Posts

Image
  ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು- ಶಾಸಕ ಡಾ.ಶಿವರಾಜ ಪಾಟೀಲ್ ಜಯ ಧ್ವಜ ನ್ಯೂಸ್ ,ರಾಯಚೂರು, ಏ. 14- ಜಗತ್ತಿನ ಶ್ರೇಷ್ಠ ಜ್ಞಾನಿಯಾಗಿದ್ದ ಅಂಬೇಡ್ಕರ್ ಅವರು ತಮ್ಮ ಪ್ರತಿಭೆಯನ್ನು ನಮ್ಮೆಲ್ಲರ ಉದ್ಧಾರಕ್ಕಾಗಿ ಮುಡಿಪಾಗಿಟ್ಟರು ಅವರ ಆದರ್ಶಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಅವರಿಂದು  ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಗತ್ತಿನಲ್ಲಿ ಶಾಂತಿಯುತ, ಸಮೃದ್ಧಿಯಾಗಿ ಯಾವುದಾದರೂ ದೇಶ ಇದೆ ಎಂದರೆ ಅದು ಭಾರತ ದೇಶವಾಗಿದೆ. ಇದಕ್ಕೆ ಮೂಲಕಾರಣ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾರತ ಸಂವಿಧಾನವಾಗಿದೆ. ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಓದಬೇಕು. ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರೇರಣಿಯಾಗಬೇಕೆಂದರು. ಪ್ರಭಾರಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಡಾ.ಬಿ.ಆರ್....
Image
  ಶೋಷಿತ ಸಮುದಾಯಗಳ ಘನತೆ ಹೆಚ್ಚಿಸಿದವರು ಅಂಬೇಡ್ಕರ್ ರವರು ಜಯ ಧ್ವಜ ನ್ಯೂಸ್  ರಾಯಚೂರು, ಏ.14-  ವಂಚಿತ ಸಮುದಾಯಗಳು ಘನತೆಯನ್ನು ಮರಳಿ ಪಡೆಯುವುದಕ್ಕಾಗಿ ಅದ್ಯಯನ, ಹೋರಾಟ, ರಾಜಕೀಯ, ಸಂಘಟನೆ ನಡೆಸಿದ ಅಂಬೇಡ್ಕರ್ ಅವರ  ಹಾದಿಯಲ್ಲಿ ಹೆಜ್ಜೆ ಇಡುತ್ತಲೇ ಜೊತೆ ಜೊತೆಗೆ ಆ ದಾರಿಯನ್ನು ಗ್ರಹಿಸಲು ಪ್ರಾಮಾಣಿಕತೆ ಮತ್ತು ಬದ್ಧತೆ ಬೆಳೆಸಿಕೊಳ್ಳಬೇಕಾಗಿದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ವೆಂಕಟೇಶ ಬೇವಿನಬೆಂಚಿ ‌ಹೇಳಿದರು.  ಅವರು ಆಕಾಶವಾಣಿಯಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು . ಈ ದೇಶದ ಪ್ರತಿಯೊಬ್ಬ ಪ್ರಜೆ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಳ್ಳಲೇಬೇಕು,ಯಾಕೆಂದರೆ ನಮ್ಮ ಬದುಕಿನ ಪ್ರತಿ ಹೆಜ್ಜೆಯಲ್ಲಿ ಅಂಬೇಡ್ಕರ್ ಅವರ ಆದರ್ಶ ಸಂವಿಧಾನದ ಇದೆ ಅನ್ನುವುದು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು. ಮುಖ್ಯವಾಗಿ ಅಂಬೇಡ್ಕರ್ ಅವರ ಕನಸಿನ ಸಂವಿಧಾನದ ಆಶಯಗಳಿಂದ ಈ ದೇಶ  ಪ್ರಗತಿ ಕಂಡಿದೆ  ಇದಕ್ಕೆ ಕೇವಲ ಪ್ರಭುತ್ವವನ್ನು ದೂಷಿಸಿ ಫಲವಿಲ್ಲ. ಸಮಕಾಲೀನ ಸಂದರ್ಭದಲ್ಲಿ ಸಂವಿಧಾನದ  ಸ್ವಾತಂತ್ರ್ಯ ಮತ್ತು ಸಮಾನತೆ ಹಕ್ಕುಗಳನ್ನು ಉಳಿಸಿಕೊಳ್ಳಲು ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯದ ಕರ್ತವ್ಯಗಳನ್ನು ಅನುಷ್ಠಾನಗೊಳಿಸಲು ವಿಫಲರಾಗಿದ್ದು ಹೇಗೆ? ಇಲ್ಲಿ ನಾಗರಿಕ ಸಮಾಜದ ಹೊಣೆಗಾರಿಕೆಯ ಪಾಲು ಎಷ್ಟಿದೆ ಎಂದು ಪರಾಮರ್ಶೆ ಮಾಡಿಕೊಳ್ಳಬೇ...
