Posts

Image
  ನೇತಾಜಿ ನಗರ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ- ಚಿನ್ನ , ಬೆಳ್ಳಿ ಆಭರಣ ಜಪ್ತಿ.                                         ಜಯಧ್ವಜ ನ್ಯೂಸ್, ರಾಯಚೂರು, ಮೇ.14-   ನೇತಾಜಿ ನಗರ ಪೊಲೀಸ್ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿ 1.26ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಹನುಮಾನ್ ಟಾಕೀಸ್ ಬಳಿಯ  ಕೊತ್ತಪೇಟೆ ನಿವಾಸಿ ರಹೀಮ ತಂದೆ ಶೇಕ್ ನಜೀರ್ ಮನೆಯ ಬೀಗ ಮುರಿದು 1.49 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿದ್ದ ಆರೋಪಿ  ರಹೀಮ್  ನನ್ನು ಬಂಧಿಸಿದ ಪೊಲೀಸರು ಚಿನ್ನ ಬೆಳ್ಳಿ ಆಭರಣ ವಶ ಪಡಿಸಿಕೊಂಡಿದ್ದಾರೆ. ಪಶ್ಚಿಮ ವಲಯ ಸಿಪಿಐ, ನೇತಾಜಿ ನಗರ ಠಾಣೆ ಪಿಐಸ್ ಐ, ಸಿಬ್ಬಂದಿಗಳ ಕಾರ್ಯಕ್ಕೆ ಎಸ್ಪಿ , ಎಎಸ್ಪಿ, ಡಿಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Image
  ಮಾವಿನ ಕೆರೆಗೆ ಜಿಲ್ಲಾಧಿಕಾರಿ ಎಸ್.ಪೂವಿತಾ ಭೇಟಿ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಜಯ ಧ್ವಜ ನ್ಯೂಸ್ ,ರಾಯಚೂರು ಮೇ.14 -  ರಾಯಚೂರು ನಗರದ ಐತಿಹಾಸಿಕ ಮಾವಿನಕೆರೆ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳಾದ ಎಸ್.ಪೂವಿತಾ ಅವರು ಮೇ.13ರ ಬುಧುವಾರ ದಂದು ಭೇಟಿ ನೀಡಿ ಪರಿಶೀಲಿಸಿದರು. ಕೆರೆ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ ನಡೆಸಿ, ಜಿಲ್ಲಾಧಿಕಾರಿ ಎಸ್.ಪೂವಿತಾ ಅವರು ಮಾತನಾಡಿ, ಕೆರೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗೆ ಯಾವುದೇ ಅಡೆತಡೆ ಬಂದರೆ ಕೂಡಲೇ ಜಿಲ್ಲಾಡಳಿತವನ್ನು ಸಂಪರ್ಕ ಮಾಡಬೇಕು ಹಾಗೂ ಕಾಮಗಾರಿಯನ್ನು ಗುಣಮಟ್ಟದಿಂದ ಮಾಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ನಂತರ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಕೆರೆಯ ವಿಸ್ತರಣೆ ಮಾಹಿತಿಯನ್ನು ಪಡೆದರು. ಮಾವಿನಕೆರೆಗೆ ಬೇರೆ ಬೇರೆ ಕಡೆಗಳಿಂದ ಗಟಾರು ನೀರು ಕೆರೆಗೆ ಹರಿದು ಬರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಕೆರೆಗೆ ಕಸ ಮತ್ತು ಪ್ಲಾಸ್ಟಿಕ್ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣಾಧಿಕಾರಿ ಆನಂದ ರೆಡ್ಡಿ, ಕೆರೆ ಇಂಜಿನಿಯರ್ ಬಸವರಾಜ ಸೇರಿದಂತೆ ಗುತ್ತೇದಾರರು,...
