Posts

Image
  ಸಾಧನೆಗೆ ಕಠಿಣ ಪರಿಶ್ರಮವೇ ಮೂಲಮಂತ್ರ- ವೆಂಕಟೇಶ ಬೇವಿನಬೆಂಚಿ ಜಯ ಧ್ವಜ ನ್ಯೂಸ್ ರಾಯಚೂರು, ಆ.26- ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲಿ ಯಶಸ್ಸು  ಕಾಣಬೇಕಾದರೆ ಮತ್ತು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮವೇ ಮೂಲ ಮಂತ್ರವಾಗಿದೆ. ಸಾಧನೆಗೆ ಕಠಿಣ ಪರಿಶ್ರಮ ಸ್ಪಷ್ಟವಾದ ಗುರಿ,  ಪ್ರಾಮಾಣಿಕ ಪ್ರಯತ್ನ ಇದ್ದರೆ  ಯಶಸ್ಸು ಕಾಣಲು ಸಾಧ್ಯ ಎಂದು ಆಕಾಶವಾಣಿಯ ಕಾರ್ಯಕ್ರಮ ನಿರ್ದೇಶಕರಾದ ವೆಂಕಟೇಶ್ ಬೇವಿನಬೆಂಚಿ ಹೇಳಿದರು.   ಅವರು ನಗರದ ಸರಕಾರಿ ಅಲ್ಪಸಂಖ್ಯಾತರ  ಮುರಾರ್ಜಿ ದೇಸಾಯಿ ಬಾಲಕಿಯತ ವಸತಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದರು. ಎಷ್ಟೇ ಕಷ್ಟ ಬಂದರೂ ನಿರಂತರವಾಗಿ ಕೆಲಸ ಮಾಡುವುದರಿಂದ ಗುರಿ ಮುಟ್ಟಬಹುದು, ಸರಿಯಾದ ವೇಳಾಪಟ್ಟಿ ಮತ್ತು ಸಮಯದ ಸದುಪಯೋಗ ಸಾಧನೆಯನ್ನು ಸುಲಭಗೊಳಿಸುತ್ತದೆ‌  ಮಾಡುವ ಕೆಲಸದಲ್ಲಿ ಸಂಪೂರ್ಣ ಗಮನಹರಿಸಿದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ‌ ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ಹನುಮೇಶ ರವರ ವಹಿಸಿದ್ದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ  ಶ್ರೀ ಸುರೇಶ ಜಿ ಗುರುಗುಂಟ* ರವರು ಮಾತನಾಡಿ ತಾಳ್ಮೆ, ಕಷ್ಟಪಟ್ಟು ಕೆಲಸಮಾಡುವುದು ಗುರಿಸಾಧಿಸುವ  ಛಲ, ಸ್ವಯಂ ಪ್ರೇರಣೆ , ಸಮಯ ಪರಿಪ...
Image
  ಆ.29 ರಂದು ನಗರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಹಾಕಿ ಟೂರ್ನಮೆಂಟ್:                                                                              16 ಜಿಲ್ಲೆಗಳ ತಂಡಗಳು ಭಾಗಿ-ರವೀಂದ್ರ ಜಲ್ದಾರ್ .                                          ಜಯ ಧ್ವಜ ನ್ಯೂಸ್, ರಾಯಚೂರು,ಆ.26- ನಗರದಲ್ಲಿ ಆ.29 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಹಾಕಿ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷರಾದ ರವೀಂದ್ರ ಜಲ್ದಾರ್ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾ ಹಾಕಿ ಅಸೋಸಿಯೇಷನ್ 25ನೇ ವಾರ್ಷಿಕೋತ್ಸವ ಅಂಗವಾಗಿ  ಆ.29ರಂದು ನಗರದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದ ಬಾಸ್ಕೇಟ್ ಬಾಲ್ ಕೋರ್ಟ್ ನಲ್ಲಿ ಬೆಳಿಗ್ಗೆ 10ಕ್ಕೆ ಟೂರ್ನಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಧ್ಯಕ್ಷರಾದ ಕುಮಾರ್ ಬಂಗಾರಪ್ಪ ನೆರವೇರಿಸಲಿದ್ದು , ನಗರ ಶಾಸಕ ಡಾ.ಶಿವರಾಜ ಪ...
