Posts

Image
  ಫ್ಲೋರಿಡಾ ಯೋಗ ಸಂಸ್ಕೃತ ವಿವಿಯಿಂದ ಶ್ರೀ ಸುಬುಧೇಂದ್ರತೀರ್ಥರಿಗೆ ಪ್ರಶಸ್ತಿ:                          ರಾಜಾ.ಎಸ್  ಗಿರಿಯಾಚಾರ್ , ರಾಘವೇಂದ್ರ ರಾಜಕುಮಾರ್, ಶ್ರೀ ಷಾನಂದರವರಿಗೆ ಡಾಕ್ಟರೇಟ್ ಪದವಿ ಪ್ರದಾನ.                                                                                                                      ಜಯ ಧ್ವಜ ನ್ಯೂಸ್, ರಾಯಚೂರು, ಫೆ.24- ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ಅಮೇರಿಕಾದ ಫ್ಲೋರಿಡಾ ಯೋಗ ಸಂಸ್ಕೃತ ವಿಶ್ವವಿದ್ಯಾಲಯದಿಂದ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ನೆರವೇರಿತು. ಸಾಯಿಂಕಾಲ ಯೋಗೀಂದ್ರ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಗೆ ವೈದ್ಯ ದಾಸ ಯೋಗಿ ಪ್ರಶಸ್ತಿ ಪ್ರದಾನ ಹಾಗೂ ರಾಜಾ.ಎಸ್.ಗಿರಿಯ...
Image
  ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ   ಜಯ ಧ್ವಜ ನ್ಯೂಸ್, ರಾಯಚೂರು ,ಫೆ.23-  ಭಾರತೀಯ ವೈದ್ಯಕೀಯ ಮಹಿಳಾ ಸಂಘ, ಐಎಮ್ ಎ ರಾಯಚೂರು ಹಾಗೂ ಬ್ರಹ್ಮಕುಮಾರೀಸ್ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ   ಗಿಡಕ್ಕೆ ನೀರು ಎರೆಯುವುದರ ಮೂಲಕ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು.  ವೇದಿಕೆ ಮೇಲೆ ಸರ್ಕಾರಿ ಮಹಿಳಾ ನೌಕರರ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಯಶೋಧ, ಜಮಾತೆ ಇಸ್ಲಾಂ ಮಹಿಳಾ ಘಟಕದ ಪದಾಧಿಕಾರಿಗಳಾದ ಶ್ರೀಮತಿ ಶಹನಾಜ್, ಭಾರತೀಯ ವೈದ್ಯಕೀಯ ಸಂಘ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಶ್ರೀಲತಾ ಕಾಮತ್, ಉಪಾಧ್ಯಕ್ಷರಾದ ಡಾ. ಪ್ರಿಯ ಬಾಲ್ಕಿ ಜಂಟಿ ಕಾರ್ಯದರ್ಶಿಗಳಾದ ಡಾ. ಶಿಲ್ಪ ನಾಗಲಾಪುರ್ ಇವರುಗಳು ಭಾಗವಹಿಸಿದ್ದರು. ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಯೋಗಿನಿ ಬಿ. ಕೆ. ಸ್ಮಿತಾ ಅಕ್ಕನವರು ವಹಿಸಿದ್ದರು.               ಶ್ರೀಮತಿ ವಿಜಯಲಕ್ಷ್ಮಿ, ಸರಕಾರಿ ಮಹಿಳಾ ನೌಕರರ ಒಕ್ಕೂಟದ ಜಿಲ್ಲಾ ಅಧ್ಯಕ್ಷರು ಅವರು ಮಾತನಾಡುತ್ತಾ ಸರ್ಕಾರಿ ಮಹಿಳಾ ನೌಕರರಿಗೆ ಅನೇಕ ಒತ್ತಡಗಳು ಇವುಗಳಿಂದ ಅನೇಕ ಕಾಯಿಲೆಗಳು ಬರುತ್ತವೆ ಇ...
