ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಭರದ ಸಿದ್ಧತೆ : ಸಾರ್ವಜನಿಕರು ಉತ್ಸಾಹ ದಿಂದ ಪಾಲ್ಗೊಳ್ಳಿ- ನಿತೀಶ್.ಕೆ. ಜಯ ಧ್ವಜ ನ್ಯೂಸ್ , ರಾಯಚೂರು ,ಫೆ.3- ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಳುವಂತೆ ಜಿಲ್ಲಾಧಿಕಾರಿ ನಿತೀಶ್. ಕೆ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿದ್ಧತೆ ಕಾರ್ಯ ಕುರಿತು ವಿವರಿಸಲು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಫೆ.5,6,7 ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಈಗಾಗಲೆ ಸಿದ್ಧತೆ ಭರದಿಂದ ನಡೆದಿದ್ದು ಕಾರ್ಯಕ್ರ...