Posts

Image
  ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ: ಜಿಲ್ಲೆಯಲ್ಲಿ ಜೂನ್ 20 ರಿಂದ  ಪ್ರಾರಂಭವಾಗುವ  ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯಲಿ - ಪೂವಿತಾ ಎಸ್ . ಜಯ ಧ್ವಜ ನ್ಯೂಸ್ ,ರಾಯಚೂರು ,ಜೂ. 1-  ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರ ಅಧ್ಯಕ್ಷತೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ( ಎಸ್.ಐ.ಆರ್)ರ ಕುರಿತು ಇಂದು  ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ಜರುಗಿತು. ಈ ವೇಳೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಮೂರನೇ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ರಾಯಚೂರು ಜಿಲ್ಲೆಯಲ್ಲಿ ಜೂನ್ 20 ರಿಂದ ಪ್ರಕ್ರಿಯೆಯು ಆರಂಭವಾಗಿ ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದೆ ಎಂದರು. ದಿನಾಂಕ:01.10.2026 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20 ರಿಂದ 29ರವರೆಗೆ ಈ ಪ್ರಕ್ರಿಯೆಯ ಸಿದ್ಧತೆ, ಪ್ರಕ್ರಿಯೆಯ ಭಾಗವಾಗಿರುವ ಎಲ್ಲಾ ಹಂತದ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ತರಬೇತಿ, ಅವಶ್ಯ...
Image
  ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್ ,ರಾಯಚೂರು ಜೂ.1-  ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಅವರಿಂದು  ನಗರದ ರೈಲ್ವೆ ಸ್ಟೇಷನ್ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಚೆನ್ನಾಗಿ ಓದಿ ಉನ್ನತ ಹುದ್ದೆಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಇತರೆ ವಿವಿಧ ಉನ್ನತ ಹುದ್ದೆಗಳ ಕನಸು ಕಾಣಬೇಕು. ವಿದ್ಯಾರ್ಥಿಗಳು ಯಾರು ಶಾಲೆಯನ್ನು ಬಿಡದಂತೆ ನೋಡಿಕೊಳ್ಳಬೇಕು. ಶಾಲೆ ಬಿಟ್ಟಲ್ಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಶಿಕ್ಷಕರಿಂದ ಆಗಬೇಕೆಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಶಾಲೆಯಲ್ಲ...
Image
  ಜಿಲ್ಲೆಗೆ ಸಚಿವ ಸ್ಥಾನ ದೆಹಲಿಯಲ್ಲಿ ಕಸರತ್ತು: ಸಚಿವಾಕಾಂಕ್ಷಿಗಳಿಂದ ಹೈಕಮಾಂಡ್ ಭೇಟಿ.                                 ಜಯ ಧ್ವಜ ನ್ಯೂಸ್, ರಾಯಚೂರು,ಜೂ.1-                             ಡಿಕೆ ಶಿವಕುಮಾರ್ ರವರು ಜೂ.3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ನಿಗದಿಯಾದ ಬೆನ್ನಲ್ಲೆ ಸಚಿವ ಸಂಪುಟ ರಚನೆ ಕಸರತ್ತು ವೇಗ ಪಡೆದಿದ್ದು ಸಚಿವಾಕಾಂಕ್ಷಿಗಳು ಹೈಕಮಾಂಡ್ ಭೇಟಿ ಮಾಡಿ ತಮಗೆ ಅವಕಾಶ ನೀಡುವಂತೆ ಕೋರುತ್ತಿದ್ದಾರೆ.                     ಜಿಲ್ಲೆಯ ಕೆಲ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದು ಮೊದಲ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನಶೀಲರಾಗಿದ್ದಾರೆ. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ದೆಹಲಿಗೆ ದೌಡಾಯಿಸಿದ್ದು ತೀರ್ವ ಲಾಬಿ ನಡೆಸಿದ್ದಾರೆ ಎನ್ನಲಾಗಿದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗದ ಕಾರಣ ಈ ಬಾರಿಯಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂಬ ಛಲ...