Image
  ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಗಣ್ಯರಿಂದ ಮಾಲಾರ್ಪಣೆ, ಮೆರವಣಿಗೆಗೆ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಏ.14-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ  ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ವಿವಿಧ ಗಣ್ಯರಿಂದ ಪೂಜೆ ಕಾರ್ಯಕ್ರಮ ನೆರವೇರಿಸಿ, ಮಾಲಾರ್ಪಣೆ ಮಾಡಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರಂಗಮಂದಿರವರೆಗೆ ವಿವಿಧ ಕಲಾ ತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೀದರ್ ಬುದ್ಧವಿಹಾರನ ಬಂತೇಜಿ ಯಾಕತ್ನೂರ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ...
Image
ಬೆಂಗಳೂರು - ಮುಂಬೈ  ನಡುವಿನ  ವಂದೇ ಭಾರತ್ ಸ್ಲೀಪರ್ ಟ್ರೈನ್ ಸಂಚಾರಕ್ಕೆ ಕೇಂದ್ರ ಅನುಮೋದನೆ:    ರಾಯಚೂರು ಮಾರ್ಗವಾಗಿ ಓಡಿಸಲು ಒಪ್ಪಿಗೆ ನೀಡಲು ಡಾ.ಬಾಬುರಾವ್ ಮನವಿ .   ಜಯ ಧ್ವಜ ನ್ಯೂಸ್ , ರಾಯಚೂರು,ಏ.12-  ಬಹು ನಿರೀಕ್ಷಿತ ಬೆಂಗಳೂರು ಮತ್ತು ಮುಂಬೈ ನಗರಗಳ ನಡುವೆ ವಂದೇ ಭಾರತ್ ಸ್ಲೀಪರ್ ಟ್ರೈನ್ ಸಂಚಾರಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ. ಬಾಬುರಾವ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.  ತಾವು ಈ ರೈಲು ಓಡಿಸುವಂತೆ ರೈಲ್ವೆ ಸಚಿವ  ಅಶ್ವಿನ್ ವೈಷ್ಣವ್ ಜಿ ಅವರಿಗೆ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ  ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದೇ ರೀತಿಯಲ್ಲಿ  ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಶ್ರೀ ಪಿ.ಸಿ. ಮೋಹನ್ ಅವರು ಸಹ ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ವಂದೇ ಭಾರತ್ ಸ್ಲೀಪರ್ ಟ್ರೈನ್ ಸೌಲಭ್ಯ ಕಲ್ಪಿಸಬೇಕೆಂದು ಮನವಿ ಮಾಡಿದ್ದರು.   ಬೆಂಗಳೂರು - ಮುಂಬೈ ನಡುವೆ ಸುಮಾರು 976 ಕಿ.ಮಿ ಅಂತರವಿದೆ. ಈ ಎರಡು ಮಹಾ ನಗರಗಳ ನಡುವೆ ಈಗ ಸಂಚರಿಸುವ ರೈಲುಗಳು 24 ರಿಂದ 30 ತಾಸುಗಳನ್ನು ತೆಗೆದುಕೊಳ್ಳುತ್ತವೆ.   ಕಡಿಮೆ ಅವಧಿಯಲ್ಲಿ ಎರಡು ನಗರಗಳ ನಡುವೆ ಸಂಚರಿಸಲು ಅನುಕೂಲವಾಗುವಂತೆ ವಂದೇ ಭಾರತ್ ಸ್ಲೀಪರ್ ಟ್ರೈನ...
