ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ: ಜಿಲ್ಲೆಯಲ್ಲಿ ಜೂನ್ 20 ರಿಂದ ಪ್ರಾರಂಭವಾಗುವ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯಲಿ - ಪೂವಿತಾ ಎಸ್ . ಜಯ ಧ್ವಜ ನ್ಯೂಸ್ ,ರಾಯಚೂರು ,ಜೂ. 1- ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರ ಅಧ್ಯಕ್ಷತೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ( ಎಸ್.ಐ.ಆರ್)ರ ಕುರಿತು ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ಜರುಗಿತು. ಈ ವೇಳೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಮೂರನೇ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ರಾಯಚೂರು ಜಿಲ್ಲೆಯಲ್ಲಿ ಜೂನ್ 20 ರಿಂದ ಪ್ರಕ್ರಿಯೆಯು ಆರಂಭವಾಗಿ ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದೆ ಎಂದರು. ದಿನಾಂಕ:01.10.2026 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20 ರಿಂದ 29ರವರೆಗೆ ಈ ಪ್ರಕ್ರಿಯೆಯ ಸಿದ್ಧತೆ, ಪ್ರಕ್ರಿಯೆಯ ಭಾಗವಾಗಿರುವ ಎಲ್ಲಾ ಹಂತದ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ತರಬೇತಿ, ಅವಶ್ಯ...