ಬೀದಿ ನಾಯಿಗಳ ದಾಳಿ ತಡೆಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ-ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್ ,ರಾಯಚೂರು. ಜು. 21- ಬೀದಿ ನಾಯಿಗಳಿಂದ ಮಕ್ಕಳು ಹಾಗೂ ಸಾರ್ವಜನಿಕರ ಮೇಲೆ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ದಾಳಿ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಇಂದು ಸಭೆ ಕರೆಯಲಾಗಿದ್ದು ಈ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರು ಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವಲ್ಲಿ ಸಮಿತಿಯ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಈ ಹಿಂದೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಹಾಗೂ ಕೆಲವು ದುರ್ಘಟನೆಗಳಲ್ಲಿ ಮಕ್ಕಳ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಬೀದಿ ನಾಯಿಗಳಿಗೆ ಆಹಾರ ಹಾಕುವವರು ಹಾಗೂ ಮಟನ್ ಅಂಗಡಿಗಳ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ನಿಯಮ ಬಾಹಿರವಾಗಿ ವಿಲೇವಾರಿ ಮಾಡುವವರ ವಿರುದ್ಧ ದಂಡ ವಿಧಿಸಲು ಕ್ರಮ ಕೈಗೊಳ್ಳಲ...