Posts

Image
  ನವೋದಯ ಶಿಕ್ಷಣ ಸಂಸ್ಥೆ: ಫಾರ್ಮಸಿ, ಇಂಜಿನಿಯರಿಂಗ್ ,ನರ್ಸಿಂಗ್ , ಬಿಎಡ್  ಪದವಿ ಪ್ರದಾನ ಸಮಾರಂಭ:                ಪದವಿ ಯೊಂದಿಗೆ ಕೌಶಲ್ಯತೆ ವೃದ್ಧಿಸಿಕೊಳ್ಳಿ- ಪ್ರೋ.ವೆಂಕಪ್ಪಯ್ಯ .ಆರ್. ದೇಸಾಯಿ                                                    ಜಯ ಧ್ವಜ ನ್ಯೂಸ್, ರಾಯಚೂರು, ಮಾ.7- ವಿದ್ಯಾರ್ಥಿಗಳು ಪದವಿ ಯೊಂದಿಗೆ ಕೌಶಲ್ಯವನ್ನು ಅಳವಡಿಸಿಕೊಂಡರೆ ವೃತ್ತಿಯಲ್ಲಿ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವೆಂದು ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ನಿರ್ದೇಶಕ ಪ್ರೋ.ವೆಂಕಪ್ಪಯ್ಯ .ಆರ್. ದೇಸಾಯಿ ಹೇಳಿದರು. ಅವರಿಂದು ನವೋದಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಎರಡನೆ ದಿನದ ಪದವಿ ಪ್ರದಾನ ಸಮಾರಂಭದಲ್ಲಿ ಇಂಜಿನಿಯರಿಂಗ್, ಫಾರ್ಮಸಿ, ನರ್ಸಿಂಗ್ ಹಾಗೂ ಇನ್ನಿತರರು ಪದವಿಧರರಿಗೆ ಪ್ರಮಾಣ ಪತ್ರ ಪ್ರದಾನ ಮಾಡಿ ಮಾತನಾಡಾದರು. ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಿದರೆ ಸಾಲದು ಬದಲಾಗಿ ಅಂಕಗಳೊಂದಿಗೆ ಕೌಶಲ್ಯತೆ ಸೃಜನಶೀಲತೆ ಅಳವಡಿಸಿಕೊಂಡರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜಯಗಳಿಸಲು ಹಾಗೂ ವೃತ್ತಿಯಲ್ಲಿ ಉನ್ನತ ಸಾಧನೆಗೈಯಲು ಸಾಧ್ಯವೆಂದರು. ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಎಲ್ಲೆಡ...
Image
  ಸ್ವಾಸ್ಥ್ಯ  ಭಾರತ, ಶ್ರೇಷ್ಠ ಭಾರತ, ಯುವ ಶುದ್ಧಿ ಅಭಿಯಾನ ಅಂಗವಾಗಿ ವಿಶೇಷ ಕಾರ್ಯಕ್ರಮ :         ಶ್ರೀ ಸುಬುಧೇಂದ್ರ ತೀರ್ಥರಿಂದ ವಾಕಥಾನ್‌ಗೆ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಮಾ.6- ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಸಂದೇಶದಡಿ ಮಾರ್ಚ 6ರಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನಡೆದ ಬೃಹತ್ ವಾಕಥಾನ್ ರಾಯಚೂರು ನಗರದಲ್ಲಿ ಹೊಸ ಸಂಚಲನ ಮೂಡಿಸಿತು. ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಕಥಾನದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಬೆಳ್ಳಂ ಬೆಳಗ್ಗೆಯೇ, ಶಿಕ್ಷಣ ಸಂಸ್ಥೆಗಳ ಬಸ್‌ಗಳನ್ನು ಏರಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಪೊಲೀಸ್ ಫರೇಡ್ ಮೈದಾನದತ್ತ ಆಗಮಿಸಿದರು. ಬೃಹತ್ ವಾಕಥಾನ್‌ದಲ್ಲಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನವೋದಯ ಶಿಕ್ಷಣ ಸಂಸ್ಥೆ, ಸೆಂಟ್ರಲ್ ಸ್ಕೂಲ್, ಕೆಪಿಎಸ್‌ವಿಎಸ್ ಆಯುರ್ವೇದ ವೈದ್ಯಕೀಯ ಕಾಲೇಜು, ಪೂರ್ಣಿಮಾ ಆಯುರ್ವೇದಿಕ್ ಕಾಲೇಜ್, ಶಿಲ್ಪಾ ಮೆಡಿಕೇರ್, ನಂದಿನಿ ಮೆಡಿಕಲ್ ಕಾಲೇಜ್, ನವೋದಯ ದಂತ್ ಕಾಲೇಜ್, ವಿಎಲ್ ಕಾಲೇಜ್ ಆಫ್ ಫಾರ್ಮಸಿ ಸೇರಿದಂತೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಅಂದಾಜು 5000 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇದೆ ವೇಳೆ, ಅಂಗಾಂಗ ಜಾಗೃತಿಯ ಅಭಿಯಾನವು ನಡೆಯಿತು. ಪೂಜ್ಯರ ಆಗಮನದಿಂದ ಬಲ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ...
