ಶಿಕ್ಷಕರು ಸಾಧನೆಗೆ ಮಾರ್ಗದರ್ಶಕರು -ಸಚಿವ ಡಾ. ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು.ಸೆ. 5- ಜಗತ್ತಿನಲ್ಲಿ ನನ್ನನ್ನು ರಾಷ್ಟ್ರಪತಿಯಾಗಿ ನೆನಪಿಸಿಕೊಳ್ಳುವುದಕ್ಕಿಂತ, ಒಬ್ಬ ಶಿಕ್ಷಕನಾಗಿ ನೆನಪಿಸಿಕೊಳ್ಳುವುದು ಅತ್ಯಂತ ಸೂಕ್ತ” ಎಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮಹತ್ವದ ಸಂದೇಶವನ್ನು ನೀಡಿದ್ದಾರೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು. ಅವರು ಇಂದು ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆ ರಾಯಚೂರು ಇವರ ಸಹಯೋಗದಲ್ಲಿ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 139 ನೇ ಜನ್ಮದಿನೋತ್ಸವ ಹಾಗೂ ರಾಯಚೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭ 2026-27 ನೇ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವೈದ್ಯರು ಅನೇಕ ರೋಗಿಗಳಿಗೆ ಚಿಕಿತ್ಸೆ ನೀಡಬಹುದು, ಎಂಜಿನಿಯರ್ಗಳು ಹಲವು ಸೇತುವೆ ಮತ್ತು ಕಟ್ಟಡಗಳನ್ನು ನಿರ್ಮಿಸಬಹುದು, ವಕೀಲರು ಅನೇಕ ಸಮಸ್ಯೆಗಳನ್ನು ಬಗೆಹರಿಸಬಹುದು, ವಿಜ್ಞಾನಿಗಳು ಹೊಸ ಆವಿಷ್ಕಾರಗಳನ್ನು ಮಾಡಬಹುದು. ಆದರೆ ಇವರೆಲ್ಲರ ಜೀವನದಲ್ಲೂ ಅವರನ್ನು ಮುನ್ನಡೆಸಿದ ಒಬ್ಬ ಶಿಕ್ಷಕ ಇದ್ದೇ ಇರುತ್ತಾರೆ. ...