ರಾಯಚೂರು ನಗರದ ಎಲ್ಲಾ ಪತ್ರಕರ್ತರ ಆರೋಗ್ಯ ವಿಮೆ ಹಾಗೂ ತುರ್ತು ನಿಧಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಲು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಜಯ ಧ್ವಜ ನ್ಯೂಸ್ ,ರಾಯಚೂರು,ಮಾ.16- ನಗರದ ಎಲ್ಲಾ ಪತ್ರಕರ್ತರ ಆರೋಗ್ಯ ವಿಮೆ ಹಾಗೂ ತುರ್ತು ನಿಧಿಗೆ ಮಹಾನಗರ ಪಾಲಿಕೆ ಬಜೆಟ್ ನಲ್ಲಿ ಅನುದಾನ ಮೀಸಲಿಡಲು ಕೋರಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಹಾಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಇಂದು ಅವರ ಕಛೇರಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿಪತ್ರ ಸಲ್ಲಿಸಲಾಯಿತು . ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದ್ದು ನಗರದ ಅಭಿವೃದ್ಧಿಯಲ್ಲಿ ಪತ್ರಿಕೆಗಳು ಹಾಗೂ ಪತ್ರಕರ್ತರು ಅಗತ್ಯ ಸಹಕಾರ ನೀಡುತ್ತಿದ್ದಾರೆ. ಈ ಹಿಂದಿನ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ ಅಧ್ಯಕ್ಷತೆಯಲ್ಲಿ ತಮ್ಮ ಘನ ಉಪಸ್ಥಿತಿ ಯಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಪತ್ರಕರ್ತರ ಆರೋಗ್ಯ ವಿಮೆಗಾಗಿ 25 ಲಕ್ಷ ರೂಪಾಯಿಗಳ ಅನುದಾನ ಮೀಸಲಿಡಲು ತೀರ್ಮಾನ ಮಾಡಿರುವುದು ಶ್ಲಾಘನೀಯ ಅದಕ್ಕೆ ಅಭಾರಿಯಾಗಿದ್ದು. ಈ ವರ್ಷದ ಬಜೆಟ್ ನಲ್ಲೂ ಅನುದಾನ ಒದಗಿಸಿ ಅನುಷ್ಠಾನಕ್ಕೆ ತರಲು ವಿನಂತಿಸಿಕೊಳ್ಳಲಾಯಿ...