Image
  ವಾರ್ಡ್ ನಂ.22 ರಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲು ಮನವಿ.                                                  ಜಯ ಧ್ವಜ ನ್ಯೂಸ್, ರಾಯಚೂರು,ಮೇ.13-                       ನಗರದ ವಾರ್ಡ್ ನಂ.22ರಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮನವಿ ಮಾಡಿದೆ. ಸಂಘಟನೆ ಸದಸ್ಯರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ ಮಡ್ಡಿ ಪೇಟೆಯ ಕೆಲ ಪ್ರದೇಶದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ ಅಲ್ಲದೆ ಬೀದಿ ದೀಪ, ಒಳ ಚರಂಡಿ, ಶೌಚಾಲಯ, ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಕುಂಠಿತವಾಗಿದೆ ಬೀದಿ ನಾಯಿ, ಬಿಡಾಡಿ ದಿನಗಳ ಹಾವಳಿಯಿದ್ದು ಮಹಾನಗರ ಪಾಲಿಕೆ ಕ್ರಮ ವಹಿಸಬೇಕೆಂದು ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವರಲಕ್ಷ್ಮೀ, ಹೆಚ್.ಪದ್ಮಾ, ಸರೋಜ, ಶಕುಂತಲಾ, ನಾಗಮ್ಮ ಇನ್ನಿತರರು ಉಪಸ್ಥಿತರಿದ್ದರು .   
Image
  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಿ- ಡಾ.ರಝಾಕ್ ಉಸ್ತಾದ್        ಜಯ ಧ್ವಜ ನ್ಯೂಸ್ ,  ರಾಯಚೂರು,ಮೇ.13-               ದೇಶದಲ್ಲಿ ಮೇ 3 ರಂದು ನಡೆದ ವೈದ್ಯಕೀಯ ನೀಟ್ ಪರೀಕ್ಷೆ ಕೇಂದ್ರ ಸರಕಾರ ಸಮರ್ಥವಾಗಿ ನಡೆಸಲು ವಿಫಲವಾಗಿ ರದ್ದು ಪಡಿಸಿರುವದು ಪರೀಕ್ಷೆ ಬರೆದ 23 ಲಕ್ಷ ವಿದ್ಯಾರ್ಥಿಗಳಿಗೆ ಮಾಡಿದ ಅನ್ಯಾಯವಾಗಿದೆ ಮತ್ತು ಇದೊಂದು ಕೇಂದ್ರ ಸರಕಾರದ ಬಹು ದೊಡ್ಡ ಹಗರಣವಾಗಿದೆ, ಕಳೆದ ಐದಾರು ವರ್ಷಗಳಲ್ಲಿ ಮೂರು ಸಲ ನೀಟ್ ಪರೀಕ್ಷೆ ರದ್ದಾಗಿದೆ, ರಾಜಸ್ಥಾನ ಮತ್ತು ಹರ್ಯಾಣ ರಾಜ್ಯದ ಕೋಚಿಂಗ್ ಸೆಂಟರ್ ಗಳು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿವೆ ಎಂದು ಹೇಳಲಾಗುತ್ತಿದೆ, ಇದಕ್ಕೆ ಕೇಂದ್ರ ಸರಕಾರದ ಜವಾಬ್ದಾರಿ ಇದೆ ಇದರ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ವೈದ್ಯಕೀಯ ನೀಟ್ ಪರೀಕ್ಷೆ ಬರೆಯಲು ಸತತವಾಗಿ ಎರಡು ಮೂರು ವರ್ಷಗಳಿಂದ ತಯಾರಿ ನಡೆಸುತ್ತಲೇ ಇರುತ್ತಾರೆ, ಇದೊಂದು ರೀತಿ ಯುಪಿಎಸ್ಸಿ ಪರೀಕ್ಷೆಯ ತಯಾರಿ ತರಹ ಆಗಿದೆ, ಇಂತಹ ಪರೀಕ್ಷೆಯನ್ನು ಕೇಂದ್ರ ಸರಕಾರ ಗಂಭೀರವಾಗಿ ನಡೆಸಬೇಕಿತ್ತು, ಆದರೆ ಕಳೆದ ನಾಲ್ಕೈದು ವರ್ಷಗಳಿಂದ ನೀಟ್ ಪರಿಕ್ಷೆಯಲ್ಲಿ  ಒಂದಲ್ಲ ಒಂದು ಗೊಂದಲಗಳು, ಅಕ್ರಮಗಳು, ಅವಾಂತರ...
