ಗಣೇಶ ಹಬ್ಬದ ಆಚರಣೆ ಪರಿಸರ ಸ್ನೇಹಿಯಾಗಿರಲಿ. ಗಣೇಶ ಚತುರ್ಥಿ ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನು ವಿಘ್ನನಿವಾರಕ, ಬುದ್ಧಿ ಮತ್ತು ವಿದ್ಯೆಯ ಅಧಿಪತಿಯಾದ ಶ್ರೀ ಗಣೇಶನ ಜನ್ಮವನ್ನು ಸ್ಮರಿಸುವುದರ ಜೊತೆಗೆ ಅತ್ಯಂತ ಭಕ್ತಿ. ಭಾವದಿಂದ ಆಚರಿಸಲಾಗುತ್ತದೆ. ಪ್ರತಿವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯೆಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಿಶೇಷ ಮಹತ್ವವಿದೆ. 1892ರಲ್ಲಿ ಮಹಾರಾಷ್ಟ್ರದಲ್ಲಿ ಬಾವ ಸಾಹೇಬ್ ಲಕ್ಷ್ಮಣ ಜವೇಲ್ ಅವರು ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸುವ ಪರಂಪರೆಯನ್ನು ಆರಂಭಿಸಿದರು. ಇದರ ಮೂಲಕ ಜನರಲ್ಲಿ ರಾಷ್ಟ್ರೀಯ ಏಕತೆ ಮತ್ತು ದೇಶಭಕ್ತಿ ಮೂಡಿತು. ಜನರು ತಮ್ಮ ಮನೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಹಾಗೂ ಧಾರ್ಮಿಕ ಪ್ರವಚನಗಳನ್ನು ಆಯೋಜಿಸುತ್ತಾರೆ. ಗಣೇಶೋತ್ಸವವು ಭಕ್ತಿ, ಐಕ್ಯತೆ, ಸಹೋದರತೆ ಮತ್ತು ಸಾಂಸ್ಕೃತಿಕ ಪರಂಪರೆ ಹಾಗೂ ರಾಷ್ಟ್ರೀಯ ಐಕ್ಯತೆಯನ್ನು ಬೆಳೆಸುವ ಹಬ್ಬವಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವುದು ಮತ್ತು ಪರಿಸರ ಸ್ನೇಹಿಯಾಗಿ ಈ ಹಬ್ಬವನ್ನು ಆಚರಿಸುವುದು ಇಂದು ಅತ್ಯವಶ್ಯಕವಾಗಿದೆ. ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸಲು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)...
Posts
- Get link
- X
- Other Apps
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಶಾಂತಪ್ಪ ನೇಮಕ. ಜಯ ಧ್ವಜ ನ್ಯೂಸ್, ರಾಯಚೂರು,ಸೆ.10- ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ.ಶಾಂತಪ್ಪರವರನ್ನು ನೇಮಕಗೊಳಿಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಆದೇಶಿಸಿದ್ದಾರೆ. ರಾಜ್ಯ ಎಲ್ಲ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಬಾರಿ ಎಐಸಿಸಿ ವೀಕ್ಷಕರು ಪ್ರತಿ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ ಅರ್ಹ ಆಕಾಂಕ್ಷಿಗಳಿಂದ ಅರ್ಜಿ ಪಡೆದುಕೊಂಡಿದ್ದರು ಅಲ್ಲದೆ ಸ್ಥಳೀಯವಾಗಿ ಅರ್ಹರು ಯಾರು ಎಂಬ ಬಗ್ಗೆ ಮಾಹಿತಿ ಸಹ ಸಂಗ್ರಹಿಸಿ ಎಐಸಿಸಿ ವರಿಷ್ಠರಿಗೆ ಪಟ್ಟಿ ಸಲ್ಲಿಸಿದ್ದರು ಇದೀಗ ಎಐಸಿಸಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕಗೊಳಿಸಿದ್ದು ಪಕ್ಷವನ್ನು ಸದೃಡವಾಗಿ ಸಂಘಟನೆ ಮಾಡುವಂತೆ ಸೂಚಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿದ್ದು ನೂತನ ಜಿಲ್ಲಾಧ್ಯಕ್ಷರು ಯಾವ ರೀತಿಯಲ್ಲಿ ಸಮನ್ವಯತೆ ಸಾಧಿಸಿ ಉಭಯ ಬಣಗಳ ಮಧ್ಯೆ ಸಾಮರಸ್ಯ ಮೂಡಿಸಿ ಪಕ್ಷವನ್ನು ಸಂಘಟಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.
