Posts

Image
  ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಸಂಪನ್ನ:                          ಕಾಂತಾರ  ಖ್ಯಾತಿಯ  ನಟ ರಿಷಬ್ ಶೆಟ್ಟಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವರಿಗೆ ಸನ್ಮಾನ.                                                                                                                                         ಜಯ ಧ್ವಜ ನ್ಯೂಸ್, ರಾಯಚೂರು, ಫೆ.24 - ಮಂತ್ರಾಲಯದಲ್ಲಿ ಒಂದು ವಾರದಿಂದ ನಡೆದ ಶ್ರೀ ಗುರುವೈಭವೋತ್ಸವ ಸಂಪನ್ನಗೊಂಡಿದೆ. ಇಂದು ಸಂಜೆ ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ, ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಸೇರಿದಂತೆ ಅನೇಕ ಗಣ್ಯರಿಗೆ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಅನುಗ್ರಹ ಸನ್ಮಾನ ಗೈ...
Image
  ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ :                                        ಮಹಾಭಿಷೇಕ, ನವರತ್ನ ರಥೋತ್ಸವ, ನಾದಹಾರ ಸಮರ್ಪಣೆ.                                                                                                                                                           ಜಯ ಧ್ವಜ ನ್ಯೂಸ್, ರಾಯಚೂರು,ಫೆ.24-             ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ ಅಂಗವಾಗಿ ಬೆಳಿಗ್ಗೆ  ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ರಾಯರ...
Image
  ಒಳ ಮೀಸಲಾತಿ ಜಾರಿಯಾಗುವವರೆಗೂ ಹುದ್ದೆಗಳ ನೇಮಕಾತಿ ಮಾಡದಂತೆ ಮಾದಿಗ ದಂಡೋರಾ ಮನವಿ.                                               ಜಯ ಧ್ವಜ ನ್ಯೂಸ್, ರಾಯಚೂರು,ಫೆ.24-                                                                                                                  ಒಳ ಮೀಸಲಾತಿ ಜಾರಿಯಾಗುವವರೆಗೂ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳ ನೇಮಕಾತಿ ಮಾಡದಂತೆ ಮಾದಿಗ ದಂಡೋರಾ ಮನವಿ ಮಾಡಿದೆ. ರಾಜ್ಯ ಸರ್ಕಾರ ಒಳ ಮೀಸಲಾತಿ ಅನ್ವಯ ಈಗಾಗಲೆ ಮೀಸಲಾತಿ ಪ್ರಕಟಿಸಿದೆ ಆದರೆ ಅಲೆಮಾರಿ ಮತ್ತು ಆದಿ ದ್ರಾವಿಡ, ಆದಿ ಕರ್ನಾಟಕ ಮುಂತಾದ ಜಾತಿಗಳ ಮತ್ತು 101 ಜಾತಿಗಳಿಗೆ ಬಹುದೊಡ್ಡ ಆನ್ಯಾಯವಾಗಿದ್ದು ಈ ಬಗ್ಗೆ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು ಆದ್ದರಿಂದ ಒಳ ಮೀಸಲಾತಿ ಗೊಂದಲ ...
Image
  ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಲಿ- ಡಾ.ಬಾಬುರಾವ್ ಜಯ ಧ್ವಜ ನ್ಯೂಸ್ , ರಾಯಚೂರು,ಫೆ.24- ಪ್ರಸಕ್ತ  2026-27ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಮಾಜ ಸೇವಕ ಡಾ‌.ಬಾಬುರಾವ್ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಕೆಕೆಆರ್ ಡಿಬಿಗೆ 5000 ಕೋಟಿ ರೂ.ಅನುದಾನ ಕೊಡುವುದರ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ವಿನಂತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದುಳಿದಿರುವ ರಾಯಚೂರು ಜಿಲ್ಲೆಯ ರಾಯಚೂರು ನಗರಕ್ಕೆ ತೀರಾ ಅಗತ್ಯವಾಗಿ ಬೇಕಾಗಿರುವ ರಿಂಗ್ ರೋಡ್ ಗೆ ಅನುದಾನ ಒದಗಿಸಬೇಕು. ವಿಮಾನ ನಿಲ್ದಾಣ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸಬೇಕು. ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಕೊಡಬೇಕು ಎಂದು ಅವರು ಕೋರಿದ್ದಾರೆ.
Image
  ಫ್ಲೋರಿಡಾ ಯೋಗ ಸಂಸ್ಕೃತ ವಿವಿಯಿಂದ ಶ್ರೀ ಸುಬುಧೇಂದ್ರತೀರ್ಥರಿಗೆ ಪ್ರಶಸ್ತಿ:                          ರಾಜಾ.ಎಸ್  ಗಿರಿಯಾಚಾರ್ , ರಾಘವೇಂದ್ರ ರಾಜಕುಮಾರ್, ಶ್ರೀ ಷಾನಂದರವರಿಗೆ ಡಾಕ್ಟರೇಟ್ ಪದವಿ ಪ್ರದಾನ.                                                                                                                      ಜಯ ಧ್ವಜ ನ್ಯೂಸ್, ರಾಯಚೂರು, ಫೆ.24- ಮಂತ್ರಾಲಯದಲ್ಲಿ ಶ್ರೀ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ಅಮೇರಿಕಾದ ಫ್ಲೋರಿಡಾ ಯೋಗ ಸಂಸ್ಕೃತ ವಿಶ್ವವಿದ್ಯಾಲಯದಿಂದ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ನೆರವೇರಿತು. ಸಾಯಿಂಕಾಲ ಯೋಗೀಂದ್ರ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಗೆ ವ್ಯಾಸ ದಾಸ ಯೋಗಿ ಪ್ರಶಸ್ತಿ ಪ್ರದಾನ ಹಾಗೂ ರಾಜಾ.ಎಸ್.ಗಿರಿಯ...