Image
  ಅಶ್ವಿನಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ ಜಯ ಧ್ವಜ ನ್ಯೂಸ್, ರಾಯಚೂರು,ಆ.25-   ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಅಶ್ವಿನಿ ಅವರ ಕುಟುಂಬಕ್ಕೆ ಸೂಕ್ತ ನ್ಯಾಯ ಹಾಗೂ ಅಗತ್ಯ ನೆರವು ಒದಗಿಸುವಂತೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಹಾಗೂ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ನಿಯೋಗವು ಅಶ್ವಿನಿ ಹತ್ಯೆ ಪ್ರಕರಣದ ಕುರಿತು ಸಮಗ್ರವಾಗಿ ಚರ್ಚಿಸಿ, ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿತು. ಕುಟುಂಬದ ಅಸಹನೀಯ ನೋವಿನ ಸಂದರ್ಭದಲ್ಲಿ ಸರ್ಕಾರವು ಅಗತ್ಯ ನೆರವು ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಅಜಯ್ ಸಿಂಗ್ ಅವರು ಪ್ರಕರಣದ ಹಿನ್ನೆಲೆ, ತನಿಖೆಯ ಪ್ರಗತಿ ಹಾಗೂ ಸಂತ್ರಸ್ತ ಕುಟುಂಬದ ಪ್ರಸ್ತುತ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಿದರು. ಕುಟುಂಬಕ್ಕೆ ತಕ್ಷಣದ ಆರ್ಥಿಕ ನೆರವು, ಭದ್ರತೆ ಹಾಗೂ ಅಗತ್ಯವಿರುವ ಇತರ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವಂತೆ ಅವರು ಮನವಿ ಮಾಡಿದರು. ಅಲ್ಲದೆ, ಪ್ರಕ...
Image
  ದಲಿತರ ಕಗ್ಗೊಲೆ ಅತ್ಯಾಚಾರ ಖಂಡಿಸಿ ಬೃಹತ್ ಪ್ರತಿಭಟನೆ: ಸಿಐಡಿ ತನಿಖೆಗೆ ಆಗ್ರಹ .                              ಜಯ ಧ್ವಜ ನ್ಯೂಸ್, ರಾಯಚೂರು, ಆ.25 - ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಮೂವರು ದಲಿತರ ಕಗ್ಗೊಲೆ ಘಟನೆ ಖಂಡಿಸಿ ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಸಹಸ್ರಾರು ದಲಿತ ಸಂಘಟನೆಗಳ ಮುಖಂಡರು, ಹದ್ದಿನಾಳ ಭೂಮಾನಂದ ಕೊಲೆ, ಸಿರವಾರದ ಹೊಕ್ರಾಣಿಯಲ್ಲಿ ಅಶ್ವಿನಿ ಅತ್ಯಾಚಾರ ಕೊಲೆ, ರಾಣಿಮ್ಮ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ದಲಿತರ ಮೇಲಿನ ದಬ್ಬಾಳಿಕೆ ಕೊನೆಯಾಗಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒಕ್ಕೂರಲಿನಿಂದ ಒತ್ತಾಯಿಸಲಾಯಿತು. ಈ ಪ್ರತಿಭಟನೆಯಲ್ಲಿ ಮುಖಂಡರಾದ ಎಸ್.ಮಾರೆಪ್ಪ ವಕೀಲರು, ರವೀಂದ್ರ ನಾಥ್ ಪಟ್ಟಿ, ಎಂ.ಆರ್.ಭೇರಿ, ಅಂಬಣ್ಣ ಅರೋಲಿಕರ್, ಹೇಮರಾಜ್ ಅಸ್ಕಿಹಾಳ,ಪಿ.ಯಲ್ಲಪ್ಪ, ವಿಶ್ವನಾಥ್ ಪಟ್ಟಿ ಸೇರಿದಂತೆ ದಲಿತ ಪರ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಸಮಾಜ ಬಾಂಧವರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಕ್ರಾಂತಿ ಗೀತೆ ಮೊಳಗಿದವು.
Image
  ಆ.27 ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಸಪ್ತರಾತ್ರೋತ್ಸವ:                                                                          ತಿರುಮಲ ಮಾದರಿಯಲ್ಲಿ ಶ್ರೀ ಮಠದಿಂದ ಮಂತ್ರಾಲಯದಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಪ್ರಾಯೋಗಿಕ  ಹೆಜ್ಜೆ- ಶ್ರೀ ಸುಬುಧೇಂದ್ರತೀರ್ಥರು.                                                                                                ಜಯ ಧ್ವಜ ನ್ಯೂಸ್, ರಾಯಚೂರು,ಆ.24- ಕಲಿಯುಗದ ಕಾಮಧೇನು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಸಪ್ತ ರಾತ್ರೋತ್ಸವ ಕಾರ್ಯಕ್ರಮ ಆ.27 ರಿಂದ ಸೆ.2ರವರೆಗೆ ನಡೆಯಲಿದೆ ಎಂದು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂ...
