Posts

Image
  ರಾಯಚೂರು ಜಿಲ್ಲಾ ಉತ್ಸವ ಅಂಗವಾಗಿ ಶ್ವಾನಗಳ ಪ್ರದರ್ಶನ ಉದ್ಘಾಟನೆ: ಪ್ರಾಣಿಗಳ ಮೇಲೆ ದಯೆ ಇರಲಿ ಸಚಿವ ಎನ್.ಎಸ್.ಭೋಸರಾಜು ಸಲಹೆ ಜಯ ಧ್ವಜ ನ್ಯೂಸ್ ,ರಾಯಚೂರು ಫೆ.6  ಶ್ವಾನಗಳು ಸೇರಿದಂತೆ ಎಲ್ಲ ಪ್ರಾಣಿಗಳ ಮೇಲೆ ದಯಾ ಭಾವ ಇರಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅವರಿಂದು ನಗರದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಆವರಣದಲ್ಲಿ ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ವಾನಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಾಣಿ ಹಿಂಸೆ ವಿರುದ್ಧ ಜಾಗೃತಿ ಮೂಡಿಸುವುದು, ಶ್ವಾನಗಳ ಆರೈಕೆ, ಆಹಾರ, ಲಸಿಕೆ ಮತ್ತು ವೈದ್ಯಕೀಯ ಚಿಕಿತ್ಸೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು. ಈ ವೇಳೆ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಮಾತನಾಡಿ, ರಾಯಚೂರು ಉತ್ಸವ ಅಂಗವಾಗಿ ವಿವಿಧ ತಳಿಯ ಶ್ವಾನಗಳ ಪ್ರದರ್ಶನ ಸೇರಿದಂತೆ ಹತ್ತಾರು ಕಾರ್ಯಕ್ರಮಗಳ ನೋಡುವ ಭಾಗ್ಯ ಜಿಲ್ಲೆಯ ಸಾರ್ವಜನಿಕರಿಗೆ ಸಿಕ್ಕಿದೆ. ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಉತ್ಸವದ ಯಶಸ್ವಿಗೆ ಪ್ರ...
Image
ರಾಯಚೂರು ಜಿಲ್ಲಾ ಉತ್ಸವ ಅಂಗವಾಗಿ ಮಹಿಳಾ ಕವಿಗೋಷ್ಠಿಯ ಉದ್ಘಾಟನೆ : ಸ್ತ್ರೀ ಭೂಮಿಯ ಕಾವ್ಯ-ಹಿರಿಯ ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿ ಜಯ ಧ್ವಜ ನ್ಯೂಸ್ ,ರಾಯಚೂರು ಫೆ.6- ರಾಯಚೂರು ಉತ್ಸವದ ಅಂಗವಾಗಿ ಫೆ. 6ರಂದು ಮುಂಜಾನೆ 10:40ಕ್ಕೆ ಮಹಿಳಾ ಸಮಾಜದ ಆವರಣದಲ್ಲಿ ಆಯೋಜಿಸಲಾದ ಮಹಿಳಾ ಕವಿಗೋಷ್ಠಿಯನ್ನು ಹಿರಿಯ ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, “ನಾನು ಒಬ್ಬಂಟಿ, ಸಾಮಾನ್ಯ ಸಾಹಿತಿ. ಆದರೂ ನನ್ನನ್ನು ಗುರುತಿಸಿ ಜಿಲ್ಲಾಡಳಿತವು ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಅಪಾರ ಸಂತಸ ತಂದಿದೆ” ಎಂದು ಭಾವುಕರಾಗಿ ಹೇಳಿದರು. “ಮಗುವಿನ ಜನ್ಮದೊಂದಿಗೆ ಕವನವೂ ಹುಟ್ಟಿದೆ. ನಕ್ಷತ್ರಗಳು ಆಕಾಶದ ಕವಿತೆಗಳಾದರೆ, ಸ್ತ್ರೀ ಭೂಮಿಯ ಕಾವ್ಯ” ಎಂದು ಅವರು ಅಭಿಪ್ರಾಯಪಟ್ಟರು. ಕವನ ಎಲ್ಲರಿಗೂ ಒಲಿಯುವುದಿಲ್ಲ. ಅದು ಒಲಿದರೆ ನಿದ್ರೆ ಕಸಿದುಕೊಳ್ಳುತ್ತದೆ, ಅಕ್ಟೋಪಸ್‌ನಂತೆ ಅಕ್ರಮಿಸುತ್ತದೆ. ಕಲಿಸಿದರೆ ಬರದ ಕವನ ಕನವರಿಕೆಯಲ್ಲೂ ಭಾವಗಳ ಮಂಥನ ನಡೆಸುತ್ತದೆ. ಕಾವ್ಯ ಸಮಾಜವನ್ನು ಸ್ಪಂದಿಸಬೇಕು. ಜಗತ್ತನ್ನು ಕವಿ ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ ಎಂದು ತಿಳಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ಭಾರತಿ ಕುಲಕರ್ಣಿ, ಡಾ. ಶಿವಲೀಲಾ ಬಸನಗೌಡ ಅವರು ಕವನ ವಾಚಿಸಿದರು. “ಬಾರ್ ಮುಚ್ಚಿ ಎಲ್ಲೆಂದರಲ್ಲಿ ಅವರದೇ ದರ್ಬಾರ್” ಎಂಬ ಶೀರ್ಷಿಕೆಯ ಮೂಲಕ ಯೋಜನೆಗಳಿಂದ ಜನರಿಗೆ ಶಾಶ್ವತ ಪರಿಹಾರ ಸಿಗಬೇಕೆಂಬ ಆಶಯ...
