Posts

Image
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಕೆ.                                                      ಜಯ ಧ್ವಜ ನ್ಯೂಸ್ ,ರಾಯಚೂರು, ಜೂ.29- ರಾಜ್ಯಸಭೆಯ ಸದಸ್ಯರಾಗಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ  ಗೌರವಾನ್ವಿತ  ಮಲ್ಲಿಕಾರ್ಜುನ ಖರ್ಗೆಅವರಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು . ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಮತ್ತು ರಾಷ್ಟ್ರ ಸೇವೆಯಲ್ಲಿ ನಿರಂತರ ಯಶಸ್ಸನ್ನು ಲಭಿಸಲಿ ಎಂದು ಹಾರೈಸಲಾಯಿತು.  ಸುಮಾರು ಐದು ದಶಕಗಳಿಂದ ಖರ್ಗೆ ಅವರು ಸಾರ್ವಜನಿಕ ಸೇವೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಚಲವಾದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಸಮರ್ಪಿತ ತಳಮಟ್ಟದ ಕಾರ್ಯಕರ್ತನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ವರೆಗೆ ಅವರ ಪ್ರಯಾಣವು ಪರಿಶ್ರಮ, ಸಮಗ್ರತೆ ಮತ್ತು ದೃಢ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ. ಅವರ ಅಪಾರ ಅನುಭವ ಮತ್ತು ತತ್ವಬದ್ಧ ದೃಷ್ಟಿಕೋನವು ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಮತ್ತು ಭಾರತದ ಪ್ರಜಾಪ್ರಭುತ್ವದ ರಚನೆಯನ್ನು ಶ್ರೀಮಂತಗೊಳಿಸಲು ಅವರ ಸೇವೆ ಅತ್ಯಗತ್ಯವಾಗಿದ್ದನ್ನು ತಿಳಿಸಿದರು. ಈ ಸಂದರ್ಭದಲ್ಲಿ  ರಾಯಚೂರು ಜಿಲ್ಲಾ ಪ್ರಕೃತಿ ವಿಕೋಪ ನಿರ...
Image
  ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್  ರಾಯಚೂರು ಬೆಳ್ಳಿ ಮಹೋತ್ಸವ :      ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆಯ ವಿಜೇತರ ಹೆಸರು ಪ್ರಕಟ- ವಿಜಯ್ ಜಾಗಟಗಲ್ ಜಯ ಧ್ವಜ ನ್ಯೂಸ್, ರಾಯಚೂರು, ಜೂ. 29- ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್  ರಾಯಚೂರು ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪತ್ರಕರ್ತರ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆಯ ವಿಜೇತರ ಹೆಸರುಗಳನ್ನು ರಾಯಚೂರು ರಿಪೋಟರ‍್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್ ಪ್ರಕಟಿಸಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ  ಚಿತ್ರದುರ್ಗದ ಪ್ರಜಾವಾಣಿಯ ಸಹಾಯಕ ವರದಿಗಾರರಾಗಿರುವ ಕೆ.ಪಿ.ಓಂಕಾರಮೂರ್ತಿ ಅವರ “ಡೆಡ್‌ಲೈನ್” ಕಥೆಗೆ ಮೊದಲ ಸ್ಥಾನ. ದಿ ಟೈಮ್ಸ್  ಆಫ್ ಇಂಡಿಯಾ ಪತ್ರಿಕೆ ಮೈಸೂರು ವಿಶೇಷ ವರದಿಗಾರರಾದ ಶ್ರೀನಿವಾಸ ಎಂ ಅವರ “ನಿಧನ ವಾರ್ತೆ” ಕಥೆಗೆ ದ್ವಿತೀಯ ಸ್ಥಾನ. ಉದಯವಾಣಿ ಪತ್ರಿಕೆಯ ರಾಯಚೂರು ಹಿರಿಯ ಜಿಲ್ಲಾ ವರದಿಗಾರರಾದ ಸಿದ್ದಯ್ಯಸ್ವಾಮಿ ಕುಕನೂರು ಅವರ “ಪ್ರೆಸಿಡೆಂಟ್ ಶಂಕ್ರ” ಕಥೆಗೆ ತೃತೀಯ ಸ್ಥಾನ ಲಭಿಸಿದೆ ಎಂದರು.   ತೀರ್ಪುಗಾರರ ಮೆಚ್ಚುಗೆ ಪಡೆದ ಕಥೆಗಳಲ್ಲಿ ಪ್ರಜಾವಾಣಿಯ ರಾಯಚೂರು ಜಿಲ್ಲೆಯ ಮುದಗಲ್ ವರದಿಗಾರರಾದ ಡಾ.ಶರಣಪ್ಪ ಆನಾಹೊಸೂರು ಅವರ “ ನಮ್ಮ ಹುಡ್ರು” ಕಥೆ. ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ರಾಯಚೂರು ಜಿಲ್ಲಾ ವರದಿಗಾರರಾದ ಬಸವ...
