Posts

Image
  ಸಿಂಧನೂರು ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಪೂವಿತಾ. ಎಸ್  ದಿಢೀರ್ ಭೇಟಿ ಪರಿಶೀಲನೆ ಜಯಧ್ವಜ ನ್ಯೂಸ್ ,ರಾಯಚೂರು ಜೂ. 11-  ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ನಿನ್ನೆ ಬೆಳಿಗ್ಗೆ ಜಿಲ್ಲೆಯ ಸಿಂಧನೂರು ನಗರದ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮೊದಲು ಸಿಂಧನೂರಿನ ನಗರಸಭೆಗೆ ಆಗಮಿಸಿ, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ನಗರಸಭೆಯ ವ್ಯಾಪ್ತಿಯಲ್ಲಿ ಸರಿಯಾಗಿ ಕಾಲಕಾಲಕ್ಕೆ ತೆರಿಗೆ ಸಂಗ್ರಹಿಸಬೇಕು. ನಗರದ ಜನರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಬರುವ ಸಾಧ್ಯತೆ ಇದೆ. ಆದ್ದರಿಂದ ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆವಹಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತಾಗಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಸಿಂಧನೂರು ನಗರದ ವಿವಿಧ ರಸಗೊಬ್ಬರ ಹಾಗೂ ಕೀಟ ನಾಶಕ ಅಂಗಡಿಗಳಿಗೆ ಭೇಟಿ ನೀಡಿ, ದಾಸ್ತಾನು ಪುಸಕ್ತ, ರಶೀದ...
Image
  ರೈತರ ಹಿತ ಕಾಯಲು ಸರಕಾರ ಮುಂದಾಗಬೇಕು- ಡಾ. ಬಾಬುರಾವ್ ಜಯ ಧ್ವಜ ನ್ಯೂಸ್ ,ರಾಯಚೂರು,ಜೂ.11- ಮುಂಗಾರು ಆರಂಭವಾಗಿದ್ದು, ಸರಕಾರ ಕೂಡಲೇ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ಸಮರ್ಪಕವಾಗಿ ರಸಗೊಬ್ಬರವನ್ನು ಪೂರೈಸಬೇಕೆಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಡಾ.ಬಾಬುರಾವ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಜಿಲ್ಲೆಯ ರೈತರು ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳು ಲಭ್ಯವಾಗುತ್ತಿಲ್ಲ. ಕೆಲವು ಮಾರಾಟಗಾರರು ಲಭ್ಯವಿರುವ ಬೀಜ ಮತ್ತು ಗೊಬ್ಬರವನ್ನು ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳನ್ನು ಎಂ.ಆರ್.ಪಿ. ದರದಲ್ಲಿ ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕೃಷಿ ಅಧಿಕಾರಿಗಳು ಬಿತ್ತನೆ ಬೀಜ ಹಾಗು ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ರೈತರಿಗೆ ಸಮರ್ಪಕವಾಗಿ ಬೀಜ ಗೊಬ್ಬರ ದೊರೆಯುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ರೈತರಿಗೆ ಬೇಕಾದ ಗೊಬ್ಬರವನ್ನಷ್ಟೇ ಕೊಡುವಂತೆ ಸೂಚಿಸಬೇಕು. ರೈತರು ಕೊಳ್ಳುವ ಗೊಬ್ಬರದ ಜೊತೆ ಇತರ ಔಷಧಿ ಹಾಗೂ ಗೊಬ್ಬರಗಳನ್ನು ಲಿಂಕ್ ಮಾಡುವ...
Image
  ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ - ನ್ಯಾ.ಸಿದ್ದರಾಮಪ್ಪ ಕಲ್ಯಾಣರಾವ್ ಜಯ ಧ್ವಜ ನ್ಯೂಸ್ ರಾಯಚೂರು ಜೂ. 10 - ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ರಾಯಚೂರು ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ತಿಳಿಸಿದರು ಅವರಿಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದರು. ಜುಲೈ 11ರ ಶನಿವಾರ ಬೆಳಿಗ್ಗೆ 10ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ ಅದಾಲತ್‌ನ್ನು ನಿಗದಿಪಡಿಸಲಾಗಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮತ್ತು ಕ್ರೀಮಿನಲ್ (ರಾಜಿಯಾಗುವಂತಹ) ಮೊಕ್ಕದಮ್ಮೆಗಳನ್ನು, ಅಲ್ಲದೇ ಮೋಟಾರ ವಾಹನ ಕಾಯ್ದೆ, ಕುಟುಂಬ ನ್ಯಾಯಾಲಯದ ಪ್ರಕರಣಗಳು ಮತ್ತು ಎಲ್ಲಾ ಬಗೆಯ ಪ್ರಕರಣಗಳನ್ನು (ಕೇಸುಗಳನ್ನು) ಲೋಕ ಅದಾಲತ್ ಮುಖಾಂತರ ಇತ್ಯರ್ಥಗೊಳಿಸಲಾಗು...
