Posts

Image
  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು ರಾಯಚೂರು ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಜಯ ಧ್ವಜ ನ್ಯೂಸ್ ,ರಾಯಚೂರು ಮಾ.1- ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ:   ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.   ಈ ಅನಿರೀಕ್ಷೀತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.   ಜಿಲ್ಲಾಡಳಿತದ ಕ್ರಮಗಳು : ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ.   ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.   ಸಹಾಯವಾಣಿ ಸಂಖ್ಯೆಗಳಿಗೆ ರಾಯಚೂರು ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂ...
Image
  ಜಿಲ್ಲಾಡಳಿತದಿಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಜಯ‌ ಧ್ವಜ ನ್ಯೂಸ್ , ರಾಯಚೂರು ಮಾ.1-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ರೇಣುಕಾಚಾರ್ಯರ  ವಿಚಾರಧಾರೆಗಳು ಹಾಗೂ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಬಣಮಗಿಯ ಶ್ರೀ ರಾಚೋಟೇಶ್ವರ ಶಿವಾಚಾರ್ಯರು ಉಪನ್ಯಾಸ ನೀಡಿ, ಎಲ್ಲ ಧರ್ಮಗಳಿಗೆ ಆಶ್ರಯ ನೀಡಿದ ಧರ್ಮ ವೀರಶೈವ ಧರ್ಮವಾಗಿದೆ. ಮಕ್ಕಳಿಗೆ ಸಂಸ್ಕಾರ, ಲಿಂಗ ಪೂಜೆ ಕಲಿಸಬೇಕು. ಎಲ್ಲ ಧರ್ಮಗಳಿಂತ ವೀರಶೈವ ಧರ್ಮ ದೊಡ್ಡದಾಗಿದೆ. ಪಂಚ ಪೀಠಗಳನ್ನು ಸ್ಥಾಪಿಸಿ ಪಂಚ ಪೀಠಾಧಿಕಾರಿಗಳನ್ನು ನೇಮಿಸಿದರು.  ರೇಣುಕಾಚಾರ್ಯರು ಕೇವಲ ಒಂದು ಸಮಾಜದವರನ್ನು ಪ್ರೀತಿಯಿಂದ ‌ಕಾಣದೆ ಎಲ್ಲ ಸಮಾಜದವರನ್ನು ಪ್ರೀತಿ ವಿಶ್ವಾಸದಿಂದ ನೋಡಿದ್ದಾರೆ ಎಂದರು. ಮೆರವಣಿಗೆಗೆ ಚಾಲನೆ : ಇದಕ್ಕೂ ಮುಂಚೆ, ನಗರದ ಹೈದ್ರಾಬಾದ್ ಬೈಪಾಸ್ ರಸ್ತೆ ಬಳಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ವೃತ್ತದಲ್ಲಿ, ಶ್ರೀ ರೇಣುಕಾಚಾರ್ಯರ ಭಾವಚಿತ್ರದ  ಮೆರವಣಿಗೆಗೆ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎ...
