ಪಾರ್ವತಮ್ಮ ಪಾಪಾರೆಡ್ಡಿ ನಿಧನ ಹಿನ್ನಲೆ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಮುಂದೂಡಿಕೆ. ಜಯ ಧ್ವಜ ನ್ಯೂಸ್ ರಾಯಚೂರು,ಜೂ.19- ಮಾಜಿ ಶಾಸಕ ಎ.ಪಾಪಾರೆಡ್ಡಿಯವರ ಧರ್ಮಪತ್ನಿ ಪಾರ್ವತಮ್ಮ ನಿಧನ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಆಯೋಜಿಸಲಾಗಿದ್ದ ಮೂರು ದಿನಗಳ ಮುನ್ನೂರು ಕಾಪು ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಮುಂದೂಡಲಾಗಿದೆ ಎಂದು ಮುನ್ನೂರು ಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ಹೇಳಿದರು. ಅವರಿಂದು ನಗರದ ಗದ್ವಾಲ್ ರಸ್ತೆಯ ವೀರಾಂಜನೇಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪಾರ್ವತಮ್ಮ ಪಾಪಾರೆಡ್ಡಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ಬಳಿಕ ಮಾತನಾಡಿ ಮುನ್ನೂರು ಕಾಪು ಸಮಾಜದ ಹಿರಿಯರು, ಯುವಕರು ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದು ಈ ಬಾರಿ ಸಮಾಜದ ಹಿರಿಯ ವ್ಯಕ್ತಿಯೊಬ್ಬರ ನಿಧನ ಹಿನ್ನಲೆ ದುಖದ ವಾತಾವರಣ ಕಾರಣದಿಂದ ಮುಂಗಾರು ಸಾಂಸ್ಕೃತಿಕ ಹಬ್ಬ ಮುಂದೂಡಲು ಸರ್ವಾನುಮತದಿಂದ ನಿರ್ಣಯ ...