Image
  ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಚುನಾವಣೆಗೆ ಜಿ‌.ಎಸ್.ವೀರಭದ್ರಪ್ಪ ವಕೀಲರಿಂದ ನಾಮ ಪತ್ರ ಸಲ್ಲಿಕೆ. ಜಯ ಧ್ವಜ ನ್ಯೂಸ್  ,ರಾಯಚೂರು, ಫೆ.6 -  ರಾಜ್ಯದಲ್ಲಿ ಮಾರ್ಚ್ 11 ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು  ಚುನಾವಣೆಯ ಅಂಗವಾಗಿ ಇಂದು ಬೆಂಗಳೂರಿನ ವಕೀಲರು ಪರಿಷತ್ ಕಚೇರಿಯಲ್ಲಿ ತಮ್ಮ ತಂಡದೊಂದಿಗೆ ರಾಯಚೂರಿನ ವಕೀಲರು ಹಾಗೂ ರಾಯಚೂರು ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಜಿ‌.ಎಸ್. ವೀರಭದ್ರಪ್ಪ ರವರು ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿಯಾದ ಜಿ.ಎಸ್. ವೀರಭದ್ರಪ್ಪ,  ರಾಜ್ಯದ ವಕೀಲರ ಹಕ್ಕುಗಳು, ವೃತ್ತಿ ಗೌರವ, ಸಾಮಾಜಿಕ ಭದ್ರತೆ ಹಾಗೂ ವಕೀಲರ ಕಲ್ಯಾಣ ಯೋಜನೆಗಳ ಬಲಪಡಿಸುವುದು ನನ್ನ ಮುಖ್ಯ ಗುರಿಯಾಗಿದೆ, ವಕೀಲರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ, ಯುವ ವಕೀಲರಿಗೆ ಮಾರ್ಗದರ್ಶನ, ಕಾರ್ಯಾಗಾರಗಳು, ಮಹಿಳಾ ವಕೀಲರಿಗೆ ವಿಶೇಷ ಸೌಲಭ್ಯ, ಕಲ್ಯಾಣ ನಿಧಿಗಳ ಸಮರ್ಪಕ ಬಳಕೆ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಬದ್ಧತೆಯಿಂದ ಕೆಲಸ ಮಾಡುವೆ ಎಂದು ಹೇಳಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಕೀಲರು ಉಪಸ್ಥಿತರಿದ್ದು, ಬೆಂಬಲ ವ್ಯಕ್ತಪಡಿಸಿದರು. ವಕೀಲರ ಏಕತೆ ಮತ್ತು ಶಕ್ತಿ ಮೂಲಕ ಪರಿಷತ್ತನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಸಂಕಲ್ಪ ವ್ಯಕ್ತವಾಯಿತು. ರಾಜ್ಯದ ಎಲ್ಲಾ ನ್ಯಾಯವಾದಿಗಳು ತಮ್ಮ ಮೊದಲ ಪ್ರಾಶಸ್ತ್ಯದ ಅಮೂಲ್ಯವಾದ ಮ...
Image
  ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಅದ್ದೂರಿ ಚಾಲನೆ: ನಾಡಿನ ವೈಭವ, ಇತಿಹಾಸ ಯುವಪೀಳಿಗೆಗೆ ಪರಿಚಯಿಸಲು ಉತ್ಸವಗಳು ಪೂರಕ - ಸಚಿವ ಡಾ. ಶರಣಪ್ರಕಾಶ್ ಪಾಟೀಲ್.                  ಸಂಜಿತ ಹೆಗಡೆ ಸಂಗೀತ ಸುನಾಮಿ ಜಯ ಧ್ವಜ ನ್ಯೂಸ್ ,ರಾಯಚೂರು ಫೆ.5 - ವೈವಿಧ್ಯಮಯ ಇತಿಹಾಸ, ವೈಭವ, ಕಲೆ, ಸಂಸ್ಕೃತಿಯನ್ನು ಹೊಂದಿರುವ ಈ ನಾಡಿನ ಹಿರಿಮೆಯನ್ನು ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲಾ ಉತ್ಸವಗಳು ಪೂರಕವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಫೆ.5ರಂದು ರಾಯಚೂರಿನ ಕೃಷಿ ವಿ.ವಿ. ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.  ಜನರ ಆಶಯ ಮತ್ತು ಅಪೇಕ್ಷೆಯಂತೆ ಇದೀಗ 22 ವರ್ಷಗಳ ಬಳಿಕ ರಾಯಚೂರು ಜಿಲ್ಲೆ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ರಾಯಚೂರು ಜಿಲ್ಲೆ ತನ್ನದೇ ಆದ ಇತಿಹಾಸ, ಪರಂಪರೆ, ವೈಭವವನ್ನು ಹೊಂದಿದ್ದು, ಅದೇ ವೈಭವವನ್ನು ಮರುಕಳಿಸುವಂತೆ ಮಾಡುವಲ್ಲಿ ಉತ್ಸವ ಯಶಸ್...
Image
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಕವಿಗೋಷ್ಠಿ  : ಕಾವ್ಯವು ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬೆಳೆಸುವ ಬಲಿಷ್ಠ ಅಸ್ತ್ರವಾಗಿದೆ -  ರಂಗಣ್ಣ ಪಾಟೀಲ್ ಅಳ್ಳುಂಡಿ ಜಯ ಧ್ವಜ ನ್ಯೂಸ್ ,ರಾಯಚೂರು ಫೆ.5 - ಕಾವ್ಯವು ಸಮಾಜದಲ್ಲಿ ಮಾನವೀಯ ಮೌಲ್ಯಗಳು ಮತ್ತು ಸೌಹಾರ್ದತೆಯನ್ನು ಬೆಳೆಸುವ ಬಲಿಷ್ಠ ಅಸ್ತ್ರವಾಗಿದೆ ಎಂದು ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಹೇಳಿದರು. ಅವರು ಇಂದು  ನಗರದ ಮಹಿಳಾ ಸಮಾಜ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ರಾಯಚೂರು ಜಿಲ್ಲೆಯ ಕಾವ್ಯ ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ಇತ್ತೀಚಿನ ದಿನಗಳಲ್ಲಿ ಹಿರಿಯರು ಮತ್ತು ಕಿರಿಯರು ತಮ್ಮ ತಮ್ಮ ಕಾವ್ಯ ಸೃಜನಶೀಲತೆಯ ಮೂಲಕ ರಾಜ್ಯದ ಗಮನ ಸೆಳೆಯುತ್ತಿರುವುದು ನಮಗೆಲ್ಲ ಅಪಾರ ಸಂತೋಷ ನೀಡುತ್ತಿದೆ. ಓದುಗರು ಮತ್ತು ಬರಹಗಾರರು ಸದಾ ಸಮಾಜದ ಒಳಿತನ್ನು ಬಯಸುವ ಸಹೃದಯಿಗಳಾಗಿರಬೇಕು. ಕವಿತೆ ಪ್ರಾಮಾಣಿಕ ಮನಸ್ಸಿನ ಅಭಿವ್ಯಕ್ತಿಯಾಗಿದ್ದು, ಕವಿ ಸಮಾಜದಲ್ಲಿ ನಡೆಯುವ ಘಟನೆಗಳಿಗೆ ಸ್ಪಂದಿಸಿ ತನ್ನ ಅನುಭವಗಳನ್ನು ಹೃದಯಸ್ಪರ್ಶಿಯಾಗಿ ವ್ಯಕ್ತಪಡಿಸಬೇಕಾಗಿದೆ ಎಂದರು. ಎಡೆದೊರೆ ನಾಡು ರಾಯಚೂರ...
Image
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಮೆರವಣಿಗೆಯಲ್ಲಿ ಕಲೆ, ಸಂಸ್ಕೃತಿ, ಪರಂಪರೆಯ ಮೆಲುಕು ಜಯ ಧ್ವಜ ನ್ಯೂಸ್ ,ರಾಯಚೂರು ಫೆ.5 - ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಗುರುವಾರ ರಾಯಚೂರಿನ ಕರ್ನಾಟಕ ಸಂಘದ ಆವರಣದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದವರೆಗೆ ನಡೆದ ವಿಜ್ರಂಭಣೆಯ ಮೆರವಣಿಗೆಯು ಈ ಭಾಗದ ಕಲೆ, ಸಂಸ್ಕೃತಿ, ಪರಂಪರೆಯ ಮೆಲುಕು ಹಾಕುವ ರೀತಿಯಲ್ಲಿ ವಿಜ್ರಂಭಣೆಯಿಂದ ನಡೆಯಿತು.   ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಪಿಸಿ, ಬಳಿಕ ಡೊಳ್ಳು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್ ಶಿವರಾಜ ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಸೇರಿದಂತೆ ಇತರೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕರ್ನಾಟಕ ಸಂಘದ ಆವರಣದಿಂದ ಆರಂಭಗೊಂಡ ಮೆರವಣಿಗೆಯು ಬಂಗಾರ ಬಜ...
Image
  ಅಲ್ಪಸಂಖ್ಯಾತರ ಶಾಶ್ವತ ಅಧ್ಯಯನ ಪೀಠ ಸ್ಥಾಪಿಸಲು ಡಾ.ರಝಾಕ್ ಉಸ್ತಾದ್ ಮನವಿ ಜಯ ಧ್ವಜ ನ್ಯೂಸ್ , ರಾಯಚೂರು,ಪೆ.5 - ವಿವಿಧ ಪ್ರದೇಶಗಳಲ್ಲಿ ಹಂಚಿಹೋಗಿರುವ ಕನ್ನಡ ಪ್ರದೇಶಗಳನ್ನು ಒಳಗೊಂಡಿರುವ ವಿಶಾಲ ಕರ್ನಾಟಕ ರಾಜ್ಯವಾಗಿರುವದರಿಂದ, ವಿವಿಧ ಪ್ರದೇಶಗಳ ರಾಜ, ಮಹಾರಜರ ಆಡಳಿತಕ್ಕೆ ಒಳಪಟ್ಟು ವಿಭಿನ್ನ ಸಾಂಸ್ಕೃತಿಕ ಹಿನ್ನಲೆಯನ್ನು ಹೊಂದಿದೆ, ಅದೇ ರೀತಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವು ಸಹ ವಿಭಿನ್ನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿನ್ನಲೆಯನ್ನು ಹೊಂದಿರುತ್ತದೆ, ಆದ್ದರಿಂದ ಶ್ರೀ  ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ  ರಾಯಚೂರು ಇಲ್ಲಿ ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸುವದರ ಮೂಲಕ ಸದರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ರ‍್ಥಿಕ, ಐತಿಹಾಸಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗಳ ಕುರಿತು ನಿರಂತರ ಅಧ್ಯಯನ ಮಾಡಬಹುದಾಗಿದೆ. ಇದೇ ರೀತಿಯ ವಿವಿಧ ಸಮುದಾಯಗಳ ಅಧ್ಯಯನ ಪೀಠಗಳು ರಾಜ್ಯವ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಕಾರ್ಯ ನಿರ್ಹಿವಹಿಸುತ್ತಿವೆ, ಅದಕ್ಕೆ ಬೇಕಾಗುವ ರ‍್ಥಿಕ ಸಂಪನ್ಮೂಲವನ್ನು ರಾಜ್ಯ ಸರಕಾರದ ಸಂಬಂದಪಟ್ಟ ಸಮುದಾಯಗಳ ಕಲ್ಯಾಣ ಇಲಾಖೆಗಳು ಹಾಗೂ ಗುಲ್ರ‍್ಗಾ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲ್ಪಟ್ಟ ಅಕ್ಕಮಹಾದೇವಿ ಅಧ್ಯಯನ ಪೀಠ ಸ್ಥಾಪಿಸಲು ೨೦೧೭ ರಲ್ಲಿ ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಅನುದಾನ ಒದಗಿಸಿದೆ. ಆದ್ದರಿಂದ, ಅಲ್ಪಸಂಖ್ಯಾತರ ಸಾಮಾಜಿಕ, ಶ...