ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಶಿಕ್ಷಕ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ಜಯ ಧ್ವಜ ನ್ಯೂಸ್ ,ರಾಯಚೂರು ,ಮೇ.25- ಪ್ರಾಥಮಿಕ, ಪದವೀಧರ ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗು ದೈಹಿಕ ಶಿಕ್ಷಣ ಶಿಕ್ಷಕರು, ಚಿತ್ರಕಲ ರಂಗ ಕಲ ಮತ್ತು ಸಂಗೀತ ಶಿಕ್ಷಕರ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ಇಂದು ಅಂಬೇಡ್ಕರ್ ವೃತ್ತದಲ್ಲಿ ಶಿಕ್ಷಕ ಆಕಾಂಕ್ಷಿ ಅಭ್ಯರ್ಥಿಗಳು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಹಲವಾರು ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ನೇಮಕಾತಿಯನ್ನು ಮಾಡಿರುವುದಿಲ್ಲ. ಪ್ರತಿ ವರ್ಷ 15 ರಿಂದ 20 ಸಾವಿರ ಶಿಕ್ಷಕರು ನಿವೃತ್ತಿಯಾಗುತ್ತಿದ್ದಾರೆ. ಆ ಹುದ್ದೆಗಳನ್ನು ಹಾಗೆಯೇ ಖಾಲಿ ಬಿಡಲಾಗಿದೆ. ಇಡೀ ರಾಜ್ಯದಲ್ಲಿ ಅಂದರೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಭಾಗವು ಇಡೀ ರಾಜ್ಯದಲ್ಲಿಯೇ ಶಿಕ್ಷಕರ ಗಂಭೀರ ಕೊರತೆಯನ್ನು ಎದುರಿಸುತ್ತಿದೆ. ಕಲ್ಯಾಣ ಕರ್ನಾಟಕದ ಶಾಲೆಗಳಲ್ಲಿ ಒಟ್ಟು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸೇರಿದಂತೆ 22,595 ಹುದ್ದೆಗಳು ಖಾಲಿ ಬಿದ್ದಿವೆ. ಅದರಲ್ಲಿ 18,317 ಪ್ರಾಥಮಿಕ ಶಾಲಾ ಶಿಕ್ಷಕರು, 4278 ಪ್ರೌಢಶಾಲಾ ಶಿಕ್ಷಕರ ಅನುಮೋದಿತ ಹುದ್ದೆಗಳು ಖಾಲಿ ಬಿಡಲಾಗಿದೆ. ಈ ವಿಷಯದಲ್ಲಿ ರಾಯ...