Posts

Image
ಆ.11ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಜಯ ಧ್ವಜ ನ್ಯೂಸ್ ,ರಾಯಚೂರು, ಆ.8- ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಗಸ್ಟ್ 11ರ ಮಧ್ಯಾಹ್ನ 3.30ಗಂಟೆಗೆ ಕಾಡಾ ಟಿ.ಬಿ.ಪಿ. ಮುನಿರಾಬಾದ್ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದೆ. ಸಭೆಯಲ್ಲಿ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಕರ್ನಾಟಕ ಸರ್ಕಾರದ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿಯ ಸಭಾಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಲಿದ್ದು, ಈ ಭಾಗದ ಸಚಿವರುಗಳು, ಲೋಕಸಭಾ ಸದಸ್ಯರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು, ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ: ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಅ.8-  ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಬರ  ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಕರ್ನಾಟಕ ಸರ್ಕಾರದ ನೂತನ ಸಚಿವರಾದಡಾ.ಅಜಯ್ ಧರಂ ಸಿಂಗ್ ಅವರು ಹೇಳಿದರು. ಇಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸ ಅವರು ಮಾತನಾಡಿದರು. ಮುಖ್ಯಮಂತ್ರಿಗಳು  ಹಾಗೂ ಉಪ‌ ಮುಖ್ಯಮಂತ್ರಿಗಳ ಸೂಚನೆಯಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಪುಟ ಸಭೆಯ ತೀರ್ಮಾನ ಮತ್ತು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸಲಾಗುತ್ತ...
Image
  ನಾಳೆ ನಗರದಲ್ಲಿ  ಶ್ರೀಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ತಪ್ತ ಮುದ್ರಾಧಾರಣೆ ಜಯ ಧ್ವಜ ನ್ಯೂಸ್, ರಾಯಚೂರು, ಆ.8-  ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಆ.9 ರವಿವಾರ ಬೆಳಿಗ್ಗೆ 10 ಘಂಟೆಗೆ ರಾಯಚೂರು ನಗರದ ಜವಾಹರ್ ನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಚಾತುರ್ಮಾಸ್ಯದ ಅಂಗವಾಗಿ ತಪ್ತ ಮುದ್ರಾ ಧಾರಣೆ ಮಾಡಲಿದ್ದಾರೆ. ಶ್ರೀಮಠದ ಶಿಷ್ಯರು ಹಾಗೂ ಭಕ್ತಾದಿಗಳು ಆಗಮಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ  ವಿನಂತಿಸಲಾಗಿದೆ.
Image
ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರಿದ ಬರ ಅಧ್ಯಯನ ಪ್ರವಾಸ: ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೆ ಸೂಕ್ತ ಪರಿಹಾರ- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ,ಅ. 8 -  ರಾಯಚೂರು ಜಿಲ್ಲೆಯಲ್ಲಿ ಬರ ಅಧ್ಯಯನ ಆರಂಭಿಸಿರುವ ಕರ್ನಾಟಕ ಸರ್ಕಾರದ ನೂತನ ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು ಎರಡನೇ ದಿನವೂ ಜಿಲ್ಲೆಯ ವಿವಿಧ   ತಾಲ್ಲೂಕುಗಳಲ್ಲಿ ಬರ ಪರಿಶೀಲನೆ ನಡೆಸುವಲ್ಲಿ ನಿರತರಾದರು. ಪೋತ್ನಾಳ ಗ್ರಾಮದ ಜಮೀನಿನ ಪರಿಶೀಲನೆ ನಂತರ  ಮಾತನಾಡಿದ ಅವರು ರಾಯಚೂರು ಜಿಲ್ಲೆಯಲ್ಲಿ ಮಳೆಯ ಅಭಾವ ಹಾಗೂ ಕೃಷಿ ಬಿಕ್ಕಟ್ಟಿನಿಂದಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ವಿವಿಧ ಪ್ರದೇಶಗಳಿಗೆ ಜನಪ್ರತಿನಿಧಿಗಳ ಹಾಗೂ ನಾಯಕರ ತಂಡ ಭೇಟಿ ನೀಡಿ, ನೇರವಾಗಿ ರೈತರನ್ನು ಭೇಟಿಯಾಗಿ ಅವರ ಕುಂದುಕೊರತೆಗಳನ್ನು ಆಲಿಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಕೃಷಿಯ ಸ್ಥಿತಿ ಆತಂಕಕಾರಿಯಾಗಿದೆ. ಪ್ರತಿ ವರ್ಷ ಕನಿಷ್ಠ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 12,000 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಇದರಲ್ಲಿ ಸುಮಾರು 4,000 ಹೆಕ್ಟೇರ್ ಹತ್ತಿ ಹಾಗೂ 7,000 ಹೆಕ್ಟೇರ್ ಸೂರ್ಯಕಾಂತಿ ಬೆಳೆ ಸೇರಿದೆ ಎಂದರು. ವಾಡಿಕೆಯಂತೆ ನಡೆಯಬೇಕಿದ್ದ 1 ಲಕ್ಷ ಹೆಕ್ಟೇ...
Image
  ಸ್ವಸಹಾಯ ಸಂಘಗಳಿಂದ ಜೀವನ ಸುಧಾರಣೆ -ಪಟಗಾರ್ .                                          ಜಯ ಧ್ವಜ ನ್ಯೂಸ್, ರಾಯಚೂರ,ಆ.8 -                                      ನಗರದ  ಎಲ್  ಬಿ ಎಸ್ ನಗರ ವಲಯದಿಂದ ನಾಲ್ಕು ಸಂಘಗಳ ವಾರ್ಷಿಕೋತ್ಸವ   ಕಾರ್ಯಕ್ರಮವನ್ನು  ಜಿಲ್ಲಾ ನಿರ್ದೇಶಕರಾದ ರಾಘವೇಂದ್ರ ಪಟಗಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಯೋಜನೆಯ ಮಹತ್ವ ಹಾಗೂ ಸ್ವಸಹಾಯ ಸಂಘಗಳ ಪರಿಕಲ್ಪನೆಯ ಬಗ್ಗೆ  ಸಂಘಗಳು ವಾರದ ಸಭೆಯ ಬಗ್ಗೆ ಹಾಗೂ ದಾಖಲಾತಿಗಳ ಮಾಹಿತಿ ನೀಡಿದರು ಹಾಗೂ  ಈ ಸಂಸ್ಥೆಯಿಂದ ಅನೇಕ ಜನರು ಸಾವಲಂಬಿಯಾಗಿ ಬದುಕುತ್ತಿದ್ದಾರೆ. ಇಂದಿನ  ಕಾಲದಲ್ಲಿ ಮಹಿಳೆಯರು ನಾಲ್ಕು ಗೋಡೆಗಳ ಮಧ್ಯೆ ಬದುಕುತ್ತಿದ್ದರು ಈ  ಯೋಜನೆಯಿಂದ ಅನೇಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ತಮ್ಮ ಜೀವನವನ್ನು ಉಜ್ವಲ ಗೊಳಿಸುತ್ತಿದ್ದಾರೆ ಎಂದು ಹೇಳಿದ್ದರು .ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಲ್ಲಮಪ್ರಭು ಗೃಹ ನಿರ್ಮಾಣ ಸಂಘದ ನಿರ್ದೇಶಕರು ಮತ್ತು ಸುದ್ದಿಮೂಲ ಪತ್ರಿಕೆಯ ಛಾಯಾಗ್...
