Posts

Image
  ಜಿಲ್ಲಾಡಳಿತದಿಂದ 19ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ:    ಪ್ರಜಾಪ್ರಭುತ್ವದ ನೈಜ ಶಕ್ತಿ ಭಾರತೀಯ ಪ್ರಜೆಗಳಲ್ಲಿದೆ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್  ,ರಾಯಚೂರು ಸೆ.15-  ಪ್ರಜಾಪ್ರಭುತ್ವದ ನೈಜ ಶಕ್ತಿ ಕೇವಲ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳ ಕೈಯಲ್ಲಿರದೆ, ದೇಶದ ಪ್ರತಿಯೊಬ್ಬ ಭಾರತೀಯ ಪ್ರಜೆಗಳಲ್ಲಿದೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು.  ಅವರಿಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಮತ್ತು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು, ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತವು 1947ರ ಆಗಸ್ಟ್ 15ರಂದು ಸ್ವತಂತ್ರಗೊಂಡರೆ, 1950ರ ಜನವರಿ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಅಧಿಕೃತವಾಗಿ ಪ್ರಜಾಸತ್ತಾತ್ಮಕ ಗಣರಾಜ್ಯವಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಅನೇಕ ಮಹನೀಯರ ದೀರ್ಘಾವಧಿಯ ದೂರದೃಷ್ಟಿಯ ಫಲವಾಗಿ ನಮಗೆ ಈ ಶ್ರೇಷ್ಠ ಸಂವಿಧಾನ ದೊರೆತಿದೆ. ಸಂವಿಧಾನ ಜಾರಿಗೆ ಬಂದು 70ಕ್ಕೂ ಹೆಚ್ಚು ವರ್ಷಗಳು ಕಳೆದರೂ, ಅದ...
Image
  ರಾಘವೇಂದ್ರ ಕುಷ್ಟಗಿಗೆ   ಶಂಕರಪ್ಪ ಪ್ರತಿಷ್ಠಾನದಿಂದ  ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ -   ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.15- ಚಿತ್ರದುರ್ಗದ ನುಲೇನೂರು ಶಂಕರಪ್ಪ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಈ ಬಾರಿ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೨೫ ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಅಕ್ಟೋಬರ್ ಮೊದಲವಾರ ರಾಯಚೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸದಸ್ಯ ಚಿಕ್ಕಪ್ಪನಹಳ್ಳಿ ಷಣ್ಮುಖ ಮಾಹಿತಿ ತಿಳಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಘವೇಂದ್ರ ಕುಷ್ಟಗಿ ಅವರು  ಕಲ್ಯಾಣ ಕರ್ನಾಟದ ಆರ್ಟಿಕಲ್ ೩೭೧(ಜೆ) ಗೆ ಹೋರಾಟ ಮಾಡಿ ಯಶ ಕಂಡಿದ್ದಾರೆ. ಅಕ್ರಮ ಗಣಿಗಾರಿಕೆ, ಅನ್ಯಾಯದ ಭೂ ಸ್ವಾಧೀನ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗಾಗಿ  ಎಸ್.ಆರ್.ಹಿರೇಮಠ ಅವರ ಜೊತೆಗೂಡಿ ಜನ ಸಂಗ್ರಾಮ ಪರಿಷತ್ ಸ್ಥಾಪನೆ ಮಾಡಿದ್ದರು. ಅಕ್ರಮ ಗಣಿಗಾರಿಕೆ ವಿರುದ್ದ ರಾಯಚೂರಿನಿಂದ ಬೆಂಗಳೂರು ವರೆಗೆ ಬೃಹತ್ ಜಾಥಾ ಸಂಘಟಿಸಿದ್ದರು. ಗದಗದ ಕಪ್ಪತಗುಡ್ಡ ರಕ್ಷಣೆಗೆ ಪಶ್ಚಿಮಘಟ್ಟದಿಂದ ಆರಂಭಗೊAಡ ಜಾಥಾದಲ್ಲಿ ಪಾಲ್ಗೊಂಡಿದ್ದರು.   ಚಿಂತಕ ದೇವನೂರು ಮಹಾದೇವ. ರೈತ ಸಂಘದ ಪುಟ್ಟಣ್ಣಯ್ಯ, ಎಸ್...
Image
ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೆ.ಶಾಂತಪ್ಪ ಅವರಿಗೆ ಕರ್ನಾಟಕ ಸಂಘದಿಂದ ಸನ್ಮಾನ ಜಯ ಧ್ವಜ ನ್ಯೂಸ್  , ರಾಯಚೂರು ,ಸೆ.14- ಕರ್ನಾಟಕ ಸಂಘದ ಅಧ್ಯಕ್ಷರು, ಇತ್ತೀಚಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಶಾಂತಪ್ಪ ಇವರಿಗೆ ಕರ್ನಾಟಕ ಸಂಘದ ಪದಾಧಿಕಾರಿಗಳು ನಿನ್ನೆ ಸಂಜೆ ಅವರ ಮನೆಗೆ ತೆರಳಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಮುರಳಿಧರ ಕುಲಕರ್ಣಿ ಅವರು ಮಾತನಾಡಿ " ಕೆ. ಶಾಂತಪ್ಪ ಅವರು ಹೆಸರಿಗೆ ತಕ್ಕಂತೆ ಶಾಂತವಾಗಿ ಎಲ್ಲಾ ಸಮಾಜದ ಬಂಧುಗಳೊಡನೆ ಬೆರೆತು  ಸೌಹಾರ್ದತವಾಗಿ ಸಮಾಜ ಸೇವೆ ಮಾಡುತ್ತಿರುವುದು ವಿಶೇಷವಾಗಿದೆ. ಇವರ ಕಾರ್ಯ ಕ್ಷಮತೆ, ದಕ್ಷತೆ, ಪ್ರಾಮಾಣಿಕತೆ, ಇವುಗಳನ್ನು ಪರಿಗಣಿಸಿ ಅಧಿಕಾರವೇ ಇವರ ಬಳಿ ಬಂದಿದೆ ಇವರು ಅಧಿಕಾರವನ್ನು ಎಂದು ಹುಡುಕಿಕೊಂಡು ಹೋದವರಲ್ಲ ಎಂದು ಹೇಳಿದರು. ಪ್ರಸ್ತುತ ಕರ್ನಾಟಕ ಸಂಘದ ಅಧ್ಯಕ್ಷರಾಗಿ  ಸಂಘದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿ ಒಂದು ಹೊಸ ರೂಪವನ್ನು ಕೊಡುತ್ತಿರುವುದು ಇವರ ಕಾರ್ಯ ವೈಖರಿಯನ್ನು ತೋರಿಸುತ್ತದೆ ಎಂದು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಪದಾಧಿಕಾರಿಗಳಾದ ಕಾರ್ಯದರ್ಶಿ ಶ್ರೀನಿವಾಸ ಗಟ್ಟು, ಖಜಾಂಚಿ ಹನುಮಂತಪ್ಪ, ಹಿರಿಯ ಸದಸ್ಯರಾದ ಮಲ್ಲನಗೌಡ ಇಂದ ಪುರ್,  ಬಾಬು ಬಂಡಾರಿಗಲ್, ವೀರ ಹನುಮಾನ್ ಹಾಗೂ ಪಲಗುಲನಾಗರಾಜ ಅವರು ಉಪಸ್ಥಿತರಿದ್ದರು.
Image
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿಮಹೋತ್ಸವ :    ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆಗೆ ಬಸವರಾಜ್ ನಾಗಡದಿನ್ನಿ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.12 - ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತನ್ನ ಇಂದಿನ ಯುವ ಪೀಳಿಗೆ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ ಹೇಳಿದರು. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ "ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?" ವಿಷಯ ಕುರಿತು ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೆನ್ ಜಿ ಎಂಬುದು ಇತ್ತೀಚೆಗೆ ಬಹಳ ಪ್ರಭಾವಿತ ಪದವಾಗಿದೆ. ಶಿಕ್ಷಣವನ್ನು ಸಾರ್ವತ್ರಿಕವಾಗಿ ಮಾಡಿ ಯುವ ಸಮಾಜ ಕಟ್ಟವುದು ಜೆನ್ ಜಿ ಕಲ್ಪನೆಯಾಗಿದ್ದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ನೋಡಬೇಕಿದೆ ಎಂದರು.ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತಮ್ಮ ಬೆಳ್ಳಿ ಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಈ ರೀತಿ ಸ್ಪರ್ಧೆಗಳ ಆಯೋಜನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಅಂತ ಹೇಳಿದರು. ಮಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ವೆಂಕಟೇಶ್ವರ ಶಿಕ್ಷ...
Image
  ರಾಯಚೂರಿನಲ್ಲಿ ‘ವಿಕಸಿತ ಭಾರತ’ ಅಭಿಯಾನ ಯುವಕ ಯುವತಿಯರು ಭಾಗವಹಿಸಲು ಸ್ವಾತಿ ಗುಗುಲೋತ್ ಕರೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ. 11- ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವ್ಯಾಪ್ತಿಯ ಮೇರಾ ಯುವ ಭಾರತ (ಮೈ ಭಾರತ) ರಾಯಚೂರು ಕಚೇರಿ ವತಿಯಿಂದ ‘ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್ 2027’ ಹಾಗೂ ‘ವಿಕಸಿತ ಭಾರತ್ ರಸಪ್ರಶ್ನೆ’ ಜಿಲ್ಲಾಮಟ್ಟದ ಜಾಗೃತಿ ಮತ್ತು ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇರಾ ಯುವ ಭಾರತ ಕೇಂದ್ರ ರಾಯಚೂರಿನ ಜಿಲ್ಲಾ ಯುವ ಅಧಿಕಾರಿ ಸ್ವಾತಿ ಗುಗುಲೋತ್ ಹೇಳಿದರು. ಅವರಿಂದು ಮೇರಾ ಯುವ ಭಾರತ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಯುವಕರಲ್ಲಿ ನಾಯಕತ್ವ ಗುಣ, ಸೃಜನಶೀಲತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ನಾಗರಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ರಾಷ್ಟ್ರೀಯ ಉಪಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಮಾಹಿತಿ ಜಿಲ್ಲೆಯ ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಗಳಲ್ಲಿಯೂ ತಲುಪಿಸುವ ಗುರಿ ಹೊಂದಲಾಗಿದೆ. ಸ್ಥಳೀಯ ಶಿಕ್ಷಣ ಸಂಸ್ಥೆಗಳು, ಯುವ ಸಂಘಟನೆಗಳು, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಘಟಕಗಳ ಸಹಕಾರದೊಂದಿಗೆ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ, ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಲಾಗುತ್ತಿದೆ. ‘ವಿಕಸಿತ ಭಾರತ ರಸಪ್ರಶ್ನೆ’ಯು ಭಾರತದ ಸಾಧನೆಗಳು, ಸಾಂಸ್ಕೃತಿಕ ಪರಂಪರೆ, ಸಂವಿಧಾನಿಕ ಮೌಲ್ಯಗಳು ಹಾಗೂ ಅಭಿವೃದ್ಧಿ ಕುರಿತ...
