Posts

Image
  ಜನರಿಗೆ ಸೇವೆ ಸಲ್ಲಿಸುತ್ತಿರುವುದು ತೃಪ್ತಿ ದಾಯಕವಾಗಿದೆ - ಶಾಸಕ ಡಾ. ಶಿವರಾಜ್ ಪಾಟೀಲ್     ಜಯ ಧ್ವಜ ನ್ಯೂಸ್ ರಾಯಚೂರು , ಜೂ.3-  ಜನರಿಗೆ ಸೇವೆ ಸಲ್ಲಿಸುತ್ತಿರುವುದು ತೃಪ್ತಿದಾಯಕವಾಗಿದೆ ಎಂದು ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು. ಅವರಿಂದು ನಗರದ ನವೋದಯ ಆಸ್ಪತ್ರೆ ಹತ್ತಿರದ ಸಿದ್ದನಾಥ್ ಕಾಲೋನಿಯಲ್ಲಿನ ಬ್ರಾಹ್ಮಣ ಸಮಾಜದ ಮಹತ್ವಾಕಾಂಕ್ಷೆಯ ಗಾಯತ್ರಿ ಭವನದ ಮೊದಲನೆಯ ಮಹಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ  ನೆರವೇರಿಸಿ ಮಾತನಾಡಿದರು. 25 ಲಕ್ಷ  ರೂಪಾಯಿಗಳ ಕಾಮಗಾರಿಗೆ  ಚಾಲನೆ ನೀಡಲಾಗುತ್ತಿದ್ದು ಬ್ರಾಹ್ಮಣ ಸಮಾಜವು ತಮ್ಮ ಮೇಲೆ ಇಟ್ಟಂತಹ ವಿಶ್ವಾಸ, ಅಭಿಮಾನಕ್ಕೆ ಯಾವತ್ತೂ ಚಿರಋಣಿಯಾಗಿದ್ದು, ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಲು ಸಮಾಜದ ಕೊಡುಗೆ ಅಪಾರವಾಗಿದ್ದು ಆ ಒಂದು ಸಮಾಜಕ್ಕೆ ಉಪಯೋಗವಾಗುವಂತಹ ಗಾಯಿತ್ರಿ ಭವನ ನಿರ್ಮಾಣ ತನ್ನ ಹೊಣೆ ಎಂದು ಭರವಸೆ ನೀಡಿದಂತೆ ಇಂದು ಅದರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಮಾತು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು. ಮುಂದೆಯೂ ಸಹ ಇದೇ ರೀತಿ ಇನ್ನೂ ಹತ್ತು ಹಲವು ಸೇವೆಗಳನ್ನು ಮಾಡುತ್ತಾ ಈ ಸಮಾಜದೊಂದಿಗೆ ಬೆಂಬಲವಾಗಿ ಇರುತ್ತೇನೆ ಎಂದು ಸಹ ನುಡಿದರು. ಈ ಸಂದರ್ಭದಲ್ಲಿ ಪಂಡಿತರು , ಜಿಲ್ಲಾ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ, ಸಮಸ್ತ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಸಮಾಜದ ಗಣ್ಯರು, ಹಿರಿಯರು,  ಯು...
Image
  ಜೂನ್ 4 ರಂದು ಕೇಂದ್ರ ಹಣಕಾಸು  ಸಚಿವೆ ನಿರ್ಮಲಾ ಸೀತಾರಾಮನ್  ರಾಯಚೂರು ಜಿಲ್ಲಾ ಪ್ರವಾಸ ಜಯ ಧ್ವಜ ನ್ಯೂಸ್ ,ರಾಯಚೂರು ಜೂನ್ ,2- ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜೂ 4 ರಂದು ರಾಯಚೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 11:15ಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬಡೆಪಲ್ಲಿ ಗ್ರಾಮದಿಂದ ನಿರ್ಗಮಿಸಿ, ಮಧ್ಯಾಹ್ನ 12 ಗಂಟೆಗೆ ರಾಯಚೂರಿನ ಶಕ್ತಿನಗರಕ್ಕೆ ಆಗಮಿಸಿ ಶಕ್ತಿ ನಗರದ ಆರ್.ಟಿ.ಪಿ.ಎಸ್. ಅತಿಥಿ ಗೃಹದಲ್ಲಿ ರಾಯಚೂರು ಮತ್ತು ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 2:30ಗಂಟೆಗೆ ಶಕ್ತಿನಗರದ ಆರ್.ಟಿ.ಪಿ.ಎಸ್ ಅತಿಥಿ ಗೃಹದಿಂದ ನಿರ್ಗಮಿಸಿ, ರಾಯಚೂರಿನ ನೂತನ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಭಾರತ ವನ ಪ್ಲಾಂಟೇಷನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4 ಗಂಟೆಗೆ ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿಜಯನಗರ ಜಿಲ್ಲೆಯ ಹೊಸಪೇಟೆ ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  ಶಾಸಕ ಬಸನಗೌಡ ದದ್ದಲ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ.                                                                                     