Posts

Image
ಶಿಕ್ಷಕರು  ಸಾಧನೆಗೆ ಮಾರ್ಗದರ್ಶಕರು -ಸಚಿವ ಡಾ. ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು.ಸೆ. 5-  ಜಗತ್ತಿನಲ್ಲಿ ನನ್ನನ್ನು ರಾಷ್ಟ್ರಪತಿಯಾಗಿ ನೆನಪಿಸಿಕೊಳ್ಳುವುದಕ್ಕಿಂತ, ಒಬ್ಬ ಶಿಕ್ಷಕನಾಗಿ ನೆನಪಿಸಿಕೊಳ್ಳುವುದು ಅತ್ಯಂತ ಸೂಕ್ತ” ಎಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮಹತ್ವದ ಸಂದೇಶವನ್ನು ನೀಡಿದ್ದಾರೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು. ಅವರು ಇಂದು ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆ ರಾಯಚೂರು ಇವರ ಸಹಯೋಗದಲ್ಲಿ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 139  ನೇ ಜನ್ಮದಿನೋತ್ಸವ ಹಾಗೂ ರಾಯಚೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭ 2026-27 ನೇ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.   ವೈದ್ಯರು ಅನೇಕ ರೋಗಿಗಳಿಗೆ ಚಿಕಿತ್ಸೆ ನೀಡಬಹುದು, ಎಂಜಿನಿಯರ್‌ಗಳು ಹಲವು ಸೇತುವೆ ಮತ್ತು ಕಟ್ಟಡಗಳನ್ನು ನಿರ್ಮಿಸಬಹುದು, ವಕೀಲರು ಅನೇಕ ಸಮಸ್ಯೆಗಳನ್ನು ಬಗೆಹರಿಸಬಹುದು, ವಿಜ್ಞಾನಿಗಳು ಹೊಸ ಆವಿಷ್ಕಾರಗಳನ್ನು ಮಾಡಬಹುದು. ಆದರೆ ಇವರೆಲ್ಲರ ಜೀವನದಲ್ಲೂ ಅವರನ್ನು ಮುನ್ನಡೆಸಿದ ಒಬ್ಬ ಶಿಕ್ಷಕ ಇದ್ದೇ ಇರುತ್ತಾರೆ. ...
Image
  ಹೊಕ್ರಾಣಿ ಗ್ರಾಮಕ್ಕೆ ಭೇಟಿ, ಅಶ್ವಿನಿ ಕುಟುಂಬಕ್ಕೆ ಸಾಂತ್ವನ : ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು- ಸಚಿವ ಕೆ.ಹೆಚ್.ಮುನಿಯಪ್ಪ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.4 -  ಸಮಾಜದಲ್ಲಿ ಪ್ರೀತಿ-ವಾತ್ಸಲ್ಯದಿಂದ ಒಟ್ಟಾಗಿ ಬಾಳುವ ಉತ್ತಮ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ನಿರ್ಮಿಸಬೇಕು. ಅಶಾಂತಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು  ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಹೇಳಿದರು. ಅವರಿಂದು ‌ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಮೃತ ಕು.ಅಶ್ವಿನಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿದರು. ಈ ಹಿಂದುಳಿದ ಪ್ರದೇಶಗಳಲ್ಲಿ ವಿಶೇಷ ಕಾಳಜಿ ವಹಿಸಿ, ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಮುದಾಯಗಳ ಮಧ್ಯ ಉತ್ತಮ ವಾತಾವರಣ ನಿರ್ಮಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಶ್ರಮಿಸಬೇಕು. ಮೃತ ಅಶ್ವಿನಿ ಅವರ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುತ್ತದೆ. ಅಲ್ಲದೆ ಅವರ ಸಹೋದರನಿಗೆ ಸರ್ಕಾರಿ ನೌಕರಿ ನೀಡಲಾಗುತ್ತದೆ. ಹಾಗೂ ಅವರ ಜಮೀನಿಗೆ ನೀರಾವರಿ ವ್ಯವಸ್ಥೆ...