Image
  ಆ.26 ರಂದು ನಗರದಲ್ಲಿ ಭಕ್ತಿಭಾವದಿಂದ ಭಗವಾನ್ ಶ್ರೀ ಜಿಹ್ವೇಶ್ವರ ಜಯಂತೋತ್ಸವ ಆಚರಣೆ ಜಯ ಧ್ವಜ ನ್ಯೂಸ್ ,ರಾಯಚೂರು, ಆ. 24- ನಗರದ ತಿಮ್ಮಾಪೂರು ಪೇಟೆಯಲ್ಲಿರುವ ಶ್ರೀ ದತ್ತಾತ್ರೇಯ ಮಂದಿರದ ಆವರಣದಲ್ಲಿ ಭಗವಾನ್ ಆ. 26 ರಂದು ಶ್ರೀ ಜಿಹ್ವೇಶ್ವರ ಜಯಂತೋತ್ಸವವನ್ನು ಭಕ್ತಿಭಾವ ಹಾಗೂ ಸಡಗರದಿಂದ ಆಚರಿಸಲಾಗುವುದು ಎಂದು ಸ್ವಕುಳ ಸಾಳಿ ನೇಕಾರ ಸಮಾಜ (ರಿ) ಪ್ರಕಟಣೆಯಲ್ಲಿ ತಿಳಿಸಿದೆ. ಜಯಂತೋತ್ಸವದ ಅಂಗವಾಗಿ ಅಂದು ಬೆಳಗ್ಗೆ 7 ಗಂಟೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಗವಾನ್ ಶ್ರೀ ಜಿಹ್ವೇಶ್ವರ ಮೂರ್ತಿಗೆ ವಿಶೇಷ ರುದ್ರಾಭಿಷೇಕ ಹಾಗೂ ಪೂಜಾ ವಿಧಿವಿಧಾನಗಳು ನೆರವೇರಲಿದ್ದು, ನಂತರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗುವುದು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಸಮಾಜದ ಮಹಿಳಾ ಮಂಡಳಿಯ ವತಿಯಿಂದ ತೊಟ್ಟಿಲೋತ್ಸವವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಜಯಂತೋತ್ಸವದಲ್ಲಿ ಸಮಾಜದ ಬಾಂಧವರು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭಗವಾನ್ ಶ್ರೀ ಜಿಹ್ವೇಶ್ವರರ ದರ್ಶನ ಪಡೆದು ಪುನೀತರಾಗುವಂತೆ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತರು ತನು, ಮನ, ಧನದಿಂದ ಸೇವೆ ಸಲ್ಲಿಸಿ, ಭಗವಂತನ ಕೃಪೆಗೆ ಪಾತ್ರರಾಗಬೇಕು. ಕಾರ್ಯಕ್ರಮದ ನಂತರ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ಪ್ರಸಾದ ...
Image
  ವೈಟಿಪಿಎಸ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಸಡಿಲಿಕೆ: ೨೭೦ ಕೋಟಿ ರೂ. ಅವ್ಯವಹಾರ ತನಿಖೆ ಕೈಗೊಳ್ಳದಿದ್ದರೆ ರಾಜ್ಯದಂತ ಹೋರಾಟ- ವಿನೋದ್ ರೆಡ್ಡಿ ಜಯ ಧ್ವಜ ನ್ಯೂಸ್ ,ರಾಯಚೂರು,ಆ.24-  ವೈಟಿಪಿಎಸ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಸಡಿಲಿಕೆ ಮಾಡಿ 270  ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ  ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲಾ ಘಟಕದ ಜಿಲ್ಲಾಧ್ಯರಾದ ಎಂ. ವಿನೋದರೆಡ್ಡಿಯವರು   ತನಿಖೆ ಕೈಗೊಳ್ಳದಿದ್ದರೆ ರಾಜ್ಯಾದಂತ ಹೋರಾಟ ಮಾಡಲಾಗುವುದು ಎಂದು   ಕೆಪಿಸಿಎಲ್ ಎಂಡಿ ಗೆ ಮನವಿ ಮಾಡಿದ್ದಾರೆ.   ರಾಯಚೂರು ತಾಲೂಕಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ನಿರ್ವಹಣೆ ಹಾಗೂ ಕಾರ್ಯಾಚರಣೆ ಪ್ರಕ್ರಿಯೆಯಲ್ಲಿ ಭಾರಿ ಅಪರಾತಪರಾವಾಗಿದ್ದು, ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತ ಮಟ್ಟದ ತಂಡ ರಚನೆ ಮಾಡಿ ಸೂಕ್ತ ಕ್ರಮ ಜರುಗಿಸಬೇಕು.    ಜಿಲ್ಲೆಯ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಈ ಎರಡು ಕೇಂದ್ರಗಳು ರಾಜ್ಯಕ್ಕೆ ಶೇ.40 ಕ್ಕಿಂತ ಅಧಿಕ ವಿದ್ಯುತ್ ಪೂರೈಸಲಾಗುತ್ತಿದೆ. ಯಾವ ಉದ್ದೇಶದ ಅನ್ವಯ ಜಿಲ್ಲೆಯ ಜನರು ವಿದ್ಯುತ್ ಘಟಕಗಳ ಸ್ಥಾಪನೆಗೆ ಜಮೀನು ನೀಡಿದರು? ಸರಕಾರ ಯಾವ ಕಾರಣಕ್ಕೆ ಇಲ್ಲಿ ಘಟಕ ಸ್ಥಾಪನೆ ಮಾಡಿದೆ? ಇದರ ಉದ್ದೇಶವೇ ಸಂಪೂರ್ಣ ಬುಡಮೇಲಾಗಿದೆ.   ವೈಟಿಪಿಎಸ್ ಕಂಪನಿ ಕೇರಳ ಮೂಲದ ಭವಾನಿ...