್ಯೂಸ್ ,ರಾಯಚೂರು,ಮಾ.೧೦- ಪ್ರಾಚೀನ ಕಾಲದಿಂದಲೂ ನಮ್ಮ ದೇಶ ವಿಜ್ಞಾನ ಕ್ಷೇತ್ರದಲ್ಲಿ ಬಹಳ ಕೊಡುಗೆಗಳನ್ನು ಕೊಟ್ಟಿದೆ. ಖಗೋಳದಿಂದ ಹಿಡಿದು ಜ್ಯೋತಿಷ್ಯಶಾಸ್ತçದವರೆಗೂ ಅನೇಕ ರೀತಿಯಿಂದ ವಿಜ್ಞಾನ ಆವಿಷ್ಕಾರಗಳಾಗಿವೆ. ವಿಜ್ಞಾನ ಹೇಗೆ ಬೆಳೆಯಿತು ಎಂದರೆ ಗ್ರಹಿಕೆಯಿಂದ ಮಾತ್ರ ಬೆಳೆಯಿತು ಎಂದು ತುಮಕೂರಿನ ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಉದ್ಘಾಟಕ ನುಡಿಗಳನ್ನಾಡಿದರು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗಗಳ ವತಿಯಿಂದ ಮಂಗಳವಾರದಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನ ಅಂಗವಾಗಿ ವಿಶೇಷ ಉಪನ್ಯಾಸಮಾಲೆ ಕಾರ್ಯಕ್ರಮವನ್ನು ಡಾ.ಸಿ.ವಿ.ರಾಮನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನ ಒಂದು ಆಲೋಚನೆಯ ಸಾಮರ್ಥ್ಯವನ್ನು ಒಳಗೊಂಡಿದೆ. ಡಾ.ಸಿ.ವಿ.ರಾಮನ್‌ರ ಪ್ರಾಮಾಣಿಕತೆ, ಶಿಸ್ತು, ಶ್ರಮ ಇಂದಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಲಿಯಬೇಕು. ವಿಕ್ರಂ ಸಾರಾಬಾಯಿ, ಎಂ.ಎಸ್.ಸ್ವಾಮಿನಾಥನ್ ಇವರೆಲ್ಲರೂ ಪ್ರಸಿದ್ಧ ವಿಜ್ಞಾನಿಗಳು. ಯುವಕರು ಉತ್ತಮ ಆಲೋಚನೆಯಿಂದ ಮಾತ್ರ ಮುಂದೆಬರಲು ಸಾಧ್ಯ. ವಿದ್ಯಾರ್ಥಿಗಳಲ್ಲಿರ...
Image
  ಗೋ ರಕ್ಷಕ ವಿನಯ ಸಿಂಗ್ ಠಾಕೂರ್ ರವರಿಗೆ ಕರ್ನಾಟಕ ಸಾಧಕ ಸೇವಾ ರತ್ನ ಪ್ರಶಸ್ತಿಯು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.
Image
  ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ         ಪೂರ್ಣಗೊಳಿಸಿದ ಡಿಕೆ ಶಿವಕುಮಾರ್ :    ಶುಭಾಶಯ ಕೋರಿಕೆ .                                                                                              ಜಯ ಧ್ವಜ ನ್ಯೂಸ್ , ರಾಯಚೂರು, ಮಾ.10- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯದ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬೆಂಗಳೂರಿನ ಅವರ ನಿವಾಸದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ‌.ವಸಂತಕುಮಾರ, ಸಿಂದನೂರಿನ ಶಾಕಸರಾದ ಹಂಪನಗೌಡ ಬಾದರ್ಲಿಯವರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸವರಾಜ ಪಾಟೀಲ್ ಇಟಗಿಯವರು ಭೇಟಿಯಾಗಿ ಶುಭ ಕೋರಿದರು. ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯದಲ್ಲಿ ಅಭೂತಪೂರ್ವ ಜಯಸಾಧಿಸಿ ಸರಕಾರ ರಚಿಸಿದೆ, ಪಕ್ಷ ಸಂಘಟನೆಯಲ್ಲಿ ಶಿವಕುಮಾರ ತೋರಿಸಿದ ಉತ್ಸಾಹ, ಕಾರ್ಯಕರ್ತರನ್ನು ಸಜ್ಜುಗೊಳಿಸಿದ ಕಾರಣ ಹಿಂದಿನ ಬ...
