Posts

Image
  ಮದ್ಯ ಮಾರಾಟವನ್ನು ನೇರವಾಗಿ ಸರ್ಕಾರವೇ ನಡೆಸಲಿ – ಅರುಣ್ ಭೂಪಾಲ್                                                                     ಜಯ ಧ್ವಜ ನ್ಯೂಸ್ , ರಾಯಚೂರು ,ಜು. 18: ಕರ್ನಾಟಕದಲ್ಲಿ ಖಾಸಗಿ ಆಧಾರಿತ ಮದ್ಯ ಮಾರಾಟ ವ್ಯವಸ್ಥೆಯನ್ನು ಹಂತ ಹಂತವಾಗಿ ಸ್ಥಗಿತಗೊಳಿಸಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಸರ್ಕಾರವೇ ನೇರವಾಗಿ ಮದ್ಯ ಮಾರಾಟ ನಡೆಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ, ವಕೀಲರು ಹಾಗೂ ಪ್ರಶ್ನೆ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅರುಣ್ ಭೂಪಾಲ್ ರಾಜ್ಯ ಸರ್ಕಾರಕ್ಕೆ ಸಮಗ್ರ ನೀತಿಯ ಮನವಿಪತ್ರ ಸಲ್ಲಿಸಿದ್ದಾರೆ. ಮನವಿಪತ್ರದಲ್ಲಿ ತಿಳಿಸಿದಂತೆ, ಪ್ರಸ್ತುತ ಖಾಸಗಿ ವ್ಯವಸ್ಥೆಯಿಂದ ಸರ್ಕಾರಕ್ಕೆ ಸಿಗಬೇಕಾದ ಆದಾಯದ ದೊಡ್ಡ ಭಾಗ ಖಾಸಗಿ ವಲಯಕ್ಕೆ ಹೋಗುತ್ತಿದೆ ಎಂದು ವಾದಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನೇರವಾಗಿ ಮದ್ಯ ಮಾರಾಟ ನಡೆಸಿದರೆ ವಾರ್ಷಿಕ ಆದಾಯದಲ್ಲಿ ಗಣನೀಯ ಹೆಚ್ಚಳ ಸಾಧ್ಯವೆಂದು ಅಂದಾಜಿಸಲಾಗಿದೆ.  ಪ್ರಸ್ತುತ ಸರ್ಕಾರಕ್ಕೆ ಸುಮಾರು ₹30,000–40,000 ಕೋಟಿ ಆದಾಯ ಲಭಿಸುತ್ತಿದ್ದು, ರಾಜ್ಯದ ಒಟ್ಟು ಮದ್ಯ ಮಾರುಕಟ್ಟೆ ₹70,000–80,000 ಕೋಟಿಗಳಷ್ಟಿದೆ ಎಂದು...
Image
  ಜಿಲ್ಲಾ ಮಟ್ಟದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೀರ್ಘಕಾಲದ ಸಹಭಾಗಿತ್ವ ಅಗತ್ಯ- ಜಿ.ಕುಮಾರ ನಾಯಕ ಜಯ‌ ಧ್ವಜ ನ್ಯೂಸ್ ,ರಾಯಚೂರು ಜು. 18 - ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ ಮಾತ್ರವಲ್ಲದೆ ವಿವಿಧ ಕಂಪನಿಗಳ ಪರಿಣತಿ, ಅನುಭವ, ತಾಂತ್ರಿಕ ಜ್ಞಾನ ಹಾಗೂ ಸಮಾಜದೊಂದಿಗೆ ದೀರ್ಘಕಾಲದ ಸಹಭಾಗಿತ್ವವೂ ಅಗತ್ಯವಾಗಿದೆ ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಜಿ.ಕುಮಾರ್ ನಾಯಕ ಅವರು ಹೇಳಿದರು. ಜುಲೈ 18ರ ಶನಿವಾರ ದಂದು ನಗರದ ಬಿಜನಗೇರಾ ರಸ್ತೆಯ ನವೋದಯ ತಾಂತ್ರಿಕ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಯಚೂರು ಮಹಾನಗರ ಪಾಲಿಕೆಯ ವತಿಯಿಂದ ರಾಯಚೂರು ಇಂಪ್ಯಾಕ್ಟ್ ಸಮ್ಮಿಟ್-2026ರ ಜಿಲ್ಲಾ ಮಟ್ಟದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಸಮಾವೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ರಾಯಚೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ದಿನಗಳನ್ನು ಸ್ಮರಿಸಿದ ಅವರು, ಈ ಹಿಂದೆ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಬಳಿ ಸಾಕಷ್ಟು ಹಣದ ಕೊರತೆ ಇತ್ತು. ಆದರೆ ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಕ್ಷಾಂತರ ಕೋಟಿ ರೂಪಾಯಿಗಳ ಬಜೆಟ್ ಹೊಂದಿದ್ದರೂ ಅಭಿವೃದ್ಧಿಯ ಎಲ್ಲ ಅಗತ್ಯಗಳನ್ನು ಪೂರೈಸಲು ಅದು ಸಾಕಾಗುತ್ತಿಲ್ಲ. ಆದ್ದರಿಂದ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯವಾಗ...
Image
  ಕ್ಲೈಮ್ಯಾಕ್ಸ್ ಹಂತಕ್ಕೆ ಸಂಪುಟ ವಿಸ್ತರಣೆ ಕಸರತ್ತು:                ಜಿಲ್ಲೆಯಿಂದ ಯಾರಿಗೆ ಸಿಗಲಿದೆ ಸಚಿವ ಸ್ಥಾನ.                                                                               ಜಯ ಧ್ವಜ ನ್ಯೂಸ್, ರಾಯಚೂರು,ಜು.16- ರಾಜ್ಯ ಸರ್ಕಾರದ ಮಂತ್ರಿ ಮಂಡಲ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು ದೆಹಲಿಯಲ್ಲಿ ಸಚಿವರ ಪಟ್ಟಿಗೆ ಹೈಕಮಾಂಡ್ ಅಂತಿಮ ಮುದ್ರೆ ಹಾಕುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ , ಪಕ್ಷದ ವರಿಷ್ಠರು ಆದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸೇರಿದಂತೆ ಪಕ್ಷದ ವರಿಷ್ಠರು ಚರ್ಚಿಸಿ ಸಚಿವರ ಲಿಸ್ಟ್ ಫೈನಲ್ ಮಾಡಲಿದ್ದಾರೆ.  ಬಹುಷಃ ಒಂದು ವಾರದೊಳಗೆ ಸಂಪುಟ ವಿಸ್ತರಣೆಯಾಗುವುದು ಖಚಿತ ಎನ್ನಲಾಗಿದೆ. ಜಿಲ್ಲಾ, ಪ್ರಾದೇಶಿಕ, ಜಾತಿವಾರು, ವರ್ಚಸ...