ಜಯ ಧ್ವಜ ನ್ಯೂಸ್, ರಾಯಚೂರು, ಜೂ.2- ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ರವರಿಗೆ ಸಚಿವ ಸ್ಥಾನ ನೀಡಬೇಕೆಂದು ಗಿಲ್ಲೆಸುಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಂದ್ರಪ್ಪ ಮಟಮಾರಿ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎರೆಡು ಬಾರಿ ಶಾಸಕರಾಗಿ ಆಯ್ಕೆಯಾಗಿ ಜನಪರ ಕಾರ್ಯಗಳನ್ನು ಮಾಡುತ್ತಿರುವ ದದ್ದಲ್ ರವರು ಕ್ಷೇತ್ರದಲ್ಲಿ ಕೆರೆ ತುಂಬುವ ಯೋಜನೆ, ಬ್ರಿಡ್ಜ್ ಕಂ ಬ್ಯಾರೇಜ್, ಏತ ನೀರಾವರಿ, ಸೇತುವೆಗಳು, ರಸ್ತೆಗಳು ಮುಂತಾದ ಮೂಲಭೂತ ಸೌಕರ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಅಲ್ಲದೆ ರಾಯಚೂರು ವಿವಿಗೆ ಮಹರ್ಷೀ ವಾಲ್ಮೀಕಿ ವಿವಿ ಯಂದು ನಾಮಕರಣ ಮಾಡಲು ಶ್ರಮಿಸಿದ್ದು ಕ್ಷೇತ್ರದಲ್ಲಿ ಎಲ್ಲಾ ಜನಾಂಗದ ಜನರೊಂದಿಗೆ ಸ್ನೇಹಮಯವಾಗಿದ್ದು ಕಾರ್ಯಕರ್ತರಿಗೂ ಪಕ್ಷ , ಸರ್ಕಾರದಲ್ಲಿ ಸ್ಥಾನಮಾನ ಸಿಗುವಲ್ಲಿ ಶ್ರಮಿಸುತ್ತಿದ್ದು ಅವರನ್ನು ಸಚಿವರನ್ನಾಗಿ ಮಾಡಿದರೆ ಮತ್ತಷ್...
Image
  ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ: ಜಿಲ್ಲೆಯಲ್ಲಿ ಜೂನ್ 20 ರಿಂದ  ಪ್ರಾರಂಭವಾಗುವ  ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯಲಿ - ಪೂವಿತಾ ಎಸ್ . ಜಯ ಧ್ವಜ ನ್ಯೂಸ್ ,ರಾಯಚೂರು ,ಜೂ. 1-  ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರ ಅಧ್ಯಕ್ಷತೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ( ಎಸ್.ಐ.ಆರ್)ರ ಕುರಿತು ಇಂದು  ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ಜರುಗಿತು. ಈ ವೇಳೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಮೂರನೇ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ರಾಯಚೂರು ಜಿಲ್ಲೆಯಲ್ಲಿ ಜೂನ್ 20 ರಿಂದ ಪ್ರಕ್ರಿಯೆಯು ಆರಂಭವಾಗಿ ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದೆ ಎಂದರು. ದಿನಾಂಕ:01.10.2026 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20 ರಿಂದ 29ರವರೆಗೆ ಈ ಪ್ರಕ್ರಿಯೆಯ ಸಿದ್ಧತೆ, ಪ್ರಕ್ರಿಯೆಯ ಭಾಗವಾಗಿರುವ ಎಲ್ಲಾ ಹಂತದ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ತರಬೇತಿ, ಅವಶ್ಯ...
Image
  ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್ ,ರಾಯಚೂರು ಜೂ.1-  ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಅವರಿಂದು  ನಗರದ ರೈಲ್ವೆ ಸ್ಟೇಷನ್ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಉನ್ನತ ಹುದ್ದೆಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಇತರೆ ವಿವಿಧ ಉನ್ನತ ಹುದ್ದೆಗಳ ಕನಸು ಕಾಣಬೇಕು. ವಿದ್ಯಾರ್ಥಿಗಳು ಯಾರು ಶಾಲೆಯನ್ನು ಬಿಡದಂತೆ ನೋಡಿಕೊಳ್ಳಬೇಕು. ಶಾಲೆ ಬಿಟ್ಟಲ್ಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಶಿಕ್ಷಕರಿಂದ ಆಗಬೇಕೆಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಶಾಲೆಯಲ್ಲ...
Image
  ಜಿಲ್ಲೆಗೆ ಸಚಿವ ಸ್ಥಾನ ದೆಹಲಿಯಲ್ಲಿ ಕಸರತ್ತು: ಸಚಿವಾಕಾಂಕ್ಷಿಗಳಿಂದ ಹೈಕಮಾಂಡ್ ಭೇಟಿ.                                 ಜಯ ಧ್ವಜ ನ್ಯೂಸ್, ರಾಯಚೂರು,ಜೂ.1-                             ಡಿಕೆ ಶಿವಕುಮಾರ್ ರವರು ಜೂ.3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ನಿಗದಿಯಾದ ಬೆನ್ನಲ್ಲೆ ಸಚಿವ ಸಂಪುಟ ರಚನೆ ಕಸರತ್ತು ವೇಗ ಪಡೆದಿದ್ದು ಸಚಿವಾಕಾಂಕ್ಷಿಗಳು ಹೈಕಮಾಂಡ್ ಭೇಟಿ ಮಾಡಿ ತಮಗೆ ಅವಕಾಶ ನೀಡುವಂತೆ ಕೋರುತ್ತಿದ್ದಾರೆ.                     ಜಿಲ್ಲೆಯ ಕೆಲ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದು ಮೊದಲ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನಶೀಲರಾಗಿದ್ದಾರೆ. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ದೆಹಲಿಗೆ ದೌಡಾಯಿಸಿದ್ದು ತೀರ್ವ ಲಾಬಿ ನಡೆಸಿದ್ದಾರೆ ಎನ್ನಲಾಗಿದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗದ ಕಾರಣ ಈ ಬಾರಿಯಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂಬ ಛಲ...
Image
  ಎನ್ ಹೆಚ್ 748ಎ ನಿರ್ಮಾಣ  ರೈತರ ಜಮೀನುಗಳಿಗೆ ಸಂಪರ್ಕ ರಸ್ತೆ ಒದಗಿಸಲು ಆಗ್ರಹ- ಶರಣಪ್ಪ ಉದ್ಬಾಳ.                                                         ಜಯ ಧ್ವಜ ನ್ಯೂಸ್, ರಾಯಚೂರು, ಜೂ.1- ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 748ಎ ಯಲ್ಲಿ ರೈತರ ಜಮೀನುಗಳಿಗೆ ಸಂಪರ್ಕ ರಸ್ತೆ ಒದಗಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ 748ಎ  ಜಮೀನುಗಳ ರಸ್ತೆ ವಂಚಿತ ರೈತರ ಹೋರಾಟ ಸಮಿತಿ ಸಂಚಾಲಕ ಶರಣಪ್ಪ ಉದ್ಬಾಳ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಸ್ಕಿ ತಾಲೂಕಿನ ಗೋನವಾರ, ಮುಸ್ಲಿ ಕಾರ್ಲಕುಂಟಿ, ಬಸ್ಸಾಪುರ ಮುಂತಾದ ಗ್ರಾಮಗಳ ಕೆಲ ಜಮೀನುಗಳು ರಾಷ್ಟ್ರೀಯ ಹೆದ್ದಾರಿ ಪಕ್ಕಯಿದ್ದು ಅವುಗಳಿಗೆ ಸಂಪರ್ಕ್ ರಸ್ತೆ ಒದಗಿಸದ ಕಾರಣ ರೈತರಿಗೆ ಜಮೀನುಗಳಿಗೆ ಹೋಗಲು ಟ್ರಾಕ್ಟರ್ ಇನ್ನಿತರ ಕೃಷಿ ಉಪಕರಣ ಹೋಗಲು ಅನಾನುಕೂಲತೆಯಿದ್ದು  ಈ ಹಿಂದೆ ನೀಡಿದ ಭರವಸೆಯಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಂಪರ್ಕ ರಸ್ತೆ ಒದಗಿಸುವುದಾಗಿ ತಿಳಿಸಿದ್ದರು ಆದರೆ ಇದೀಗ ಅವರು ತಮ್ಮ ಜವಾಬ್ದಾರಿಯಿಂದ ನುಣಚಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಈ ಹಿಂದಿನ ಜಿಲ್ಲಾಧಿಕಾರಿಗಳಿಗೂ ನಮ್ಮ ಸಮಸ್ಯೆ ವಿವರಿ...