ಮಾಜಿ ಶಾಸಕ ಸೈಯದ್ ಯಾಸೀನ್ ಅವರ ನಿಧನಕ್ಕೆ ಗೃಹ ಸಚಿವ ಪ್ರಿಯಾಂಕ ಖರ್ಗೆ , ಮಾಜಿ ಸಚಿವ ಎನ್.ಎಸ್. ಬೋಸರಾಜು ಶ್ರದ್ಧಾಂಜಲಿ: ಸೈಯದ್ ಯಾಸೀನ್ ಅವರ ಕುಟುಂಬಕ್ಕೆ ಹಾಗೂ ಬೆಂಬಲಿಗರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ- ಎನ್ಎಸ್ ಬೋಸರಾಜು ಜಯ ಧ್ವಜ ನ್ಯೂಸ್ , ರಾಯಚೂರು, ಜು.12- ಮಾಜಿ ಶಾಸಕ ಸೈಯದ್ ಯಾಸೀನ್ ಅವರ ನಿಧನಕ್ಕೆ ಮಾಜಿ ಸಚಿವ, ಹಾಲಿ ವಿಧಾನಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು ಅವರು ಗೃಹ ಸಚಿವ ಪ್ರಿಯಾಂಕ ಖರ್ಗೆ, ಲೋಕಸಭಾ ಸದಸ್ಯರಾದ ಜಿ ಕುಮಾರ ನಾಯಕ ಅವರೊಂದಿಗೆ ಭೇಟಿ ನೀಡಿ ತೀವ್ರ ಸಂತಾಪ ವ್ಯಕ್ತಪಡಿಸಿ ಅಂತಿಮ ದರ್ಶನ ಪಡೆದರು. ಸೈಯದ್ ಯಾಸೀನ್ ಅವರ ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು. ಬಳಿಕ ಯಾಸೀನ್ ಅವರ ಕುಟುಂಬದ ಸದಸ್ಯರಿಗೆ, ಅವರ ಅಭಿಮಾನಿಗಳಿಗೆ ಸಾಂತ್ವನ ಹೇಳಿ, ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದರು. ಸೈಯದ್ ಯಾಸೀನ್ ಅವರು ಜನಪರ ನಾಯಕನಾಗಿ ಸಾರ್ವಜನಿಕ ಜೀವನದಲ್ಲಿ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿದೆ. ಅವರ ಅಗಲಿಕೆಯು ಜಿಲ್ಲೆಯ ರಾಜಕೀಯ ಹಾಗೂ ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಯವಂತರಾವ್ ಪತಂಗೆ, ಚಂದ್ರಶೇಖರ್ ನಾಯಕ್ ಸೇರಿ ಅನೇಕರು ಉಪಸ್ತಿತರಿದ್ದರು.