Image
  ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ   ಜಯ ಧ್ವಜ ನ್ಯೂಸ್, ರಾಯಚೂರು ,ಫೆ.23-  ಭಾರತೀಯ ವೈದ್ಯಕೀಯ ಮಹಿಳಾ ಸಂಘ, ಐಎಮ್ ಎ ರಾಯಚೂರು ಹಾಗೂ ಬ್ರಹ್ಮಕುಮಾರೀಸ್ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ   ಗಿಡಕ್ಕೆ ನೀರು ಎರೆಯುವುದರ ಮೂಲಕ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು.  ವೇದಿಕೆ ಮೇಲೆ ಸರ್ಕಾರಿ ಮಹಿಳಾ ನೌಕರರ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಯಶೋಧ, ಜಮಾತೆ ಇಸ್ಲಾಂ ಮಹಿಳಾ ಘಟಕದ ಪದಾಧಿಕಾರಿಗಳಾದ ಶ್ರೀಮತಿ ಶಹನಾಜ್, ಭಾರತೀಯ ವೈದ್ಯಕೀಯ ಸಂಘ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಶ್ರೀಲತಾ ಕಾಮತ್, ಉಪಾಧ್ಯಕ್ಷರಾದ ಡಾ. ಪ್ರಿಯ ಬಾಲ್ಕಿ ಜಂಟಿ ಕಾರ್ಯದರ್ಶಿಗಳಾದ ಡಾ. ಶಿಲ್ಪ ನಾಗಲಾಪುರ್ ಇವರುಗಳು ಭಾಗವಹಿಸಿದ್ದರು. ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಯೋಗಿನಿ ಬಿ. ಕೆ. ಸ್ಮಿತಾ ಅಕ್ಕನವರು ವಹಿಸಿದ್ದರು.               ಶ್ರೀಮತಿ ವಿಜಯಲಕ್ಷ್ಮಿ, ಸರಕಾರಿ ಮಹಿಳಾ ನೌಕರರ ಒಕ್ಕೂಟದ ಜಿಲ್ಲಾ ಅಧ್ಯಕ್ಷರು ಅವರು ಮಾತನಾಡುತ್ತಾ ಸರ್ಕಾರಿ ಮಹಿಳಾ ನೌಕರರಿಗೆ ಅನೇಕ ಒತ್ತಡಗಳು ಇವುಗಳಿಂದ ಅನೇಕ ಕಾಯಿಲೆಗಳು ಬರುತ್ತವೆ ಇ...
Image
  ತಳವಾರರಿಗೆ ಪರಿಶಿಷ್ಟ ಪಂಗಡದ ಸೌಲಭ್ಯದ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಹೇಳಿಕೆಗೆ ರಘುವೀರ ನಾಯಕ ತೀವ್ರ ಖಂಡನೆ.   ಜಯ ಧ್ವಜ ನ್ಯೂಸ್  , ರಾಯಚೂರು ,ಫೆ.23-  ವಿಧಾನ ಪರಿಷತ್ ಸದಸ್ಯರು ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ್.ರವಿಕುಮಾರರವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮೂಲಕ ತಳವಾರರಿಗೆ ಪರಿಶಿಷ್ಠ ಪಂಗಡದ ಸೌಲಭ್ಯವನ್ನು ಮುಂದುವರೆಸಬೇಕು ಮತ್ತು ವಾಲ್ಮೀಕಿ ನಾಯಕ ಸಮುದಾಯದ ಹೋರಾಟಕ್ಕೆ ಸರಕಾರ ಮಣಿಯಬಾರದು ಎಂದು ಹೇಳಿಕೆ ನೀಡಿರುವುದನ್ನು  ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದ ವಿಭಾಗೀಯ ಕಾರ್ಯದರ್ಶಿಗಳಾದ ಎನ್. ರಘುವೀರ ನಾಯಕ ಖಂಡಿಸಿದ್ದಾರೆ.  ತಳವಾರರಿಗೆ ಎಸ್.ಟಿ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಹೇಳುತ್ತಿದ್ದಾರೆ ಆದರೆ ಯಾವ ಸಮುದಾಯದ ತಳವಾರರು ಎಂದು ಸ್ಪಷ್ಟಪಡಿಸಬೇಕು. ಎಲ್ಲಾ ಜಾತಿಗಳಲ್ಲೂ ತಳವಾರ ಸಮುದಾಯದವರು ಇದ್ದಾರೆ. ಕೇಂದ್ರ ಸರಕಾರದ ಗೆಜೆಟನ್ನು ಒಮ್ಮೆ ಸರಿಯಾಗಿ ಓದಿ ಅರ್ಥೈಸಿಕೊಳ್ಳಬೇಕು. ನಾಯಕ ಸಮುದಾಯದ ತಳವಾರರಿಗೆ ಮಾತ್ರ ಎಸ್,ಟಿ ಪಟ್ಟಿಗೆ ಸೇರಿದ್ದಾರೆ ಇತರ ಸಮುದಾಯದ ತಳವಾರರು ಅಲ್ಲ ಎಂಬುದು ಮೊದಲು ಮನನ ಮಾಡಿಕೋಳ್ಳಬೇಕು. ತಾವು ಹೇಳುತ್ತಿರುವ ತಳವಾರರು ಯಾರು ಎಂದು ಮೊದಲು ಸ್ಪಷ್ಟಪಡಿಸಬೇಕು.  ಇಂತಹ ತಪ್ಪು ಹೇಳಿಕೆಗಳನ್ನು ನೀಡುವ ಮೂಲಕ ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದಾರೆ. ಪ್ರತಿ ಸಮುದಾಯಗಳಲ್ಲ...