Image
  ವಿಶೇಷ ರೈಲುಗಳಿಂದ ಖಾಯಂ ರೈಲು ಸೇವೆ - ಡಾ.ಬಾಬುರಾವ್  ಜಯ ಧ್ವಜ ನ್ಯೂಸ್ ,ರಾಯಚೂರು,ಮೇ.13- ಬೆಂಗಳೂರು – ಕಲಬುರಗಿ ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲುಗಳನ್ನು ಕಾಯಂ ರೈಲನ್ನಾಗಿ ಓಡಿಸಲು ದಕ್ಷಿಣ ಮಧ್ಯೆ ರೈಲ್ವೆ ಮಂಡಳಿ ತೀರ್ಮಾನಿಸಿದ ಹಿನ್ನಲೆಯಲ್ಲಿ ಮೇ. 15 ರಿಂದ ಈ ಬದಲಾವಣೆ ಕಾರ್ಯಾಚರಣೆಗೆ ಬರಲಿವೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ತಿಳಿಸಿದ್ದಾರೆ.  ಈ ಕುರಿತು ಹೇಳಿಕೆಯೊಂದನ್ನು ನೀಡಿರುವ ಅವರು, ಪ್ರತಿ ಶನಿವಾರ ರಾತ್ರಿ 10ಕ್ಕೆ ಹೊರಡುವ ಬೆಂಗಳೂರು ಕಂಟೋನ್ಮಂಟ್-ಕಲಬುರಗಿ (16563) ರೈಲು ಭಾನುವಾರ ಬೆಳಿಗ್ಗೆ 10.20ಕ್ಕೆ ಕಲಬುರಗಿ ತಲುಪಲಿದೆ. ಭಾನುವಾರ ಬೆಳಿಗ್ಗೆ 11.20ಕ್ಕೆ ಕಲಬುರಗಿಯಿಂದ-ಬೆಂಗಳೂರು ಕಂಟೋನ್ಮಂಟ್ಗೆ (16564) ಹೊರಡುವ ರೈಲು ಅದೇ ದಿನ ರಾತ್ರಿ 11ಕ್ಕೆ ಬೆಂಗಳೂರು ತಲುಪಲಿದೆ. ವಾರದಲ್ಲಿ ಎರಡು ದಿನ ಬೆಂಗಳೂರಿನಿಂದ ಕಲಬುರಗಿ ಮೂಲಕ ಬೀದರ ಸಂಚರಿಸುವ ವಿಶೇಷ ರೈಲನ್ನು ಕಾಯಂಗೊಳಿಸಲಾಗಿದೆ. ಈ ಬದಲಾವಣೆ ಮೇ 15ರಿಂದ ಜಾರಿಗೆ ಬರಲಿದೆ. ಪ್ರತಿ ಶುಕ್ರವಾರ ಮತ್ತು ಭಾನುವಾರ ರಾತ್ರಿ 9.15ಕ್ಕೆ ಬೆಂಗಳೂರಿನಿಂದ ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಡುವ ರೈಲು (16559) ಮರುದಿನ ಬೆಳಿಗ್ಗೆ 9.05ಕ್ಕೆ ಕಲಬುರಗಿ ತಲುಪಲಿದೆ. ಮಧ್ಯಾಹ್ನ 12.15ಕ್ಕೆ ಬೀದರ್ ತಲುಪಲಿದೆ.  ಪ್ರತಿ ಶನಿವಾರ ಮತ್ತು ಸೋಮವಾರ ಬೀದರ್ನಿಂದ (16560) ಮಧ್ಯಾಹ್ನ 2ಕ್ಕೆ ಹೊರಡುವ ರೈಲು ಸಂಜೆ 5ಕ್ಕೆ ಕ...
