ಉಪಚುನಾವಣೆ ಗೆಲುವು: ವಸಂತಕುಮಾರ್ ರಿಂದ ಸಿಎಂ , ಡಿಸಿಎಂ ಭೇಟಿ ಜಯ ಧ್ವಜ ನ್ಯೂಸ್ , ರಾಯಚೂರು, ಮೇ.5 - ಬಾಗಲಕೋಟ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯನವರನ್ನು ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಶುಭ ಕೋರಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಎರಡೂ ವಿಧಾನಸಭಾ ಕ್ಷೇತ್ರದ ಜನತೆ ಬೆಂಬಲಿಸಿದ್ದು ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ನೀಡಿದ ಬೆಂಬಲವಾಗಿದೆ ಹಾಗೂ ನಮ್ಮ ಸರಕಾರದ ಅಭಿವೃದ್ಧಿ ಪರ ಚಿಂತನೆಗೆ ಜನತೆಯ ಸಹಕಾರವಾಗಿದೆ ಎಂದು ಹೇಳಲಾಯಿತು. ಈ ಉಪಚುನಾವಣೆಗಳ ಪಲಿತಾಂಶವು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಆರ್.ಬಿ.ತಿಮ್ಮಾಪುರ, ಹಿರಿಯ ಶಾಸಕ ...