Image
  ರಾಯಚೂರು ನಗರ ಸ್ವಚ್ಚತೆಗೆ ಸಾರ್ವಜನಿಕರು ಕೈ ಜೋಡಿಸಬೇಕು- ಜುಬಿನ್ ಮೋಹಪಾತ್ರ ಜಯ ಧ್ವಜ ನ್ಯೂಸ್ ,ರಾಯಚೂರು. ಜು. 14- ರಾಯಚೂರು ನಗರ ಸ್ವಚ್ಚತೆಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶ್ರಮಿಸಿದರೆ ಸಾಲದು ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ ಹೇಳಿದರು.  ಅವರು ಮಂಗಳವಾರ ರಾಯಚೂರು ನಗರದ ಲಿಂಗಸೂಗುರ ರಸ್ತೆಯಲ್ಲಿ ರಸ್ತೆ ಸ್ವಚ್ಚಗೊಳಿಸುವ ಎರಡು ಮೆಕ್ಯಾನಿಕಲ್ ವಾಹನಗಳ ಪ್ರಾತ್ಯಕ್ಷಿಕೆ ವೀಕ್ಷಣೆಯ ನಂತರ ಈ ಕುರಿತು ಮಾಹಿತಿ ನೀಡಿ ಮಾತನಾಡಿದರು. ರಾಯಚೂರು ಮಹಾನಗರ  ಪಾಲಿಕೆ ವ್ಯಾಪ್ತಿಯಲ್ಲಿ ಎರಡು ಮೆಕ್ಯಾನಿಕಲ್ ಸ್ವೀಫರ್ ವಾಹನಗಳನ್ನು ಕರೆಸಿ ಡೆಮೊ ಮಾಡಲಾಗಿದೆ ಈ ವಾಹನಗಳಿಂದ ಮಳೆಗಾಲದಲ್ಲಿ ಕಸವನ್ನು ತೆಗೆಯಲು ಅನುಕೂಲವಾಗಲಿದೆ.ರಾಯಚೂರು ನಗರದ ಜನಸಂಖ್ಯೆ ದಿನೆ- ದಿನೆ ಹೆಚ್ಚಾಗುತ್ತಿರುವುದರಿಂದ ಇಂತಹ ವಾಹನಗಳಿಂದ ಅನುಕೂಲವಾಗಲಿದೆ ಇವುಗಳ ಸಾಮರ್ಥ್ಯ ಮೂರುವರೆ ಕ್ಯೂಬಿಕ್ ಮೀಟರ್ ಇದೆ. ಪ್ರಭಾತ್ ಡಿಸೈನ್ ಮತ್ತು ಚೆಲೆಂಜರ್ ಈ ಎರಡು ಕಂಪನಿಗಳು ಭಾಗವಹಿಸಿ ನಮಗೆ ಡೊಮೊ ತೋರಿಸಿವೆ. ಡೆಮೆ ಫಲಿತಾಂಶದ ನಂತರ ಒಂದು ತಿಂಗಳ ನಂತರ ಮತ್ತೊಂದು ಈ ವಾಹನ ತರೆಸುತ್ತೆವೆ ಎಂದರು. ಈ ಹಿಂದೆ ತಾವು ನೋಡಿದ್ದಿರಿ ನಮ್ಮ ಪೌರ ಕಾರ್ಮಿಕರು ಪ್ರತಿದಿನ 40 ರಿಂದ 60 ಜನರು ನಗರದಲ್ಲಿ ಕಸ ಗುಡಿಸಿ ಧೂಳು ಎತ್ತುತ್ತಿದ್ದರು. ಅದನ್ನು ಬೇರೆಕಡೆ ಸಾಗಿಸದೆ ಅಲ್ಲೆ ಒಂ...
Image
  ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ: ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ- ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಜಯ ಧ್ವಜ ನ್ಯೂಸ್ ,ರಾಯಚೂರು ಜು. 13- ಜಿಲ್ಲೆಯಲ್ಲಿ ಕುಡಿಯುವ ನೀರು, ಘನತ್ಯಾಜ ನಿರ್ವಹಣೆ, ಕೆರೆಗಳ ಸಂರಕ್ಷಣೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲೆಯ ಅಧಿಕಾರಿಗಳು ಶ್ರಮಿಸಬೇಕೆಂದು ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜುಲೈ 13ರ ಸೋಮವಾರ ದಂದು ರಾಯಚೂರು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರು ಮಾತನಾಡಿದರು. ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಾಲಕಾಲಕ್ಕೆ ಒದಗಿಸಲು ಸ್ವತ: ಸುಪ್ರೀಂ ಕೋರ್ಟ್ ನಿರ್ದೇಶನವಿದ್ದು, ಸಂಬಂಧಿಸಿದ ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸುವ ಮೂಲಕ ಜನರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ವಾತಾವರಣವನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಶ್ರಮಿಸಬೇಕು. ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಾಲಕಾಲಕ್ಕೆ ಒದಗಿಸಬೇಕೆಂದರು. ಜಿಲ್ಲೆಯಲ್ಲಿ ಮರಳುಗಾರಿಕೆ, ಅರಣ್ಯ ಸಂರಕ್ಷಣೆ ಹಾಗೂ ಗ್ರಾಮೀಣ ಭಾಗದ ಅಂಗಡಿ ಹಾಗೂ ಪಾನ್ ಬೀಡಾ ಅಂಗಡಿಗಳಲ್ಲಿ ಮದ್ಯ ಮಾರಾಟದ ಕುರಿತು ನಿಗಾ ನಿರ್ವಹಿಸಬೇಕು. ಆಕ್ರಮ ಮದ್...