- Get link
- X
- Other Apps
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಅಂಗವಾಗಿ ಸೆ.11 ಹಾಗೂ 12 ರಂದು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಆಯೋಜನೆ ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.8- ಪತ್ರಕರ್ತರ ಹಿತಾಸಕ್ತಿ ಹಾಗೂ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ‘ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ರಿ)’ ಸಂಸ್ಥೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವದ ಅಂಗವಾಗಿ ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಯುವಜನತೆ, ಮಾಧ್ಯಮ ಕ್ಷೇತ್ರದ ಬದಲಾವಣೆ ಹಾಗೂ ಸಾಮಾಜಿಕ ಮಾಧ್ಯಮಗಳಿಂದ ಎದುರಾಗುತ್ತಿರುವ ಸವಾಲುಗಳ ಕುರಿತು ವಿದ್ಯಾರ್ಥಿಗಳಲ್ಲಿ ಚಿಂತನೆ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸೆ.11ರಂದು ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು. *ಮಾಧ್ಯಮಗಳು ಮತ್ತು ಪ್ರಜಾಪ್ರಭುತ್ವ: ಇಂದಿನ ಸವಾಲುಗಳು ಹಾಗೂ ನೈತಿಕತೆ* ’ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಲಿದೆ. ಸೆ.12ರಂದು ಭಾಷಣ ಸ್ಪರ್ಧೆ ನಡೆಯಲಿದ್ದು ವಿಷಯ : ‘ *ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?’ ಎಂಬ ವಿಷಯದ ಕುರಿತು ಸೆಪ್ಟೆಂಬರ್ 12ರಂದು ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ...
- Get link
- X
- Other Apps
ಕುಡಿಯುವ ನೀರು ಪೂರೈಸಲು ವಿಸ್ತೃತ ಯೋಜನಾ ವರದಿ ಸಿದ್ಧ- ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಜಯ ಧ್ವಜ ನ್ಯೂಸ್ ,ರಾಯಚೂರು ಸೆ. 7 - ರಾಯಚೂರು ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಸಲು 190 ಕೋಟಿ ರೂ. ವೆಚ್ಚದ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ಅವರಿಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಮೃತ್ ಯೋಜನೆಯಡಿ ಕಾಮಗಾರಿ ಸ್ಥಗಿತಗೊಳಿಸಿದ್ದ ಗುತ್ತಿಗೆದಾರರ ವಿರುದ್ಧದ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ನಗರದಲ್ಲಿ ಗೋಶಾಲೆ ಜಾಗ ಸೇರಿದಂತೆ ವಿವಿಧೆಡೆ ನಡೆದಿರುವ ಅಕ್ರಮ ಒತ್ತುವರಿ ಪ್ರಕರಣಗಳಲ್ಲಿ ನ್ಯಾಯಾಲಯದ ಮೂಲಕ ಸರ್ಕಾರಿ ಜಾಗವನ್ನು ಮರಳಿ ವಶಕ್ಕೆ ಪಡೆಯಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ರಾಯಚೂರಿನಲ್ಲಿ ಈಗಾಗಲೇ ಶೇ.60ಕ್ಕೂ ಹೆಚ್ಚು ಇ-ಖಾತಾ ವಿತರಿಸಲಾಗಿದ್ದು, ಶೇ.100ರಷ್ಟು ಪ್ರಗತಿ ಸಾಧಿಸಲು ವಿಶೇಷ ಅಭಿಯಾನ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಸಿದ್ರಾಂಪುರ ಬಡಾವಣೆಯಲ್ಲಿ ಸೈಟ್ ಪಡೆದ ಫಲಾನುಭವಿಗಳಿಗೆ ಸೇಲ್ ಡೀಡ್ ಮಾಡಿ ಹಕ್ಕುಪತ್ರ ನೀಡಲು ಸೂ...