Image
  ರಾಯಚೂರು   ರಿಪೋರ್ಟ್ ರ್ಸ್  ಗಿಲ್ಡ್   ಪ್ರಬಂಧ ಸ್ಪರ್ಧೆ ಉದ್ಘಾಟನೆ  ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.11- ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಧ್ಯಮಗಳು ಮತ್ತು ಪ್ರಜಾಪ್ರಭುತ್ವ ಇಂದಿನ ಸವಾಲುಗಳು ಹಾಗೂ ನೈತಿಕತೆ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರಾದ ದತ್ತು ಸರ್ಕಿಲ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡು ಮಾತನಾಡಿದ‌ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ್ ಮಾತನಾಡಿ, ಇಂತಹ ಪ್ರಬಂಧ ಸ್ಪರ್ಧೆ ವಿದ್ಯಾರ್ಥಿಗಳ ಭಾಷೆಯ ಕೌಶಲ್ಯ ಬರವಣಿಗೆ ವೃದ್ಧಿಗೆ ಅನುಕೂಲ ಕರ.  ಪ್ರಥಮ ಸ್ಥಾನ ಮುಖ್ಯ ಅಲ್ಲ ಭಾಗವಹಿಸಿ ತಮ್ಮ ಬದುಕಿನಲ್ಲಿ ಪೂರಕವಾಗಲಿವೆ ಎಂದರು. ವಿಷಯ ಪರಿಚಯಿಸುವ ಜೊತೆಗೆ ಅದರ ಆಳ ಅರಿತು ಬರೆಯಲು ಅನುಕೂಲವಾಗಲಿದೆ. ಮಾಧ್ಯಮಗಳ ಬಗ್ಗೆ ವಿದ್ಯಾರ್ಥಿಗಳ ಕುತೂಹಲ ತಿಳಿಯುವ ಉತ್ತಮ ಕಾರ್ಯ ಮಾಡಲಾಗಿದೆ ಎಂದು ಹೇಳಿದರು. ವಿಜಯ ಕರ್ನಾಟಕ ಹಿರಿಯ ವರದಿಗಾರ ಹಾಗೂ ಗಿಲ್ಡ್ ಸದಸ್ಯ ಮಂಜುನಾಥ ಸಾಲಿ ಮಾತನಾಡಿ, ಮಾಧ್ಯಮಗಳನ್ನು ವಿದ್ಯಾರ್ಥಿ ಯುವ ಸಮುದಾಯ ನೋಡುವ ರೀತಿ ಆಪೇಕ್ಷೆ ಭಾವನೆಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಲಭ್ಯವಾಗಲಿದೆ. ಈಗಿನ ಯುವಕರಿಗೆ ತಮ್ಮ ಭಾವನೆ ಹಂಚಿಕೊಳ್ಳಲು ಅವಕಾಶಗಳಿದ್ದರೂ...
Image
  ಲೋಕೋಪಯೋಗಿ ಸಚಿವ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ವಿರೋಧಿಸಿ ಧರಣಿ   ಜಯ ಧ್ವಜ ನ್ಯೂಸ್, ರಾಯಚೂರು, ಸೆ.11-  ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿಯನ್ನು ಖಂಡಿಸಿ ಶುಕ್ರವಾರ ವಾಲ್ಮೀಕಿ ನಾಯಕ ಸಮಾಜ ಮತ್ತು ಅಹಿಂದ ಸಮಾಜದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ವಾಲ್ಮೀಕಿ ಪ್ರತಿಮೆ ಮುಂಭಾಗ ವಾಲ್ಮೀಕಿ ನಾಯಕ ಸಮಾಜದವರು ಜಮಾಯಿಸಿ  ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ನಾಯಕ ಅಹಿಂದ ನಾಯಕ ಪ್ರಗತಿಪರ ಚಿಂತಕ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯ ದುರುದ್ದೇಶದಿಂದ ಗುರಿಯಾಗಿಸಿ ಕೊಂಡು ಇಡಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು. ಸತೀಶ್ ಜಾರಕಿಹೊಳಿ ಅವರು ಸುಮಾರು 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಭ್ರಷ್ಟಾ ಚಾರದ ಕಪ್ಪುಚುಕ್ಕೆ ಇಲ್ಲದೆ, ಕಾನೂನು ಚೌಕಟ್ಟಿನಲ್ಲಿ ಉದ್ಯಮ ನಡೆಸಿಕೊಂಡು ಬಂದಿರುವ ಶುದ್ಧಹಸ್ತದ ರಾಜಕಾರಣಿ. ಇಂತಹ ನಾಯಕನ ಮನೆಗಳ ಮೇಲೆ ಇ.ಡಿ. ದಾಳಿ ನಡೆಸಿರುವುದು ರಾಜಕೀಯ ದ್ವೇಷದ ಕ್ರಮವಾಗಿದೆ ಎಂದು ದೂರಿದರು.  ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶಗಳಿರುವ ಹಿನ್ನೆಲೆಯಲ್ಲಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಉದ್ದೇಶದಿಂದ  ಈ ಹುನ್ನಾರ ನಡೆಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ರಾಯಚೂರು ನಗರದ  ವಾಲ್ಮೀಕಿ ಪ್ರತಿಮೆ ಮುಂಭಾಗ ವಾಲ್ಮೀಕಿ ನಾಯಕ ಸಮಾಜದ ...