Image
ಮೇಘಾಲಯ ರಾಜ್ಯಪಾಲರಿಂದ ಕುಲಪತಿ ಶಿವಾನಂದ ಕೆಳಗಿನಮನಿ ಇವರಿಗೆ ಪ್ರಶಸ್ತಿ ಪ್ರದಾನ .   ಜಯ ಧ್ವಜ ನ್ಯೂಸ್ ,ರಾಯಚೂರು ಜು. 13- ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನ ಮನಿ ಇವರಿಗೆ ಮೇಘಾಲಯದ ಶಿಲಾಂಗಿನ ಲೋಕಭವನದಲ್ಲಿ  ರವಿವಾರ ಸಂಜೆ    ನಡೆದ  ರಾಷ್ಟ್ರಮಟ್ಟದ  ಹೆಮ್ಮೆಯ ಸಾಧಕರು ಪ್ರಶಸ್ತಿಯನ್ನು ಮೇಘಾಲಯ ರಾಜ್ಯಪಾಲರಾದ ಗೌರವಾನ್ವಿತ ಸಿ ಎಚ್ ವಿಜಯಶಂಕರ್ ಪ್ರದಾನ ಮಾಡಿದರು.  ರಾಯಚೂರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಆಗಮಿಸಿ ಒಂದು ವರ್ಷವಾಗಿದ್ದು ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಶೈಕ್ಷಣಿಕವಾಗಿ ಆಡಳಿತಾತ್ಮಕವಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಗೌರವಾನ್ವಿತ ಕುಲಪತಿಗಳಾದ ಶಿವಾನಂದ ಕೆಳಗಿನಮನಿ ಈ ಪ್ರಶಸ್ತಿ ಲಭಿಸಿದ್ದು ಅವರ ಅಪಾರ ಅಭಿಮಾನಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಖುಷಿ ತಂದಿದೆ.  ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೇಘಾಲಯ ರಾಜ್ಯ ಸರ್ಕಾರದ ವಿಶೇಷ ಅಧಿಕಾರಿಗಳು ಮತ್ತು ವಿಶ್ವವಾಣಿ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ವಿಶ್ವೇಶ್ವರಭಟ್ ಇನ್ನಿತರರಿದ್ದರು .
Image
    ಪ್ರೊ.ಶಿವಾನಂದ ಕೆಳಗಿನಮನಿರವರಿಗೆ ಮೇಘಾಲಯ ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ ಜಯ ಧ್ವಜ ನ್ಯೂಸ್ , ರಾಯಚೂರು,ಜು.13- ಜನಶಕ್ತಿ ವಿಶ್ವಸ್ಥ ಮಂಡಳಿ ಲೋಕ ಧ್ವನಿ ‘ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ’ಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಆಯ್ಕೆಯಾಗಿದ್ದು, ಇದೇ ಜುಲೈ ೧೧ ರಂದು ಶನಿವಾರ ಶಿಲ್ಲಾಂಗ್‌ನ ಲೋಕಭವನದಲ್ಲಿ ಹಮ್ಮಿಕೊಂಡಿದ್ದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಅವರು ಕುಲಪತಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರಿಗೆ ಪ್ರಶಸ್ತಿ ಒಲಿದಿರುವುದಕ್ಕೆ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ, ಉಪಕುಲಸಚಿವರು, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರು, ವಿವಿಧ ವಿಭಾಗಗಳ ನಿಕಾಯ ಡೀನರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ .