ವಂದೇ ಮಾತರಂ ಗೀತೆಗೆ ಅಗೌರವ ಖಂಡಿಸಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಜಯ ಧ್ವಜ ನ್ಯೂಸ್ ,ರಾಯಚೂರು,ಆ.16- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ “ವಂದೇ ಮಾತರಂ” ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾ ರಾಯಚೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭಾನುವಾರ ಸಂಜೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಎನ್. ವಿನಾಯಕ್ ರಾವ್ ಅವರು ಮಾತನಾಡಿ “ವಂದೇ ಮಾತರಂ ಕೇವಲ ಗೀತೆಯಲ್ಲ. ಅದು ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸ, ದೇಶಭಕ್ತಿ ಹಾಗೂ ರಾಷ್ಟ್ರೀಯ ಭಾವನೆಯೊಂದಿಗೆ ಬೆಸೆದುಕೊಂಡಿರುವ ಮಹತ್ವದ ರಾಷ್ಟ್ರಗೀತೆ. ಇಂತಹ ಗೀತೆಗೆ ಯಾವುದೇ ರೀತಿಯ ಅಗೌರವ ತೋರುವುದು ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ವಿಡಿಯೋ ಹಾಗೂ ಈ ಕುರಿತು ಪ್ರಕಟವಾದ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿದ ಯುವ ಮೋರ್ಚಾ ಮುಖಂಡರು, ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಹೇಳಿದರು. “ವಂದೇ ಮಾತರಂ”ಗೆ ಗೌರವ ನೀಡುವ ವಿಚಾರದಲ್ಲಿ ಯಾವುದೇ ರಾಜಕೀಯ ಭೇದಭಾವ ಇರಬ...