Image
  ಮಾದಿಗ ದಂಡೋರ ರಾಜ್ಯಾಧ್ಯಕ್ಷರು ಬಿ. ನರಸಪ್ಪ ದಂಡೋರ ರವರಿಗೆ 55ನೇ ಜನ್ಮದಿನದ  ಸಂಭ್ರಮಾಚರಣೆ ಜಯಧ್ವಜ ನ್ಯೂಸ್ , ರಾಯಚೂರು,ಏ.11- ನಗರದ ಅಂಬೇಡ್ಕರ್ ವೃತ್ತದ ಖಾಸಗಿ ಹೋಟೆಲ್ ನಲ್ಲಿ ಮಾದಿಗ ದಂಡೋರ  ಜಿಲ್ಲಾ ಸಮಿತಿ ರಾಯಚೂರು ವತಿಯಿಂದ ಮಾದಿಗ ದಂಡೋರ  ರಾಜ್ಯಾಧ್ಯಕ್ಷರು ಬಿ.ನರಸಪ್ಪ ದಂಡೋರ ರವರ 55ನೇ ಹುಟ್ಟು ಹಬ್ಬದ ಸಂಭ್ರಮದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಕಂಡ ಒಳ ಮೀಸಲಾತಿಯ ವರ್ಗೀಕರಣದ  ಹೋರಾಟಗಾರ, ನೇರ ನುಡಿಯ ಸರದಾರ, ಕಷ್ಟಗಳಿಗೆ ಸ್ಪಂದಿಸುವ ಹೃದಯವಂತ ನಾಯಕ, ಸಮುದಾಯದ ಏಳಿಗೆಗಾಗಿ ಸುಮಾರು 35 ವರ್ಷಗಳಿಂದ ನಿರಂತರ ಹೋರಾಟದಲ್ಲಿ ಭಾಗಿಯಾಗಿ ತನ್ನ ಕುಟುಂಬ ತ್ಯಾಗ, ಆರೋಗ್ಯದಲ್ಲಿ ಏರುಪೇರಾದರೂ ಕೂಡ ನೊಂದ ಸಮುದಾಯಗಳಿಗೆ ಅನ್ಯಾಯವಾಗಬಾರದು ಎಂದು ಮುಂದುವರೆದು 101 ಜಾತಿಗಳಿಗೆ ನ್ಯಾಯವನ್ನು ಒದಗಿಸಲು ಸರ್ಕಾರಕ್ಕೆ ಸೆಡ್ಡು ನ್ಯಾಯಯುತವಾದ ಪಾಲನ್ನು ಪಡೆದೆ ತೀರುತ್ತೇವೆ ಎಂದು ಪಣತೊಟ್ಟು ನಿಂತಿರುವ ಧೀಮಂತ ನಾಯಕ ಮಾದಿಗ ದಂಡೋರ ರಾಜ್ಯಾಧ್ಯಕ್ಷರು ಬಿ. ನರಸಪ್ಪ ದಂಡೋರ ರವರ 55ನೇ ಹುಟ್ಟುಹಬ್ಬವನ್ನು ಜಿಲ್ಲೆ ಮತ್ತು ತಾಲೂಕಿನ ಪದಾಧಿಕಾರಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು ಹಿರಿಯ ಹೋರಾಟಗಾರರು ಬುದ್ಧಿಜೀವಿಗಳು ಎಲ್ಲಾ ಪಕ್ಷದ ರಾಜಕೀಯ ಪ್ರತಿನಿಧಿಗಳು ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಆಗಮಿಸಿ  ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿದರು.