Image
ವಾರ್ಡ್ ನಂ. 13 ರಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ:                  ಉಮಾ ರವೀಂದ್ರ ಜಲ್ದಾರ್ ಜನಪರ ಕಾಳಜಿ ಸ್ತುತ್ಯಾರ್ಹ-ಡಾ.ಶಿವರಾಜ ಪಾಟೀಲ್                                            ಜಯ ಧ್ವಜ ನ್ಯೂಸ್ , ರಾಯಚೂರು, ಜೂ.28- ನಗರದ  ವಾರ್ಡ್ ನಂ 13 ರ ಧನಲಕ್ಷ್ಮಿ ಬಡಾವಣೆಯಲ್ಲಿ ಇರುವ ಶ್ರೀ ಮಾತೆ ಮರುಗೆಮ್ಮ ದೇವಸ್ಥಾನದಲ್ಲಿ ರಾಯಚೂರು ಮಹಾನಗರ ಪಾಲಿಕೆಯ 14ಲಕ್ಷ ರೂ ಎಸ್ ಎಸ್ ಸಿ  ಅನುದಾನದಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕ  ಹಾಗೂ 25 ಲಕ್ಷ ರೂ ಅನುದಾನದಲ್ಲಿ ಶ್ರೀ ಮಾತೆ ಮರುಗೆಮ್ಮ ದೇವಸ್ಥಾನದಲ್ಲಿ ಸಮುದಾಯ ಭವನದ ಶೇಡ್ ನಿರ್ಮಾಣ ಹಾಗೂ 50 ಲಕ್ಷದ ಕೆಕೆಆರ್ ಡಿಬಿ ಅನುದಾನದಲ್ಲಿ ಮತ್ತು ಕೆ ಆರ್ ಡಿ ಎಲ್ ಅನುದಾನದಲ್ಲಿ  ಸಿಸಿ ರಸ್ತೆ ಹಾಗೂ ಪೇವರ್ ಬ್ಲಾಕ್  ನಿರ್ಮಾಣ ಕಾಮಗಾರಿಗಳಿಗೆ ಇಂದು ನಗರ ಶಾಸಕರಾದ ಡಾ. ಎಸ್. ಶಿವರಾಜ್ ಪಾಟೀಲ್ ರವರು ಕಾಮಗಾರಿಗಳಿಗೆ ಚಾಲನೆ ನೀಡಿ, ಬಡಾವಣೆಯ ಜನರ ಮುಂದೆ ಶಾಸಕರಾಗಿ 13 ವರ್ಷಗಳ  ಅವಧಿಯಲ್ಲಿ ಮಾಡಿದ ಕೆಲಸಗಳನ್ನು ಮೆಲುಕು ಹಾಕಿದರು ನಂತರ ಸಧ್ಯದ ಪರಿಸ್ಥಿತಿಯಲ್ಲಿ ಇರುವ ಸರ್ಕಾರ ಅಭಿವೃದ್ಧಿಗೆ ಅಗುತ್ತಿರುವ ತೊಂದರೆಗಳ ಬಗ್ಗೆ ...
