ಅಂಜುಮಾನ ಸಂಸ್ಥೆಯ ಕಾರ್ಯ ಅರ್ಥಪೂರ್ಣ - ಬಾದರ್ಲಿ ಜಯ ಧ್ವಜ ನ್ಯೂಸ್ ರಾಯಚೂರು, ಮೇ.12- ಅಲ್ಪಸಂಖ್ಯಾತರು ಶೈಕ್ಷಣಿಕವಾಗಿ ಸಾಕಷ್ಟು ಮುಂದುವರೆಯುತ್ತಿರುವದು ಸಂತೋಷದ ವಿಷಯವಾಗಿದೆ ಅಲ್ಪ ಸಂಖ್ಯಾತರು ಹೊರ ರಾಷ್ಟ್ರಗಳಲ್ಲಿನ ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವ್ಯಾಪಾರದ ಪ್ರಗತಿಯನ್ನ ಅವಲೋಕಿಸಿಕೊಂಡು ಮುನ್ನಡೆಯಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಅವರು ಸೋಮವಾರ ಸಂಜೆ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಂಜುಮನ್ ಎ - ರಾಯಚೂರು ಸಂಸ್ಥೆ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನ ಉದ್ಘಾಟಿಸಿ ಮಾತನಾಡಿದರು. ವೈವಿದ್ಯತೆಯ ಜೊತೆಗೆ ಭಾವೈಕ್ಯತೆಯಿಂದ ಕೂಡಿದ ದೇಶ ನಮ್ಮದಾಗಿದೆ ಆದರೆ ಇತ್ತೀಚಿಗೆ ಕೆಲವರು ಧಾರ್ಮಿಕ ಭಾವನೆಗಳನ್ನ ಕೆರಳಿಸುವ ಕೆಲಸ ಮಾಡುತ್ತಿದ್ದು, ಇದು ಸರಿಯಲ್ಲವೆಂದರು. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ನೇತೃತ್ವದ ನಮ್ಮ ಸರ್ಕಾರ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಮೊದಲನೇ ವರ್ಷದಲ್ಲಿ ನಾಲ್ಕು ಸಾವಿರ ಕೋಟಿ, ಎರಡನೇ ವರ್ಷದಲ್ಲಿ ಐದು ಸಾವಿರ ಕೋಟಿ ಮತ್ತು ಪ್ರಸಕ್ತ ಸಾಲಿನಲ್ಲಿ ಆರುವರೆ ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ. ಜೊತೆಗೆ 150 ಮೌಲಾನಾ ಅಜಾದ ಆಂಗ್ಲ ಮಾದ್ಯಮ ಶಾಲೆಗಳಿಗೆ ಮಂಜೂರಾತಿ...