Image
  ರಾಜ್ಯ ಬಜೆಟ್ : ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಂಪರ್ ಕೊಡುಗೆ; ಬಜೆಟ್ ಸ್ವಾಗತಿಸಿದ ಸಚಿವ ಎನ್.ಎಸ್. ಬೋಸರಾಜು ಜಯ ಧ್ವಜ ನ್ಯೂಸ್ , ರಾಯಚೂರು, ಮಾ.6- ಮಹಾನಗರ ಪಾಲಿಕೆಗೆ 200 ಕೋಟಿ ರೂ. ಅನುದಾನ ,ಐಐಐಟಿ  ರಾಯಚೂರಿನಲ್ಲಿ ಎಐ ಸೆಂಟರ್ ಆಫ್ ಎಕ್ಸಲೆನ್ಸ್  ಸೇರಿದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಭಾರಿ ಒತ್ತು ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದ್ದು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಅನ್ನು 'ಪ್ರಾದೇಶಿಕ ಅಭಿವೃದ್ಧಿಯ ದೂರದೃಷ್ಟಿಯ ನೀಲನಕ್ಷೆ' ಎಂದು  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ  ಎನ್.ಎಸ್. ಬೋಸರಾಜು ಅವರು ಬಣ್ಣನೆ ಮಾಡಿ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೃಹತ್ ಮೊತ್ತದ ಅನುದಾನ ಮೀಸಲಿಟ್ಟಿರುವ  ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಬಜೆಟ್ ರಾಯಚೂರು ಭಾಗದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಿದ್ದು, ನಗರೀಕರಣ, ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. "ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ, ನೂತನವಾಗಿ ಮೇಲ್ದರ್ಜೆಗೇರಿರುವ ರಾಯಚೂರು ಮಹಾನಗರ ಪಾಲಿಕೆಗೆ ಬರೋಬ್ಬರಿ 200 ಕೋಟಿ ರೂ. ಅನುದಾನ ಒದಗಿಸಿರುವುದು ಒಂದು ಐತಿಹಾಸಿಕ ಮೈಲಿಗಲ್ಲಾಗಿ...