Image
  ರಾಯಚೂರು ಗ್ರಾಮೀಣ, ನಗರ, ದೇವದುರ್ಗ ಲಿಂಗಸುಗೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ: ಪರಿಹಾರಕ್ಕಾಗಿ ಸರ್ಕಾರದಿಂದ ಸೂಕ್ತ ನಿರ್ಧಾರ- ಸಚಿವ  ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಆ.7 - ಬರ ಪರಿಸ್ಥಿತಿ, ಅತಿವೃಷ್ಠಿ ನಿರ್ವಹಣೆ ಕುರಿತ  ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು ಇಂದು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ  ತೆರಳಿ ಬರ ಪರಿಸ್ಥಿತಿ ಅಧ್ಯಯನ ನಡೆಸಿದರು. ಮೊದಲಿಗೆ ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಯಾಕ್ಲಾಸಪೂರ ಸೀಮಾಂತರದ ಸರ್ವೇ ನಂಬರ್ 179 ಹಾಗೂ 180 ಜಮೀನುಗಳಿಗೆ ಭೇಟಿ ಹೊಲದಲ್ಲಿನ ಹತ್ತಿ ಹಾಗೂ ತೊಗರಿ ಬೆಳೆಗಳನ್ನು ವೀಕ್ಷಿಸಿದರು. ನೀರಿನ ಕೊರತೆಯಿಂದ ಬೆಳೆಯ ಬೆಳೆವಣಿಗೆಯಲ್ಲಿ ಕುಠಿತ ಆಗಿರುವ ಹತ್ತಿ ಹಾಗೂ ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಳೆಯಿಲ್ಲದೆ ಹಾಗೂ ನೀರಿನ ಅಭಾವದಿಂದ ನಾವು ಹಾಕಿರುವ ಬೆಳೆ ಒಣಗಿದೆ. ಕಷ್ಟಪಟ್ಟು ಬಿತ್ತನೆ ಮಾಡಿದ ನಮಗೆ ಫಸಲು ಕೈಗೆ ಸಿಗುವುದಿಲ್ಲ ಆದರಿಂದ ಸಂಕಷ್ಟಕ್ಕೆ ಗುರಿಯಾಗಿದ್ದೇವೆ. ನಮ್ಮ ನೆರವಿಗೆ ಸ್ಪಂದಿಸಬೇಕೆಂದು ರೈತರು ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು ಮಾತನಾಡಿ, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಜಿಲ್ಲೆಯಾದ್ಯಂತ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ವೀಕ್ಷಣೆ ಮಾಡಲಾಗುತ್ತಿದೆ. ಮಳೆ, ಬೆಳೆ ಪರಿಸ...
Image
  ಗಣೇಶ ಹಬ್ಬದ ಶಾಂತಿ ಪಾಲನಾ ಸಮಿತಿ ಸಭೆ:            ರಾಜ್ಯಕ್ಕೆ ಮಾದರಿಯಾಗುವಂತೆ ಗೌರಿ–ಗಣೇಶ ಹಬ್ಬ ಆಚರಿಸಿ - ಜಿಲ್ಲಾಧಿಕಾರಿ ಪೂವಿತಾ ಜಯ ಧ್ವಜ ನ್ಯೂಸ್ ,ರಾಯಚೂರು ಆ.6 - ಜಿಲ್ಲೆಯಲ್ಲಿ ಗೌರಿ–ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ರಾಜ್ಯಕ್ಕೆ ಮಾದರಿಯಾಗುವಂತೆ ಆಚರಿಸುವದರ ಜೊತೆಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಸಹಕಾರ ನೀಡುವ ಮೂಲಕ ಪ್ರತಿಯೊಬ್ಬರೂ ಈ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಹೇಳಿದರು. ಅವರಿಂದು  ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ತಾವೆಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ರಾಯಚೂರು ಜಿಲ್ಲೆಯು ಭಾವೈಕ್ಯತೆಗೆ ಹೆಸರು ಪಡೆದಿದೆ. ಎಲ್ಲ ಸಮಾಜದವರು ಭಾವೈಕ್ಯದಿಂದ ಈ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನ...