ಆ.11ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಜಯ ಧ್ವಜ ನ್ಯೂಸ್ ,ರಾಯಚೂರು, ಆ.8- ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಗಸ್ಟ್ 11ರ ಮಧ್ಯಾಹ್ನ 3.30ಗಂಟೆಗೆ ಕಾಡಾ ಟಿ.ಬಿ.ಪಿ. ಮುನಿರಾಬಾದ್ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದೆ. ಸಭೆಯಲ್ಲಿ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಕರ್ನಾಟಕ ಸರ್ಕಾರದ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿಯ ಸಭಾಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಲಿದ್ದು, ಈ ಭಾಗದ ಸಚಿವರುಗಳು, ಲೋಕಸಭಾ ಸದಸ್ಯರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು, ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.