Image
  ಬಾಗಲಕೋಟೆ ಉಪಚುನಾವಣೆ: ವಸಂತ ಕುಮಾರ್ ಹೆಗಲಿಗೆ ಚುನಾವಣೆ ಉಸ್ತುವಾರಿ ಸಮಿತಿ ಜವಾಬ್ದಾರಿ .                                                                                                ಜಯ ಧ್ವಜ ನ್ಯೂಸ್, ರಾಯಚೂರು, ಮಾ.9- ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದ್ದು.ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಎ.ವಸಂತ ಕುಮಾರ್ ರವರನ್ನು ಸಮಿತಿ ಸಂಚಾಲಕ ರನ್ನಾಗಿ ಮಾಡಿ ಅವರ ಹೆಗಲಿಗೆ ಸಮಿತಿ ಜವಾಬ್ದಾರಿ ನೀಡಲಾಗಿದೆ. ಸಮಿತಿಯಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರು,  ಸಚಿವರಾದ ಸತೀಶ ಜಾರಕಿಹೊಳಿ, ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಿವರಾಜ್ ತಂಗಡಗಿ, ಶರಣಬಸಪ್ಪ ದರ್ಶನಾಪೂರು, ಭೈರತಿ ಸುರೇಶ್,ರಹೀಮ್ ಖಾನ್, ಶಾಸಕರಾದ ಸಿ.ಎಸ್.ನಾಡಗೌಡ,  ವಿಜಯಾನಂದ ಕಾಶಪ್ಪನವರ, ಮಾಜಿ ಶಾಸಕ ರಾಜಶೇಖರ ಪಾಟೀಲ,  ವಿಧಾನಪರಿಷತ ಸದಸ್ಯರಾದ ಜಕ್ಕಪ್ಪನವರ್, ಬಸನಗೌಡ ಬಾದರ್ಲಿ, ಮಾಜಿ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಒಳಗೊಂಡ ಸ...
Image
  ನವೋದಯ ಶಿಕ್ಷಣ ಸಂಸ್ಥೆ: ಫಾರ್ಮಸಿ, ಇಂಜಿನಿಯರಿಂಗ್ ,ನರ್ಸಿಂಗ್ , ಬಿಎಡ್  ಪದವಿ ಪ್ರದಾನ ಸಮಾರಂಭ:                ಪದವಿ ಯೊಂದಿಗೆ ಕೌಶಲ್ಯತೆ ವೃದ್ಧಿಸಿಕೊಳ್ಳಿ- ಪ್ರೋ.ವೆಂಕಪ್ಪಯ್ಯ .ಆರ್. ದೇಸಾಯಿ                                                    ಜಯ ಧ್ವಜ ನ್ಯೂಸ್, ರಾಯಚೂರು, ಮಾ.7- ವಿದ್ಯಾರ್ಥಿಗಳು ಪದವಿ ಯೊಂದಿಗೆ ಕೌಶಲ್ಯವನ್ನು ಅಳವಡಿಸಿಕೊಂಡರೆ ವೃತ್ತಿಯಲ್ಲಿ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವೆಂದು ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ನಿರ್ದೇಶಕ ಪ್ರೋ.ವೆಂಕಪ್ಪಯ್ಯ .ಆರ್. ದೇಸಾಯಿ ಹೇಳಿದರು. ಅವರಿಂದು ನವೋದಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಎರಡನೆ ದಿನದ ಪದವಿ ಪ್ರದಾನ ಸಮಾರಂಭದಲ್ಲಿ ಇಂಜಿನಿಯರಿಂಗ್, ಫಾರ್ಮಸಿ, ನರ್ಸಿಂಗ್ ಹಾಗೂ ಇನ್ನಿತರರು ಪದವಿಧರರಿಗೆ ಪ್ರಮಾಣ ಪತ್ರ ಪ್ರದಾನ ಮಾಡಿ ಮಾತನಾಡಾದರು. ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಿದರೆ ಸಾಲದು ಬದಲಾಗಿ ಅಂಕಗಳೊಂದಿಗೆ ಕೌಶಲ್ಯತೆ ಸೃಜನಶೀಲತೆ ಅಳವಡಿಸಿಕೊಂಡರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜಯಗಳಿಸಲು ಹಾಗೂ ವೃತ್ತಿಯಲ್ಲಿ ಉನ್ನತ ಸಾಧನೆಗೈಯಲು ಸಾಧ್ಯವೆಂದರು. ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಎಲ್ಲೆಡ...