Image
  ಹಿರಿಯ ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿಗೆ ಒಲಿದ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ  ಜಯ ಧ್ವಜ ನ್ಯೂಸ್ ರಾಯಚೂರು  , ಏ.10- ಕರ್ನಾಟಕ ಲೇಖಕಿಯರ ಸಂಘದ, 2025 ನೇ ಸಾಲಿನ ಸಂಶೋಧನಾ ಪ್ರಶಸ್ತಿಗೆ ಹಿರಿಯ ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿ ಅವರ ರಾಯಚೂರು ಕೋಟೆಗೆ ನರಬಲಿ ಬಾಳೆ ಸಂಗಮ್ಮ ಮತ್ತು ಬಸರೆಡ್ಡಿ ಮಲ್ಲವ್ವ ಕೃತಿ ಭಾಜನವಾಗಿದೆ.                          ಏ.9 ರಂದು ಬೆಂಗಳೂರಿನ  ನಯನ ಸಭಾಂಗಣದಲ್ಲಿ   ಕಾರ್ಯಕ್ರಮ ನೆರವೇರಿತು.    ಕಾರ್ಯಕ್ರಮ ಉದ್ಘಾಟನೆಯನ್ನು  ಶ್ರೀಮತಿ ಸಭಿಹ ಭೂಮಿಗೌಡ ನೆರವೇರಿಸಿದರು.  ಪ್ರಶಸ್ತಿಯನ್ನು ಪ್ರೊ ಎಸ ಜಿ ಸಿದ್ದರಾಮಯ್ಯ , ಮಾಜಿ ಅಧ್ಯಕ್ಷರು ಕನ್ನಡ ಪುಸ್ತಕ ಪ್ರಾಧಿಕಾರ ಇವರು ಪ್ರದಾನ ಮಾಡಿದರು. ಪ್ರಶಸ್ತಿ ಪುರಸ್ಕೃತರ ಪರಿಚಯ : ನಗರದ ಹಮದರ್ದ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಲಕ್ಷ್ಮೀದೇವಿ ಶಾಸ್ತ್ರಿ ಅವರು ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಕರ್ನಾಟಕ ಯುಗಪುರುಷ ಪಂ ತಾರಾನಾಥರು, ಹೃದಯಕ್ಕೆ ಹತ್ತಿರಾದವರು, ಮೌನ ಮಿಡಿದಾಗ, ನಿಜಾಂ ಕರ್ನಾಟಕದ ಪಂ.ಡಿ ಎಂ ಸೂಗವೀರ ಶರ್ಮ ಮೊದಲಾದ ಕೃತಿಗಳು ಪ್ರಮುಖವಾಗಿವೆ. ಗುಲ್ಬರ್ಗ ವಿಶ್ವ ವಿದ್ಯಾಲಯದ ಪುಸ್ತಕ ಪ್ರಶಸ್ತಿ...
Image
  ಖರ್ಗೆ ಕುರಿತು ಹಿಮಂತ್ ಬಿಸ್ವ ಶರ್ಮಾ ಹೇಳಿಕೆ ಖಂಡನೀಯ:      ಬಾಗಲಕೋಟೆ ಉಪಚುನಾವಣೆ ಕಾಂಗ್ರೆಸ್ ಗೆಲುವು ಖಚಿತ- ವಸಂತ ಕುಮಾರ್.                                                                                                                           ಜಯ ಧ್ವಜ ನ್ಯೂಸ್, ರಾಯಚೂರು, ಏ.10- ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿದ್ದು ಖಂಡನೀಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಎ.ವಸಂತ ಕುಮಾರ್ ಹೇಳಿದರು. ಅವರಿಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಹಿಮಂತ್ ಶರ್ಮಾ ಈ ಹಿಂದೆ ಕಾಂಗ್ರೆಸ್ ನಲ್ಲಿದ್ದರು ಅವರು ಮಂತ್ರಿ ಸಹ ಆಗಿದ್ದರು ಅವರು ಭ್ರಷ್ಟಾಚಾರ ಎಸಗಿದ್ದರಿಂದ ಅವರ ಮೇಲೆ ಸಿಬಿಐ ತನಿಖೆ ಸಹ ನಡೆಯ...