Image
  ಎನ್ ಹೆಚ್ 748ಎ ನಿರ್ಮಾಣ  ರೈತರ ಜಮೀನುಗಳಿಗೆ ಸಂಪರ್ಕ ರಸ್ತೆ ಒದಗಿಸಲು ಆಗ್ರಹ- ಶರಣಪ್ಪ ಉದ್ಬಾಳ.                                                         ಜಯ ಧ್ವಜ ನ್ಯೂಸ್, ರಾಯಚೂರು, ಜೂ.1- ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 748ಎ ಯಲ್ಲಿ ರೈತರ ಜಮೀನುಗಳಿಗೆ ಸಂಪರ್ಕ ರಸ್ತೆ ಒದಗಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ 748ಎ  ಜಮೀನುಗಳ ರಸ್ತೆ ವಂಚಿತ ರೈತರ ಹೋರಾಟ ಸಮಿತಿ ಸಂಚಾಲಕ ಶರಣಪ್ಪ ಉದ್ಬಾಳ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಸ್ಕಿ ತಾಲೂಕಿನ ಗೋನವಾರ, ಮುಸ್ಲಿ ಕಾರ್ಲಕುಂಟಿ, ಬಸ್ಸಾಪುರ ಮುಂತಾದ ಗ್ರಾಮಗಳ ಕೆಲ ಜಮೀನುಗಳು ರಾಷ್ಟ್ರೀಯ ಹೆದ್ದಾರಿ ಪಕ್ಕಯಿದ್ದು ಅವುಗಳಿಗೆ ಸಂಪರ್ಕ್ ರಸ್ತೆ ಒದಗಿಸದ ಕಾರಣ ರೈತರಿಗೆ ಜಮೀನುಗಳಿಗೆ ಹೋಗಲು ಟ್ರಾಕ್ಟರ್ ಇನ್ನಿತರ ಕೃಷಿ ಉಪಕರಣ ಹೋಗಲು ಅನಾನುಕೂಲತೆಯಿದ್ದು  ಈ ಹಿಂದೆ ನೀಡಿದ ಭರವಸೆಯಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಂಪರ್ಕ ರಸ್ತೆ ಒದಗಿಸುವುದಾಗಿ ತಿಳಿಸಿದ್ದರು ಆದರೆ ಇದೀಗ ಅವರು ತಮ್ಮ ಜವಾಬ್ದಾರಿಯಿಂದ ನುಣಚಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಈ ಹಿಂದಿನ ಜಿಲ್ಲಾಧಿಕಾರಿಗಳಿಗೂ ನಮ್ಮ ಸಮಸ್ಯೆ ವಿವರಿ...
Image
ದರ್ವೇಶ ಕಂಪನಿ ಹೂಡಿಕೆದಾರರಿಗೆ ಪಾರದರ್ಶಕವಾಗಿ ಹಣ ಮರುಪಾವತಿಯಾಗಬೇಕು- ಅಂಬಾಜಿ ಮೈದರ್ಕರ್.                                    ಜಯ ಧ್ವಜ ನ್ಯೂಸ್, ರಾಯಚೂರು,ಜೂ.1-   ದರ್ವೇಶ ಕಂಪನಿ ಹೂಡಿಕೆದಾರರಿಗೆ ಪಾರದರ್ಶಕವಾಗಿ ಹಣ ಮರುಪಾವತಿ ಮಾಡಬೇಕೆಂದು ಸಮಾಜ ಸೇವಕ ಅಂಬಾಜಿ ಮೈದರ್ಕರ್ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾದ ನಂತರ ಹೂಡಿಕೆದಾರರಿಗೆ ಡಿಜಿಪೆಕ್ಸ್ ಮುಖಾಂತರ ಮಾಸಿಕ ಹಣ ಮರುಪಾವತಿಸಲು ಯೋಜನೆ ಜಾರಿಗೊಳಿಸಲಾಗಿದ್ದು ಅದನ್ನು ಸಮರ್ಪಕವಾಗಿ ಪಾರದರ್ಶಕವಾಗಿ ಮಾಡಿದರೆ ಮಾತ್ರ ಸಂಕಷ್ಟದಲ್ಲಿರುವ ಹೂಡಿಕೆದಾರರಿಗೆ ನ್ಯಾಯ ಸಿಗುತ್ತದೆ ಎಂದರು. ಡಿಜಿಪೆಕ್ಸ್ ಮರುಪಾವತಿ ದರ್ವೇಶ್ ಸಂಸ್ಥೆ ಆಡಿಯಲ್ಲೆ ನಡಿಯಬೇಕು ಬೇರೆಯವರಿಗೆ ವಹಿಸಿದರೆ ಅದು ಸರಿಯಾಗಿ ನಡೆಯುವುದಿಲ್ಲವೆಂದು ಹೇಳಿದರು. ತಕ್ಷಣ ದರ್ವೇಶ ಕಂಪನಿ ಮಾಲೀಕರು, ಏಜೆಂಟರು ಹೂಡಿಕೆದಾರರಿಗೆ ಮರುಪಾವತಿ ಪ್ರಾರಂಭಿಸಬೇಕು ಎಂದರು. ಈ ಸಂದರ್ಭದಲ್ಲಿ ಮಸೂದ ಅಲಿ, ಮತೀನ್, ಶಂಶುದ್ದೀನ್ ಇನ್ನಿತರರು ಉಪಸ್ಥಿತರಿದ್ದರು.