Image
 
Image
  ಪರಿಸರ ಉಳಿದರೆ ನಾವು ಉಳಿಯುತ್ತೇವೆ -  ವೆಂಕಟೇಶ ಬೇವಿನಬೆಂಚಿ ಜಯ ಧ್ವಜ ನ್ಯೂಸ್ ,ರಾಯಚೂರು, ಜೂ.5- ಪ್ರಕೃತಿಯ ಎಲ್ಲಾ ಜೀವರಾಶಿಗಳ ಅಳಿವು ಉಳಿವು ಪರಿಸರದ ಮೇಲಿದೆ, ಪರಿಸರ ಉಳಿದರೆ ನಾವು ಉಳಿಯುತ್ತೇವೆ ಪರಸರ ನಾಶವಾದರೆ ಎಲ್ಲವೂ ನಾಶವಾಗುತ್ತದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ವೆಂಕಟೇಶ ಬೇವಿನಬೆಂಚಿ ಹೇಳಿದರು.  ಅವರು ಇಂದು ಆಕಾಶವಾಣಿ ಆವರಣದಲ್ಲಿ ಪರಿಸರ ದಿನಾಚರಣೆ ಸಂದರ್ಭದಲ್ಲಿ  ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದರು.  ಪರಿಸರವು ಇಂದು ತುಂಬಾ ಕಲುಷಿತವಾಗುತ್ತಿದೆ. ವಾಯು ಮಾಲಿನ್ಯ ಜಲ ಮಾಲಿನ್ಯ, ಶಬ್ದ ಮಾಲಿನ್ಯ, ಮತ್ತು ಮಣ್ಣು ಮಾಲಿನ್ಯ, ಈಗ ಪ್ಲಾಸ್ಟಿಕ್ ಮಾಲಿನ್ಯದಿಂದ  ಪರಿಸರ ಸಮತೋಲನ ತಪ್ಪುತ್ತಿದೆ. ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ಪೀಳಿಗೆಯನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಈ ವೇಳೆ ಪ್ರಜ್ಞಾವಂತರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ದೃಢ ಸಂಕಲ್ಪ ಮಾಡಬೇಕಾಗಿದೆ ಎಂದರು.   ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಅರವಿಂದಾಕ್ಷಣ  ಮಾತನಾಡಿ ನಮ್ಮ ಆಕಾಶವಾಣಿಯಲ್ಲಿ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಈ ದಿನ ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ ...
Image
  ಎಸ್‌ಐಆರ್ ಮತದಾರರ ಪಟ್ಟಿಯನ್ನು ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್. ರಾಯಚೂರು ಜೂ. 5- ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ-2026 (ಎಸ್‌ಐಆರ್)ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು.ಅವರಿಂದು  ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು. ಈ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಗಳಿಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸಿ ಪರಿಶೀಲಿಸಲಿದ್ದಾರೆ. ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯ ಪರಿಷ್ಕರಣೆ, ತಿದ್ದುಪಡಿ ಹಾಗೂ ನವೀಕರಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಈಗಾಗಲೇ ಶೇ.85.90 ರಷ್ಟು ನೈಜ ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್‌ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ. ವಿಶೇಷ ಪರಿಷ್ಕರಣೆ ಅಂಗವಾಗಿ ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯಗಳು ನಡೆಯಲಿವೆ. ಜೂನ್ 30ರಿ...
Image
  ದೇವಸೂಗೂರು ಗ್ರಾ.ಪಂ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ:  ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆ ಮಾಡಿ – ಜಿ.ಪಂ ಸಿಇಒ  ಈಶ್ವರ್ ಕುಮಾರ ಕಾಂದೂ   ಜಯ ಧ್ವಜ ನ್ಯೂಸ್  ರಾಯಚೂರು . ಜೂ.5 ರಾಯಚೂರು ತಾಲೂಕಿನ ದೇವಸ್ಗೂರು ಗ್ರಾ.ಪಂ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳೊಂದಿಗೆ  ಜಿಲ್ಲಾ ಪಂಚಾಯತಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಈಶ್ವರ್ ಕುಮಾರ ಕಾಂದೂ ಅವರು ಗಿಡ ನೆಟ್ಟು ನೀರೆರೆವ ಮೂಲಕ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಂತರ ಮಾನ್ಯ ಸಿಇಒ ಅವರು ಮಾತನಾಡಿ ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಜೊತೆಗೆ ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಗಿಡಗಳು ಮನುಕುಲಕ್ಕೆ ಅಮೂಲ್ಯವಾದ ಆಸ್ತಿಯಾಗಿದೆ, ಶುದ್ಧ ಗಾಳಿ, ಮಳೆ ಹಾಗೂ ಜೀವ ವೈವಿಧ್ಯತೆಯ ಸಂರಕ್ಷಣೆಗೆ ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ತಿಳಿಸಿದರು. ಇಂದಿನ ಶಾಲಾ ಮಕ್ಕಳೇ ಮುಂದಿನ ಉತ್ತಮ ನಾಯಕರಾಗಿದ್ದು, ಶಾಲಾ ಆವರಣದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ನೆಟ್ಟ ಗಿಡಗಳ ಸಮರ್ಪಕ ನಿರ್ವಹಣೆ ಮತ್ತು ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಕರೆ ನೀಡಿದರು. ತದನಂತರ ಸ್ವಚ್ಛ ಸಂಕಿರಣ ಘಟಕ ಕ್ಕೆ ಭೇಟಿ ನೀಡಿ ಕಸ...