ಪಾದಯಾತ್ರೆ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ-ರಝಾಕ ಉಸ್ತಾದ್ ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.3- ಜಿಲ್ಲೆಯ ಲಿಂಗಸ್ಗೂರು ದಿಂದ ಬಳ್ಳಾರಿಯವರೆಗೆ ಬಿಜೆಪಿ ನಡಸುತ್ತಿರುವ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿದೆ, ವಾಲ್ಮೀಕಿ ನಿಗಮದ 184 ಕೋಟಿಯಲ್ಲಿ 179 ಕೋಟಿ ಹಣ ಪ್ರಕರಣ ದಾಖಲಾದ ಸಂದರ್ಭದಲ್ಲಿಯೇ ಸರಕಾರಕ್ಕೆ ವಾಪಸ್ ಬಂದಿದೆ, ಪ್ರಕರಣ ತನಿಖೆಯ ಹಂತದಲ್ಲಿದೆ, ಯಾರು ತಪ್ಪು ಮಾಡಿದ್ದಾರೆ ತನಿಖೆಯ ನಂತರ ಶಿಕ್ಷೆಯಾಗುತ್ತದೆ, ಅದರಲ್ಲಿ ಕೇಂದ್ರ ಸರಕಾರದ ಬ್ಯಾಂಕ್ ಸಹ ಭಾಗಿಯಾಗಿದೆ, ಸಚಿವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ, ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಎಂದು ಕೆಪಿಸಿಸಿ ಮಾದ್ಯಮ ವಿಭಾಗ ರಾಜ್ಯ ವಕ್ತಾರ ಡಾ.ರಝಾಕ ಉಸ್ತಾದ ದೂರಿದ್ದಾರೆ ರಾಜ್ಯದಲ್ಲಿ ಭೀಕರ ಬರಗಾಲ ಇದೆ, ರೈತರು ಸಂಕಷ್ಟದಲ್ಲಿದ್ದಾರೆ, ರೈತರಿಗೆ ಪರಿಹಾರ ನೀಡಲು ಕೇಂದ್ರ ಸರಕಾರ ರಾಷ್ಟ್ರೀಯ ತುರ್ತು ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಲು ಹೋರಾಟ ಮಾಡಲಿ ಮತ್ತು ಬಿಜೆಪಿ ಜನಪರವಾಗಿ ಇದ್ದರೆ ಬರಗಾಲ ಪರಿಹಾರ ವಿತರಣೆಗೆ ಪಾದಯಾತ್ರೆ ಮಾಡಲಿ, ಅದು ಬಿಟ್ಟು ಜನತೆ ಸಂಕಷ್ಟದಲ್ಲಿ ಇದ್ದಾಗ...