Image
  ಅಂಜುಮಾನ ಸಂಸ್ಥೆಯ ಕಾರ್ಯ ಅರ್ಥಪೂರ್ಣ - ಬಾದರ್ಲಿ ಜಯ ಧ್ವಜ ನ್ಯೂಸ್ ರಾಯಚೂರು, ಮೇ.12-  ಅಲ್ಪಸಂಖ್ಯಾತರು  ಶೈಕ್ಷಣಿಕವಾಗಿ ಸಾಕಷ್ಟು  ಮುಂದುವರೆಯುತ್ತಿರುವದು ಸಂತೋಷದ ವಿಷಯವಾಗಿದೆ  ಅಲ್ಪ ಸಂಖ್ಯಾತರು ಹೊರ ರಾಷ್ಟ್ರಗಳಲ್ಲಿನ ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವ್ಯಾಪಾರದ ಪ್ರಗತಿಯನ್ನ ಅವಲೋಕಿಸಿಕೊಂಡು ಮುನ್ನಡೆಯಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.    ಅವರು ಸೋಮವಾರ ಸಂಜೆ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಂಜುಮನ್ ಎ - ರಾಯಚೂರು ಸಂಸ್ಥೆ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ‌ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನ ಉದ್ಘಾಟಿಸಿ  ಮಾತನಾಡಿದರು.  ವೈವಿದ್ಯತೆಯ ಜೊತೆಗೆ ಭಾವೈಕ್ಯತೆಯಿಂದ ಕೂಡಿದ ದೇಶ ನಮ್ಮದಾಗಿದೆ ಆದರೆ ಇತ್ತೀಚಿಗೆ ಕೆಲವರು ಧಾರ್ಮಿಕ ಭಾವನೆಗಳನ್ನ ಕೆರಳಿಸುವ‌ ಕೆಲಸ ಮಾಡುತ್ತಿದ್ದು, ಇದು ಸರಿಯಲ್ಲವೆಂದರು.  ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ನೇತೃತ್ವದ ನಮ್ಮ ಸರ್ಕಾರ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಮೊದಲನೇ ವರ್ಷದಲ್ಲಿ ನಾಲ್ಕು ಸಾವಿರ ಕೋಟಿ, ಎರಡನೇ ವರ್ಷದಲ್ಲಿ ಐದು ಸಾವಿರ ಕೋಟಿ ಮತ್ತು ಪ್ರಸಕ್ತ ಸಾಲಿನಲ್ಲಿ ಆರುವರೆ ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ. ಜೊತೆಗೆ 150 ಮೌಲಾನಾ ಅಜಾದ ಆಂಗ್ಲ ಮಾದ್ಯಮ ಶಾಲೆಗಳಿಗೆ ಮಂಜೂರಾತಿ...
Image
  ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳವಾಗಿ ಆಚರಣೆ ಜಯ ಧ್ವಜ ನ್ಯೂಸ್ ರಾಯಚೂರು ,ಮೇ.10- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಾನಗರ ‌ಪಾಲಿಕೆ, ಕನ್ನಡ ‌ಮತ್ತು ಸಂಸ್ಕೃತಿ ‌ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಇಂದು ಸರಳವಾಗಿ ಆಚರಿಸಲಾಯಿತು. ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ  ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಸಿ ಮೂರು ದಿ‌ನಗಳ ಕಾಲ ರಾಜ್ಯದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿರುವುದರಿಂದ ಸ್ತ್ರೀ ಕುಲದ ಆದರ್ಶ, ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ  ಇಂದು ಅತ್ಯಂತ ಸರಳ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಮಂಗಳವಾರಪೇಟೆ ವೀರಸಂಗಮೇಶ್ವರ ಮಹಾಸ್ವಾಮಿಗಳು, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಹಾಗೂ ಕರ್ನಾಟಕ ಸರಕಾರದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ  ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ,  ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್,  ತಹಶಿಲ್ದಾರ್ ಸುರೇಶ್ ವರ್ಮಾ ಅವರು ಶಿವಶರಣೆ ಹೇಮರಡ್ಡಿ ಮಲ್ಲ...