Image
    ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರಗಳ ಸಂಘದ ರಾಜ್ಯ ಅಧ್ಯಕ್ಷರಾದ  ಸಿ. ಬಸವಣ್ಣನವರಿಗೆ ಅಭಿನಂದನಾ ಸಮಾರಂಭ : ನೌಕರರ ಬೇಡಿಕೆ ಈಡೇರಿಸಲು ಕೋರಿಕೆ                                                         ಜಯಧ್ವಜ ನ್ಯೂಸ್  , ರಾಯಚೂರು , ಫೆ.28-  ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರಗಳ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸಿ. ಬಸವಣ್ಣನವರು ಪ್ರಾದೇಶಿಕ ಕೇಂದ್ರರಾಯಚೂರು ವತಿಯಿಂದ ಫೆ.26 ರಂದು ಹಮ್ಮಿಕೊಂಡ ಅಭಿನಂದನಾ ಸಮಾರಂಭಕ್ಕೆ ರಾಯಚೂರು ವೃತ್ತಕ್ಕೆ ಆಗಮಿಸಿದಾಗ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ 659 ರಾಯಚೂರು ವತಿಯಿಂದ ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶ್ರೀ ಸಿ. ಬಸವಣ್ಣ ಅಧ್ಯಕ್ಷರು ಇವರು ಕವಿಪ್ರನಿ ನೌಕರ ಸಂಘಗಳ ಒಕ್ಕೂಟದ ಕಾರ್ಯದರ್ಶಿಗಳಾಗಿದ್ದರಿಂದ ನೌಕರರ ಬೇಡಿಕೆಗಳಾದ, 7528 ನೌಕರರನ್ನು ಒಳಗೊಂಡಂತೆ ನಿಗಮದ ಎಲ್ಲಾ ನೌಕರರಿಗೆ ಹಳೆಯ ಪಿಂಚಣಿ (ಓಪಿಎಸ್) ಜಾರಿಗೆ ಮಾಡುವುದು, ಇಂದಿನ ವರ್ಕ್ ಲೋಡ್ ನಾರ್ಮ್ಸ ಪ್ರಕಾರ ಸಿ ಮತ್ತು ಡಿ ಗುಂಪಿನ ನೌಕರರ ಹುದ್ದೆಗಳನ್ನು ಮಂಜೂರು ಮಾಡಿಸುವುದು, ಮತ್ತು ಜೆಸ್ಕಾಂ ಕಂಪನಿಯ ಎಲ್ಲಾ ನೌಕರ ಮತ್ತು ಕುಟುಂಬದವರಿಗೆ ಕ್ಯಾಶ್ ಲೆಸ್ ಹೆಲ್ತ್ ಕಾರ...
Image
ನಗರದಲ್ಲಿ ಭಾರಿ ವಾಹನ ಸಂಚಾರದಿಂದ ಅಪಘಾತಗಳು ದಿನನಿತ್ಯ:                                              ರಿಂಗ್ ರೋಡ್ ನಿರ್ಮಾಣ ಅತ್ಯಗತ್ಯ                                                                                                                                      ಜಯ ಧ್ವಜ ನ್ಯೂಸ್, ರಾಯಚೂರು ,ಫೆ.28- ನಗರದಲ್ಲಿ ಭಾರಿ ವಾಹನಗಳ ಸಂಚಾರದಿಂದ ದಿನನಿತ್ಯ ಅಪಘಾತಗಳು ಸಂಭವಿಸಿ ಸಾವು ನೋವು ಆಗುತ್ತಿದ್ದು ಇದಕ್ಕೆ ಹೊಣೆ ಯಾರು ಎಂಬುದು ಯಕ್ಷ ಪ್ರಶ್ನೆಯಾಗಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಇಂದು ಮಧ್ಯರಾತ್ರಿ ಲಾರಿ ಡಿಕ್ಕಿಯಾಗಿ ಮೂವರು ಮತ್ತು ಸ್ಟೇಶನ್ ರಸ್ತೆಯಲ್ಲಿ ಬಸ್ ಹರಿದು ಮತ್ತೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಸಂಭವ...
Image
  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ  ಜಯ ಧ್ವಜ ನ್ಯೂಸ್ ,ರಾಯಚೂರು,ಫೆ .27- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬-೨೭ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ರಾಯಚೂರು ಜಿಲ್ಲಾ ಸಮಿತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಜಿಲ್ಲಾಧ್ಯಕ್ಷ ಆರ್.ಗುರುನಾಥ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.೧ರಿಂದ ಆಯಾ ತಾಲೂಕಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ರಾಯಚೂರು ನಗರ ವ್ಯಾಪ್ತಿಯ ಪತ್ರಕರ್ತರು ನಗರದ ಪತ್ರಿಕಾ ಭವನದಲ್ಲಿ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಮತ್ತು ೫೧೦ ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಮಾ.೮ ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆಯಾ ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು ಪರಾಮರ್ಶೆ ನಡೆಸಿ ಮಾ.೧೦ರೊಳಗೆ ಅರ್ಜಿ ಮತ್ತು ಶುಲ್ಕದ ಮೊತ್ತವನ್ನು ಜಿಲ್ಲಾ ಸಮಿತಿಗೆ ರವಾನಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸುವವರು ...