Image
  18 ನೇ ರೈಲ್ವೆ ಜೋನ್ ಅಸ್ತಿತ್ವಕ್ಕೆ- ಡಾ.ಬಾಬುರಾವ್ ಜಯ ಧ್ವಜ ನ್ಯೂಸ್ ರಾಯಚೂರು,ಮೇ.31-  ರೈಲ್ವೆ ಇಲಾಖೆಯ 18 ನೇ ರೈಲ್ವೆ ಜೋನ್ ಅಸ್ತಿತ್ವಕ್ಕೆ ಬಂದಿದೆ ಎಂದು ರೈಲ್ವೆ ಸಲಹಾ ಸಮಿತಿಯ ಮಾಜಿ ಸದಸ್ಯ ಡಾ. ತಿಳಿಸಿದ್ದಾರೆ. ದಕ್ಷಿಣ ಮಧ್ಯ ರೈಲ್ವೆ ಜೋನ್ ನಲ್ಲಿದ್ದ ವಿಜಯವಾಡ, ಗುಂಟೂರು, ಗುಂತಕಲ್,ವಿಶಾಖಪಟ್ಟಣಂ ವಿಭಾಗಗಳನ್ನು ಒಳಗೊಂಡಂತೆ ಹೊಸದಾಗಿ ಸೌತ್ ಕೋಸ್ಟ್ ರೈಲ್ವೆ ಜೋನ್ ಅಸ್ತಿತ್ವಕ್ಕೆ ಬಂದಿದ್ದು ಜೂನ್ ಒಂದರಂದು ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ರಾಯಚೂರು ಹಾಗೂ ಯಾದಗಿರಿಗಳು ಮೊದಲಿನಂತೆ ದಕ್ಷಿಣ ಮಧ್ಯೆ ರೈಲ್ವೆ ಜೋನ್ ನಲ್ಲಿ ಮುಂದುವರೆಯಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  ಅಂತರರಾಷ್ಟ್ರೀಯ ಕಾಮಿಕ್ಸ್ ಸ್ಪರ್ಧೆಯಲ್ಲಿ ಜಿಲ್ಲೆಯ ಸಿರಿ ಪರವತಿನೇನಿಗೆ ಗೌರವ ಪ್ರಶಸ್ತಿ ಜಯ ಧ್ವಜ ನ್ಯೂಸ್ ,ರಾಯಚೂರು,ಮೇ.30- ಜಿಲ್ಲೆಯ ಅಮರೇಶ್ವರ ಕ್ಯಾಂಪ್ ನಿವಾಸಿ ವಿನೋದಕುಮಾರ ಅವರ ಪುತ್ರಿ ಸಿರಿ ಪರವತಿನೇನಿ ಅವರು ಅಂತರರಾಷ್ಟ್ರೀಯ ಮಟ್ಟದ ನಾಲ್ಕನೇ ಎಫ್‌ಪಿಜಿ ವಿಶ್ವವಿದ್ಯಾಲಯಗಳ ಎಸ್‌ಡಿಜಿಗಳ ಇಂಗ್ಲಿಷ್ ನಾಲ್ಕು-ಫ್ರೇಮ್ ಕಾಮಿಕ್ಸ್ ಸ್ಕ್ರಿಪ್ಟ್ ಸ್ಪರ್ಧೆ-2026ರಲ್ಲಿ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಡಿಸೈನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಿರಿ, "ಜಸ್ಟ್ ಒನ್ ಚಾಯಿಸ್" ಎಂಬ ಶೀರ್ಷಿಕೆಯ ಕಾಮಿಕ್ಸ್ ಕೃತಿಯ ಮೂಲಕ ಈ ಸಾಧನೆ ಮಾಡಿದ್ದಾರೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಒಂದಾದ ಎಸ್‌ಡಿಜಿ-12 (ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ) ವಿಷಯವನ್ನು ಆಧರಿಸಿ ರಚಿಸಲಾದ ಈ ಕಾಮಿಕ್ಸ್, ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳು ಹಾಗೂ ಪರಿಸರ ಸ್ನೇಹಿ ಆಯ್ಕೆಗಳ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿದೆ. ತೈವಾನ್‌ನ ಮಿಂಗ್ ಚಿ ತಂತ್ರಜ್ಞಾನ ವಿಶ್ವವಿದ್ಯಾಲಯ ಹಾಗೂ ಚಾಂಗ್ ಗುಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಗಳು ಜಂಟಿಯಾಗಿ ಆಯೋಜಿಸಿದ್ದ ಈ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಸಿರಿಯವರ ಸೃಜನಶೀಲತೆ, ಸಾಮಾಜಿಕ ಕಾಳಜಿ ಹಾಗೂ ಪರಿ...