Image
ಕೌಶಲ್ಯ ತರಬೇತಿ, ಶಿಕ್ಷಣ ಗುಣಮಟ್ಟ, ಹೆಚ್ಚಳಕ್ಕೆ "ಕರ್ನಾಟಕ-ಕ್ವೆಸ್ಟ್‌"ಗೆ ಆದ್ಯತೆ ನೀಡಿದ ಬಜೆಟ್‌: ರಾಜ್ಯದ ಯುವ ಸಮೂಹಕ್ಕೆ ಕೌಶಲ್ಯ ತರಬೇತಿಗೆ ಆದ್ಯತೆ - ಡಾ. ಶರಣಪ್ರಕಾಶ್‌ ಪಾಟೀಲ್‌ ಜಯ ಧ್ವಜ ನ್ಯೂಸ್ , ರಾಯಚೂರು, ಮಾ. 6-   ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು,  ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಬಜೆಟ್ ನಲ್ಲಿ ಕೆ-ಕ್ವೆಸ್ಟ್‌ ಯೋಜನೆ ಘೋಷಿಸಿರುವುದು ಗಮನಾರ್ಹ  ಸಂಗತಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡಿಸಿದ ನಂತರ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಬಜೆಟ್ ನಲ್ಲಿ ಯುವ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಇದು ಸ್ವಾಗತಾರ್ಹ ಕ್ರಮ ಎಂದರು. ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ವೆಚ್ಚದಲ್ಲಿ ಐದು ವರ್ಷಗಳ ಅವಧಿಯ  ಯೋಜನೆಯನ್ನು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರಿಂದ ಗುಣಮಟ್ಟದ ಹಾಗೂ ಕೌಶಲ್ಯಭರಿತ ತರಬೇತಿ, ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ನಮ್ಮ ನಾಡಿನ ಶಕ್ತಿ ಅಡಗಿರುವುದು ಯುವ ಶಕ್ತಿಯಲ್ಲಿ. ಯುವ ಸಮುದಾಯಕ್ಕೆ "ಅವಕಾಶ"ಗಳ ವೇದಿಕೆಯನ್ನು ಕಲ್ಪಿಸಲು ಈ ಬಾರಿಯ...
Image
  ನವೋದಯ ಶಿಕ್ಷಣ ಸಂಸ್ಥೆ ಪದವಿ ಪ್ರದಾನ ಸಮಾರಂಭ:          ವೈದ್ಯರಲ್ಲಿ ಮಾನವೀಯತೆ ಮುಖ್ಯ- ಕುಲಪತಿ ಡಾ.ಭಗವಾನ್ ಬಿ.ಸಿ.                                                     ಜಯ ಧ್ವಜ ನ್ಯೂಸ್, ರಾಯಚೂರು, ಮಾ.6- ವೈದ್ಯರಲ್ಲಿ ಮಾನವೀಯತೆ ಮುಖ್ಯವೆಂದು ರಾಜೀವಗಾಂಧಿ  ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಭಗವಾನ್ ಬಿ.ಸಿ. ಅಭಿಪ್ರಾಯ ಪಟ್ಟರು. ಅವರಿಂದು ನಗರದ ನವೋದಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಫಿಸಿಯೋಥೆರಪಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಧರರಿಗೆ ಪದವಿ ಪ್ರಮಾಣಪತ್ರ ಪ್ರದಾನ ಮಾಡಿ ಮಾತನಾಡಿದರು. ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದ ವೃತ್ತಿ ಜೀವನದೆಡೆ ಸಾಗುತ್ತಿದ್ದೀರಿ ನೀವು ನಿಮ್ಮ ವೈದ್ಯ ವೃತ್ತಿಯಲ್ಲಿ ಕೇವಲ ಲಾಭ ಗಳಿಕೆಗೆ ಮನ್ನಣೆ ನೀಡದೆ ಸೇವಾ ಮನೋಭಾವದಿಂದ ಬಡ ರೋಗಿಗಳ ಆರೋಗ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು. ನಮ್ಮ ದೇಶ ಯುವಕರಿಂದ ಕೂಡಿದ ದೇಶ ಶೇ.40ರಷ್ಟು ಯುವಕರಿದ್ದಾರೆ ಎಂದ ಅವರು ಅಬ್ದುಲ್ ಕಲಾಂರವರ ನುಡಿಯಂತೆ ಮಾನವೀಯತೆಯನ್ನು ಮೈಗೊಡಿಸಿಕೊಳ್ಳಬೇಕೆಂದರು.  ಇಂದಿನ ಯುವಕರು ಮಾದಕ ವಸ್ತುಗಳಿಗೆ ಮಾರು ಹ...