- Get link
- X
- Other Apps
ನಗರಾಭಿವೃದ್ಧಿ ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ: ಜನಸಂಖ್ಯೆಗೆ ಅನುಗುಣವಾಗಿ ವಿವಿಧ ಸೌಲಭ್ಯ ಒದಗಿಸಿ- ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.7 - ಪ್ರಸ್ತುತ ಬರ ಇವರು ಕಾರಣ ಜನರಿಗೆ ಕುಡಿಯುವ ನೀರು ಸೇರಿದಂತೆ ಇತರೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಜನಸಂಖ್ಯೆಗೆ ಅನುಗುಣವಾಗಿ ವಿವಿಧ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸಬೇಕೆಂದು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ಅವರಿಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಮಹಾನಗರ ಪಾಲಿಕೆ ಹಾಗೂ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರುವ ದಿನಗಳಲ್ಲಿ ಹೆಚ್ಚಾಗುವ ನಗರದ ಜನಸಂಖ್ಯೆಗೆ ಅನುಗುಣವಾಗಿ ಕುಡಿಯುವ ನೀರು, ಘನ ತ್ಯಾಜ್ಯ ವಿಲೇವಾರಿಗೆ ಸೂಕ್ತ ಯೋಜನೆಯನ್ನು ರೂಪಿಸಬೇಕು. ರಾಯಚೂರು ನಗರದಲ್ಲಿ 3.5 ಲಕ್ಷ ಜನಸಂಖ್ಯೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ಭವಿಷ್ಯದಲ್ಲಿ ಬೇಡಿಕೆ ಹೆಚ್ಚಳವಾಗುವದನ್ನು ಸಹ ಪರಿಗಣಿಸಬೇಕೆಂದರು. ನಗರದಲ್ಲಿ 52 ಎಂಎಲ್ಡಿ ನೀರಿನ ಪೂರೈಕೆಯಾಗುತ್ತಿದ್ದು, 90 ಎಂಎಲ್ಡಿ ಬೇಡಿಕೆಯಿದೆ ಎಂದರು. ನೀರು, ಘನತ್ಯಾಜ್ಯ ವಿಲೇವಾರಿ ಹಾಗೂ ಇನ್ನಿತರೆ ಮೂಲಭೂತ ಸೌಕರ್ಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲ...
- Get link
- X
- Other Apps
ಅ.3 ಮತ್ತು 4 ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವ 'ಗೋವಿಂದ ಗಾನ' : ಭಜನಾ ಮಂಡಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ- ಮುರಳೀಧರ ಕುಲಕರ್ಣಿ. ಜಯ ಧ್ವಜ ನ್ಯೂಸ್, ರಾಯಚೂರು, ಸೆ.7- ಮುಂದಿನ ತಿಂಗಳು ಅ.3 ಮತ್ತು 4 ರಂದು ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವ 'ಗೋವಿಂದ ಗಾನ' ಆಯೋಜಿಸಲಾಗಿದ್ದು ಭಜನಾ ಮಂಡಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುರಳೀಧರ ಕುಲಕರ್ಣಿ ಹೇಳಿದರು. ಅವರಿಂದು ನಗರದ ಜವಾಹರ ನಗರ ರಾಯರ ಮಠದಲ್ಲಿ ಭಜನಾ ಮಂಡಳಿ ಸದಸ್ಯರಿಗೆ ಗೋವಿಂದ ಗಾನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಗೋವಿಂದ ಗಾನ ಕಾರ್ಯಕ್ರಮ ಭಕ್ತಿ ಹಾಗೂ ಸಡಗರದಿಂದ ನಡೆಯಲಿದ್ದು ಎರೆಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಸಾನಿಧ್ಯ ವಹಿಸಲಿದ್ದು ವಿಧ್ವಾಂಸರಿಂದ ಪ್ರವಚನ, ಸಿರಿ ಗೋವಿಂದ ವಿಠಲ ಪ್ರಶಸ್...
- Get link
- X
- Other Apps
ವೆಂಕಟೇಶ್ ಬೇವಿನಬೆಂಚಿಗೆ ಪಿತೃವಿಯೋಗ. ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.7- ತತ್ವಪದಕಾರರು ಅವಧೂತ ಪರಂಪರೆಯ ಬೇವಿನಬೆಂಚಿ ಗ್ರಾಾಮದ ನಿವಾಸಿ ತಿಪ್ಪಯ್ಯ(88) ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥರಾಗಿರುವ ವೆಂಕಟೇಶ ಬೇವಿನಬೆಂಚಿ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಗಳ ಅಗಲಿದ್ದಾಾರೆ. ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.ಮೃತ ತಿಪ್ಪಯ್ಯ ಅವರು ತತ್ವಪದಕಾರರಾಗಿದ್ದರಲ್ಲದೆ, ಆಧ್ಯಾತ್ಮಿಕ ಚಿಂತನೆಯುಳ್ಳವರಾಗಿದ್ದರಿಂದ ಮುಗಳಖೋಡದ ಯಲ್ಲಾಲಿಂಗ ಸ್ವಾಮಿಗಳವರ ಶಿಷ್ಯ ಪರಂಪರೆಯಲ್ಲಿ ಗುರುತಿಸಿಕೊಂಡವರಾಗಿದ್ದರು. ಮೃತರ ಅಂತ್ಯಕ್ರಿಯೆ ಸೆ.7ರಂದು ಸಂಜೆ 4ರ ಬಳಿಕ ಸ್ವಗ್ರಾಮ ರಾಯಚೂರು ತಾಲೂಕಿನ ಬೇವಿನಬೆಂಚಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ವರ್ಗ ಪ್ರಕಟಣೆಯಲ್ಲಿ ತಿಳಿಸಿದೆ .