Image
  ಪಾದಯಾತ್ರೆ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ-ರಝಾಕ ಉಸ್ತಾದ್                                                  ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.3- ಜಿಲ್ಲೆಯ ಲಿಂಗಸ್ಗೂರು ದಿಂದ ಬಳ್ಳಾರಿಯವರೆಗೆ ಬಿಜೆಪಿ ನಡಸುತ್ತಿರುವ ಪಾದಯಾತ್ರೆ ರಾಜಕೀಯ‌ ಪ್ರೇರಿತವಾಗಿದೆ, ವಾಲ್ಮೀಕಿ ನಿಗಮದ 184 ಕೋಟಿಯಲ್ಲಿ 179 ಕೋಟಿ  ಹಣ ಪ್ರಕರಣ ದಾಖಲಾದ‌ ಸಂದರ್ಭದಲ್ಲಿಯೇ ಸರಕಾರಕ್ಕೆ‌ ವಾಪಸ್ ಬಂದಿದೆ, ಪ್ರಕರಣ ತನಿಖೆಯ‌ ಹಂತದಲ್ಲಿದೆ, ಯಾರು ತಪ್ಪು ಮಾಡಿದ್ದಾರೆ ತನಿಖೆಯ ನಂತರ ಶಿಕ್ಷೆಯಾಗುತ್ತದೆ, ಅದರಲ್ಲಿ ಕೇಂದ್ರ ಸರಕಾರದ ಬ್ಯಾಂಕ್ ಸಹ ಭಾಗಿಯಾಗಿದೆ,  ಸಚಿವರು ಈಗಾಗಲೇ‌ ರಾಜೀನಾಮೆ ನೀಡಿದ್ದಾರೆ, ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಎಂದು  ಕೆಪಿಸಿಸಿ‌ ಮಾದ್ಯಮ‌ ವಿಭಾಗ ರಾಜ್ಯ ವಕ್ತಾರ  ಡಾ.ರಝಾಕ ಉಸ್ತಾದ ದೂರಿದ್ದಾರೆ ರಾಜ್ಯದಲ್ಲಿ ಭೀಕರ ಬರಗಾಲ ಇದೆ, ರೈತರು ಸಂಕಷ್ಟದಲ್ಲಿದ್ದಾರೆ, ರೈತರಿಗೆ ಪರಿಹಾರ ನೀಡಲು ಕೇಂದ್ರ ಸರಕಾರ ರಾಷ್ಟ್ರೀಯ ತುರ್ತು ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಲು ಹೋರಾಟ ಮಾಡಲಿ ಮತ್ತು ಬಿಜೆಪಿ ಜನಪರವಾಗಿ ಇದ್ದರೆ ಬರಗಾಲ ಪರಿಹಾರ ವಿತರಣೆಗೆ ಪಾದಯಾತ್ರೆ ಮಾಡಲಿ,  ಅದು ಬಿಟ್ಟು ಜನತೆ ಸಂಕಷ್ಟದಲ್ಲಿ ಇದ್ದಾಗ...
Image
  ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ- ಬಿ.ವೈ.ವಿಜಯೇಂದ್ರ ಸವಾಲು ಜಯ ಧ್ವಜ ನ್ಯೂಸ್ , ರಾಯಚೂರು, ಸೆ.2- ದಲಿತರಿಗೆ, ಹಿಂದುಳಿದ ವರ್ಗಗಳಿಗೆ ಈ ಸರ್ಕಾರ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ ಆಗ ಜನರೇ ತೀರ್ಮಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು  ‘ಬಳ್ಳಾರಿ ಚಲೋ’ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ದಲಿತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಮೂರುವರೆ ವರ್ಷದಲ್ಲಿ ಅವರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ವಾಲ್ಮೀಕಿ ನಿಗಮದಲ್ಲಿ ರೂ. 187 ಕೋಟಿ ಹಗರಣ ಮಾಡಿದರು. ಮೀಸಲಾತಿಯನ್ನು ಸರಿಯಾಗಿ ಅನುಷ್ಟಾನ ಮಾಡಲಿಲ್ಲ. ಮೀಸಲಾತಿ ನೆಪ ಹೇಳಿಕೊಂಡು ಯುವಕರಿಗೆ ಉದ್ಯೋಗ ನೀಡಲಿಲ್ಲ. ಕೇವಲ ದಲಿತರು ಮಾತ್ರವಲ್ಲ ಎಲ್ಲಾ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದರು. ಒಟ್ಟಾರೆ ಅಖಂಡ ಕರ್ನಾಟಕವನ್ನು ಕಡೆಗಣಿಸಿದೆ ಎಂದು ಆಪಾದಿಸಿದರು.    ಡಿಕೆಶಿ ಸರ್ಕಾರದ ಇನ್ನೂ ಎರಡು ಮೂರು ವಿಕೆಟ್‍ಗಳು ಬೀಳಲು ತಯಾರು ಆದಂತೆ ಇದೆ. ಈ ಎಲ್ಲರಿಗೂ ಭ್ರಷ್ಟಾಚಾರ ಉರುಳಾಗಲಿದೆ. ಲಜ್ಜೆಗೆಟ್ಟ ಕಾಂಗ್ರೆಸ್‍ನವರಿಗೆ ಮಾನ, ಮರ್ಯಾದೆ ಏನೂ ಇಲ್ಲ. ಆನೆ ನಡೆದಿದ್ದೇ ದಾರಿ ಎಂದುಕೊಂಡಿದ್ದವರ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಾರಂಭಿಸಿದ...
Image
ಕೊನೆಯ ಭಾಗದ ರೈತರಿಗೆ ನೀರು ತಲುಪಲು ಶ್ರಮಿಸಿ- ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.2-  ಕೊನೆಯ ಭಾಗದ ರೈತರಿಗೆ ತುಂಗಭದ್ರಾ ಎಡದಂಡೆ ನಾಲೆಯ ನೀರನ್ನು ಒದಗಿಸಲು ಈಗಾಗಲೇ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದ್ದು, ರೈತ ಮುಖಂಡರು ಅಧಿಕಾರಿಗಳೊಂದಿಗೆ ಸಹಕರಿಸಿ ಕೊನೆಯ ಭಾಗದ ರೈತರಿಗೆ ನೀರು ತಲುಪಲು ಶ್ರಮಿಸಬೇಕೆಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಹೇಳಿದರು. ಅವರಿಂದು  ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನೀರು ನಿರ್ವಹಣೆ ಕುರಿತು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರು ಪೋಲ್ ಆಗುವಂತಹ ಪ್ರದೇಶಗಳನ್ನು ಅಧಿಕಾರಿಗಳ ಗಮನಕ್ಕೆ ರೈತ ಮುಖಂಡರು ತರಬೇಕು. ಕಾಲುವೆ ಪ್ರದೇಶದಲ್ಲಿ ಅಕ್ರಮವಾಗಿ ನೀರು ತೆಗೆಯುವರ ವಿರುದ್ಧ ಪ್ರಕರಣ ದಾಖಲೆ ಮಾಡಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಅಲ್ಲದೆ ರೈತರು ಕೇವಲ ಭತ್ತವನ್ನು ಬೆಳೆಯದೆ ಬೇರೆ, ಬೇರೆ ಬೆಳೆಗಳನ್ನು ಬೆಳೆಯಲು ಗಮನಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ರೈತರಿಗೆ ಜಾಗೃತಿ ಮೂಡಿಸಬೇಕು. ಕಾಲುವೆ ಪಕ್ಕದಲ್ಲಿ ಇರುವ ಕೆರೆಗಳಿಗೆ ನೀರು ಹೋಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಕಾಲುವೆಗಳ ಮೇಲೆ ಸರಿಯಾಗಿ ಮೇಲುಸ್ತುವಾರಿ ಮಾಡಬೇಕು. ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳ ಮ...
Image
  ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಅಳವಡಿಸಿಕೊಳ್ಳಿ- ತಹಶೀಲ್ದಾರ್ ಸುರೇಶ ವರ್ಮಾ ಜಯ ಧ್ವಜ ನ್ಯೂಸ್ ,ರಾಯಚೂರು ಸೆ. 02 - ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ, ಸಿದ್ಧಾಂತ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಮಕ್ಕಳಲ್ಲಿಯೂ ಬೆಳೆಸಬೇಕು ಎಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಅವರು ಹೇಳಿದರು.  ಅವರಿಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ನಾರಾಯಣ ಗುರು ಜಯಂತಿಯಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಮೆರವಣಿಗೆ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಗುವುದೆಂದರು. ಜಯಂತಿ ಆಚರಣೆಯು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ನಾರಾಯಣ ಗುರುಗಳ ವಿಚಾರಧಾರೆ ಹಾಗೂ ಆದರ್ಶಗಳನ್ನು ಮನೆ, ಮನಗಳಲ್ಲಿ ಅನುಸರಿಸುವ ಮೂಲಕ ಮಕ್ಕಳಿಗೂ ಪರಿಚಯಿಸಬೇಕು ಎಂದರು. ನಾರಾಯಣ ಗುರುಗಳು ಕೇವಲ ಒಬ್ಬ ವ್ಯಕ್ತಿಯಲ್ಲ, ಭಾರತದ ಮಣ್ಣಿನಲ್ಲಿ ಹುಟ್ಟಿದ ಶಕ್ತಿಯಾಗಿದ್ದರು. ಅಂಧಶ್ರದ್ಧೆ, ಮೌಢ್ಯ, ಮೇಲು-ಕೀಳು ಎಂಬ ಭೇದಭಾವ ಹಾಗೂ ಅಸ್ಪೃಶ್ಯತೆ ವ್ಯಾಪ...
Image
  ನಾಳೆ ನಗರ ಉಪ ವಿಭಾಗ-2ರಲ್ಲಿ ವಿದ್ಯುತ್ ವ್ಯತ್ಯಯ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.2-  ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ವ್ಯಾಪ್ತಿಯ 110ಕೆವಿ ಮೇಸ್ ವಡವಟ್ಟಿ ಉಪ ಕೇಂದ್ರದಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಹಾಗೂ ಸುಧಾರಣೆ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಸೆಪ್ಟಂಬರ್ 03ರ ಗುರುವಾರ ಬೆಳಿಗ್ಗೆ 11ರಿಂದ ಸಾಯಂಕಾಲ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ. ಅಂದು ಬೆಳಿಗ್ಗೆ 11ರಿಂದ ಹರಿಜನ ವಾಡ, ಕೊಲ್ಮಿ, ಫಾರೂಖ್ ಅನ್ವರ ಕಂಪನಿ, ವಾಸವಿ ನಗರ, ಹನುಮಾನ ಟಾಕೀಸ್, ಗಾಜಗಾರಪೇಟೆ, ನೇತಾಜಿ ನಗರ, ರಾಘವೇಂದ್ರ ಸ್ವಾಮಿ ಮಠ, ಜವಾಹರ್ ನಗರ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್  ವ್ಯತ್ಯಯ ಆಗಲಿದೆ. ಹೆಚ್ಚಿನ  ಮಾಹಿತಿಗಾಗಿ  ಗ್ರಾಹಕರ ನಿರಂತರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.