Image
  ಮಾ.5 ರಿಂದ 7ರವರೆಗೆ ರಿಗೇಲ್-26 ಕಾರ್ಯಕ್ರಮ:     ನವೋದಯ ಶಿಕ್ಷಣ ಸಂಸ್ಥೆ ಹಲವು ಕಾರ್ಯಗಳಲ್ಲಿ ಮೊದಲಿಗ - ಎಸ್.ಆರ್.ರೆಡ್ಡಿ .                                                                                                      ಜಯ ಧ್ವಜ ನ್ಯೂಸ್ ರಾಯಚೂರು, ಮಾ.4- ಪ್ರತಿ ವರ್ಷದಂತೆ ಈ ವರ್ಷವು ಮಾ.5 ರಿಂದ 7 ರವರೆಗೆ ರಿಗೇಲ್-26 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಎಸ್.ಆರ್.ರೆಡ್ಡಿ ಹೇಳಿದರು. ಅವರಿಂದು ನವೋದಯ ವೈದ್ಯಕೀಯ ಮಹಾವಿದ್ಯಾಲಯದ ಸೆಂಟ್ರಲ್ ಲೈಬ್ರರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನವೋದಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಸೊಬಗಿನ ರಿಗೇಲ್-26 ಕಾರ್ಯಕ್ರಮ ಮಾ.5 ರಂದು ಸಂಜೆ 6.30ಕ್ಕೆ ನವೋದಯ ಮೈದಾನದಲ್ಲಿ ಕೃಷಿ ವಿವಿ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಉದ್ಘಾಟಿಸಲಿದ್ದಾರೆ ಎಂದರು. ಮಾ.6ರಂದು ಬೆಳಿಗ್ಗೆ 10ಕ್ಕೆ ನವೋದಯ ಕಾಲೇಜಿನ ಸಭಾಂಗಣದಲ್ಲಿ ನಡೆಯುವ...
Image
ಗಡಿ ಗ್ರಾಮಗಳ ಸಂಪರ್ಕ ರಸ್ತೆ ದುರಸ್ತಿಗೆ  ಆಗ್ರಹಿಸಿ ರಸ್ತೆ ತಡೆ ಪ್ರತಿಭಟನೆ                                                                                            ಜಯ ಧ್ವಜ ನ್ಯೂಸ್  , ರಾಯಚೂರು , ಮಾ.2-  ಗಡಿ ಭಾಗವಾದ ಕೊರ್ತ ಕುಂದಾ , ಡಿ ರಾಂಪುರ ಇನ್ನಿತರ ಗ್ರಾಮಗಳಿಗೆ  ರಾಯಚೂರ್ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಮಾಡಬೇಕು  ಹತ್ತು ವರ್ಷಗಳಿಂದ ವಾರ್ಷಿಕ ನಿರ್ವಹಣೆ ಮಾಡದೇ ನಿರ್ಲಕ್ಷ ತೋರಿದ ಪಿಡಬ್ಲ್ಯೂ ಅಧಿಕಾರಿಗಳ ಮೇಲೆ ಕ್ರಮ ಕೇಳಬೇಕು ಎಂದು  ಸಗಮ್ ಕುಂಟ ಗ್ರಾಮದಲ್ಲಿ ಮುಖ್ಯ ರಸ್ತೆಯನ್ನು ತಡೆದು ಕಲ್ಯಾಣ ಕರ್ನಾಟಕ ರೈತ ಸಂಘದಿಂದ ರಸ್ತೆ ತಡೆ ಹೋರಾಟ ಹಮ್ಮಿಕೊಳ್ಳಲಾಯಿತು.  ಸಗಮ್ ಕುಂಟ ಯರಗುಂಟ ಶಾಖವಾದಿ ಪಲ್ಕಂ ದೊಡ್ಡಿ ಪೋತುಗಲ್ ಮೂಲಕಾ ರಾಯಚೂರಿಗೆ ಬರುವ ಮಾರ್ಗವು ಸಂಪೂರ್ಣವಾಗಿ ಹಾಳಾಗಿದ್ದು ರೈತರು ಓಡಾಡುವುದಕ್ಕೆ ಕಷ್ಟವಾಗಿದೆ ತಗ್ಗು ಗುಂಡಿಗಳು ನಿರ್ಮಾಣವಾಗಿ ಸಾವನ್ನು ಕೈಬೀಸಿ ಕರೆಯುತ್ತಿದೆ,ಕೃಷ್ಣಾ ನದಿಯ ಬದಿಯಲ್ಲಿರುವ ಹ...