Image
  ತಳವಾರರಿಗೆ ಪರಿಶಿಷ್ಟ ಪಂಗಡದ ಸೌಲಭ್ಯದ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿಕೆಗೆ ರಘುವೀರ ನಾಯಕ ತೀವ್ರ ಖಂಡನೆ.   ಜಯ ಧ್ವಜ ನ್ಯೂಸ್  , ರಾಯಚೂರು ,ಫೆ.23-  ವಿಧಾನ ಪರಿಷತ್ ಸದಸ್ಯರು ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ್.ರವಿಕುಮಾರರವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮೂಲಕ ತಳವಾರರಿಗೆ ಪರಿಶಿಷ್ಠ ಪಂಗಡದ ಸೌಲಭ್ಯವನ್ನು ಮುಂದುವರೆಸಬೇಕು ಮತ್ತು ವಾಲ್ಮೀಕಿ ನಾಯಕ ಸಮುದಾಯದ ಹೋರಾಟಕ್ಕೆ ಸರಕಾರ ಮಣಿಯಬಾರದು ಎಂದು ಹೇಳಿಕೆ ನೀಡಿರುವುದನ್ನು  ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದ ವಿಭಾಗೀಯ ಕಾರ್ಯದರ್ಶಿಗಳಾದ ಎನ್. ರಘುವೀರ ನಾಯಕ ಖಂಡಿಸಿದ್ದಾರೆ.  ತಳವಾರರಿಗೆ ಎಸ್.ಟಿ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಹೇಳುತ್ತಿದ್ದಾರೆ ಆದರೆ ಯಾವ ಸಮುದಾಯದ ತಳವಾರರು ಎಂದು ಸ್ಪಷ್ಟಪಡಿಸಬೇಕು. ಎಲ್ಲಾ ಜಾತಿಗಳಲ್ಲೂ ತಳವಾರ ಸಮುದಾಯದವರು ಇದ್ದಾರೆ. ಕೇಂದ್ರ ಸರಕಾರದ ಗೆಜೆಟನ್ನು ಒಮ್ಮೆ ಸರಿಯಾಗಿ ಓದಿ ಅರ್ಥೈಸಿಕೊಳ್ಳಬೇಕು. ನಾಯಕ ಸಮುದಾಯದ ತಳವಾರರಿಗೆ ಮಾತ್ರ ಎಸ್,ಟಿ ಪಟ್ಟಿಗೆ ಸೇರಿದ್ದಾರೆ ಇತರ ಸಮುದಾಯದ ತಳವಾರರು ಅಲ್ಲ ಎಂಬುದು ಮೊದಲು ಮನನ ಮಾಡಿಕೋಳ್ಳಬೇಕು. ತಾವು ಹೇಳುತ್ತಿರುವ ತಳವಾರರು ಯಾರು ಎಂದು ಮೊದಲು ಸ್ಪಷ್ಟಪಡಿಸಬೇಕು.  ಇಂತಹ ತಪ್ಪು ಹೇಳಿಕೆಗಳನ್ನು ನೀಡುವ ಮೂಲಕ ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದಾರೆ. ಪ್ರತಿ ಸಮುದಾಯಗಳಲ್ಲ...
Image
  ಯರಗೇರ ಶಾದಿ ಮಹಲ್ ಗಾಗಿ ಒಂದು ಕೋಟಿ ರೂ. ಮಂಜೂರು: ಅಲ್ಪಸಂಖ್ಯಾತರ ಮುಖಂಡರಿಂದ ಶಾಸಕರಿಗೆ ಸನ್ಮಾನ ಜಯ ಧ್ವಜ ನ್ಯೂಸ್ ,ರಾಯಚೂರು,ಫೆ.21- ಜಿಲ್ಲೆಯ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಅಲ್ಪಸಂಖ್ಯಾತರ ಇಲಾಖೆಯಿಂದ ಸುಮಾರು ಒಂದು ಕೋಟಿ ರೂಪಾಯಿ ಹಣವನ್ನು ಶಾದಿ ಮಹಲ್ ಸಲುವಾಗಿ ಮಂಜೂರು ಮಾಡಲು ಗ್ರಾಮೀಣ ಜನಪ್ರಿಯ ಶಾಸಕರು ಮತ್ತು ಅಧ್ಯಕ್ಷರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಬಸನಗೌಡ ದದಲ್  ಯಶಸ್ವಿಯಾಗಿರುತ್ತಾರೆ  . ಈ ವಿಷಯವನ್ನು ತಿಳಿದು ಯರಗೇರಾ ಮತ್ತು ಸುತ್ತಮುತ್ತಲಿನ ಭಾಗದ ಅಲ್ಪಸಂಖ್ಯಾತರ ಮುಖಂಡರಿಗೆ ಸಂತಸದ ವಿಷಯವಾಗಿದೆ ಮತ್ತು ಮುಂದಿನ ದಿನಗಳಲ್ಲಿ ಭೂಮಿ ಪೂಜೆ ಮಾಡುವ ಬಗ್ಗೆ ಈಗಾಗಲೇ ಆಶ್ವಾಸನೆ ನೀಡಿರುತ್ತಾರೆ. ಡಿಸೆಂಬರ್ ತಿಂಗಳಲ್ಲಿ ಯರಗೇರ ಗ್ರಾಮಕ್ಕೆ ಹಜರತ್ ಬಡೇಸಾಹೇಬ್ ಉರುಸಿಗೆ ಆಗಮಿಸಿದ ವೇಳೆ  ಕೊಟ್ಟ ಮಾತಿಗೆ ತಕ್ಕಂತೆ ಕೇವಲ ಒಂದು ತಿಂಗಳಲ್ಲಿ ಹಣ ಮಂಜೂರು ಮಾಡಿಸಿದ  ಶಾಸಕರು ಎಂದು ಮುಖಂಡರು ಶ್ಲಾಘಿಸಿದರು . ಈ ಹಿನ್ನೆಲೆಯಲ್ಲಿ ಯರಗೇರಾ ಗ್ರಾಮದ ಅಲ್ಪಸಂಖ್ಯಾತ ಮುಖಂಡರು ಗ್ರಾಮೀಣ ಶಾಸಕರ ಕಚೇರಿಯಲ್ಲಿ ಶಾಸಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸುವ ಮೂಲಕ ಅಭಿನಂದಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರು ಗ್ರಾಮಸ್ಥರು ಯುವ ನಾಯಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Image
  ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಿಂದ  ನಗರ ಸಂಚಾರ:          ಕಾಮಗಾರಿಗಳ ಪರಿಶೀಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಫೆ. 21 - ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮಹೋಪಾತ್ರ ಅವರು ಇಂದು  ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಪ್ರಗತಿಯಲ್ಲಿರುವ ಮತ್ತು ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗೊಳಿಸುವುದು ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು. ಆಯುಕ್ತರು ಮೊದಲು ಮಾವಿನಕೆರೆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸಾರ್ವಜನಿಕ ಸ್ಥಳಗಳಲ್ಲಿನ ಅತಿಕ್ರಮಣಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದರ ಜೊತೆಗೆ ಮಾವಿನಕೆರೆಯ ಉದ್ಯಾನವನ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಳಿಕ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಹೈಟೆಕ್ ಸಾರ್ವಜನಿಕ ಶೌಚಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಈ ಸೌಲಭ್ಯವನ್ನು ತ್ವರಿತವಾಗಿ ಪ್ರಾರಂಭಿಸುವ ಮೂಲಕ ಸ್ಥಳೀಯ ನಿವಾಸಿಗಳಿಗ...
Image
  ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ:                                                                    ರೈಲ್ವೇ , ರಿಂಗ್ ರೋಡ್, ಜೆಜೆಮ್, ಶೌಚಾಲಯ ನಿರ್ಮಾಣ ಮುಂತಾದವುಗಳ ಅನುಷ್ಟಾನ ವಿಳಂಬ ಸಭೆಯಲ್ಲಿ ಅಸಮಾಧಾನ.                                                                     ಜಯ ಧ್ವಜ ನ್ಯೂಸ್ , ರಾಯಚೂರು , ಫೆ.21- ಜಿಲ್ಲೆಯಲ್ಲಿ ರೈಲ್ವೆ, ರಿಂಗ್ ರೋಡ್ , ಜೆಜೆಎಂ , ಶೌಚಾಲಯ ನಿರ್ಮಾಣ ಮುಂತಾದ ಕಾಮಗಾರಿಗಳ ಭೌತಿಕ ಪ್ರಗತಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳ ಬಗ್ಗೆ ಸಭೆಯಲ್ಲಿ ಸಚಿವರು, ಸಂಸದರು, ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.    ಬೆಳಿಗ್ಗೆ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಕೇಂದ್ರ ಸರ್ಕಾರ ಪು...
Image
  ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ:                                                ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ: ಜಯ ಧ್ವಜ ನ್ಯೂಸ್ , ರಾಯಚೂರು, ಫೆ.21- ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಗರದ ಶಾಸಕರಾದ ಡಾ. ಶಿವರಾಜ ಪಾಟೀಲ ಮತ್ತು  ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ  ವಿನಾಯಕ ರಾವ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ನಡೆಯಿತು. ವಿಶ್ವ  ಎಐ ಸಮಿಟ್ ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಧಾoಧಲೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯ ಮುತ್ತಿಗೆ ನಡೆಸುವುದರ ಮೂಲಕ   ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು.   ವಿಶ್ವ  ಎಐ ಸಮಿಟ್ ನಲ್ಲಿ ನಡೆಸಿದ ಧಾoಧಲೇ ವಿರುದ್ಧ ಘೋಷಣೆ ಕೂಗಿ ಜಗತ್ತಿನ ಮುಂದೆ ಭಾರತದ ಮಾನ ಕಳೆದ ಹೀನ ಕೃತ್ಯವನ್ನು ಖಂಡಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಸಂತೋಷ ರಾಜಗುರು, ರವೀಂದ್ರ ಜಲ್ದಾರ , ಜಿಲ್ಲಾ ವಕ್ತಾರರಾದ ಸಿದ್ದನಗೌಡ ನೆಲಹಾಳ ರಾಘವೇಂದ್ರ ಉಟ್ಕೂರು, ಬಿಜೆಪಿ ನಗರ ಅಧ್ಯಕ್ಷರು ಎಸ್.ಸಿ ಮೊರ್ಚಾ ಜಿಲ...