ಅಂತರರಾಷ್ಟ್ರೀಯ ಕಾಮಿಕ್ಸ್ ಸ್ಪರ್ಧೆಯಲ್ಲಿ ಜಿಲ್ಲೆಯ ಸಿರಿ ಪರವತಿನೇನಿಗೆ ಗೌರವ ಪ್ರಶಸ್ತಿ ಜಯ ಧ್ವಜ ನ್ಯೂಸ್ ,ರಾಯಚೂರು,ಮೇ.30- ಜಿಲ್ಲೆಯ ಅಮರೇಶ್ವರ ಕ್ಯಾಂಪ್ ನಿವಾಸಿ ವಿನೋದಕುಮಾರ ಅವರ ಪುತ್ರಿ ಸಿರಿ ಪರವತಿನೇನಿ ಅವರು ಅಂತರರಾಷ್ಟ್ರೀಯ ಮಟ್ಟದ ನಾಲ್ಕನೇ ಎಫ್ಪಿಜಿ ವಿಶ್ವವಿದ್ಯಾಲಯಗಳ ಎಸ್ಡಿಜಿಗಳ ಇಂಗ್ಲಿಷ್ ನಾಲ್ಕು-ಫ್ರೇಮ್ ಕಾಮಿಕ್ಸ್ ಸ್ಕ್ರಿಪ್ಟ್ ಸ್ಪರ್ಧೆ-2026ರಲ್ಲಿ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಡಿಸೈನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಿರಿ, "ಜಸ್ಟ್ ಒನ್ ಚಾಯಿಸ್" ಎಂಬ ಶೀರ್ಷಿಕೆಯ ಕಾಮಿಕ್ಸ್ ಕೃತಿಯ ಮೂಲಕ ಈ ಸಾಧನೆ ಮಾಡಿದ್ದಾರೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಒಂದಾದ ಎಸ್ಡಿಜಿ-12 (ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ) ವಿಷಯವನ್ನು ಆಧರಿಸಿ ರಚಿಸಲಾದ ಈ ಕಾಮಿಕ್ಸ್, ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳು ಹಾಗೂ ಪರಿಸರ ಸ್ನೇಹಿ ಆಯ್ಕೆಗಳ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿದೆ. ತೈವಾನ್ನ ಮಿಂಗ್ ಚಿ ತಂತ್ರಜ್ಞಾನ ವಿಶ್ವವಿದ್ಯಾಲಯ ಹಾಗೂ ಚಾಂಗ್ ಗುಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ಜಂಟಿಯಾಗಿ ಆಯೋಜಿಸಿದ್ದ ಈ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಸಿರಿಯವರ ಸೃಜನಶೀಲತೆ, ಸಾಮಾಜಿಕ ಕಾಳಜಿ ಹಾಗೂ ಪರಿ...