Posts

Image
ಸಂಪುಟ ವಿಸ್ತರಣೆ ಬ್ರಾಹ್ಮಣ ಸಮುದಾಯ ಕಡೆಗಣನೆಗೆ  ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ ಬೇಸರ.                                                                                                                ಜಯ ಧ್ವಜ ನ್ಯೂಸ್, ರಾಯಚೂರು, ಆ.4- ರಾಜ್ಯ ಸರ್ಕಾರದ ಎರಡನೆ ಹಂತದ ಸಂಪುಟ ವಿಸ್ತರಣೆಯಲ್ಲಿ ಬ್ರಾಹ್ಮಣ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.     ಸರ್ವೇ ಜನಾ: ಸುಖಿನೋ ಭವಂತು ಎಂಬ ಉದಾತ್ತ ವಿಚಾರವುಳ್ಳ ಬ್ರಾಹ್ಮಣ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದಿರುವುದು ಸರಿಯಾದ ಕ್ರಮವಲ್ಲವೆಂದಿರುವ ಅವರು ಈ ನಾಡಿಗಾಗಿ  ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಿದ್ದು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ನಾಯಕರು ಬ್ರಾಹ್ಮಣರಾಗಿದ್ದರು. ಕರ್ನಾಟಕ ಏಕೀಕರಣಕ್ಕೆ ಆಲೂರು ವೆಂಕಟರಾಯರು ಶ್ರಮಿಸಿದ್ದಾರೆ ಮುಖ್ಯಮಂತ್ರಿಗಳಾಗಿ ಆರ್.ಗುಂ...
Image
  ಸಂಪುಟ ವಿಸ್ತರಣೆ ಸಚಿವರ ಪಟ್ಟಿ ಅಂತಿಮ:               ಜಿಲ್ಲೆಗೆ ದೊರೆಯದ ಪ್ರಾತಿನಿಧ್ಯ.                                           ಜಯ ಧ್ವಜ ನ್ಯೂಸ್ , ರಾಯಚೂರು,ಆ.3 - ರಾಜ್ಯ ಸರ್ಕಾರದ ಎರಡನೆ ಹಂತದ ಸಂಪುಟ ವಿಸ್ತರಣೆ ಸಚಿವರ ಪಟ್ಟಿ ಅಂತಿಮಗೊಂಡಿದ್ದು ಜಿಲ್ಲೆಗೆ  ಸಚಿವ ಸ್ಥಾನ ದೊರೆಯದೆ ವಂಚಿತ ಗೊಂಡಿದೆ. ಕಳೆದ ಕೆಲ ದಿನದಿಂದ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿತ್ತು ಆದರೆ ಇಂದು ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಂತಾಗಿದೆ. ಹೈಕಮಾಂಡ್ ಸಚಿವರ ಹೆಸರಿನ ಪಟ್ಟಿ ಬಿಡುಗಡೆ ಮಾಡಿದ್ದು ಒಟ್ಟು ಇಪ್ಪತ್ತು ಶಾಸಕರು ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದು  ಅವರು ರಾಜ್ಯಪಾಲರಿಂದ ಪ್ರಮಾಣವಚನ ಪಡೆಯಲಿದ್ದಾರೆ .                        ಬಣ ರಾಜಕೀಯದಿಂದ ಜಿಲ್ಲೆಗೆ ಸಚಿವ ಸ್ಥಾನ ವಂಚಿತ : ಜಿಲ್ಲಾ ಕಾಂಗ್ರೆಸ್ ನಲ್ಲಿ ಬಣಗಳ ವೈಮನಸ್ಸಿನಿಂದ ಜಿಲ್ಲೆ ಯಾವ ಕಾಂಗ್ರೆಸ್ ಶಾಸಕರಿಗೂ ಹೈಕಮಾಂಡ್ ಮಣೆ ಹಾಕದಿರುವುದರಿಂದ ಜಿಲ್ಲೆ ಸಚಿವ ಸ್ಥಾನ ವಂಚಿತಗೊಂಡಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಒಟ್ಟಾರೆ ಕಾಂಗ್ರೆಸ...
Image
  ದ್ವೈತ ವೇದಾಂತದ ಮಹಾನ್ ದಾರ್ಶನಿಕರು ಶ್ರೀ ಜಯತೀರ್ಥರು.                            ಟೀ ಕಾಚಾರ್ಯರೆಂದೇ ಪ್ರಖ್ಯಾತರಾದ ಶ್ರೀಮದ್ ಜಯತೀರ್ಥರು ದ್ವೈತ ವೇದಾಂತದ ಮಹಾನ್ ದಾರ್ಶನಿಕರು.  ಪೂರ್ವಾಶ್ರಮದಲ್ಲಿ ಮಹಾರಾಷ್ಟ್ರದ ಮಂಗಳವೇಡಿಯಲ್ಲಿ ಧೋಂಡೋ ರಘುನಾಥ ದೇಶಪಾಂಡೆ ಎಂಬ ಹೆಸರಾಂತ ಶ್ರೀಮಂತ ಮನೆತನದಲ್ಲಿ ಜನಿಸಿದರು. ಅಕ್ಷೋಭ್ಯ ತೀರ್ಥರಿಂದ ಪ್ರಭಾವಿತಗೊಂಡು 33 ಕೃತಿಗಳನ್ನು ರಚಿಸಿದರು. ಜಯತೀರ್ಥರು ಇಂದ್ರನ ಅವತಾರ ಆದಿಶೇಷನ ಅಂಶ ಹೊಂದಿರುವ ಇವರು ಪೂರ್ವ ಜನ್ಮದಲ್ಲಿ ಅರ್ಜುನನಾಗಿ ಅವತರಿಸಿ ಮುಂದಿನ ಜನ್ಮದಲ್ಲಿ ಧೋಂಡೋ ಪಂತರಾಗಿ ಜನಿಸಿ ಬಾಲ್ಯದಲ್ಲಿ ಕ್ರೀಡೆಯಲ್ಲಿ ವಿಶೇಷವಾಗಿ ಕುದುರೆ ಸವಾರಿಯನ್ನು ಮಾಡುತ್ತಿದ್ದರು. ಆಕಸ್ಮಿಕವಾಗಿ ಶ್ರೀ ಅಕ್ಷೋಭ್ಯತೀರ್ಥರ ಮುಖಾಮುಖಿ ಭೇಟಿಯ ನಂತರ ಅವರ ಜೀವನದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದು ಜಯತೀರ್ಥರಾದರು. ತಾತ್ವಿಕ ಕೃತಿಗಳ ಆಳ ಅಗಲ ಅರಿವು, ಭವ್ಯವಾದ ಬರವಣಿಗೆಯ ಶೈಲಿ, ವಾಕ್ಚಾತುರ್ಯ, ತರ್ಕ ತೇಜಸ್ಸಿನಿಂದ ಕೂಡಿದ ಪಾಂಡಿತ್ಯ ಮೆಚ್ಚುಗೆಯನ್ನು ಪಡೆದರು. ಇವರು ಅನೇಕ ಭವ್ಯವಾದ ಬಿರುದುಗಳನ್ನು ಪಡೆದರು, ಟೀಕಾಚಾರ್ಯರೆಂದು ಕರೆಸಿಕೊಂಡು ಪ್ರಖ್ಯಾತರಾದರು. ಇವರು ಕಾರ್ಯಕ್ಷೇತ್ರ ಈಗಿನ ಕಲ್ಬುರ್ಗಿ ಜಿಲ್ಲೆಯ ರಾಷ್ಟ್ರಕೂಟರ ರಾಜಧಾನಿ ಮಾನ್ಯಖೇಟ ಅಥವಾ ಮಳಖೇಡ ವಾಗಿತ್ತು. ಇವರು ಮಧ್ವಾಚಾರ್ಯರ ಗ್ರಂಥ...
Image
ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳ:            ಕಾಡ್ಲೂರು ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತ.                                                              ಜಯ ಧ್ವಜ ನ್ಯೂಸ್, ರಾಯಚೂರು,ಜು.31- ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳ ಹಿನ್ನೆಲೆ  ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಣಾ ನದಿ ತೀರದ ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತವಾಗಿದೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಅಧಿಕ ನೀರು ನದಿಯಲ್ಲಿ ಹರಿಯುತ್ತಿದ್ದು ಅಧಿಕ ಪ್ರಮಾಣದ ಸಮುದ್ರ ಸದೃಶ ಜಲರಾಶಿಯಿಂದ ನದಿ ತುಂಬಿ ಹರಿಯುತ್ತಿದೆ.  ಗ್ರಾಮಸ್ಥರು  ನದಿ ದಡದಲ್ಲಿ ಇರಿಸಿದ್ದ  ಕೃಷಿ ಪಂಪ್ ಸೆಟ್ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. 
Image
  ವಾರ್ತಾ ಇಲಾಖೆಯಲ್ಲಿ ಪ್ರಕಾಶ್ ಅವರಿಂದ ಉತ್ತಮ ಕೆಲಸ ನಿರ್ವಹಣೆ- ಜಿ.ಸುರೇಶ ಜಯ ಧ್ವಜ ನ್ಯೂಸ್ ,ರಾಯಚೂರು ಜು.31- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಿನಿ ಆಪರೇಟರ್ ಹುದ್ದೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಎ.ಪ್ರಕಾಶ್ ಅವರು ಇಂದು ವಯೋನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ಇಲಾಖೆಯ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಪತ್ರಕರ್ತರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಲಾಯಿತು. ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್ ಅವರು ಮಾತನಾಡಿ, ನಿವೃತ್ತರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮೂಲಕ ಇಲಾಖೆಯಲ್ಲಿ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದಾರೆ. ಅವರ ಸೇವೆ ಸಹೋದ್ಯೋಗಿಗಳಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ನೆಮ್ಮದಿಯ ಜೀವನ ಸಾಗಿಸಲಿ ಎಂದು ಶುಭಕೋರಿದರು. ಈ ವೇಳೆ ವಯೋ ನಿವೃತ್ತರಾದ ಎ.ಪ್ರಕಾಶ್ ಅವರು ಮಾತನಾಡಿ, ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಸ್ಮರಿಸಿಕೊಂಡ ಅವರು, ತಮ್ಮ ಸೇವಾ ಜೀವನದ ನೆನಪುಗಳನ್ನು ಹಂಚಿಕೊAಡರು. ಈ ಸ...
Image
  ಹೆಚ್ ಎ ಎಲ್ ನಿಂದ ಸಿ ಎಸ್ ಆರ್ ನಿಧಿಯಡಿ 50ಕೋಟಿ ರೂ. ವೆಚ್ಚದಲ್ಲಿ ಜಲಾಶಯ ನಿರ್ಮಾಣ ಭೂಮಿಪೂಜೆ :            ಮಂತ್ರಾಲಯದಲ್ಲಿ ಭಕ್ತರಿಗೆ ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲಿರುವ  ವ್ಯಾಸತೀರ್ಥ ಜಲಾಶಯ- ಶ್ರೀ  ಸುಬುಧೇಂದ್ರತೀರ್ಥರು                                                                                                                                ಜಯ ಧ್ವಜ ನ್ಯೂಸ್ , ರಾಯಚೂರು, ಜು.30-  ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲು ಮುಂದಿನ ಮೂವತ್ತು ವರ್ಷದ ಅವಧಿಗೆ ಶುದ್ಧ ಕುಡಿಯುವ ನೀರಿನ ಸೌಕರ್ಯ ಒದಗಿಸಲು ವ್ಯಾಸ ತೀರ್ಥ ಜಲಾಶಯ ನಿರ್ಮಾಣವಾಗಲಿದೆ ಎಂದು    ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. ಅವರಿಂದು...
Image
ಎಸ್ ಐ ಆರ್  ನಮೂನೆಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಲು ಜಿಲ್ಲಾಧಿಕಾರಿ ಪೂವಿತಾ ಸೂಚನೆ ಜಯ ಧ್ವಜ ನ್ಯೂಸ್ ,ರಾಯಚೂರು, ಜು.30-  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಯಚೂರು ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ವೇಗವಾಗಿ ಸಾಗುತ್ತಿದ್ದು, ಆಗಸ್ಟ್ 8ರವರೆಗೆ ಅಭಿಯಾನ ಮುಂದುವರಿಯಲಿದೆ. ಉಳಿದಿರುವ ಮತದಾರರು ತಮ್ಮ ಎಣಿಕೆ ನಮೂನೆಗಳನ್ನು ಕೂಡಲೇ ಭಾನುವಾರದೊಳಗೆ ಆನ್‌ಲೈನ್ ಅಥವಾ ಖುದ್ದಾಗಿ ಸಲ್ಲಿಸುವ ಮೂಲಕ ಅಭಿಯಾನದ ಯಶಸ್ವಿಗೆ ಸಹಕಾರಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಜುಲೈ 30ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಠರಣೆ ಕಾರ್ಯಕ್ರಮವು ರಾಯಚೂರು ಜಿಲ್ಲೆಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಯಶಸ್ವಿಯಾಗಿ ಪ್ರಗತಿಯಲ್ಲಿದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ನೂಮರೇಷನ್ ಫಾರ್ಮ್ ವಿತರಣೆ ಹಾಗೂ ಸಂಗ್ರಹ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತಿದೆ. ಪ್ರಸ್ತುತ ಜಿಲೆಯಲ್ಲಿ ಒಟ್ಟು ಮತದಾರರು 17,14,559 ಇದ್ದು, ಅದರಲ್ಲಿ 15,84,491 ಡಿಜಿ...