Image
  ಉಪನ್ಯಾಸಕ ವೀರಭದ್ರಯ್ಯ ಸ್ವಾಮಿ ನಿಧನ  ಜಯ ಧ್ವಜ ನ್ಯೂಸ್ ರಾಯಚೂರು ,ಜೂ.28- ಯರಮರಸ್ ಗ್ರಾಮದ ಶ್ರೀ ವೀರಭದ್ರಯ್ಯ ತಾತನವರ ಮಠದ ಶ್ರೀ ಚರಬಸವ ತಾತನವರ ಎರಡನೇ ಪುತ್ರ ವೀರಭದ್ರ ಸ್ವಾಮಿ (30) ರವಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಶಹಾಪುರದಲ್ಲಿ ವಿಜ್ಞಾನ ವಿಷಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಲಿಂಗಸೂಗೂರಿನಲ್ಲೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ರವಿವಾರ  ಬೆಳಗ್ಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತರು ತಂದೆ ತಾಯಿ ಸಹೋದರರು, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗ, ಭಕ್ತರನ್ನು ಅಗಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಯರಮರಸ್ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಿಸಲಾಗುವುದು ಎಂದು ಕುಟುಂಬ ಮೂಲಗಳು  ಪ್ರಕಟಣೆಯಲ್ಲಿ ತಿಳಿಸಿದೆ. 
Image
  ವಿಶ್ವಾಮಿತ್ರ ಟ್ರಸ್ಟ್ ಹಾಗೂ ಡಾ.ಅಗರವಾಲ್ಸ್ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ :    ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಅತಿ ಮುಖ್ಯ- ಡಿಕೆ ಮುರಳೀಧರ .                                                                                                                                                                ಜಯ ಧ್ವಜ ನ್ಯೂಸ್ , ರಾಯಚೂರು, ಜೂ.28-                                                          ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಶಾರದಾ ...
Image
  ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಪ್ರಕೃತಿ‌ ವಿಕೋಪ ಮೇಲುಸ್ತುವಾರಿ ಸಚಿವರಾಗಿ ಡಾ.ಶರಣಪ್ರಕಾಶ ಪಾಟೀಲ್ ನೇಮಕ.                                                                                              ಜಯ ಧ್ವಜ ನ್ಯೂಸ್, ರಾಯಚೂರು, ಜೂ.25- ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣೆ ಮೆಲುಸ್ತುವಾರಿ  ಸಲುವಾಗಿ ಹಾಗು ಮುಂದಿನ ಆದೇಶ  ವರೆಗೂ  ಡಾ.ಶರಣ ಪ್ರಕಾಶ್ ಪಾಟೀಲ್ ರವರನ್ನು ಮೇಲುಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 
Image
  ಸುದ್ದಿಯ ಒತ್ತಡದ ನಡುವೆಯೂ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಿ- ಜಿಲ್ಲಾಧಿಕಾರಿ ಪೂವಿತಾ ಎಸ್ ಜಯ ಧ್ವಜ ನ್ಯೂಸ್ ,ರಾಯಚೂರು, ಜೂನ್,23- ಸುದ್ದಿಯ ಒತ್ತಡದ ನಡುವೆಯೂ ಪತ್ರಕರ್ತರು ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ಹೇಳಿದರು. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಯಚೂರು ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ನಿರಂತರವಾಗಿ ನಿರ್ವಹಿಸುತ್ತಿದೆ. ಸಾರ್ವಜನಿಕ ಸಮಸ್ಯೆಗಳನ್ನು ಬೆಳಕಿಗೆ ತಂದು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪತ್ರಕರ್ತರು ಮುಂದುವರಿಸಬೇಕು. ನಿತ್ಯದ ಕೆಲಸದ ಒತ್ತಡದ ನಡುವೆಯೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಪತ್ರಕರ್ತರು ದಿನನಿತ್ಯದ ಒತ್ತಡದ ಬದುಕಿನ ಮಧ್ಯೆಯೂ ಕ್ರಿಕೆಟ್ ಆಟದತ್ತ ಆಸಕ್ತಿ ತೋರಿರುವುದು ಶ್ಲಾಘನೀಯ ಸಂಗತಿಯಾಗಿದೆ. ಕ್ರೀಡೆಗಳು ದ...