Image
  ಸ್ವಾಸ್ಥ್ಯ  ಭಾರತ, ಶ್ರೇಷ್ಠ ಭಾರತ, ಯುವ ಶುದ್ಧಿ ಅಭಿಯಾನ ಅಂಗವಾಗಿ ವಿಶೇಷ ಕಾರ್ಯಕ್ರಮ :         ಶ್ರೀ ಸುಬುಧೇಂದ್ರ ತೀರ್ಥರಿಂದ ವಾಕಥಾನ್‌ಗೆ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಮಾ.6- ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಸಂದೇಶದಡಿ ಮಾರ್ಚ 6ರಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನಡೆದ ಬೃಹತ್ ವಾಕಥಾನ್ ರಾಯಚೂರು ನಗರದಲ್ಲಿ ಹೊಸ ಸಂಚಲನ ಮೂಡಿಸಿತು. ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಕಥಾನದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಬೆಳ್ಳಂ ಬೆಳಗ್ಗೆಯೇ, ಶಿಕ್ಷಣ ಸಂಸ್ಥೆಗಳ ಬಸ್‌ಗಳನ್ನು ಏರಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಪೊಲೀಸ್ ಫರೇಡ್ ಮೈದಾನದತ್ತ ಆಗಮಿಸಿದರು. ಬೃಹತ್ ವಾಕಥಾನ್‌ದಲ್ಲಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನವೋದಯ ಶಿಕ್ಷಣ ಸಂಸ್ಥೆ, ಸೆಂಟ್ರಲ್ ಸ್ಕೂಲ್, ಕೆಪಿಎಸ್‌ವಿಎಸ್ ಆಯುರ್ವೇದ ವೈದ್ಯಕೀಯ ಕಾಲೇಜು, ಪೂರ್ಣಿಮಾ ಆಯುರ್ವೇದಿಕ್ ಕಾಲೇಜ್, ಶಿಲ್ಪಾ ಮೆಡಿಕೇರ್, ನಂದಿನಿ ಮೆಡಿಕಲ್ ಕಾಲೇಜ್, ನವೋದಯ ದಂತ್ ಕಾಲೇಜ್, ವಿಎಲ್ ಕಾಲೇಜ್ ಆಫ್ ಫಾರ್ಮಸಿ ಸೇರಿದಂತೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಅಂದಾಜು 5000 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇದೆ ವೇಳೆ, ಅಂಗಾಂಗ ಜಾಗೃತಿಯ ಅಭಿಯಾನವು ನಡೆಯಿತು. ಪೂಜ್ಯರ ಆಗಮನದಿಂದ ಬಲ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ...
Image
  ರಾಜ್ಯ ಬಜೆಟ್ : ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಂಪರ್ ಕೊಡುಗೆ; ಬಜೆಟ್ ಸ್ವಾಗತಿಸಿದ ಸಚಿವ ಎನ್.ಎಸ್. ಬೋಸರಾಜು ಜಯ ಧ್ವಜ ನ್ಯೂಸ್ , ರಾಯಚೂರು, ಮಾ.6- ಮಹಾನಗರ ಪಾಲಿಕೆಗೆ 200 ಕೋಟಿ ರೂ. ಅನುದಾನ ,ಐಐಐಟಿ  ರಾಯಚೂರಿನಲ್ಲಿ ಎಐ ಸೆಂಟರ್ ಆಫ್ ಎಕ್ಸಲೆನ್ಸ್  ಸೇರಿದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಭಾರಿ ಒತ್ತು ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದ್ದು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಅನ್ನು 'ಪ್ರಾದೇಶಿಕ ಅಭಿವೃದ್ಧಿಯ ದೂರದೃಷ್ಟಿಯ ನೀಲನಕ್ಷೆ' ಎಂದು  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ  ಎನ್.ಎಸ್. ಬೋಸರಾಜು ಅವರು ಬಣ್ಣನೆ ಮಾಡಿ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೃಹತ್ ಮೊತ್ತದ ಅನುದಾನ ಮೀಸಲಿಟ್ಟಿರುವ  ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಬಜೆಟ್ ರಾಯಚೂರು ಭಾಗದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಿದ್ದು, ನಗರೀಕರಣ, ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. "ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ, ನೂತನವಾಗಿ ಮೇಲ್ದರ್ಜೆಗೇರಿರುವ ರಾಯಚೂರು ಮಹಾನಗರ ಪಾಲಿಕೆಗೆ ಬರೋಬ್ಬರಿ 200 ಕೋಟಿ ರೂ. ಅನುದಾನ ಒದಗಿಸಿರುವುದು ಒಂದು ಐತಿಹಾಸಿಕ ಮೈಲಿಗಲ್ಲಾಗಿ...