Image
  ವಾಲ್ಮೀಕಿ ವಿವಿಯಲ್ಲಿ ಸೂಕ್ಷ್ಮ  ಜೀವಶಾಸ್ತ್ರ, ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳ ವತಿಯಿಂದ ವಿಶೇಷ ಉಪನ್ಯಾಸ:                                                      ಸುಸ್ಥಿರ ಭವಿಷ್ಯಕ್ಕಾಗಿ ಜೀವವೈವಿಧ್ಯತೆ ಸಂರಕ್ಷಣೆ ಅತ್ಯಗತ್ಯ : ಮಂಜುನಾಥ ಎಸ್ ನಾಯಕ ಜಯಧ್ವಜ ನ್ಯೂಸ್ ,ರಾಯಚೂರು,ಫೆ.೨೬- ಸುಸ್ಥಿರ ಭವಿಷ್ಯಕ್ಕಾಗಿ ಅರಣ್ಯ ಜೀವವೈವಿಧ್ಯತೆ ಸಂಶೋಧನೆ ಮತ್ತು ಸಂರಕ್ಷಣೆಯು ಪರಿಸರ ಸಮತೋಲನ, ಮತ್ತು ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸ್ಥಳೀಯ ಸಮುದಾಯಗಳ ಸೂಕ್ಷö್ಮಜೀವಿಗಳು, ಕೀಟಗಳು, ಔಷಧೀಯ ಸಸ್ಯಗಳು ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜೀವವೈವಿಧ್ಯತೆಯ ಸಂಶೋಧನೆಕಾರರಾದ ಮಂಜುನಾಥ ಎಸ್ ನಾಯಕ ಅವರು ಹೇಳಿದರು.  ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸೂಕ್ಷö್ಮಜೀವಶಾಸ್ತç, ಸಸ್ಯಶಾಸ್ತç ಹಾಗೂ ಪ್ರಾಣಿಶಾಸ್ತç ವಿಭಾಗಗಳು ಇಂದು ಆಯೋಜಿಸಿದ್ದ “ಫಾರೆಸ್ಟ್ ಬಯೋಡೈವರ್‌ಸಿಟಿ : ರಿಸರ್ಚ್ ಆ್ಯಂಡ್ ಕನಜರ್‌ವೇಷನ್  ಫಾರ್ ಎ ಸಸ್ಟೆನೇಬಲ್ ಫ್ಯುಚರ್” ವಿಷಯ ಕುರಿತು ಮಾತನಾಡಿದ ಅವರು, ಅವರ ಸಂಶೋಧನೆಯ ಪ್ರಮುಖ ಸಾಧನೆ ಮತ್ತು ಸಂಶೋಧನೆಯಲ್ಲಿ ಅನುಭವಿಸಿದ ವಿಚಾರವನ್ನು ವ್ಯಕ್...
Image
  ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಸಂಪನ್ನ:                          ಕಾಂತಾರ  ಖ್ಯಾತಿಯ  ನಟ ರಿಷಬ್ ಶೆಟ್ಟಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವರಿಗೆ ಸನ್ಮಾನ.                                                                                                                                         ಜಯ ಧ್ವಜ ನ್ಯೂಸ್, ರಾಯಚೂರು, ಫೆ.24 - ಮಂತ್ರಾಲಯದಲ್ಲಿ ಒಂದು ವಾರದಿಂದ ನಡೆದ ಶ್ರೀ ಗುರುವೈಭವೋತ್ಸವ ಸಂಪನ್ನಗೊಂಡಿದೆ. ಇಂದು ಸಂಜೆ ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ, ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಸೇರಿದಂತೆ ಅನೇಕ ಗಣ್ಯರಿಗೆ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಅನುಗ್ರಹ ಸನ್ಮಾನ ಗೈ...